< ಯೆಶಾಯನು 9 >

1 ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.
जी फार त्रासात होती ती त्यावरील विपत्ती घालवून देण्यात येईल. मागील काळी त्याने जबुलून व नफताली प्रांताची, अप्रतिष्ठा केली, पण पुढील काळी समुद्राकडील भाग, यार्देनेच्या पलीकडचा भाग राष्ट्रांचा गालील यांची तो प्रतिष्ठा करील.
2 ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.
जे अंधकारात चालत होते अशा लोकांनी मोठा प्रकाश पाहीला आहे; जे कोणी मृत्युच्छायेच्या प्रदेशात राहत होते अशावर प्रकाश पडला आहे.
3 ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.
तू राष्ट्राची वृद्धी केली आहे तू त्यांचा आनंद वाढवला आहे, हंगामाच्या वेळी जसा आनंद होतो, लूट वाटून घेतांना जसा आनंद होतो तसा ते तुझ्यासमोर आनंद करीत आहेत.
4 ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.
कारण मिद्यानाच्या दिवसाप्रमाणे, त्यांच्या भाराचे जू, त्यांच्या खांद्यावरचा दंडा, त्याजवर जुलूम करणाऱ्याच्या काठीचा तू चुराडा केला आहे.
5 ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.
कारण युद्धाच्या गोंधळात फिरलेले प्रत्येक जोडे व रक्ताने माखलेली वस्त्रे जाळण्यात येतील ती अग्नीला भक्ष होतील.
6 ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
कारण आम्हासाठी बाळ जन्मले आहे, आम्हांला पुत्र दिला आहे; आणि त्याच्या खाद्यांवर सत्ता राहिल; आणि त्यास अद्भूत मंत्री, समर्थ देव, सनातन पिता, शांतीचा राजा असे म्हणतील.
7 ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.
त्याच्या शासनाच्या वृद्धीला व शांतीला अंत राहणार नाही, दावीदाच्या सिंहासनावर बसून त्याचे साम्राज्य न्यायाने व धार्मिकतेने स्थापित व स्थिर करण्यासाठी तो या वेळे पासून सदासर्वकाळ चालवील, सेनाधीश परमेश्वराचा आवेश हे सिद्धीस नेईल.
8 ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು, ಅದು ಇಸ್ರಾಯೇಲರಿಗೆ ತಗುಲಿತು.
प्रभूने याकोबाच्या विरूद्ध संदेश पाठवीला; आणि तो इस्राएलाच्या ठायी प्राप्त झाला आहे.
9 ಗರ್ವದಿಂದಲೂ, ಹೆಮ್ಮೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯೀಮ್ಯರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಈ ಮಾತು ಗೊತ್ತಾಗುವುದು. ಅದೇನೆಂದರೆ,
सर्व लोकांस कळून येईल एफ्राईम व शोमरोनाच्या रहिवाशांस सुद्धा, जे गर्वाने व उद्धामपणाने म्हणतात,
10 “ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,”
१०“विटा पडल्या आहेत, पण आम्ही तासलेल्या दगडांनी पुनः बांधु; उंबराची झाडे तोडून टाकली आहेत, पण आम्ही त्यांच्या जागी गंधसरू लावू.”
11 ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ,
११म्हणून परमेश्वर त्याच्या विरूद्ध त्याचा शत्रू रसीन याला उठवील, आणि त्याच्या शत्रूंना चेतवील;
12 ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
१२पूर्वेकडून अराम्यांस व पश्चिमेकडून पलिष्टांस उघड्या तोंडाने ते इस्राएलास फस्त करतील, कारण त्याच्या क्रोधामुळे परमेश्वर थांबणार नाही, परंतु मारण्यासाठी त्याचा हात अजूनही उगारलेला राहील.
13 ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.
१३तरीही लोक ज्याने त्यांना फटका दिला त्या देवाकडे वळणार नाहीत, किंवा सेनाधीश परमेश्वराचा शोध घेणार नाहीत.
14 ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.
१४म्हणून परमेश्वर इस्राएलाचे शीर व शेपूट, तालवृक्षाची फांदी व लव्हाळा एका दिवसात छाटून टाकील.
15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.
१५नेता आणि वडील हे डोके होत; व जो संदेष्टा लबाड्या शिकवतो तो शेपूट होय.
16 ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.
१६जे या लोकांस मार्गदर्शन करीतात ते त्यांना चूकीचा मार्ग दाखवतात, आणि जे त्यांच्या मागे जातात त्यांना गिळून टाकतात.
17 ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
१७म्हणून त्यांच्या तरुण मनुष्यांमुळे प्रभूला संतोष होणार नाही किंवा त्यांच्या अनाथ व विधवांचा कळवळा त्यास येणार नाही, कारण प्रत्येक जन देवाला न मानणारा व वाईट करणारा आहे, आणि प्रत्येक मुख मुर्खतेच्या गोष्टी बोलते. या सर्वामुळे त्याचा क्रोध कमी होत नाही परंतु त्याचा हात फटका देण्यासाठी उगारलेला राहील.
18 ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
१८दुष्टता अग्नी सारखी जळत राहते, ती काटेकुटे व काटेझुडपे खाऊन टाकीते; वनातील दाट झाडीतही ती पेट घेते, जिच्या धुराने लोक वर चढतात.
19 ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
१९सेनाधीश परमेश्वराच्या कडेवरुन वाहणाऱ्या क्रोधामुळे भूमी दूर पळून गेली आहे, लोक आगीला तेलाप्रमाणे आले आहेत, आपल्या भावाचीही कोणी मनुष्य गय करीत नाही.
20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.
२०ते उजव्या हाताचे मांस कापून खातील आणि तरीही भूकेलेच राहतील; ते डाव्याहाताचे मांस खातील पण तृप्त होणार नाहीत. प्रत्येक जन स्वतःच्या बाहूंचे मांस खातील.
21 ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
२१मनश्शे एफ्राईम फस्त करील, आणि एफ्राईम मनश्शेला; आणि दोघे मिळून यहूदावर चढाई करतील. कारण हे सर्व होऊनही परमेश्वराचा क्रोध कमी होणार नाही, परंतु मारण्यासाठी अजूनही त्याच्या हात उगारलेला राहील.

< ಯೆಶಾಯನು 9 >