< ಯೆರೆಮೀಯನು 50 >

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:
बाबेल देश व खास्द्यांच्या लोकांविषयी हे वचन परमेश्वराने यिर्मया संदेष्ट्याच्या हाती सांगितले.
2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’
राष्ट्रांत घोषणा कर व ऐकू येईल असे सांगा! निशाण उंच करा आणि ऐकू येईल असे सांगा. गुप्त ठेवू नका. म्हणा, बाबेल घेतली आहे. बेल लज्जित झाला आहे. मरदोख मोडला आहे. त्यांच्या मूर्तींची फजीती झाली आहे. त्यांचे पुतळे मोडले आहेत.
3 ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
उत्तरेकडचे एक राष्ट्र तिच्याविरूद्ध उठले आहे, ते तिचा देश ओसाड करील. तिच्यात कोणीएक मनुष्य किंवा पशूही राहणार नाही. ते दूर पळून जातील
4 “ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.
परमेश्वर असे म्हणतो, त्या दिवसात आणि त्यावेळी इस्राएलाचे व यहूदाचे लोक एकत्र येऊन बरोबर रडत जातील आणि परमेश्वर आपला देव याला शोधतील.
5 ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.
ते सियोनेची वाट विचारतील व ते त्या दिशेने चालायला सुरवात करतील. ते जातील आणि म्हणतील जो कधी मोडला जाणार नाही अशा सर्वकाळच्या कराराने आपण स्वत: परमेश्वराशी जोडले जाऊ.
6 “ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
माझे लोक हरवलेला कळप असे झाले आहेत. त्यांच्या मेंढपाळांनी त्यांना डोंगरात भटकविले आहे. त्यांनी त्यांना टेकड्या टेकड्यांतून फिरवले आहे. ते गेले, ते कोठे राहत होते ती जागा ते विसरले.
7 ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.
प्रत्येकजण जो कोणी त्यांच्याकडे बाहेर गेला त्यांनी त्यास खाऊन टाकले. त्यांचे शत्रू म्हणाले, आम्ही दोषी नाही, कारण परमेश्वर त्यांचे खरे राहण्याचे ठिकाण आहे, परमेश्वर जो त्यांच्या पूर्वजांची आशा त्याच्याविरुध्द त्यांनी पाप केले आहे.
8 “ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.
“बाबेलच्या मध्यापासून भटका आणि खास्द्यांच्या देशातून निघून जा; जसे कळपाच्या पुढे चालणारा एडका तसे तुम्ही व्हा.
9 ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.
कारण पाहा, मी उत्तरेकडून मोठ्या राष्ट्रांचा समूह उठवून बाबेलाविरूद्ध आणीन आणि ते सज्ज होऊन येतील. ते तिच्याविरूद्ध स्वतः तेथे बंदोबस्त करतील. तेथपासून ते बाबेल जिंकून घेतला जाईल. त्यांचे बाण निपुण वीरासारखे आहेत; ते व्यर्थ होऊन परत येत नाही.
10 ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.
१०खास्द्यांची लूट होईल. जे कोणी त्यांना लुटेल तो तृप्त होईल.” असे परमेश्वर म्हणतो.
11 “ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,
११माझे वतन लुटणाऱ्यांनो, तुम्ही आनंद व उत्सव करता; जसे तुम्ही वासरू त्याच्या कुरणात सभोवती पाय आपटत उड्या मारते, बळकट घोड्याप्रमाणे खिंकाळता.
12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.
१२तरी तुमची आई अत्यंत लज्जित होईल. जी कोणी तुला जन्म देणारी तिला लाज वाटेल. पाहा, ती राष्ट्रांत क्षुद्र, रान, कोरडी भूमी आणि वाळवंट होईल.
13 ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.
१३परमेश्वराच्या क्रोधामुळे बाबेलात वस्ती होणार नाही, परंतु संपूर्ण उध्वस्त होईल. बाबेला शेजारून जो कोणी जाईल तो प्रत्येकजण तिच्यामुळे कंप पावेल आणि तिच्या सर्व जखमामुळे फूत्कार टाकेल.
14 “ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.
१४तुम्ही सर्व बाबेलाविरूद्ध सभोवती मांडणी करून सज्ज व्हा. प्रत्येकजण जो कोणी धनुष्य वाकवतो त्याने तिच्यावर मारा करावा. तुमचा एकही बाण राखून ठेवू नका, कारण तिने परमेश्वराविरूद्ध पाप केले आहे.
15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
१५तिच्याविरूद्ध तिच्या सर्व सभोवताली विजयाची आरोळी मारा; तिने आपले सामर्थ्य समर्पण केले आहे. तिचे बुरुज पडले आहेत. तिच्या भिंती पाडल्या आहेत, कारण हा परमेश्वराचा सूड आहे. तिच्यावर सूड घ्या. तिने जसे दुसऱ्या राष्ट्रांना केले तसे तिचे करा.
16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.
१६बाबेलामधील पेरणारा आणि कापणीच्यावेळी विळा चालवणारा या दोघांचा नाश करा. जुलमाच्या तलवारीमुळे ते प्रत्येकजण आपल्या लोकांकडे वळतील; त्यांना आपल्या देशाकडे पळून जाऊ द्या.
17 “ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”
१७“इस्राएल विखुरलेले मेंढरू आहे आणि सिंहाने दूर पळवून लावले आहे. प्रथम अश्शूराच्या राजाने त्यास खाल्ले; मग यानंतर, बाबेलाचा राजा नबुखद्नेस्सर याने त्याचे हाडे मोडून टाकली आहेत.”
18 ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.
१८म्हणून सेनाधीश परमेश्वर, इस्राएलाचा देव, असे म्हणतो, पाहा, जसे मी अश्शूराच्या राजाला शिक्षा केली तसे मी बाबेलाच्या राजाला व देशाला शिक्षा करणार आहे.
19 ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”
१९“मी इस्राएलाला त्याच्या मातृभूमीत स्थापित करीन. तो कर्मेल व बाशानावर चरेल. नंतर तो एफ्राईम व गिलाद येथील डोंगराळ प्रदेशात तृप्त होईल.”
20 ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.
२०परमेश्वर म्हणतो, “त्या दिवसात आणि त्यावेळी, इस्राएलाचा अपराध शोधण्यात येईल, पण काहीच सापडणार नाही. मी यहूदाच्या पापाविषयी चौकशी करील, पण काहीच सापडणार नाही, कारण मी ज्यांना शेष असे राखून ठेवील त्यांना क्षमा करीन.”
21 “ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, ಎಂದು ಯೆಹೋವ ದೇವರು ಹೇಳುತ್ತಾರೆ.
२१परमेश्वर असे म्हणतो, मराथाईम देशाविरूद्ध उठ, त्याच्याविरुध्द आणि पकोडच्या रहिवाश्यांवर चढाई कर. त्यांच्यावर तलवार ठेवून आणि त्यांचा संपूर्ण नाश करा. मी तुला आज्ञा दिल्याप्रमाणे प्रत्येकगोष्ट कर.
22 ಯುದ್ಧದ ಶಬ್ದವೂ, ದೊಡ್ಡ ನಾಶನವೂ ದೇಶದಲ್ಲಿ ಇರುವುದು.
२२युध्दाचा मोठा आवाज आणि देशात प्रचंड नाश होत आहे.
23 ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
२३सर्व देशांचा हातोडा कसा मोडून तोडून टाकिला आहे आणि नाश झाला आहे. राष्ट्रामध्ये बाबेल कसा ओसाड झाला आहे.
24 ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.
२४हे बाबेला, मी तुझ्यासाठी सापळा रचला आहे, तू पकडला गेला आहे आणि तुला समजले नाही. तू सापडलास व पकडला गेलास, आतापर्यंत तू परमेश्वराविरुद्ध भांडलास,
25 ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.
२५परमेश्वराने आपले शस्रागार उघडले आहे आणि आपली हत्यारे त्याने बाहेर आणली आहेत कारण त्यास आपला क्रोध अंमलात आणायचा आहे. कारण प्रभू, सेनाधीश परमेश्वर यास खास्द्यांच्या देशात कार्य करायचे आहे.
26 ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.
२६दूरवरुन तिच्यावर हल्ला करा. तिची धान्याची कोठारे उघडा आणि धान्याच्या राशीप्रमाणे त्याचे ढीग करा. तिचा अगदी नाश करा, तिच्यातील कोणालाही सोडू नका.
27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.
२७तिचे सर्व बैल मारून टाका. त्यांना खाली कत्तलीच्या जागी पाठवा. त्यांना हाय हाय, कारण त्यांचे दिवस आले आहेत, कारण त्यांच्या शिक्षेची वेळ आली आहे.
28 ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.
२८बाबेल देशामधून जे कोणी वाचलेले आहेत ते पळून जात आहेत त्यांचा आवाज तेथे आहे. तो आवाज ते आमचा देव परमेश्वर याजकडून सूड, त्याच्या मंदिराविषयीचा सूड, सीयोनेस कळवित आहे.
29 “ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.
२९“बाबेलाविरूद्ध जो कोणी त्यांचे सर्व धनुष्य वाकवणारे धनुर्धारी यांना हुकूम द्या. त्यांच्याविरुद्ध तळ द्या आणि कोणालाही निसटू देऊ नका. तिने जे काही केले त्याची परतफेड करा. तिने जे माप वापरले तिला तसेच करा. कारण तिने परमेश्वरास, इस्राएलाचा पवित्र प्रभू याची अवज्ञा केली.
30 ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.
३०म्हणून तिचे तरुण पुरुष नगरातल्या चौकात पडतील, आणि तिचे सर्व लढणारे त्या दिवशी नाश होतील.” असे परमेश्वर म्हणतो.
31 “ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.
३१“हे गर्विष्ठा, पाहा, मी तुझ्याविरूद्ध आहे” असे प्रभू, सेनाधीश परमेश्वर म्हणतो. “कारण हे गर्विष्ठा, तुझा दिवस आला आहे, मी तुला शिक्षा करण्याची वेळ आली आहे.
32 ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”
३२म्हणून गर्विष्ठ अडखळून पडेल. तिला कोणीही उठवणार नाही. मी तिच्या नगरात आग पेटवीन. ती आग तिच्याभोवतालच्या प्रत्येकगोष्टीला खाऊन टाकिल.”
33 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆಗೆ ಒಯ್ಯುವವರೆಲ್ಲರು ಅವರನ್ನು ಬಿಟ್ಟುಬಿಡುವುದಿಲ್ಲವೆಂದು, ಬಲವಾಗಿ ಪಟ್ಟುಹಿಡಿದಿದ್ದಾರೆ.
३३सेनाधीश परमेश्वर असे म्हणतो, “इस्राएली लोक, यहूदी लोक याजवर बरोबर एकत्र जुलूम होत आहेत. ज्या सर्वांना त्यांनी पकडून नेले आहे त्यांना अजून धरून ठेवले आहे.
34 ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.
३४त्यांचा उद्धारकर्ता समर्थ आहे; ‘सेनाधीश परमेश्वर हे त्याचे नाव आहे’ तो खचित त्यांचा वाद चालवील, म्हणजे मग तो देशास विसावा देईल व बाबेलाच्या रहाणाऱ्यावर संघर्ष आणील.”
35 “ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,
३५परमेश्वर असे म्हणतो, खास्द्यांविरूद्ध, बाबेलाच्या राहणाऱ्याविरूद्ध, तिचे नेते व तिचे ज्ञानी माणसे यावर तलवार आली आहे.
36 ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
३६जे कोणी भविष्यासाठी वचन सांगतात त्यांच्याविरुद्ध तलवार आली आहे, याकरिता की, ते आपल्यास मूर्खाप्रमाणे प्रकट करतील. तिच्या सैनिकांविरूद्ध तलवार येत आहे, अशा रीतीने ते दहशतीने भरतील.
37 ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.
३७त्यांच्या घोड्याविरूद्ध, त्यांच्या रथावर आणि बाबेलाच्यामध्ये जे कोणी लोक राहतात त्या सर्वांवर तलवार आली आहे. ते स्त्रियासारखे असे होतील. तलवार तिच्या भांडारावर आली आहे, आणि ती लुटली जाईल.
38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.
३८तलवार तिच्या पाण्याविरूद्ध येईल, मग ते कोरडे होईल. कारण ती कवडीमोल मूर्तीचा देश आहे, आणि त्या लोकांस त्यांच्या भयंकर मूर्तींवरून वेडे झाले आहेत.
39 “ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ.
३९यास्तव रानटी पशू कोल्ह्यासहीत तेथे वस्ती करतील आणि तरुण शहामृग तेथे राहतील; कारण सर्व काळी तिच्यात पुन्हा कोणी कधीही रहाणार नाही. पिढ्यानपिढ्या तिच्यात कोणी वस्ती करणार नाही.
40 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.
४०परमेश्वर असे म्हणतो, देवाने जसा सदोम, गमोरा आणि त्यांचे शेजारी यांचा नाश केला. त्याचप्रमाणे, तेथे कोणी राहणार नाही, एकही मनुष्य तिच्यात राहणार नाही.
41 “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
४१“पाहा! उत्तरेकडून लोक येत आहेत. कारण एक महान शक्तीशाली राष्ट्र आणि पुष्कळ राजे दूर देशातून उठत आहेत.
42 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.
४२ते धनुष्य व भाले धारण करतात. ते क्रूर आहेत आणि त्यांच्याजवळ दया नाही. त्यांचा आवाज समुद्राप्रमाणे गर्जत आहेत आणि अगे बाबेलच्या कन्ये ते घोड्यांवर स्वार होऊन लढणाऱ्या मनुष्याच्या स्वरुपात तुझ्याविरूद्ध येत आहेत.
43 ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
४३बाबेलाच्या राजाने त्यांचे वर्तमान ऐकले आहे आणि त्याचे हात विपत्तीने गळाले आहेत. प्रसूत होणाऱ्या स्त्रीप्रमाणे त्यास वेदनेने वेढले आहे.”
44 ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
४४“पाहा, जसा सिंह यार्देनेच्या दाट झुडुपांतून बाहेर येतो, तसा तो मजबूत वस्तीवर येईल. कारण ते एकाएकी तिच्यापासून पळून जातील, असे मी करीन. आणि जो मी निवडलेला आहे त्यास तिच्यावर नेमून ठेवीन; कारण माझ्यासारखा कोण आहे? आणि मला कोण आज्ञा देईल? आणि कोणता मेंढपाळ माझ्यासमोर उभा राहील?”
45 ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
४५तर बाबेलाविरूद्ध परमेश्वराने जी योजना ठरवली आहे ती, खास्द्यांच्या देशाविरूद्ध जे संकल्प केले आहेत तेही ऐका; ते खचित कळपातील लहानांनादेखील, ओढून नेतील, त्यांचे कुरणाचे देश नाशाची जागा होईल.
46 ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
४६बाबेल जिंकून घेण्याच्या आवाजाने पृथ्वी हादरेल आणि त्यांच्या दुःखाची आरोळी राष्ट्रांमध्ये ऐकायला येईल.

< ಯೆರೆಮೀಯನು 50 >