< ನ್ಯಾಯಸ್ಥಾಪಕರು 3 >

1 ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,
इस्राएल लोकांस कनान देशांतील लढायांचा अनुभव नव्हता त्यांची परीक्षा पाहण्यासाठी परमेश्वराने काही राष्ट्रे देशात राहू दिली.
2 ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:
इस्राएलाच्या नव्या पिढ्यांना, ज्यांना पूर्वी त्या लढायांविषयी काहीच माहीत नव्हते त्यांना तिचे शिक्षण मिळावे म्हणून परमेश्वराने जी राष्ट्रे राहू दिली ती ही;
3 ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.
पलिष्ट्यांचे पाच सरदार आणि सर्व कनानी, सीदोनी आणि बाल-हर्मोन डोंगरापासून हमाथाच्या घाटापर्यंत लबानोन डोंगरात राहणारे हिव्वी.
4 ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು.
इस्राएलाच्या पूर्वजांना मोशेद्वारे दिलेल्या आज्ञा ते पाळतात की नाही ह्याची परीक्षा पाहावी म्हणून परमेश्वराने त्यांना मागे ठेवले होते.
5 ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,
अशा प्रकारे इस्राएल लोक कनानी, हित्ती, अमोरी, परिज्जी, हिव्वी व यबूसी यांच्यामध्ये राहू लागले.
6 ಅವರ ಪುತ್ರಿಯರನ್ನು ತಾವು ಹೆಂಡತಿಯರನ್ನಾಗಿ ತೆಗೆದುಕೊಂಡು, ತಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆ ಮಾಡಿಕೊಟ್ಟು, ಅವರ ದೇವರುಗಳನ್ನು ಸೇವಿಸಿದರು.
त्यांनी त्यांच्या मुली आपणास स्त्रिया करून घेतल्या व आपल्या मुली त्यांच्या मुलांना दिल्या आणि त्यांच्या देवांची सेवा केली.
7 ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.
इस्राएल लोकांनी परमेश्वराच्या दृष्टीने वाईट ते केले, आपला देव परमेश्वर ह्याला ते विसरले आणि बआल व अशेरा मूर्तींची उपासना करू लागले;
8 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.
म्हणून इस्राएलावर परमेश्वराचा कोप भडकला आणि त्याने त्यांना अराम-नहराईम राजा कुशन-रिशाथईम ह्याच्या हाती विकत दिले, आणि इस्राएल लोकांनी आठ वर्षेपर्यंत कुशन-रिशाथईम ह्याची सेवा केली.
9 ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.
इस्राएल लोकांनी परमेश्वराजवळ मोठ्याने आरोळी केली तेव्हा परमेश्वराने त्यांच्यासाठी कालेबाचा धाकटा भाऊ कनाज ह्याचा मुलगा अथनिएल ह्याला इस्राएल लोकांच्या मदतीला उभे केले आणि त्याने त्यांची सुटका केली.
10 ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.
१०त्याच्यावर परमेश्वराचा आत्मा उतरला व त्याने इस्राएलाचा न्याय केला; तो लढाईला निघाला तेव्हा परमेश्वराने अरामाचा राजा कुशन-रिशाथईम ह्याला त्याच्या हाती दिले व त्याच्यावर त्याचे वर्चस्व झाले,
11 ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.
११त्यानंतर चाळीस वर्षे देशाला शांतता लाभली मग कनाजाचा मुलगा अथनिएल मृत्यू पावला.
12 ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.
१२पुन्हा इस्राएल लोकांनी देवाच्या दृष्टीने वाईट ते करून आज्ञा मोडली; आणि त्यांनी काय केले ते त्याने पाहिले म्हणून परमेश्वराने मवाबाचा राजा एग्लोन ह्याला इस्राएलावर सबळ केले, कारण इस्राएलांनी जे वाईट ते केले होते हे याप्रकारे परमेश्वराने ते पाहिले होते.
13 ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
१३तेव्हा एग्लोन राजाने अम्मोनी व अमालेकी ह्यांना आपल्याबरोबर घेऊन त्यांच्यावर चाल केली आणि इस्राएलांना पराभूत करून खजुरीचे नगर ताब्यात घेतले.
14 ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.
१४इस्राएल लोकांनी मवाबाचा राजा एग्लोन ह्याची अठरा वर्षे सेवा केली.
15 ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.
१५परंतु इस्राएल लोकांनी देवाकडे मोठ्याने आरोळी केली, तेव्हा परमेश्वराने गेराचा मुलगा एहूद ह्याला त्यांच्या मदतीला उभा केला; तो बन्यामिनी असून डावखुरा होता; त्याच्या हाती इस्राएल लोकांनी मवाबाचा राजा एग्लोन ह्याला भेट पाठवली.
16 ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,
१६एहूदाने हातभर लांब दुधारी तलवार आपल्यासाठी बनवून आपल्या कपड्याखाली उजव्या बाजूला लटकावली
17 ಕಾಣಿಕೆಯನ್ನು ಮೋವಾಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ದಪ್ಪ ಮನುಷ್ಯನಾಗಿದ್ದನು.
१७त्याने मवाबाचा राजा एग्लोन ह्याच्यापुढे भेट सादर केली; एग्लोन हा फार लठ्ठ होता.
18 ಏಹೂದನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ, ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿಬಿಟ್ಟು,
१८भेट दिल्यानंतर त्याने भेट घेऊन आलेल्या लोकांस त्याने निरोप दिला;
19 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು.
१९पण गिलगालाजवळील कोरीव मूर्तीपर्यंत गेल्यावर एहूद स्वतः परत मागे येऊन तो म्हणाला, महाराज, मला आपल्याला काही गुप्त गोष्ट सांगायची आहे. राजा म्हणाला, “गप्प राहा, तेव्हा त्याच्याजवळ उभे असलेले सगळे लोक बाहेर गेले.”
20 ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ, ಏಹೂದನು ಅವನ ಬಳಿಗೆ ಪ್ರವೇಶಿಸಿ, “ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗಿದೆ,” ಎಂದನು. ಅವನು ತನ್ನ ಸಿಂಹಾಸನದಿಂದ ಎದ್ದನು.
२०एहूद त्याच्याजवळ आला त्या वेळी तो हवेशीर माडीवर एकटा बसला होता. “एहूद म्हणाला,” “मी आपणासाठी देवाचा संदेश आणला आहे,” तेव्हा तो आसनावरून उठला.
21 ಏಹೂದನು ತನ್ನ ಎಡಗೈಯನ್ನು ಚಾಚಿ, ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿಯನ್ನು ತೆಗೆದುಕೊಂಡು, ಅವನ ಹೊಟ್ಟೆಯಲ್ಲಿ ತಿವಿದನು.
२१मग एहूदाने आपल्या डाव्या हाताने उजव्या मांडीवरली तलवार काढून राजाच्या पोटात खुपसली;
22 ಅದು ಅಲಗಿನ ಸಂಗಡ ಹಿಡಿ ಸಮೇತ ಅವನ ಹೊಟ್ಟೆಯಲ್ಲಿ ಹೊಕ್ಕು, ಕಿತ್ತು ತೆಗೆಯಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. ಅದರಿಂದ ಮಲವು ಹೊರಟಿತು.
२२पात्यांबरोबर मूठही आत गेली, आणि चरबीत रूतून बसली त्याने त्याच्या पोटातून तलवार काढली नाही; त्याचे टोक पाठीतून बाहेर निघाली होती.
23 ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು.
२३मग द्वारमंडपाच्या बाहेर येऊन वर जाऊन एहूदाने माडीचे दरवाजे कुलूप लावून बंद केले.
24 ಅವನು ಹೋದ ತರುವಾಯ, ಕೊಠಡಿಯ ಸೇವಕರು ಬಾಗಿಲು ಮುಚ್ಚಿರುವುದನ್ನು ಕಂಡು, “ಅರಸನು ನಿಶ್ಚಯವಾಗಿ ತನ್ನ ತಂಪಾದ ಕೋಣೆಯಲ್ಲಿ ವಿಸರ್ಜನೆಗಾಗಿ ಹೋಗಿರಬೇಕು,” ಎಂದುಕೊಂಡರು.
२४तो निघून गेल्यावर त्याचे दास येऊन पाहतात तो माडीचे दरवाजे बंद असल्याचे त्यांना दिसले. तेव्हा त्यांना वाटले की, “तो आपल्या हवेशीर खोलीच्या संडासात गेला असेल.”
25 ಅವರು ತಮಗೆ ಬೇಸರವಾಗುವ ಮಟ್ಟಿಗೂ ಕಾದಿದ್ದರು. ಆದರೆ, ಅವನು ಕೊಠಡಿ ಬಾಗಿಲನ್ನು ತೆರೆಯದೆ ಇದ್ದುದರಿಂದ, ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆದರು. ಅವರ ಪ್ರಭುವು ನೆಲದ ಮೇಲೆ ಮರಣಹೊಂದಿದ್ದನು.
२५त्यांना मोठी काळजी वाटू लागली, आपण कर्तव्यात दुर्लक्ष करीत आहोत असे त्यांना वाटले, तो माडीचे दरवाजे उघडीत नाही असे पाहून त्यांनी किल्ली घेऊन ते उघडले आणि पाहतात तर त्यांचा स्वामी मरून भूमीवर पडला होता.
26 ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.
२६सेवक तर आश्चर्य करीत काय करावे वाट पाहत होते तोपर्यंत एहूद निसटून पळून कोरीव मूर्तींच्या जागेच्या पलिकडे सईर येथे जाऊन पोहचला.
27 ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.
२७तेथे गेल्यावर त्याने एफ्राइमाच्या डोंगराळ प्रदेशात रणशिंग फुंकले, तेव्हा त्याच्याबरोबर इस्राएल लोक डोंगराळ प्रदेशातून उतरले, आणि तो त्यांच्यापुढे चालला.
28 ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,
२८तो त्यांना म्हणाला, “माझ्या पाठोपाठ या, कारण परमेश्वराने तुमचे मवाबी शत्रू तुमच्या हाती दिले आहेत.” तेव्हा त्यांनी त्याच्या पाठोपाठ जाऊन मवाब देशाजवळचे यार्देनेचे उतार रोखून धरले आणि कोणालाही पार जाऊ दिले नाही.
29 ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
२९त्या वेळी त्यांनी मवाब्यांचे सुमारे दहा हजार लोक मारले; ते सर्व धिप्पाड व शूर वीर होते; त्यांच्यातला कोणीही बचावला नाही.
30 ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.
३०अशा प्रकारे मवाब त्या दिवशी इस्राएलाच्या सत्तेखाली आला. ह्यानंतर देशाला ऐंशी वर्षे विसावा मिळाला.
31 ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.
३१एहूदानंतर अनाथाचा मुलगा शमगार न्यायाधीश झाला; त्याने सहाशे पलिष्ट्यांना बैलाच्या पराणीने जिवे मारले; अशा प्रकारे त्यानेही इस्राएलाची संकटातून सुटका केली.

< ನ್ಯಾಯಸ್ಥಾಪಕರು 3 >