< ಯೆರೆಮೀಯನು 12 >

1 ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?
परमेश्वरा, मी तुझ्याकडे वादविवाद घेऊन येतो, तू नितीमान ठरतोस, मी निश्चितपणे माझ्या तक्रारीचे कारण तुला सांगितले पाहिजे. दुष्ट लोकच यशस्वी का होतात? सर्व जे अविश्वासू लोक ते यशस्वी आहेत.
2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.
तू त्यांना लावले आणि ते मुळावले. ते वाढतात आणि फळे देतात. तू त्यांच्या मुखात त्यांच्या जवळ आहे, पण त्यांच्या मनापासून तू फार दूर आहेस.
3 ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ.
पण, परमेश्वरा, तू मला जाणतोस. तू मला पाहतोस आणि माझ्या मनाला पारखतोस. कत्तल करण्यासाठी मेंढ्यांना जसे फरपटत आणतात, तसे त्यांना फरपटत आण. कत्तलीच्या दिवसासाठी त्यांना तयार कर.
4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.
किती काळ राष्ट्र शोक करणार? आणि साऱ्या देशाचे गवत सुकून जाईल? त्यामध्ये राहणाऱ्यांच्या दुष्टाई मुळे पशू व पक्षी मरुन गेले आहेत. कारण ते लोक म्हणाले “आमचे काय होईल हे देवाला माहीत नाही.”
5 “ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?
कारण तू “यिर्मया, पायदळाबरोबर धावलास आणि त्यांनी तुला दमवले, तर मग घोड्यांबरोबर तू कसा धावशील? जर तू सुरक्षित आणि उघड्या देशात पडतोस तर यार्देन नदीकिनारी वाढणाऱ्या काटेरी झुडुंपात तू काय करशील?
6 ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.
कारण तुझे भाऊबंद आणि तुझ्याच वडिलाच्या घराण्याने तुझ्याविरूद्ध विश्वासघात केला आहे आणि तुझ्याचविरूद्ध आवाज उठवीत आहे. जरी ते तुझ्याशी मित्रांसारखे बोलत असले, तरी तू त्यांच्यावर विश्वास ठेवू नकोस.”
7 “ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
“मी माझे घर सोडले आहे, मी माझे वतन टाकले आहे. मी माझे प्रिय लोक तिच्या वैऱ्यांच्या हाती दिले आहे.
8 ನನ್ನ ಸೊತ್ತು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು. ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದ್ದರಿಂದ ಅದನ್ನು ಹಗೆ ಮಾಡಿದ್ದೇನೆ.
माझे स्वत: चे वतन मला जंगलातील सिंहाप्रमाणे झाले आहेत. तिने आपला आवाज माझ्याविरूद्ध केला, म्हणून मी तिचा द्वेष केला आहे.
9 ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.
माझे वतन मला तरस आहे, आणि पक्षी तिच्याभोवती घिरट्या घालत आहेत. जा आणि भूमीवरील सर्व जिवंत प्राण्यांना गोळा करा, आणि त्यांनी खाऊन टाकावे म्हणून त्यास आण.
10 ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.
१०पुष्कळ मेंढपाळांनी माझ्या द्राक्षमळ्याचा नाश केला आहे. त्यांनी माझा वाटा पायदळी तुडविला आहे, त्यांनी माझा आनंददायक भाग वैराण व वाळवंटात पालटवला आहे.
11 ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.
११त्यांनी तिला उजाड केले आहे, मी तिच्या करिता शोक करत आहे. ती उजाड झाली आहे. सर्व भूमी उजाड करण्यात आली आहे. कारण कोणी हे मनावर घेत नाही.
12 ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.
१२नाश करणारे सर्व वाळवंटातील त्या उजाड ठिकाणाहून आले आहेत, कारण परमेश्वराची तलवार एका सीमेपासून देशाच्या तुसऱ्या सीमेपर्यंत खाऊन टाकीत आहे. कोणत्याही जिवंत प्राण्यांसाठी देशात सुरक्षितता नाही.
13 ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”
१३त्यांनी गहू पेरला पण काटेरी झाडांची कापणी केली, त्यांनी दमेपर्यंत कष्ट केले, पण काही मिळवले नाही. परमेश्वराच्या कोपामुळे ते त्यांच्या पिकाबाबत लज्जित होतील.”
14 ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.
१४परमेश्वर माझ्या सर्व शेजाऱ्यांविरूद्ध असे म्हणतो. जे वतन मी आपल्या इस्राएल लोकांस वतन म्हणून दिले त्यास जे दुष्ट शेजारी हात लावतात, पाहा! त्यांना मी त्याच्या भूमीतून उपटून काढीन आणि त्यांच्यामधून यहूदाचे घराणे उपटून काढीन.
15 ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
१५पण अशा रीतीने त्यांना उपटून काढल्यानंतर असे होईल की परतून त्यांच्यावर दया करीन, आणि मी प्रत्येकाल्या त्याच्या वतनास आणि प्रत्येकाला त्याच्या देशास परत आणीन.
16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.
१६असे होईल की जशी त्यांनी माझ्या लोकांस बालमूर्तीची शपथ वाहायला शिकवली तशी, परमेश्वर जिवंत आहे, अशी माझ्या नावाची शपथ वाहायला जर ते माझ्या लोकांचे मार्ग मन लावून शिकतील तर ते माझ्या लोकांमध्ये बांधण्यात येतील.
17 ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.
१७पण जर कोणी ऐकत नाही, तर ते राष्ट्र मी समुळ उपटून टाकीन आणि ते नष्ट करीन, परमेश्वर असे म्हणतो.

< ಯೆರೆಮೀಯನು 12 >