< ಯೆರೆಮೀಯನು 40 >

1 ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.
यरूशलेम व यहूदा येथील जे सर्व कैदी बंदिवान करून बाबेलास नेले होते त्यांच्यामध्ये यिर्मया बेड्यांनी बांधलेला होता. तेव्हा राजाच्या अंगरक्षकाचा प्रमुख नबूजरदान याने त्यास रामा येथून पाठवून दिल्यावर जे वचन परमेश्वराकडून यिर्मयाकडे आले ते हे.
2 ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.
प्रमुख अंगरक्षकाने यिर्मयाला घेतले आणि तो त्यास म्हणाला, “तुझा देव परमेश्वर ह्याने हे अरिष्ट या स्थळावर येणार म्हणून भाकीत केले.
3 ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.
आणि परमेश्वराने ते आणले आहे. त्याने सांगितल्याप्रमाणे त्याने केले आहे; कारण तुम्ही लोकांनी परमेश्वराविरुध्द पाप केले आहे आणि त्याची वाणी पाळली नाही. म्हणून या गोष्टी तुम्हा लोकांविरूद्ध घडल्या आहेत.
4 ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.
पण आता पाहा, मी तुझ्या हातात असलेल्या बेड्यापासून तुला आज सोडवत आहे. जर तुझ्या दृष्टीने तू माझ्याबरोबर बाबेलास येणे चांगले असले तर, ये, आणि मी तुझी काळजी घेईन. पण जर तुझ्या दृष्टीने तू माझ्याबरोबर बाबेलास येणे चांगले नसेल तर मग येऊ नको. तुझ्यादृष्टीने जेथे चांगले आणि योग्य आहे तेथे तू जा.
5 ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
जेव्हा यिर्मयाने काही उत्तर दिले नाही, नबूजरदान म्हणाला, शाफानाचा मुलगा अहीकाम याचा मुलगा गदल्या ज्याला बाबेलाच्या राजाने त्यास यहूदातील नगरांचा अधिकारी नेमले आहे त्याच्याकडे परत जा आणि त्याच्याबरोबर लोकांमध्ये राहा. किंवा जेथे कोठे तुझ्या दृष्टीने तुला योग्य वाटेल तेथे तू जा.” राजाच्या अंगरक्षकाच्या नायकाने त्यास अन्न व बक्षीस दिले आणि त्यास दूर पाठवून दिले.
6 ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
मग यिर्मया, मिस्पा येथे अहीकामाचा मुलगा गदल्या ह्याच्याकडे गेला. तो देशात मागे राहिलेल्या लोकांमध्ये जाऊन राहिला.
7 ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,
आता यहूदाच्या सैन्यातील काही सेनापतींनी जे अजून अंगणात होते ते आणि त्यांच्या मनुष्यांनी ऐकले की, बाबेलाच्या राजाने अहीकामाचा मुलगा गदल्या ह्यास, देशावर अधिपती म्हणून नेमले आहे. त्यांनी हेही ऐकले की, देशात अगदी गरीब पुरुष, स्त्रिया व मुले ह्यांना कैद करून बाबेलला नेले नव्हते जे मागेच राहिले होते त्यांना त्याच्या ताब्यात दिले आहे.
8 ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
मग ते मिस्पा येथे गदल्याकडे गेले. ती माणसे नथन्याचा मुलगा इश्माएलाची होती; कारेहाचे मुले योहानान व योनाथान; तन्हुमेथाचा मुलगा सराया; रफैची मुले नटोफाथी आणि माकाथाचा मुलगा याजन्या ते व त्यांची माणसे.
9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.
तेव्हा शाफानाचा मुलगा अहीकाम याचा मुलगा गदल्या त्यांना व त्यांच्या मनुष्यांना शपथ घेऊन आणि त्यांना म्हणाला, खास्दी अधिकऱ्यांची सेवा करण्यास घाबरु नका. देशात वस्ती करा आणि बाबेलाच्या राजाची सेवा करा आणि असे केल्याने तुमचे भले होईल.
10 ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.
१०आणि पाहा, जे खास्दी आम्हाजवळ येतील त्यांना भेटण्यास मी मिस्पात राहीन. म्हणून तुम्ही द्राक्षरस, उन्हाळी फळ व तेल यांचे उत्पादन करून आपल्या पात्रात साठवून ठेवावे. जी नगरे तुम्ही ताब्यात घेतली आहेत त्यामध्ये तुम्ही राहा.
11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ
११त्याचप्रमाणे मवाबात अम्मोनी लोकांमध्ये, अदोमात व इतर सर्व देशात जे यहूदी होते त्या सर्वांनी जेव्हा ऐकले की बाबेलाच्या राजाने यहूदाचा अवशेष देशात राहू दिला आहे व त्यांच्यावर गदल्या बिन अहीकाम बिन शाफान नेमला आहे,
12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.
१२तेव्हा जे सर्व प्रत्येक ठिकाणी पांगले होते ते सर्व यहूदी परत यहूदा देशात मिस्पात गदल्याकडे आले. त्यांनी द्राक्षरस आणि उन्हाळी फळांचा हंगाम मोठ्या विपुलतेने साठा केला.
13 ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,
१३कारेहाचा मुलगा योहानान व खेड्यापाड्याच्या प्रदेशातील सैन्याचे सर्व अधिकारी मिस्पा येथे गदल्याकडे आले.
14 “ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
१४ते त्यास म्हणाले, “अम्मोनी लोकांचा राजा बालीस याने नथन्याचा मुलगा इश्माएल ह्याला तुला मारण्यासाठी पाठविले आहे, हे तू जाणतोस काय?” पण अहीकामचा मुलगा गदल्या याने त्यावर विश्वास ठेवला नाही.
15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.
१५मग मिस्पा येथे एकांतात कारेहाचा मुलगा योहानान गदल्याशी बोलला की, “मला नथन्याचा मुलगा इश्माएल याला ठार मारण्याची परवानगी दे. कोणी माझ्यावर संशय घेणार नाही. त्याने तुला का मारावे? जे सर्व यहूदी तुझ्याभोवती गोळा झाले आहेत त्यांना देशात पांगण्याची आणि यहूदाचे उरलेले अवशेष नष्ट होण्याची परवानगी का देतोस?”
16 ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.
१६पण अहीकामाचा मुलगा गदल्या हा कारेहाचा मुलगा योहानान ह्यास म्हणाला, “तू ही गोष्ट करू नकोस, कारण इश्माएलाबद्दल तू खोट सांगत आहेस.”

< ಯೆರೆಮೀಯನು 40 >