< ಯೆಶಾಯನು 7 >

1 ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
और शाह — ए — यहूदाह आख़ज़ बिन यूताम बिन उज़्ज़ियाह के दिनों में यूँ हुआ कि रज़ीन, शाह — ए — इराम फ़िक़ह बिन रमलियाह, शाह — ए — इस्राईल ने येरूशलेम पर चढ़ाई की; लेकिन उस पर ग़ालिब न आ सके।
2 ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
उस वक़्त दाऊद के घराने को यह ख़बर दी गई कि अराम इफ़्राईम के साथ मुत्तहिद है इसलिए उसके दिल ने और उसके लोगों के दिलों ने यूँ जुम्बिश खाई, जैसे जंगल के दरख़्त आँधी से जुम्बिश खाते हैं।
3 ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.
तब ख़ुदावन्द ने यसा'याह को हुक्म किया, कि “तू अपने बेटे शियार याशूब को लेकर ऊपर के चश्मे की नहर के सिरे पर, जो धोबियों के मैदान के रास्ते में है, आख़ज़ से मुलाक़ात कर,
4 ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
और उसे कह, 'ख़बरदार हो, और बेक़रार न हो; इन लुक्टियों के दो धुवें वाले टुकड़ों से, या'नी अरामी रज़ीन और रमलियाह के बेटे की क़हरअंगेज़ी से न डर, और तेरा दिल न घबराए।
5 ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ,
चूँकि अराम और इफ़्राईम और रमलियाह का बेटा तेरे ख़िलाफ़ मश्वरत करके कहते हैं,
6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.
कि आओ, हम यहूदाह पर चढ़ाई करें और उसे तंग करें, और अपने लिए उसमें रख़ना पैदा करे और ताबील के बेटे को उसके बीच तख़्तनशीन करें।
7 ಅದಕ್ಕೆ ಸಾರ್ವಭೌಮ ಯೆಹೋವ ದೇವರು, “‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.
इसलिए ख़ुदावन्द ख़ुदा फ़रमाता है कि इसको पायदारी नहीं, बल्कि ऐसा हो भी नहीं सकता।
8 ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.
क्यूँकि अराम का दारुस — सल्तनत दमिश्क़ ही होगा, और दमिश्क़ का सरदार रज़ीन; और पैंसठ बरस के अन्दर इफ़्राईम ऐसा कट जाएगा कि क़ौम न रहेगी।
9 ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”
इफ़्राईम का भी दारुस — सल्तनत सामरिया ही होगा, और सामरिया का सरदार रमलियाह का बेटा। अगर तुम ईमान न लाओगे तो यक़ीनन तुम भी क़ाईम न रहोगे।
10 ಯೆಹೋವ ದೇವರು ಆಹಾಜನಿಗೆ ಹೇಳಿದ್ದೇನೆಂದರೆ:
फिर ख़ुदावन्द ने आख़ज़ से फ़रमाया,
11 “ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು. (Sheol h7585)
ख़ुदावन्द अपने ख़ुदा से कोई निशान तलब कर चाहे नीचे पाताल में चाहे ऊपर बुलन्दी पर।” (Sheol h7585)
12 ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.
लेकिन आख़ज़ ने कहा, कि मैं तलब नहीं करूँगा और ख़ुदावन्द को नहीं, आज़माऊँगा।
13 ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?
तब उसने कहा, ऐ दाऊद के खान्दान, अब सुनो क्या तुम्हारा इंसान को बेज़ार करना कोई हल्की बात है कि मेरे ख़ुदा को भी बेज़ार करोगे?
14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
लेकिन ख़ुदावन्द आप तुम को एक निशान बख़्शेगा। देखो, एक कुँवारी हामिला होगी, और बेटा पैदा होगा और वह उसका नाम' इम्मानुएल रख्खेगी।
15 ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.
वह दही और शहद खाएगा, जब तक कि वह नेकी और बदी के रद्द — ओ — क़ुबूल के क़ाबिल न हो।
16 ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.
लेकिन इससे पहले कि ये लड़का नेकी और बदी के रद्द — ओ — क़ुबूल के क़ाबिल हो, ये मुल्क जिसके दोनों बादशाहों से तुझ को नफ़रत है, वीरान हो जाएगा।
17 ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”
ख़ुदावन्द तुझ पर और तेरे लोगों और तेरे बाप के घराने पर ऐसे दिन लाएगा जैसे उस दिन से जब इफ़्राईम यहूदाह से जुदा हुआ, आज तक कभी न लाया या'नी शाह — ए — असूर के दिन।
18 ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.
और उस वक़्त यूँ होगा कि ख़ुदावन्द मिस्र की नहरों के उस सिरे पर से मक्खियों को, और असूर के मुल्क से ज़म्बूरों को सुसकार कर बुलाएगा।
19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.
इसलिए वह सब आएँगे और वीरान वादियों में, और चटटानों की दराड़ों में, और सब ख़ारिस्तानों में, और सब चरागाहों में छा जाएँगे।
20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.
उसी रोज़ ख़ुदावन्द उस उस्तरे से जो दरिया — ए — फ़रात के पार से किराये पर लिया या'नी असूर के बादशाह से, सिर और पाँव के बाल मूण्डेगा और इससे दाढ़ी भी खुर्ची जाएगी।
21 ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
और उस वक़्त यूँ होगा कि आदमी सिर्फ़ एक गाय और दो भेड़ें पालेगा,
22 ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.
और उनके दूध की फ़िरावानी से लोग मक्खन खाएँगे; क्यूँकि हर एक जो इस मुल्क में बच रहेगा मख्खन और शहद ही खाया करेगा।
23 ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.
और उस वक़्त यह हालत हो जाएगी कि हर जगह हज़ारों रुपये के बाग़ों की जगह ख़ारदार झाड़ियाँ होंगी।
24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
लोग तीर और कमाने लेकर वहाँ आयेंगे क्यूँकि तमाम मुल्क काँटों और झाड़ियों से पुर होगा।
25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
मगर उन सब पहाड़ियों पर जो कुदाली से खोदी जाती थीं, झाड़ियों और काँटों के ख़ौफ़ से तू फिर न चढ़ेगा लेकिन वह गाय बैल और भेड़ बकरियों की चरागाह होंगी।

< ಯೆಶಾಯನು 7 >