< ಯೆರೆಮೀಯನು 14 >

1 ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:
परमेश्वराचे वचन जे अवर्षणाबद्दल यिर्मयाकडे आले:
2 “ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.
“यहूदा शोक करो, तिची दारे पडून जावोत, ते देशासाठी विलाप करत आहेत, त्यांचे यरूशलेमेसाठी रडणे उंचावर गेले आहे.
3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
त्यांचे थोरजन त्यांच्या चाकरांना पाण्यासाठी पाठवतात, ते सर्व अयशस्वी परत येतात, म्हणून ते लज्जित व फजीत होऊन आपले चेहरे झाकून घेतात.
4 ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
ह्यामुळे जमीनीत भेगापडल्या आहेत, कारण भूमीवर कोठेही पाणी नाही. म्हणून शेतकरी लज्जीत होऊन आपली डोकी झाकत आहे.
5 ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ.
कोठेही गवत नसल्यामुळे हरीणी आपल्या नवजात पाडसास एकटेच सोडून देते.
6 ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”
उघड्या डोंगरावर उभी राहून, जंगली गाढवे कोल्ह्यांप्रमाणे धापा टाकतात, त्यांचे डोळे खोल गेले आहेत, कारण खाण्यालायक एकही झुडूप शिल्लक नाही.
7 ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.
जरी आमची दुष्टाई आमच्याविरूद्ध साक्ष देते, पण तरी, परमेश्वरा, तुझ्या नामास्तव कार्य कर. कारण आमची अविश्वासू कृत्ये वाढली आहेत. आम्ही तुझ्याविरूद्ध पाप केले आहे.
8 ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
इस्राएलाची आशा, तोच एक ज्याने संकटकाळी त्यास तारले. तू देशात उपऱ्यासारखा किंवा जो वाटसरु रात्री उतरायला वळतो त्याच्यासारखा तू का असावा?
9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.
जो वाचवू शकत नाही अशा वीर योद्ध्याप्रमाणे तू का गोंधळात आहेस? कारण परमेश्वरा, तू आमच्याबरोबर आहेस. आम्ही तुझ्या नावाने ओळखले जातो, आम्हास सोडून जाऊ नकोस.”
10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”
१०परमेश्वर या लोकांस असे म्हणतो: त्यांना भटकने प्रिय झाले आहे, त्यांनी आपले पाय असे करण्या पासून आवरून धरले नाही. यास्तव परमेश्वर त्यांच्यापासून आनंदी नाही, आता तो त्यांची दुष्कृत्ये लक्षात ठेवून त्यांच्या पापांबद्दल त्यांना शिक्षा करील.
11 ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.
११परमेश्वर मला म्हणाला, “या लोकांच्या भल्यासाठी तू प्रार्थना करु नकोस.
12 ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.
१२कारण जरी ते उपवास करतील, तरी मी त्यांचे रडने ऐकणार नाही, आणि जरी ते होमार्पण व धान्यार्पण करतील, त्यामध्ये मी आनंद पावणार नाही. कारण तलवार व दुष्काळ आणि रोगराई यांनी मी त्यांचा नाश करीन.”
13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.
१३तेव्हा मी म्हणालो, “हे, प्रभू परमेश्वरा, पाहा! संदेष्टे त्यांना सांगत आहेत की, तुम्ही तलवार पाहणार नाही, आणि दुष्काळ तुमच्यासाठी असणार नाही, कारण मी तुम्हास या ठिकाणी खरी सुरक्षितता देत आहे.”
14 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
१४परमेश्वर मला म्हणाला, “माझ्या नावावर हे संदेष्टे असत्य कथन करतात. मी त्यांना पाठविलेले नाही आणि त्यांना अशी कोणतीही आज्ञा केली नाही किंवा त्याच्याशी बोललोही नाही. पण त्यांच्या हृदयातून निघणारे कपट, खोटे दर्शन, व दैवप्रश्न व व्यर्थता हे भविष्य ते तुम्हास सांगतात.
15 ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
१५यास्तव परमेश्वर असे म्हणतो, मी ज्यांना पाठवले नाही, अशे जे भविष्यवादी माझ्या नावात भविष्य सांगतात आणि असे म्हणतात या देशावर तलवार व उपासमार येणार नाही. ते संदेष्टे तलवारीने आणि उपासमारीने मरतील.
16 ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.
१६आणि ज्या लोकांस त्यांनी भवीष्य सांगितले, ते उपासमार व तलवार यामुळे यरूशलेमेच्या रस्त्यावर फेकले जातील. त्यांना व त्यांच्या स्त्रिया व मुलांना आणि मुलींना कोणी पुरणारा पण असणार नाही, कारण त्यांची दुष्टाई मी त्यांच्यावर ओतीन.
17 “ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.
१७हे वचन त्यांना सांग: माझ्या डोळ्यांत अश्रू रात्रंदिवस वाहोत, ते थांबू नयेत. कारण माझ्या लोकांच्या कन्येचे पडणे खूप मोठे आहे, तिची जखम मोठी आणि ठीक न होणारी आहे.
18 ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’”
१८जर मी रानात बाहेर गेलो तर पाहा, तीथे तलवारीने मारले गेलेले आहेत. आणि जर मी शहराजवळ आलो तर पाहा! दुष्काळाने ग्रासलेले आहेत. कारण दोघेही, याजक आणि संदेष्टे ज्ञान नसल्याने भटकत आहे.”
19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.
१९“काय तू यहूदाला पूर्णपणे नाकारले आहे का? तू सियोनचा राग करतोस काय? बरे न होण्या इतके तू आम्हांला का पीडलेस? आम्हांस शांती असेल ही आशा बाळगली, पण आमच्या वाट्याला काहीच चांगले आले नाही. आणि बरे होण्याची वाट पाहिली, पण पाहा, तेथे फक्त भयच आहे.
20 ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.
२०परमेश्वरा, आम्ही पापी आहोत, ह्याची आम्हास जाणीव आहे. आमच्या पूर्वजांनी दुष्कृत्ये केली. आम्ही तुझ्याविरूद्ध अपराध केले.
21 ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.
२१परमेश्वरा, तुझ्या नामास्तव, आम्हांला नाकारू नकोस, तुझ्या वैभवशाली सिंहासनाची अप्रतिष्ठा होऊ देऊ नकोस. आठवण कर आणि आम्हा बरोबर तुझा करार तोडू नको.
22 ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.
२२राष्ट्राच्या मूर्तींत पाऊस पाडण्याचे सामर्थ्य आहे काय? किंवा आकाश स्वत: पावसाच्या सरी पाडण्यास सशक्त आहेत काय? जो हे सर्व करतो, तो तूच आमचा एकमेव परमेश्वर देव नाही काय? आमची आशा तुझ्यामध्ये आहे. कारण तुच या सर्व गोष्टी केल्या आहेत.”

< ಯೆರೆಮೀಯನು 14 >