< ಆದಿಕಾಂಡ 3 >

1 ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
परमेश्वर देवाने निर्माण केलेल्या सर्व वनपशूंमध्ये सर्प हा अतिशय धूर्त होता. तो स्त्रीला म्हणाला, “‘बागेतल्या कोणत्याही झाडाचे फळ खाऊ नका’ असे देवाने तुम्हास खरोखरच सांगितले आहे काय?”
2 ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
स्त्रीने सर्पाला उत्तर दिले, “बागेतल्या झाडांची फळे आम्ही खाऊ शकतो.
3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.
परंतु बागेच्या मधोमध जे झाड आहे, त्याच्या फळाविषयी देवाने म्हटले, ते खाऊ नका. त्या झाडाला स्पर्शही करू नका, नाहीतर तुम्ही मराल.”
4 ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
सर्प त्या स्त्रीला म्हणाला, “तुम्ही खरोखर मरणार नाही.
5 ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.
कारण देवास हे माहीत आहे की, जर तुम्ही त्या झाडाचे फळ खाल त्याच दिवशी तुमचे डोळे उघडतील, व तुम्ही देवांसारखे बरेवाईट जाणणारे व्हाल.”
6 ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
आणि स्त्रीने पाहिले की, त्या झाडाचे फळ खाण्यास चांगले व डोळ्यांना आनंद देणारे व शहाणे करण्यासाठी इष्ट आहे, तेव्हा तिने त्याचे काही फळ घेऊन खाल्ले. आणि तिने आपल्याबरोबर आपल्या पतीसही त्या फळातून थोडे दिले व त्याने ते खाल्ले.
7 ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.
तेव्हा त्या दोघांचे डोळे उघडले व आपण नग्न आहोत असे त्यांना समजले; तेव्हा त्यांनी अंजिराची पाने एकत्र जोडून आपणाला झाकण्यासाठी वस्त्रे तयार केली.
8 ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.
दिवसाचा थंड वारा सुटला असता परमेश्वर देव बागेत आला. त्या वेळी त्यांनी त्याचा आवाज ऐकला. आणि परमेश्वर देवाच्या समक्षतेपासून दृष्टीआड व्हावे म्हणून मनुष्य व त्याची पत्नी बागेच्या झाडांमध्ये लपली.
9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.
तेव्हा परमेश्वर देवाने मनुष्यास हाक मारुन म्हटले, “तू कोठे आहेस?”
10 ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.
१०मनुष्य म्हणाला, “बागेत मी तुझा आवाज ऐकला व मला भीती वाटली, कारण मी नग्न होतो. म्हणून मी लपलो.”
11 ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.
११परमेश्वर त्यास म्हणाला, “तू नग्न आहेस हे तुला कोणी सांगितले? ज्या झाडाचे फळ तू खाऊ नकोस अशी मी तुला आज्ञा दिली होती त्या झाडाचे फळ तू खाल्लेस काय?”
12 ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.
१२मनुष्य म्हणाला, “तू ही स्त्री माझ्या सोबतीस म्हणून दिलीस, तिने त्या झाडाचे फळ मला दिले आणि म्हणून मी ते खाल्ले.”
13 ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.
१३मग परमेश्वर देव त्या स्त्रीस म्हणाला, “तू हे काय केलेस?” ती स्त्री म्हणाली, “सर्पाने मला फसवले व म्हणून मी ते फळ खाल्ले.”
14 ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.
१४परमेश्वर देव सर्पास म्हणाला, “तू हे केल्यामुळे सर्व गुरेढोरांमध्ये व सर्व वन्यपशूंमध्ये तू शापित आहेस. तू पोटाने सरपटत चालशील आणि आयुष्यभर तू माती खाशील.
15 ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”
१५तुझ्यामध्ये व स्त्रीमध्ये आणि तुझ्या बीजामध्ये व स्त्रीच्या बीजामध्ये मी शत्रूत्व ठेवीन. तो तुझे डोके ठेचील आणि तू त्याची टाच फोडशील.”
16 ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”
१६परमेश्वर देव स्त्रीस म्हणाला, “मुलांना जन्म देते वेळी तुझ्या वेदना मी खूप वाढवीन तरी तुझी ओढ तुझ्या नवऱ्याकडे राहील; आणि तो तुझ्यावर अधिकार चालवील.”
17 ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.
१७नंतर परमेश्वर देव आदामाला म्हणाला, तू तुझ्या पत्नीची वाणी ऐकली आहे आणि ज्या झाडाचे फळ खाऊ नकोस अशी आज्ञा दिलेली होती, त्या झाडाचे फळ तू खाल्ले आहेस. म्हणून तुझ्यामुळे भूमीला शाप आला आहे. तू तिजपासून अन्न मिळवण्यासाठी आपल्या आयुष्याचे सर्व दिवस कष्ट करशील;
18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.
१८जमीन तुझ्यासाठी काटे व कुसळे उत्पन्न करील आणि शेतातील वनस्पती तुला खाव्या लागतील.
19 ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”
१९तू माघारी जमिनीमध्ये जाशील तोपर्यंत तू आपल्या निढळाच्या घामाने भाकर खाशील, तू मरणाच्या दिवसापर्यंत अतिशय काम करशील. कारण मातीमधून तू निर्माण झालेला आहेस; आणि मातीमध्ये तू परत जाशील.
20 ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.
२०आदामाने आपल्या पत्नीचे नाव हव्वा ठेवले, कारण सर्व जिवंत मनुष्यांची ती आई होती.
21 ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.
२१परमेश्वर देवाने आदाम व त्याच्या पत्नीसाठी चामड्यांची वस्त्रे केली; आणि ती त्यांना घातली.
22 ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
२२परमेश्वर देव म्हणाला, “पाहा, मनुष्य आपल्यातल्या एका सारखा होऊन त्यास बरे व वाईट समजू लागले आहे. तर आता त्यास त्याच्या हातांनी जीवनाच्या झाडावरून ते फळ घेऊन खाऊ देऊ नये, आणि जर का तो ते फळ खाईल तर मग सदासर्वकाळ तो जिवंत राहील.”
23 ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.
२३तेव्हा परमेश्वर देवाने मनुष्यास ज्या जमिनीतून उत्पन्न केले होते तिची मशागत करण्यासाठी एदेन बागेतून बाहेर घालवून दिले.
24 ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.
२४देवाने मनुष्यास बागेतून घालवले, आणि जीवनाच्या झाडाचे रक्षण करण्यासाठी त्याने एदेन बागेच्या पूर्वेकडे करुब ठेवले, आणि सर्व दिशांनी गरगर फिरणारी ज्वालारूप एक तलवार ठेवली.

< ಆದಿಕಾಂಡ 3 >