< ಆದಿಕಾಂಡ 18 >

1 ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.
परमेश्वराने मम्रेच्या एलोन झाडांजवळ अब्राहामाला दर्शन दिले, तेव्हा तो दुपारच्या उन्हाच्या वेळी तंबूच्या दाराशी बसला होता.
2 ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.
त्याने वर पाहिले आणि, पाहा, आपल्यासमोर तीन पुरुष उभे असलेले त्याने पाहिले. अब्राहामाने जेव्हा त्यांना पाहिले, तेव्हा तो त्यांना भेटण्यासाठी तंबूच्या दारापासून पळत गेला आणि त्याने त्यांना जमिनीपर्यंत खाली वाकून नमन केले.
3 ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.
तो म्हणाला, “प्रभू, जर माझ्यावर तुमची कृपादृष्टी असेल तर तुझ्या सेवकाला सोडून पुढे जाऊ नका.
4 ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ, ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ, ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
थोडे पाणी आणू द्या, तुमचे पाय धुवा, आणि तुम्ही झाडा खाली आराम करा.
5 ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.
मी तुमच्यासाठी थोडे अन्न आणतो, जेणेकरून तुम्हास ताजेतवाने वाटेल. मग तुम्ही तुमच्या मार्गाने जा, यासाठीच तुमच्या या सेवकाकडे तुमचे येणे झाले असावे.” आणि ते म्हणाले, “तू म्हणतोस तसे कर.”
6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.
अब्राहाम पटकन तंबूत सारेकडे गेला आणि म्हणाला, “लवकर तीन मापे सपीठ घेऊन ते मळ आणि भाकरी कर.”
7 ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.
नंतर अब्राहाम गुरांच्या कळपाकडे पळत गेला आणि त्यातून त्याने कोवळे आणि चांगले वासरू घेतले आणि सेवकाजवळ देऊन त्याने त्यास ते लवकर तयार करण्यास सांगितले.
8 ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.
त्याने तयार केलेले वासरू, तसेच दूध व लोणी त्यांच्यापुढे खाण्यासाठी ठेवले आणि ते जेवत असता तो झाडाखाली त्यांच्याजवळ उभा राहिला.
9 ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.
ते त्यास म्हणाले, “तुझी पत्नी सारा कोठे आहे?” त्याने उत्तर दिले, “तेथे ती तंबूत आहे.”
10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
१०त्यांच्यातील एक म्हणाला, “मी वसंतऋतूच्या वेळी तुझ्याकडे नक्की परत येईन, आणि पाहा तेव्हा तुझी पत्नी सारा हिला मुलगा होईल.” तेव्हा त्याच्यामागे असलेल्या तंबूच्या दारामागून सारेने हे ऐकले.
11 ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.
११आता अब्राहाम व सारा म्हातारे झाले होते, त्यांचे वय बरेच झाले होते, आणि स्त्रीला ज्या वयात मुले होऊ शकतात, ते साराचे वय निघून गेले होते.
12 ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.
१२म्हणून सारा स्वतःशीच हसून म्हणाली, “मी म्हातारी झाली आहे, आणि माझा पतीही म्हातारा झाला आहे, आता मला ते सुख लाभेल काय?”
13 ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು?
१३परमेश्वर अब्राहामाला म्हणाला, “सारा का हसली? मी आता इतकी म्हातारी झाली असताना मला मुलगा होईल काय, असे ती का म्हणाली?
14 ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.
१४परमेश्वरास काही अशक्य आहे काय? येत्या वसंतऋमध्ये, सांगितल्याप्रमाणे मी पुन्हा येईन. पुढील वर्षी साधारण याच वेळी सारा हिला मुलगा होईल.”
15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.
१५नंतर सारा नाकारून म्हणाली, “मी हसले नाही,” कारण ती फार घाबरली होती. त्याने उत्तर दिले, “नाही, तू हसलीसच.”
16 ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.
१६नंतर ते पुरुष उठले व सदोम नगराकडे जाण्यास निघाले. अब्राहाम त्यांना वाटेस लावण्यासाठी त्यांच्या बरोबर गेला.
17 ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?
१७परमेश्वर देव म्हणाला, “मी जे काही करणार आहे ते अब्राहामापासून लपवू काय?
18 ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.
१८कारण अब्राहामापासून खरोखर एक महान व समर्थ राष्ट्र होईल, आणि पृथ्वीवरील सगळी राष्ट्रे त्याच्यामुळे आशीर्वादित होतील.
19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.
१९मी त्यास यासाठी निवडले आहे की, त्याने आपल्या मुलांना व कुटुंबाला अशी शिकवण द्यावी की, त्यांनी त्याच्यामागे न्यायीपणाने व धार्मिकतेने परमेश्वराचा मार्ग अनुसरावा, म्हणजे मग परमेश्वराने अब्राहामाविषयी जे सांगितले आहे ते तो त्यास प्राप्त करून द्यावे.”
20 ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.
२०मग परमेश्वर म्हणाला, “सदोम व गमोरा यांच्या दुष्टाईचा आक्रोश मोठा आहे, आणि त्यांचे पाप फार गंभीर असल्या कारणाने,
21 ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಆ ಊರಿನವರ ಕೂಗಿನ ಪ್ರಕಾರವೇ, ಅವರು ಮಾಡಿದ್ದಾರೋ, ಇಲ್ಲವೋ, ಎಂದು ನೋಡಿ ತಿಳಿದುಕೊಳ್ಳುವೆನು,” ಎಂದುಕೊಂಡರು.
२१मी आता तेथे खाली जाईन आणि त्यांच्या पातकाचा जो बोभाटा माझ्या कानी आला आहे त्याप्रमाणेच त्यांची करणी आहे का हे पाहीन. तसे नसेल तर मला समजेल.”
22 ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.
२२मग ती माणसे तेथून वळून आणि सदोम नगराकडे गेली, परंतु अब्राहाम परमेश्वरापुढे तसाच उभा राहिला.
23 ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?
२३मग अब्राहाम परमेश्वराजवळ जाऊन म्हणाला, “तू दुष्टाबरोबर नीतिमानांचाही नाश करशील काय?
24 ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?
२४कदाचित त्या नगरात पन्नास नीतिमान लोक असतील तर त्या नगराचा तू नाश करणार काय? तू त्या नगरात राहणाऱ्या पन्नास नीतिमान लोकांसाठी नगराचा बचाव करणार नाहीस काय?
25 ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.
२५असे करणे तुझ्यापासून दूर असो. दुष्टाबरोबर नीतिमानाला मारणे म्हणजे नीतिमानाला दुष्टासारखे वागवणे हे तुझ्यापासून दूर असो! जो तू संपूर्ण पृथ्वीचा न्यायाधीश आहेस, तो तू योग्य न्याय करणार नाहीस काय?”
26 ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.
२६परमेश्वर म्हणाला, “या सदोम शहरात मला पन्नास नीतिमान लोक सापडले तरीही त्यांच्यासाठी मी संपूर्ण स्थळाचा बचाव करीन.”
27 ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.
२७अब्राहामाने उत्तर देऊन म्हटले, “पाहा मी केवळ धूळ व राख आहे, तरी प्रभूजवळ बोलायला धजतो!
28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.
२८समजा जर पाच लोक कमी असतील म्हणजे फक्त पंचेचाळीसच चांगले लोक असतील तर? त्या पाच कमी असलेल्या लोकांकरता तू सर्व नगराचा नाश करशील काय?” आणि तो म्हणाला, “मला पंचेचाळीस लोक चांगले आढळले तर मी नगराचा नाश करणार नाही.”
29 ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.
२९पुन्हा तो परमेश्वरास म्हणाला, “आणि जर तेथे तुला चाळीसच चांगले लोक आढळले तर? संपूर्ण शहराचा तू नाश करशील काय?” परमेश्वर म्हणाला, “जर मला चाळीसच लोक चांगले आढळले तरीही, मी शहराचा नाश करणार नाही.”
30 ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.
३०तो म्हणाला, “प्रभू, कृपा करून तुला राग न यावा म्हणजे मी बोलेन. तेथे फक्त तीसच मिळाले तर?” परमेश्वर म्हणाला, “जर तीस चांगले लोक असतील तरीही मी तसे करणार नाही.”
31 ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.
३१तो म्हणाला, “मी प्रभूशी बोलायला धजतो! समजा तेथे कदचित वीसच मिळाले तर?” परमेश्वराने उत्तर दिले, “त्या वीसांकरताही मी नगराचा नाश करणार नाही.”
32 ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.
३२शेवटी तो म्हणाला, “प्रभू, कृपा करून माझ्यावर रागावू नकोस, मी शेवटी एकदाच बोलतो. कदाचित तुला तेथे दहाच लोक मिळाले तर?” परमेश्वर म्हणाला, “त्या दहांकरताही मी नगराचा नाश करणार नाही.”
33 ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.
३३मग परमेश्वराने अब्राहामाशी बोलणे संपविल्याबरोबर तो लगेच निघून गेला, आणि अब्राहाम आपल्या तंबूकडे परत आला.

< ಆದಿಕಾಂಡ 18 >