< ಯೆರೆಮೀಯನು 23 >

1 “ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.
“जे मेंढपाळ माझ्या कुरणातून मेंढरांचा नाश आणि त्यांची पांगापंग करीत आहेत,” त्यांना हाय हाय! परमेश्वर असे म्हणतो,
2 ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
यास्तव परमेश्वर, इस्राएलचा देव, त्या मेंढपाळांना, जे त्याच्या लोकांस चारतात, त्याविषयी असे म्हणतो, “तुम्ही माझ्या मेंढरांना विखरले आणि त्यांना घालवून लावले आहे. तुम्ही त्यांची काळजी घेतली नाही. हे जाणून घ्या, मी तुम्हास तुमच्या वाईट कृत्यांबद्दल परत फेड करीन.” परमेश्वर असे म्हणतो.
3 “ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.
“मी स्वत: माझ्या उरलेल्या कळपास ज्या सर्व देशात घालवला होता, त्यास एकत्र करणार, आणि त्यांना त्यांच्या कुरणात परत आणीन. मग ती सफल होऊन बहूतपट होतील.
4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
मग मी त्यांच्यावर मेंढपाळ नेमीन, जो त्यांना पाळील, म्हणजे ती घाबरणार नाहीत व भयभीत होणार नाहीत. त्यातील एकही हरवणार नाही.” परमेश्वर असे म्हणतो.
5 “ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
परमेश्वर असे म्हणतो, पाहा! असे दिवस येत आहेत. “मी दावीदाकरीता नितीमान अंकुर उगवीन.” तो राजा म्हणून राज्य करेल, तो देशात न्याय व न्यायीपण करील, आणि भरभराट घेऊन येईल.
6 ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.
त्याच्या दिवसात यहूदा तरला जाईल, आणि इस्राएल सुरक्षित राहील. आणि ज्या नावाने त्यास हाक मारतील ते हे, म्हणजे परमेश्वर आमचे न्यायीपण असे असेल.
7 “ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.
यास्तव परमेश्वर असे म्हणतो. पाहा! असे दिवस येत आहेत ज्यात, ज्या परमेश्वराने इस्राएलाच्या लोकांस मिसर देशातून बाहेर आणले, तो जिवंत आहे असे म्हणणार नाहीत.
8 ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”
उलट ते असे म्हणतील, परमेश्वर जिवंत आहे, ज्याने इस्राएलाच्या वंशांना उत्तरेकडील देशातून आणि सर्व देशात ज्यात त्यांना घालवले होते, त्यातून बाहेर काढून वर चालवून आणले, असे म्हणतील.
9 ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
संदेष्ट्यांबद्दल माझे हृदय माझ्या आत तुटले आहे आणि माझी सर्व हाडे थरथरत आहेत. कारण परमेश्वर व त्याच्या पवित्र वचनांमुळे, माझी स्थिती मद्यप्यासारखी झाली आहे. ज्यावर द्राक्षरस हावी झाले आहे,
10 ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.
१०कारण व्यभिचाऱ्यांनी राष्ट्र भरला आहे, यास्तव राष्ट्र शोक करीत आहे. रानातील कुरणे वाळून गेली आहे. संदेष्ट्यांचे मार्ग दुष्ट आहेत, ते त्यांची शक्ती चुकीच्या पद्धतीने वापरतात.
11 “ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
११कारण संदेष्टेच काय, पण याजकसुद्धा विटाळले आहेत. माझ्या मंदिरात त्यांची दुष्कृत्ये आढळली आहेत, परमेश्वर असे म्हणतो.
12 “ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
१२यास्तव त्यांच्या मार्ग त्यांचा अंधारात निसरड्या मार्गा सारखा होईल. ते खाली ओढले जातील, ते त्यामध्ये पडतील. कारण त्यांच्या शिक्षेच्या वर्षी मी त्यांच्याविरुद्ध अरिष्ट पाठवीन, असे परमेश्वर म्हणतो.
13 “ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.
१३“शोमरोनच्या संदेष्ट्यांनी चुकीच्या गोष्टी केल्याचे मी पाहिले. मी त्यांना बाल या खोट्या दैवताच्या नावाने भविष्य वर्तविताना पाहिले. आणि त्यांनी इस्राएलाच्या लोकांस चूकीच्या मार्गास नेले.
14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
१४आणि मी यरूशलेमामधल्या संदेष्ट्यांना भयंकर गोष्टी करताना पाहिले आहे. त्यांनी व्यभिचार केला आणि दुष्टतेत चालले. ते दुष्टांचे हात मजबूत करतात, कोणीही आपल्या दुष्टाईपासून फिरले नाहीत. ते सर्व मला सदोमासारखे आणि तिच्यातले राहणारे गमोऱ्यासारखे झाले आहेत.”
15 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”
१५यास्तव सेनाधीश परमेश्वर संदेष्ट्यांबद्दल असे म्हणतो, “मी त्यांना कडू दवणा खावयास देणार आणि विषमिश्रित पाणी पिण्यास देणार.” कारण यरूशलेमेतल्या संदेष्ट्यांकडून अशुद्धपणा निघून सर्व देशात पसरला आहे.
16 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
१६सेनाधीश परमेश्वर असे म्हणतो, “हे संदेष्टे तुम्हास जे काय भविष्य सांगतात त्याकडे लक्ष देऊ नका. त्यांनी तुम्हास भ्रमात पाडले आहे! ते त्यांच्या मनाचेच दृष्टांत सांगतात.
17 ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.
१७माझा अपमान करणाऱ्यांना ते सतत बोलत राहतात की, परमेश्वराने तुम्हास शांती देऊ केली आहे, आणि प्रत्येकजण आपल्या हृदयाच्या हट्टीपणाच्या वाटेने चालतात आणि म्हणतात, तुमच्यावर कोणतीच आपत्ती येणार नाही.
18 ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?
१८पण परमेश्वराच्या मसलतीच्या सभेत त्याचे वचन पाहायला व ऐकायला कोण उभा राहील? त्याच्या शब्दांकडे लक्ष देऊन कोण ऐकेल?
19 ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು
१९पाहा! परमेश्वराकडून वादळ येत आहे. त्याचा राग बाहेर जात आहे, आणि ती क्रोधाच्या वादळाची भोवळ आहे. ती दुष्टांच्या डोक्यावर आदळेल.
20 ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.
२०परमेश्वराने आपल्या हृदयातील हेतू सिद्धीस नेई पर्यंत, त्याचा राग परतणार नाही. शेवटल्या दिवसात तुम्हास हे समजेल.
21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.
२१मी त्या संदेष्ट्यांना पाठवले नाही, पण तेच संराष्ट्र द्यायला धावले. मी त्यांच्याशी काही बोललो नाही, पण तेच माझ्यावतीने भविष्य करतात.
22 ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”
२२कारण जर ते माझ्या सभेत उभे राहिले असते, तर ते माझ्या लोकांस माझे वचन ऐकण्याचे कारण झाले असते. त्यांनी त्यांच्या दुष्कृत्यांपासून आणि कर्मांच्या दुष्टतेपासून फिरवले असते.”
23 ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”
२३परमेश्वर असे म्हणतो, “मी काय फक्त जवळचा देव आहे आणि दूरवरचा देव नाही काय?”
24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
२४परमेश्वर असे म्हणतो, कोण असा आहे जो गुप्त ठिकाणी लपतो म्हणजे मी त्यास पाहू शकणार नाही? मी स्वर्ग आणि पृथ्वी भरून उरलो नाही काय?
25 “‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
२५संदेष्टे माझ्या नावाने खोटे भविष्य करतात, ते म्हणतात, मला स्वप्न पडले आहे! मला स्वप्न पडले आहे! मी त्याना असे म्हणताना ऐकले आहे.
26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
२६संदेष्ट्ये जे खोटे भविष्य सांगतात आणि आपल्या हृदयाच्या दुष्टपणाने विचार करतात हे किती काळ चालणार?
27 ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.
२७हे संदेष्टे, ऐकमेकांना खोट्या स्वप्नाबद्दल सांगून माझ्या लोकांस माझ्या नामाचा विसर व्हावा असा प्रयत्न करीत आहेत. जसे ह्यांचे पूर्वज बालामुळे माझे नाव विसरले.
28 ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
२८संदेष्ट्याला स्वप्न सांगायचे असेल, तर त्यास सांगू द्या. पण ज्या कोणाला मी काही घोषीत करतो, त्याने माझे वचन सत्याने सांगावे. गव्हा पुढे गवत ते काय? परमेश्वर असे म्हणतो.
29 “ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.
२९माझा संराष्ट्र अग्नीप्रमाणे नाही काय? परमेश्वर असे म्हणतो. आणि तो खडक फोडणाऱ्या हातोड्याप्रमाणे नाही काय?
30 ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
३०परमेश्वर असे म्हणतो “म्हणून पाहा! मी खोट्या संदेष्ट्यांविरूद्ध आहे, जे एकमेकांकडून माझे शब्द चोरतात आणि म्हणतात ते माझ्याकडून आले आहेत.
31 “ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.
३१परमेश्वर असे म्हणतो, पाहा! मी संदेष्ट्यांविरूद्ध आहे, जे त्यांची जीभ भविष्यवाणी करण्यासाठी वापरतात.
32 ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.
३२परमेश्वर असे म्हणतो, पाहा! मी त्या संदेष्ट्यांविरूद्ध जे फसवे स्वप्ने सांगतात, म्हणजे ते त्यांच्या खोट्या बोलण्याने व बढाईने माझ्या लोकांस चुकीच्या मार्गांने नेतात. कारण लोकांस शिकविण्यासाठी मी त्यांना पाठविलेले नाही. मी त्यांना माझ्यासाठी काही करण्याची आज्ञा कधीही दिलेली नाही. ते या लोकांस खचित मदत करु शकत नाहीत.” परमेश्वर असे म्हणतो.
33 “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’
३३“जेव्हा हे लोक व संदेष्टे किंवा याजक तुला विचारतील की ‘परमेश्वराने काय घोषणा केली आहे?’ तेव्हा तू त्यांना सांग, कोणती घोषणा? कारण मी तुम्हास टाकले आहे, परमेश्वर असे म्हणतो.
34 ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.
३४आणि संदेष्टे व याजक किंवा जो कोणी म्हणेल ‘परमेश्वराची घोषणा ही आहे.’ मी त्यास व त्याच्या सर्व घराण्याला शिक्षा करीन.
35 ‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,
३५तुम्ही प्रत्येक आपल्या भावाला आणि आपल्या शेजाऱ्यास असे विचारु शकता, ‘परमेश्वराने काय उत्तर दिले?’ किंवा ‘परमेश्वर काय म्हणाला?’
36 ‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
३६पण तुम्ही कधीही परमेश्वराच्या ओझ्याची आठवण करुच नका, कारण प्रत्येकाला आपापलेच वचन ओझे असे होईल, कारण जिवंत देव, सेनाधीश परमेश्वर, आमचा देव याची वचने तुम्ही विपरीत केली आहेत.
37 ‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.
३७तुम्ही संदेष्ट्याला असे विचारा, ‘परमेश्वराने तुला काय उत्तर दिले’ किंवा ‘परमेश्वर काय म्हणाला?’
38 ‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.
३८आणि ‘परमेश्वराची घोषणा काय आहे?’ असे म्हणून नका. जर तुम्ही असे शब्द वापराल, तर परमेश्वर तुम्हास म्हणेल, तुम्ही माझ्या संदेशाला ‘परमेश्वराची घोषणा असे म्हणू नेय.’ हे शब्द वापरु नका असे मी बजावले.
39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
३९म्हणून मी तुम्हास व जे नगर मी तुम्हास व तुमच्या पूर्वजांना दिले ते मी आपल्या समक्षतेपासून दूर फेकून देणार.
40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”
४०मी तुम्हावर कधीही विसरु शकणारी अप्रतिष्ठित आणि बदनामी ही आणीन.”

< ಯೆರೆಮೀಯನು 23 >