< ಯೆರೆಮೀಯನು 17 >

1 “ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.
“यहूदाचे पाप लोखंडी लेखणीने व हिऱ्याच्या टोकाने लिहिलेले आहे. ते त्यांच्या हृदयाच्या पाटीवर आणि वेदीच्या शिंगांवर कोरले आहेत.
2 ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.
त्यांचे लोक उंच डोंगरावरील हिरव्या झाडाजवळील त्यांच्या वेद्या आणि अशेराचे खांब आठवण करतात.
3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
विस्तीर्ण प्रदेशातील डोंगरावरील त्यांच्या वेद्या ते आठवतात. मी तुझी संपत्ती आणि विपुलता दुसऱ्यास लूट अशी वाटून देणार. कारण तुझी पातके तुझ्या सर्व सिमांत सरळीकडे आहेत.
4 ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”
मी दिलेला वारसा तू गमावशील. मी तुमच्या शत्रूंना तुम्हास गुलाम म्हणून अज्ञान भूमीत देईन. कारण माझ्या क्रोधात तू अग्नी पेटवला आहे, जो सर्वकाळ जळत राहीन.”
5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.
परमेश्वर असे म्हणतो, “जो मानवजातीवर विश्वास ठेवतो, जो आपल्या देहाला आपले सामर्थ्य करतो पण त्याचे हृदय परमेश्वरापासून दूर आहे, तो शापित असो.
6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
कारण तो वाळवंटातील झुडुपाप्रमाणे आहे आणि चांगले येईल ते तो पाहणार नाही. तो निर्जन, कोरड्या व बरड जमिनीवर व रहिवासी नसलेल्या जागी वस्ती करीन.
7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.
परंतु जो परमेश्वरावर विश्वास ठेवतो, तो आशीर्वादीत आहे, कारण परमेश्वर त्याचा विश्वास आहे.
8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”
तो पाण्याच्या प्रवाहाजवळ लावलेल्या वृक्षाप्रमाणे तो होईल, ज्याची मुळे प्रवाहाजवळ पसरते, तो हे पाहत नाही की उन्हाची झळ येत आहे, कारण त्याची पाने हिरवीगार राहतात. मग दुष्काळाच्या वर्षाच्या काळात तो चिंताग्रस्त होणार नाही, किंवा तो फळ देण्याचे थांबवणार नाही.”
9 ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?
हृदय इतर कोणत्याही गोष्टीपेक्षा जास्त कपटी आहे, ते आजारी आहे, कोण त्यास समजू शकणार?
10 “ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”
१०मी प्रत्येक मनुष्यास त्याच्या लायकीप्रमाणे, त्याच्या कर्माच्या फळाप्रमाणे ताडना करण्यास, मी परमेश्वर, मनाचा शोध घेतो, मी हृदय पारखतो.
11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.
११अन्यायाने जो श्रीमंत होतो, तो जशी तितर जी अंजी घालत नाहीत त्यावर बसते तसा आहे. पण त्याच्या आयुष्याच्या मध्यांनात, ती संपत्ती त्यास सोडील. तो शेवटी एक मूर्ख असेल.
12 ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
१२आमच्या मंदिराचे ठिकाण एक गौरवशाली राजासन, जे सुरुवातीपासून भारदस्त आहे.
13 ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.
१३परमेश्वरा, तू इस्राएलचे आशास्थान आहेस. तू पाण्याच्या जिवंत झऱ्याप्रमाणे आहेस. जो या भूमीवर परमेश्वरा पासून फिरेल, त्यास छेदले जाईल. कारण त्यांनी परमेश्वरास जो जिवंत पाण्याचा झरा आहे, त्यास सोडले आहे.
14 ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.
१४परमेश्वरा, तू मला बरे कर, आणि मी पूर्ण, बरा होईन. तू मला तार, म्हणजे मी तरेन. कारण तुच माझे स्तुतीचे गीत आहेस.
15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.
१५पाहा, ते मला विचारत आहे, “परमेश्वराचे वचन कोठे आहे? ते आता येवो.”
16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
१६मी तर तुझ्यामागे चालून मेंढपाळ होण्यापासून मागे हटलो नाही, तो भयंकर दिवस उजाडावा अशी माझी इच्छाही नव्हती. हे तू जाणतोस, जे माझ्या ओठातून निघाले ते तुझ्यासमोर आहे.
17 ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.
१७तू मला भयावह असे होऊ नकोस. संकटाच्या दिवशी तू माझा आश्रय आहेस.
18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.
१८माझा पाठलाग करणारे लाजवले जावो, परंतू मी न लाजवला जावो. ते निराश केले जावोत, परंतू मी निराश न केला जावो. अरिष्टाचा दिवस त्यांच्याविरुद्ध पाठव आणि दुप्पट नाशाने त्यांना विखरुन टाक.
19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,
१९परमेश्वराने मला असे म्हटले: “यहूदाचे राजे यरूशलेमेच्या ज्या प्रवेशद्वारातून ये-जा करतात, त्या द्वारात जाऊन उभा राहा आणि लोकांस सांग. मग यरूशलेमेच्या इतर प्रवेशद्वारापाशी जाऊन हेच कर.
20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
२०त्यांना सांग, यहूदाच्या राजांनो आणि सर्व यहूदा लोकांनो व यरूशलेमेच्या प्रवेशद्वारांतून प्रवेश करणाऱ्या सर्व राहणाऱ्यांनो, परमेश्वराचे वचन ऐका.
21 ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.
२१परमेश्वर असे म्हणतो: तुम्ही आपला जीव जपा आणि शब्बाथाच्या दिवशी तुम्ही यरूशलेमेच्या प्रवेशद्वारातून ओझी वाहून आणू नका.
22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.
२२आणि शब्बाथाच्या दिवशी तुम्ही आपल्या घरातून काही भार बाहेर आणू नका व काही उद्योगही करु नका, तुमच्या पूर्वजांना दिलेल्या आज्ञेप्रमाणे शब्बाथाचा दिवस पवित्र पाळा.
23 ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.
२३पण त्यांनी तो पाळला नाही आणि लक्ष दिले नाही. परंतू ते आपल्या मानेत ताठर झाले, म्हणून ते ऐकेणात आणि शिक्षण आत्मसात करेनात.
24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,
२४असे होईल की, जर तुम्ही खचित माझे ऐकाल आणि शब्बाथाच्या दिवस पवित्र पाळण्यासाठी, यरूशलेमेच्या प्रदेशद्वारातून तुम्ही ओझी आणली नाहीत आणि त्या दिवशी काम नाही केले, परमेश्वर असे म्हणतो.
25 ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.
२५तर या नगराच्या दारातून दावीदाच्या सिंहासनावर बसणारे राजे आणि सरदार, रथांमधे व घोड्यावर बसून आत जातील, ते व त्यांचे सरदार, यहूदा आणि यरूशलेमेत राहणारे, आत जातील, आणि हे नगर सर्वकाळ राहीन.
26 ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.
२६ते सर्व यहूदा आणि यरूशलेमेच्या आजूबाजूच्या सर्व प्रदेशातून, आणि बन्यामीनच्या देशातून आणि खालच्या भागातून, डोंगराळ प्रदेशातून आणि नेगेबमधून, होमार्पण आणि धान्यार्पण, यज्ञ व धूप आणतील आणि उपकारस्तुतीची अर्पणे घेऊन लोक परमेश्वराच्या घरास येतील.
27 ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’”
२७पण जर तुम्ही शब्बाथ दिवस पवित्र पाळण्यासाठी माझे ऐकले नाही, जर तुम्ही शब्बाथाच्या दिवशी यरूशलेमेच्या दारात ओझे वाहिले, तर मी दारात कधींही विझू न शकणारी आग लावीन, ही आग यरूशलेमचे राजवाडे खाऊन टाकील आणि ती विझवली जाणार नाही.”

< ಯೆರೆಮೀಯನು 17 >