< ಯೆಶಾಯನು 7 >

1 ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
यहूदाचा राजा आहाज, जो योथामाचा पुत्र व योथाम हा उज्जीयाचा पुत्र, त्याच्या कारकीर्दित अरामाचा राजा रसीन व इस्राएलाचा राजा पेकह, जे रमाल्याचा पुत्र, हे यरूशलेमावर लढाई करण्याकरीता चालून गेले, परंतु त्यांची त्यावर सरशी झाली नाही.
2 ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
दावीदाच्या घराण्याला कळविण्यात आले की, अराम आणि एफ्राईम हे एक झाले आहेत. तेव्हा रानातील वृक्ष वाऱ्याने कापतात तसे आहाज आणि त्याच्या लोकांची मने भीतीने कंपीत झाली.
3 ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.
मग परमेश्वर यशयाला म्हणाला, “आहाजाला भेटण्यासाठी तू तुझा मुलगा शआरयाशूब याजबरोबर धोब्याच्या शेताकडे जाणाऱ्या रस्त्यावर जेथे वरच्या तळ्याचे पाणी मिळते तेथे जा.
4 ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
त्यास सांग, सावध हो, शांत रहा, भिऊ नको किंवा या दोन जळत्या कोलीतांमुळे रसीन, अराम, आणि रमाल्याचा पुत्र पेकह यांच्या उग्र क्रोधामुळे खचून जाऊ नको.
5 ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ,
अराम, एफ्राईम, व रमाल्याच्या पुत्राने तुमच्या विरूद्ध दुष्ट योजना केली आहे, ते म्हणतात,
6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.
आपण यहूदावर चालून जाऊ व त्यास घाबरे करू, त्याची तटबंदी फोडून तेथे ताबेलाच्या पुत्राला राजा करु.
7 ಅದಕ್ಕೆ ಸಾರ್ವಭೌಮ ಯೆಹೋವ ದೇವರು, “‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.
प्रभू परमेश्वर म्हणतो, असे काही होणार नाही; असे काही घडणार नाही,
8 ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.
कारण अरामाचे शीर दिमिष्क व दिमिष्काचे शीर रसीन आहे. पासष्ट वर्षांच्या आत एफ्राईम भंग पावेल व तेथील लोक एक राष्ट्र म्हणून राहणार नाहीत.
9 ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”
एफ्राईमाचे शीर शोमरोन आणि शोमरोनाचे शीर रमाल्याचा पुत्र आहे. तू जर विश्वासात स्थिर राहिला नाहीस तर खात्रीने तू सुरक्षीत राहणार नाहीस.”
10 ಯೆಹೋವ ದೇವರು ಆಹಾಜನಿಗೆ ಹೇಳಿದ್ದೇನೆಂದರೆ:
१०परमेश्वर पुन्हा आहाजाशी बोलला,
11 “ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು. (Sheol h7585)
११“तुझा देव परमेश्वर याला चिन्ह माग, खाली पाताळात माग किंवा वर आकाशात माग.” (Sheol h7585)
12 ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.
१२परंतु आहाज म्हणाला, “मी मागणार नाही किंवा परमेश्वराची परीक्षा पाहणार नाही.”
13 ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?
१३मग यशयाने उत्तर दिले, “दावीदाच्या घराण्या, ऐक लोकांच्या धीराला तुम्ही कसोटीला लावले ऐवढे पुरे नाही काय? माझ्या देवाच्या सहनशीलतेला पण तुम्ही कसोटीला लावावे काय?
14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
१४म्हणून प्रभू स्वतः तुम्हास एक चिन्ह देईल, पहा, एक तरुण स्त्री गर्भवती होऊन मुलाला जन्म देईल, आणि त्यास इम्मानुएल हे नाव देईल.
15 ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.
१५तो वाईटाला नाकारील आणि चांगले ते पसंत करणे हे जेव्हा त्यास समजेल तेव्हा तो लोणी व मध यांचे सेवन करील.
16 ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.
१६कारण त्या मुलाला वाईट नाकारून व चांगले ते पसंत करावे हे कळू लागण्याआधीच ज्या दोन राजांची तुला धास्ती पडली आहे त्यांची भूमी उजाड होईल.
17 ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”
१७एफ्राईम यहूदापासून वेगळा आला तेव्हापासून आले नाहीत असे दिवस परमेश्वर तुझ्यावर, तुझ्या लोकांवर आणि तुझ्या वडिलाच्या घराण्यावर आणील; तो अश्शूरच्या राजाला तुजविरूद्ध आणील.”
18 ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.
१८त्यावेळी मिसरच्या दूरच्या ओढ्यांमधून माशीला व अश्शूर देशातील मधमाशीला परमेश्वर शीळ घालून बोलावील.
19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.
१९त्या सगळ्या खोऱ्यात व खडकाच्या कपारीत सगळ्या काटेरी झुडपात व सर्व कुरणांत तळ देतील.
20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.
२०त्यावेळी प्रभू अश्शूरच्या राजाचा एका भाड्याने घेतलेल्या वस्तऱ्याप्रमाणे उपयोग करून, तुमच्या डोक्याच्या व पायांच्या केसांचा मुंडण करील तो तुमची दाढी देखील तासून काढील.
21 ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
२१त्या दिवशी मनुष्य एक कालवड व दोन मेंढ्या पाळील.
22 ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.
२२आणि त्या पुष्कळ दूध देतील म्हणून तो लोणी खाईल, कारण देशात मागे राहीलेला प्रत्येक मनुष्य लोणी व मध खाईल.
23 ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.
२३त्यावेळी जेथे हजार शेकेल चांदीच्या नाण्याएवढ्या किंमतीची हजार द्राक्षवेली होत्या, तेथे तण आणि काटेकुटे याव्यतिरिक्त काहीही राहणार नाही
24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
२४माणसे तेथे बाण घेऊन शिकारीसाठी जातील कारण सर्व भूमी तण व काटेकुटे यांनी भरलेली असते.
25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
२५ज्या टेकड्यांवर कुदळींनी खणून शेती करीत त्या सर्वापासून ते काटेरीझुडपांच्या भीतीमुळे दूर राहतील, पण गुरेढोरे व मेढ्या तेवढ्या चरण्यासाठी तेथे जातील.

< ಯೆಶಾಯನು 7 >