< ಯೆರೆಮೀಯನು 8 >
1 “‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.
१परमेश्वर असे म्हणतो: त्यावेळी, ते यहूदातील राजांची प्रमुख नेत्यांची, याजकांची, संदेष्ट्यांची आणि यरूशलेममधील सर्व लोकांची हाडे कबरीतून बाहेर काढतील.
2 ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.
२आणि चंद्र, सूर्य, आकाशातले तारे, ज्यांना ते अनुसरले आणि सेवा केली, ज्यांच्या ते मागे चालले आणि पूजन केले, त्यांच्यापुढे पसरतील, ती गोळा केल्या जाणार नाही किंवा पुरल्या जाणार नाही, ती पृथ्वीवर पसरलेल्या शेणखतासारखी असतील.
3 ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’
३आणि या दुष्ट राष्ट्रातील जे उरलेले आहेत, ज्या प्रत्येक ठिकाणी मी त्यांना घालवले आहे, ते जिवनाच्या ऐवजी मृत्यू निवडतील, परमेश्वर असे म्हणतो.
4 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?
४तर त्यांना सांग: परमेश्वर असे म्हणतो: कोणी पडल्यास पुन्हा उठणार नाहीत काय? कोणी चुकीच्या मार्गाने गेला तर फिरुन मागे येण्याचा प्रयत्न करणार नाही काय?
5 ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.
५तर मग यरूशलेममधील लोक कायमचे अप्रामाणिकपणात का वळले आहेत? ते विश्वासघात करीत राहतात आणि पश्चाताप करण्यास नकार देतात.
6 ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
६मी त्यांचे बोलणे लक्षपूर्वक ऐकले आहे. ते योग्य ते बोलत नाहीत. कोणीही आपल्या केलेल्या वाईट कर्मांबद्दल ते क्षमा मागत नाहीत. जो असे म्हणतो, मी काय केले? असा कोणीएक नाही. तसा युद्धात घोडा धावतो तसे ते सर्व आपल्या मनात येईल तीथे जातात.
7 ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.
७आकाशातील करकोचीसुद्धा वेळेची योग्य जाणीव असते. पारवे, निळवी व सारस ह्यांना आपल्या येण्याचा समय माहीत आहे पण माझ्या लोकांस, परमेश्वराचे वचन माहीत नाही.
8 “‘“ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.
८आमच्याजवळ परमेश्वराची शिकवण आहे म्हणून आम्ही शहाणे आहोत! असे तुम्ही म्हणता? कारण लेखकाच्या कपटी लेखणीने ते खोटे केले आहे.
9 ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.
९शहाणे लाजवले गेले आहेत, ते निराशेत आहेत आणि पकडले गेले आहेत. पाहा, त्यांच्या शहाणपणाचा काय फायदा, जर त्यांनी परमेश्वराचे वचन नाकारले?
10 ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.
१०म्हणून मी त्यांच्या स्त्रिया दुसऱ्यांना देईन. त्यांची शेते जे त्यांना ताब्यात घेतील त्यांना देईन. कारण लहानापासून तर मोठ्यांपर्यंत, सर्वजण अति लोभी आहेत. संदेष्ट्या पासून याजकापर्यंत, सर्वांनी फसवणूक केली आहे.
11 ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.
११काही शांती नसता ही, शांती, शांती, असे बोलून त्यांनी माझ्या लोकांच्या कन्येचे घाय वरवर बरे केले आहे.
12 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.
१२त्यांनी केलेल्या दुष्कृत्यांबद्दल लाज वाटली का? नाही त्यांना लाज वाटली नाही. म्हणून पडणाऱ्यांना शिक्षा होत असता ते पण त्यांच्याबरोबर पडतील, असे परमेश्वर म्हणतो.
13 “‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’”
१३परमेश्वर असे म्हणतो, मी त्यांना पुर्णपणे काढून टाकीन, द्राक्षवेलीवंर एकही द्राक्ष नसेल, आणि अंजिराच्या झाडांवर एकही अंजिर नसेल, पाने सुकतील आणि जे काही त्यांना दिले आहे, ते त्यांच्यापासून निघून जाईल.
14 ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
१४आपण येथे नुसतेच का बसलो आहोत? या भक्कम शहराकडे पळून जाऊ या आणि आम्ही मृत्यूमध्ये तिथे गप्प बसू परमेश्वर आमचा देव याने आम्हास गप्प केले आहे, कारण आम्ही त्याच्याविरुध्द पाप केले आहे, म्हणून त्याने आम्हांला विषारी पाणी प्यायला दिले आहे.
15 ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.
१५आम्ही शांतीची आशा केली पण आम्हांला काहीच चांगले मिळाले नाही. तो आम्हास क्षमा करील असे आम्हास वाटले, पण पाहा! अरिष्टच आले.
16 ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.
१६त्यांच्या घोड्यांच्या फुरफुरण्याचा आवाज दानापासून ऐकण्यात आला आहे. त्याच्या शक्तीशाली घोड्यांच्या खिंकाळण्याच्या आवाजाने पुर्ण पृथ्वी थरथरली आहे. कारण ते भूमी व त्यावरील प्रत्येक गोष्टीचा नाश करण्यासाठी आले आहेत. ते नगराचा व त्यामध्ये राहणाऱ्या सर्व लोकांस नाश करण्यासाठी आले आहेत.
17 “ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.
१७कारण पाहा! मी नाग आणि फुरशे तुमच्यामध्ये पाठवीन. त्यांना आवरणे अशक्य आहे, ते तुम्हास दंश करतील. परमेश्वर असे म्हणतो.
18 ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.
१८माझ्या दु: खण्याला काही अंत नाही आणि माझे अंत: करण अस्वस्थ आहे.
19 ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?
१९पाहा! माझ्या लोकांच्या कन्येचा रडण्याचा आवाज फार दूर असलेल्या देशातून येतो. “परमेश्वर सियोनात नाही काय? किंवा तिचा राजा तिच्यामध्ये नाही काय?” मग त्यांनी आपल्या कोरलेल्या प्रतिमांनी आणि निरुपयोगी मूर्तींनी मला का क्रोध आणला आहे.
20 “ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”
२०“सुगीचा हंगाम संपला, उन्हाळा सरला, पण आमचे तारण झाले नाही.”
21 ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.
२१माझ्या लोकांच्या कन्येच्या जखमेमुळे मी जखमी झालो आहे. तिच्या सोबत घडलेल्या भयानक गोष्टींमुळे मी शोकात आणि निराशेत आहे.
22 ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?
२२गिलादमध्ये काही औषध नाही काय? तेथे वैद्य नाही काय? मग माझ्या लोकांच्या कन्येला आरोग्य का लाभले नाही.