< ಯೆಹೋಶುವನು 4 >

1 ಜನರೆಲ್ಲರು ಯೊರ್ದನ್ ನದಿಯ ಆಚೆಗೆ ದಾಟಿದ ಮೇಲೆ, ಯೆಹೋವ ದೇವರು ಯೆಹೋಶುವನೊಂದಿಗೆ ಮಾತನಾಡಿ,
सर्व लोक यार्देन पार करून गेले, तेव्हा परमेश्वर यहोशवाला म्हणाला,
2 “ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಮಂದಿ ಗಂಡಸರನ್ನು ಆರಿಸಿಕೊಂಡು,
प्रत्येक वंशातून एक असे बारा पुरुष तू लोकांमधून निवड,
3 ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು.
आणि त्यांना अशी आज्ञा देऊन सांग, “यार्देनेच्या मध्यभागी ज्या कोरड्या जमिनीवर याजक उभे होते तेथून बारा धोंडे उचलून आपल्याबरोबर पलीकडे घेऊन जा आणि आज रात्री ज्या ठिकाणी तुमचा मुक्काम होईल तेथे ते ठेवा.”
4 ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು.
मग यहोशवाने इस्राएलच्या प्रत्येक वंशातून एक असे जे बारा पुरुष निवडले होते त्यांना बोलावले.
5 ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.
यहोशवा त्यांना म्हणाला, “तुम्ही आपला देव परमेश्वर याच्या कराराच्या कोशासमोर यार्देनेच्या मध्यभागी जाऊन इस्राएल वंशाच्या संख्येप्रमाणे एकएक धोंडा उचलून आपल्या खांद्यावर घ्या.
6 ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ,
म्हणजे हे तुमच्यामध्ये चिन्हादाखल होईल, पुढच्या येणाऱ्या दिवसात जेव्हा तुमची मुले तुम्हाला विचारतील की, ‘या धोंड्यांचा अर्थ काय आहे?’
7 ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.
तेव्हा तुम्ही त्यांना सांगा की, यार्देनेचे पाणी परमेश्वराच्या कराराच्या कोशापुढे दुभागले गेले; कराराचा कोश यार्देन पार करून जात असताना यार्देनेचे पाणी दुतर्फा दुभागले. अशा प्रकारे हे धोंडे इस्राएल लोकांसाठी सर्वकाळ स्मारक होतील.”
8 ಆಗ ಇಸ್ರಾಯೇಲರು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು. ಯೆಹೋವ ದೇವರು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನ್ ನದಿಯ ಮಧ್ಯದಿಂದ ತೆಗೆದುಕೊಂಡು, ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ಇಟ್ಟರು.
यहोशवाच्या या आज्ञेप्रमाणे इस्राएल लोकांनी केले. परमेश्वराने यहोशवाला सांगितल्याप्रमाणे इस्राएल लोकांच्या वंशांच्या संख्येप्रमाणे त्यांनी यार्देनेच्या मध्यभागातून बारा धोंडे उचलून इस्राएल लोकांच्या वंशसंख्येप्रमाणे रचले. त्यांनी ते घेऊन त्या रात्री जिथे मुक्काम केला तिथे नेऊन ठेवले.
9 ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ.
तसेच यार्देनेच्या मध्यभागी कराराचा कोश वाहणाऱ्या याजकांचे पाय जेथे स्थिर झाले होते तेथे यहोशवाने बारा दगड उभे केले; आणि ते आजपर्यंत स्मारक म्हणून तेथे आहेत.
10 ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು.
१०मोशेने यहोशवाला जे आज्ञापिले होते तेच लोकांस सांगण्याची आज्ञा परमेश्वराने यहोशवाला केली; त्याप्रमाणे करण्याचे संपेपर्यंत कराराचा कोश वाहणारे याजक यार्देनेच्या मध्यभागी उभे राहिले. मग लोक घाईघाईने पार उतरून गेले.
11 ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
११झाडून सर्व लोक उतरून गेल्यावर त्यांच्या देखत परमेश्वराचा कराराचा कोश आणि याजक पलीकडे गेले.
12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.
१२रऊबेनी, गादी आणि मनश्शेचा अर्धा वंश हे मोशेच्या सांगण्याप्रमाणे सशस्त्र होऊन इस्राएल लोकांपुढे गेले,
13 ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.
१३युद्धासाठी सज्ज झालेले सुमारे चाळीस हजार पुरुष परमेश्वरासमोर नदी उतरून यरीहोजवळच्या मैदानात पोहचले.
14 ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.
१४त्या दिवशी परमेश्वराने सर्व इस्राएलाच्या दृष्टीने यहोशवाची थोरवी वाढवली. जसे ते मोशेचे भय धरीत होते तसेच त्यांनी यहोशवाचे भय त्यांच्या सगळ्या हयातीत धरले.
15 ಯೆಹೋವ ದೇವರು ಯೆಹೋಶುವನ ಸಂಗಡ ಮಾತನಾಡಿ,
१५तेव्हा परमेश्वर यहोशवाला म्हणाला,
16 “ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು.
१६“कराराचा कोश वाहणाऱ्या याजकांना यार्देनेतून वर येण्याची आज्ञा कर.”
17 ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು.
१७त्याप्रमाणे, यहोशवाने याजकांना यार्देनेतून बाहेर येण्याची आज्ञा केली.
18 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು.
१८मग परमेश्वराचा कराराचा कोश वाहणारे याजक यार्देनेच्या मध्य भागातून निघून वर आले आणि त्यांचे पाय कोरड्या जमिनीला लागताच यार्देनेचे पाणी मूळ ठिकाणी परत आले आणि चार दिवसांपूर्वी जसे होते त्याप्रमाणे पुन्हा दुथडी भरून वाहू लागले.
19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.
१९पहिल्या महिन्याच्या दशमीस लोकांनी यार्देन पार करून यरीहोच्या पूर्व सीमेवरील गिलगाल येथे तळ दिला.
20 ಅವರು ಯೊರ್ದನಿನಿಂದ ತೆಗೆದುಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
२०यार्देनेतून उचलून आणलेले बारा धोंडे यहोशवाने गिलगाल येथे रचले.
21 ಅವನು ಇಸ್ರಾಯೇಲರಿಗೆ, “ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನು?’ ಎಂದು ಮುಂದಿನ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳುವಾಗ,
२१तो इस्राएल लोकांस म्हणाला की, “पुढे जेव्हा तुमची मुलेबाळे आपल्या वडिलांना विचारतील, ‘या धोंड्यांचा अर्थ काय आहे?’
22 ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು.
२२तेव्हा तुम्ही त्यांना सांगा की, ‘इस्राएल लोक ह्या यार्देनेच्या कोरड्या भूमीतून पार गेले.
23 ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.
२३आम्ही तांबडा समुद्र पार करेपर्यंत, तुमचा देव परमेश्वर याने जसे तांबड्या समुद्राचे पाणी आटवून कोरडे केले, तसेच परमेश्वर तुमचा देव ह्याने यार्देनेचे पाणी आम्ही तिच्यातून चालत पार आलो तोपर्यंत आमच्यापुढून हटवले.
24 ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.
२४ह्यावरून परमेश्वराचा हात समर्थ आहे, हे पृथ्वीवरील सर्व लोक जाणतील आणि तुम्ही तुमचा देव परमेश्वर याचे निरंतर भय बाळगाल.”

< ಯೆಹೋಶುವನು 4 >