< ಯೆಹೆಜ್ಕೇಲನು 26 >

1 ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.
आणि असे झाले की, बाबेलातील बंदिवासाच्या अकराव्या वर्षी, महिन्याच्या पहिल्याच दिवशी, परमेश्वराचे वचन मजकडे आले आणि म्हणाले,
2 “ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’
“मानवाच्या मुला, कारण सोर यरूशलेमेविरूद्ध म्हणत आहे, अहा! लोकांचे प्रवेशद्वार तुटले आहेत! ती माझ्याकडे वळली आहे; जशी ती उजाड झाली तशी मी ओतप्रोत भरेल.”
3 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
म्हणून, प्रभू परमेश्वर म्हणतो, “पाहा सोर, मी तुझ्याविरूद्ध आहे आणि जसा समुद्र आपल्या लाटा उंचावतो तसे मी तुजविरूद्ध पुष्कळ राष्ट्रांना उठविन.”
4 ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.
ते सोरेच्या तटाचा नाश करतील आणि तिचे बुरुज पाडून टाकतील. मी तिची धूळ झाडून दूर करीन आणि तिला उघडा खडक करीन.
5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು,
ती समुद्रामध्ये जाळीसाठी वाळवण्याची जागा होईल. असे प्रभू परमेश्वर म्हणतो, आणि ती राष्ट्रासाठी लूट अशी होईल.
6 ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.
तिच्या कन्या ज्या कोणी शेतात आहेत त्या तलवारीने वधल्या जातील आणि त्यांना समजेल की मी परमेश्वर आहे.
7 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.
कारण प्रभू परमेश्वर असे म्हणतो, पाहा! मी उत्तरेकडून बाबेलाचा राजा नबुखद्नेस्सर, राजांचा राजा याला मी घोडे व रथ, आणि घोडदळ! पुष्कळ लोकांची फौज घेऊन सोराविरूद्ध आणत आहे.
8 ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.
तो तुझ्या कन्यांना शेतात तलवारीने मारील आणि तुझ्याविरूद्ध उतरती वेढ्याची भिंत बांधील आणि तुझ्याविरूद्ध ढाल उभारील.
9 ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು.
तो तुझ्या तटाला पाडण्यासाठी आपला मोठा ओंडका ठेवील आणि आपल्या हत्यारांनी तुझे बुरुज पाडून टाकील.
10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.
१०घोड्यांच्या जमावांच्या धुळीने तो तुला झाकून टाकील. जेव्हा तो हल्ला करून तटबंदीची नगरे पाडून जसे आत शिरतात तसे तो तुझ्या वेशीतून आत प्रवेश करेल, तेव्हा घोड्यांच्या आवाजाने आणि रथांच्या चाकांच्या खडखडाटाने तुझे तट थरथर कापतील.
11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು.
११तो आपल्या घोड्यांच्या टापांनी तुझे सर्व रस्ते तुडवितील. तो तुझ्या लोकांची तलवारीने कत्तल करील आणि तुझे भक्कम स्तंभ जमीनीवर पडतील.
12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.
१२याप्रकारे ते तुझी शक्ती आणि व्यापारी माल लुटतील! ते तुझे तट आणि तुझी श्रीमंत घरे पाडून टाकतील तुझे दगड व लाकूड आणि तुझी माती ते पाण्यामध्ये घालतील.
13 ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.
१३कारण मी तुझ्या गीतांचा आवाज बंद पाडीन आणि तुझ्या तंतुवाद्यांचा आवाज पुन्हा कधीही ऐकू येणार नाही.
14 ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
१४कारण मी तुला उघडा खडक करीन, तू जाळी कोरडी करण्यासाठीची जागा होशील, तुझी पुन्हा उभारणी होणार नाही. कारण मी, परमेश्वराने असे म्हटले आहे, प्रभू परमेश्वर असे म्हणतो.
15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?
१५प्रभू परमेश्वर सोरला म्हणतो, तुझ्या अधःपतनाच्या आवाजाने आणि जेव्हा तुझ्यामध्ये भयंकर कत्तल झाली त्यामध्ये जखमीच्या कण्हण्याने द्वीपांचा थरकाप होणार नाही का?
16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.
१६कारण समुद्रातले सर्व प्रमुख आपल्या सिंहासनावरून खाली उतरतील आणि आपले झगे बाजूला काढून ठेवतील आणि आपले रंगीबेरंगी वस्त्रे काढून टाकतील. ते स्वतःला भीतीच्या वस्त्राने आच्छादतील आणि भीतीने जमिनीवर बसतील व वारंवार कांपतील आणि तुझ्याविषयी भयचकीत होतील.
17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?
१७ते तुझ्यासाठी ओरडून विलाप करून तुला म्हणतील, “अगे, जे कोणी खलाशी तुझ्यात वस्ती करून होते त्यांचा नाश झाला आहे. जी तू बलवान प्रसिद्ध नगरी होती. ती आता समुद्रात आहे. जी तू तेथे राहणाऱ्या प्रत्येकजणास दहशत घालीत होतीस ती तू कशी नष्ट झाली आहेस?
18 ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’
१८आता, तुझ्या पडण्याच्या दिवशी, समुद्रकिनारीचा देशांचा भीतीने थरकाप उडेल. समुद्र किनाऱ्यावरील देश भयभीत झाले आहेत, कारण तू पाण्यात गेली आहेस.”
19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.
१९कारण प्रभू परमेश्वर असे म्हणतो, “जी नगरे वसली नाहीत त्यासारखे जेव्हा मी तुला ओसाड नगर करीन, जेव्हा मी तुझ्यावर खोल समुद्र आणीन आणि तेव्हा प्रचंड जले तुला झाकतील.
20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.
२०मग मी तुला ते जे कोणी दुसरे खाचेत खाली प्राचीन काळच्या लोकांकडे गेले आहेत त्यांच्यासारखे प्राचीन काळापासून ओसाड असलेल्या स्थानात तुला पृथ्वीच्या अधोभागी तुला रहावयास लावीन म्हणजे तू पुन्हा वसणार नाहीस.
21 ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
२१मी तुझ्यावर विपत्ती आणिन आणि तू अस्तित्वात असणार नाहीस. मग तुला शोधतील, पण तू त्यांना पुन्हा कधीही सापडणार नाहीस” असे प्रभू परमेश्वर, म्हणतो.

< ಯೆಹೆಜ್ಕೇಲನು 26 >