< ಯೆಶಾಯನು 21 >

1 ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.
समुद्राजवळच्या राणाविषयी ही देववाणी. जसा दक्षिणेचा वादळवारा सर्व काही खरडून नेतो त्याप्रकारे तो रानांतून, भयंकर देशातून येत आहे.
2 ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
दु: खदायक असा दृष्टांत मला देण्यात आला आहे, विश्वासघातकी मनुष्य विश्वासघाताने करार करतो, आणि नाश करणारा नाश करतो. हे एलामा वर जा आणि हल्ला कर, हे माद्या वेढा घाल, मी तिचे सर्व उसासे थांबवीन.
3 ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.
यास्तव माझ्या कंबरेत वेदना भरल्या आहेत, प्रसुती वेदनेप्रमाणे तडफडणाऱ्या स्त्री प्रमाणे त्या वेदनांनी मला पकडले आहे. जे मी ऐकले त्यामुळे मी खाली वाकलो आहे, जे मी पाहिले त्यामुळे मी विचलीत झालो.
4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
माझे हृदय धडधडते, थरकाप माझ्यावर हावी होतो. रात्र मला किती सुखावह वाटे, ती आता मला भेदरून टाकणारी झाली असून.
5 ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.
त्यांनी मेज तयार केला, त्यांनी कापड पसरवले आणि खाल्ले व प्याले, उठा, अधिकाऱ्यांनो, आपल्या ढालींना तेल लावा.
6 ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
जा, त्या ठिकाणी एक पहारेकरी ठेव असे प्रभूने मला सांगितले, तो जे काही पाहणार त्याची वार्ता सांगावी.
7 ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥ ಸಾಲುಗಳನ್ನು ನೋಡಿದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ.”
जेव्हा तो रथ, घोडेस्वार, गाढवावर बसलेले, उंटावर बसलेले पाहील, तेव्हा त्याने सतर्क व सावधान असायला हवे.
8 ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
पहारेकरी सिंहनाद करून म्हणाला, हे प्रभू, पाहाऱ्याच्या बुरूजावर मी रोज दिवसभर उभा असतो आणि पूर्ण रात्र मी आपल्या चौकीवर उभा राहतो.
9 ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”
आणि जोडी जोडीने चालणाऱ्या घोडस्वारांचे एक सैन्य येत आहे. त्याने म्हटले, बाबेल पडली, पडली, आणि तिच्या सर्व कोरीव देव मूर्तींचा पूर्ण पणे नाश होऊन ते जमिनीस मिळाल्या आहेत.
10 ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
१०हे माझ्या मळणी केलेल्या आणि खळ्यांतील धान्या! माझ्या खळ्यातील लेकरा! सेनाधीश परमेश्वर, इस्राएलाचा देव, ह्याकडून जे काही मी ऐकले, ते तुम्हास घोषीत केले.
11 ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”
११दूमाविषयीचा घोषणा, सेईर येथून मला कोणी मला हाक मारतो, पहारेकऱ्या, रात्री काय राहिल? पहारेकऱ्या, रात्री काय राहिल?
12 ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”
१२पाहारेकरी म्हणाला, सकाळ येते व रात्रही येते, जर तुम्ही विचाराल तर विचारा आणि परत या.
13 ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
१३अरेबिया विषयी घोषणा, ददानीच्या काफिल्यालो, अरबस्तानच्या रानांत तुम्ही रात्र घालवणार.
14 ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.
१४अहो तेमाच्या राहणाऱ्यांनो, तहानलेल्यांना पाणी आणा, पळून गेलेल्यांना भाकरी घेऊन भेटा.
15 ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.
१५कारण ते तलवारी, वाकवलेले धनुष्य, काढलेल्या तलवारी आणि युद्धाच्या दडपणापासून पळाले आहेत.
16 ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.
१६कारण परमेश्वराने मला सांगितले, एका वर्षाच्या आत, जसा मोलकरी एका वर्षासाठी नियूक्त केला जातो, त्याच प्रकारे केदारचे वैभव तुम्ही संपलेले पाहाल.
17 ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.
१७फक्त थोडेच धनुर्धारी, वीर योद्धा केदार मध्ये उरतील, कारण इस्राएलाचा देव परमेश्वर हे बोलला आहे.

< ಯೆಶಾಯನು 21 >