< ನ್ಯಾಯಸ್ಥಾಪಕರು 6 >

1 ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.
नंतर इस्राएलाच्या लोकांनी परमेश्वराच्या दृष्टीने जे वाईट ते केले, त्याने त्यांना मिद्यानाच्या नियंत्रणाखाली सात वर्षे ठेवले.
2 ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
तेव्हा मिद्यानाने इस्राएलावर अधिकाराने जुलूम केला; मिद्यान्यांमुळे इस्राएलाच्या लोकांनी आपल्यासाठी डोंगरातील भुयारे, गुहा व किल्ले यांचा आश्रय घेतला.
3 ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,
आणि असे झाले की, जर इस्राएली पिकांची लागवड करीत, तर मिद्यानी व अमालेकी आणि पूर्वेकडले लोक त्यावर हल्ला करीत.
4 ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.
त्यांनी त्याच्याविरुध्द सैन्याचा तळ देऊन गज्जापर्यंत भूमीच्या पिकांचा नाश केला आणि इस्राएलात काही अन्न आणि मेंढरे, गाय, बैल किंवा गाढव असे काही एक शिल्लक ठेवले नाही.
5 ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು.
जेव्हा ते आपली जनावरे व तंबू घेऊन आले ते टोळांच्या थव्यासारखे आत आले आणि त्यांची व त्यांच्या उंटाची संख्या मोजणे अशक्य होते; असे ते देशावर आक्रमण करून नाश करावयास आले होते.
6 ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು.
तेव्हा मिद्यानामुळे इस्राएलाची कठीण दुर्बल अवस्था झाली आणि इस्राएल लोकांनी परमेश्वराकडे मोठ्याने रडून हाक मारली.
7 ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ಯೆಹೋವ ದೇವರನ್ನು ಬೇಡಿಕೊಂಡಾಗ,
जेव्हा इस्राएलाच्या संतानानी मिद्यान्यांमुळे परमेश्वराकडे मोठ्याने रडून हाक मारली तेव्हा असे झाले की,
8 ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.
परमेश्वराने कोणी भविष्यवादी इस्राएलाच्या लोकांजवळ पाठवला; तेव्हा तो त्यांना बोलला, इस्राएलाचा देव परमेश्वर असे म्हणतो, मी तुम्हाला मिसरातून काढून वर आणले, दास्याच्या घरातून बाहेर काढून आणले;
9 ನಿಮ್ಮನ್ನು ಈಜಿಪ್ಟಿನವರ ಕೈಯಿಂದ ತಪ್ಪಿಸಿ, ಅವರನ್ನು ನಿಮ್ಮ ಮುಂದೆ ಹೊರಗೆ ಹಾಕಿ, ಅವರ ದೇಶವನ್ನು ನಿಮಗೆ ಕೊಟ್ಟೆನು.
असे मी तुम्हाला मिसऱ्यांच्या हातातून व तुमच्या सर्व जाचणाऱ्यांच्या हातातून सोडवले; आणि त्यांना तुमच्यापुढून घालवून त्यांचा देश तुम्हाला दिला.
10 ‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.
१०तेव्हा मी तुम्हाला असे सांगितले की, “मी तुमचा देव परमेश्वर आहे; ज्या अमोऱ्यांच्या देशात तुम्ही राहत आहा, त्यांच्या देवांना भिऊ नका, तरी तुम्ही माझी आज्ञा पाळली नाही.”
11 ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
११आणखी परमेश्वराचा दूत येऊन अबियेजेरी योवाश याच्या अफ्रा येथील एला झाडाखाली बसला; तेव्हा त्याचा पुत्र गिदोन मिद्यांन्यापासून गहू लपवावा म्हणून द्राक्षकुंडात गव्हाची मळणी करत होता.
12 ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.
१२आणि परमेश्वराचा दूत त्यास दर्शन देऊन त्यास बोलला, “हे बलवान वीरा, परमेश्वर तुझ्याबरोबर आहे.”
13 ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.
१३तेव्हा गिदोन त्यास बोलला, “हे माझ्या प्रभू, जर परमेश्वर आमच्याबरोबर आहे तर हे सर्व आमच्या बाबतीत का घडले? परमेश्वराने आम्हांला मिसरातून बाहेर आणले आणि त्याच्या अद्भुत कृत्यांबद्दल आमचे पूर्वज आम्हाजवळ सांगत आले, परमेश्वराने आम्हांला मिसरातून वर आणले की नाही? आता तर परमेश्वराने आमचा त्याग करून आम्हांला मिद्यान्यांच्या हाती दिले आहे.”
14 ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.
१४मग परमेश्वराने त्याच्याकडे बघितले आणि म्हटले, “तू आपल्या या बळाने जा, आणि इस्राएलांना मिद्यान्यांच्या ताब्यातून सोडव; मी तुला पाठवले आहे की नाही?”
15 ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.
१५गिदोन त्यास बोलला, “हे माझ्या प्रभू, मी इस्राएलला कसा सोडवणार? पाहा, मनश्शेत माझे घराणे कमजोर आहे, आणि मी आपल्या पित्याच्या घरात कमी महत्त्वाचा आहे.”
16 ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.
१६परमेश्वर त्यास बोलला, “खरोखर मी तुझ्याबरोबर राहीन, जसे एका मनुष्यास मारावे तसे तू एकजात सर्व मिद्यान्यांना ठार करशील.”
17 ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
१७गिदोन त्यास बोलला, “तुझी कृपादृष्टी माझ्यावर असली तर तूच माझ्याशी बोलत आहेस याविषयी मला काही चिन्ह दाखव.
18 ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು.
१८मी तुला विनंती करतो, मी तुझ्याकडे येईपर्यंत तू येथून जाऊ नको; म्हणजे मी आपली भेट आणून तुझ्यापुढे ठेवीन.” तेव्हा तो बोलला, “तू परत येईपर्यंत मी येथेच थांबतो.”
19 ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.
१९गिदोनाने जाऊन एक करडू व एफाभर सपिठाच्या बेखमीर भाकरी तयार केल्या; त्याने मांस टोपलीत घातला आणि रस्सा पातेल्यात घातला, मग त्याच्याजवळ एला झाडाखाली नेऊन ते सादर केले.
20 ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.
२०तेव्हा देवाच्या दूताने त्यास सांगितले, “तू मांस व बेखमीर भाकरी या खडकावर आणून ठेव, आणि त्यावर रस्सा ओत.” मग गिदोनाने तसे केले.
21 ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
२१तेव्हा परमेश्वराच्या दूताने आपल्या हातातल्या काठीच्या टोकाने मांसास व बेखमीर भाकरीला स्पर्श केला; मग खडकातून अग्नी निघाला आणि त्याने ते मांस व बेखमीर भाकरी भस्म केल्या; परमेश्वराचा दूतही निघून गेला आणि यापुढे गिदोन त्यास पाहू शकला नाही.
22 ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು.
२२तेव्हा गिदोनाला समजले की तो परमेश्वराचा दूत होता; गिदोन म्हणाला, हाय हाय, “हे प्रभू देवा! कारण मी परमेश्वराचा दूत समोरासमोर, पाहिला आहे!”
23 ಆದರೆ ಯೆಹೋವ ದೇವರು ಅವನಿಗೆ, “ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವುದಿಲ್ಲ,” ಎಂದರು.
२३परमेश्वर त्यास म्हणाला, “तुला शांती असो! भिऊ नको, तू मरणार नाहीस.”
24 ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.
२४तेव्हा गिदोनाने तेथे परमेश्वरासाठी वेदी बांधली, त्याचे नाव परमेश्वर शांती आहे, असे ठेवले; ती आजपर्यंत अबियेजेऱ्यांच्या अफ्रा येथे अजून आहे.
25 ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ,
२५आणि असे झाले की, त्याच रात्री परमेश्वराने त्यास सांगितले की, “तू आपल्या पित्याचा गोऱ्हा घे आणि सात वर्षांचा दुसरा गोऱ्हा घे आणि आपल्या बापाची बआल देवासाठीची वेदी ती मोडून टाक आणि तिच्याजवळची अशेरा कापून टाक.
26 ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.
२६मग या खडकाच्या उच्चस्थानी आपला देव परमेश्वर याच्यासाठी वेदी बांध आणि योग्य मार्गाने बांधणी कर. त्या दुसऱ्या गोऱ्ह्याचे होमार्पण, अशेराच्या तोडलेल्या लाकडाचा उपयोग करून कर.”
27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಅವನು ತನ್ನ ತಂದೆಯ ಮನೆಯವರೆಗೂ, ಆ ಊರಿನ ಮನುಷ್ಯರಿಗೂ ಭಯಪಟ್ಟದ್ದರಿಂದ ಹಗಲಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
२७तेव्हा गिदोनाने आपल्या चाकरातील दहा माणसे बरोबर घेऊन जसे परमेश्वराने त्यास सांगितले होते तसे केले; परंतु असे झाले की, दिवस असता ते करायला तो आपल्या वडिलाच्या घराण्याला व त्या नगराच्या मनुष्यांना घाबरला, यास्तव रात्री त्याने केले.
28 ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು.
२८मग सकाळी त्या नगराची माणसे उठली तर पाहा, बआलाची वेदी मोडलेली होती तिच्याजवळची अशेराही तोडलेली होते आणि बांधलेल्या वेदीवर दुसऱ्या गोऱ्ह्याचा होम केलेला होता.
29 ಆಗ ಅವರು ಒಬ್ಬರಿಗೊಬ್ಬರು, “ಈ ಕಾರ್ಯವನ್ನು ಮಾಡಿದವನ್ಯಾರು?” ಎಂದರು. ವಿಚಾರಿಸಿ ಕೇಳಿದಾಗ, ಅವರು, “ಯೋವಾಷನ ಮಗ ಗಿದ್ಯೋನನು ಈ ಕಾರ್ಯ ಮಾಡಿದನು,” ಎಂದರು.
२९तेव्हा ते एकमेकांना म्हणाले, “ही गोष्ट कोणी केली? मग त्यांनी विचारपूस व शोध केल्यावर म्हटले, योवाशाचा पुत्र गिदोन, याने ही गोष्ट केली आहे.”
30 ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.
३०नंतर त्या नगराच्या मनुष्यांनी योवाशाला सांगितले, “तू आपल्या पुत्राला बाहेर आण, त्यास तर मारावयाचे आहे, कारण त्याने बआलाची वेदी मोडून टाकली आणखी तिच्याजवळची अशेराची मूर्ती तोडून टाकली आहे.”
31 ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.
३१तेव्हा योवाश आपणावर जे उठले होते त्या सर्वांना म्हणाला, “बआलाचा कैवार तुम्ही घेता काय? तुम्ही त्याचा बचाव करू पाहता काय? जो त्याचा कैवार घेईल तो आज सकाळ आहे तोच मारला जावो; जर तो देव असला तर, ज्याने त्याची वेदी मोडली त्याच्याविरुध्द त्याने स्वत: चा कैवार घ्यावा.”
32 ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.
३२तेव्हा त्याच दिवशी त्याने त्यास “यरूब्बाल” म्हटले, तो म्हणाला, “गिदोनाने बआलाची वेदी पाडून टाकली म्हणून बआलानेच त्याच्याविरुध्द स्वतःचा बचाव करावा,” कारण त्याची वेदी गिदोनाने मोडून वेगळी केली.
33 ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
३३नंतर सर्व मिद्यानी व अमालेकी व पूर्वेकडले लोक एकत्र जमले, आणि त्यांनी यार्देन नदी ओलांडून येऊन आणि इज्रेलाच्या खोऱ्यात तळ दिला.
34 ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.
३४परंतु परमेश्वराचा आत्मा गिदोनावर त्यास मदत करण्यासाठी आला; गिदोनाने कर्णा फुंकला, तेव्हा अबीयेजेराचे वंशज त्याच्याजवळ अशाप्रकारे त्याच्यामागे जाण्यासाठी एकत्र आले.
35 ಮನಸ್ಸೆಯವರ ಬಳಿ ದೂತರನ್ನು ಕಳುಹಿಸಿದಾಗ, ಅವರು ಅವನ ಹಿಂದೆ ಕೂಡಿಬಂದರು. ಆಶೇರ್, ಜೆಬುಲೂನಿನಲ್ಲಿಯೂ, ನಫ್ತಾಲಿನಲ್ಲಿಯೂ ದೂತರನ್ನು ಕಳುಹಿಸಲು, ಅವರು ಇವರಿಗೆ ಭೇಟಿಯಾಗಲು ಬಂದರು.
३५मग त्याने सगळ्या मनश्शेत जासूद पाठवले तेव्हा तेही त्याच्याजवळ एकत्र झाले; नंतर आशेर व जबुलून व नफतालीत त्याने जासूद पाठवले, तेव्हा ते त्यांच्याशी मिळायला चढून गेले.
36 ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,
३६मग गिदोन देवाला बोलला, “जसे मला सांगितले तसा जर तू माझ्या हाताने इस्राएलांना तारणार असलास;
37 ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು.
३७तर पाहा, मी खळ्यात कातरलेली लोकर ठेवतो; जर लोकरीवर मात्र दहिवर पडेल आणि सर्व भूमी कोरडी राहील, तर मला कळेल की जसे मला सांगितले, तसा तू माझ्या हाताने इस्राएलाला तारशील.”
38 ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.
३८नंतर तसे झाले; म्हणजे सकाळी जेव्हा तो उठला, तेव्हा त्याने ती लोकर दाबून तिच्यातून पिळून वाटीभर पाणी काढले.
39 ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.
३९मग गिदोन देवाला बोलला, “तू माझ्यावर रागावू नको, मी आणखी एक वेळेस बोलतो; आता केवळ या वेळेस या लोकरीच्या व्दारे एक वेळ मी परीक्षा पाहतो: ही लोकर तेवढी कोरडी राहून बाकी अवघ्या जमिनीवर दहिवर पडेल असे कर.”
40 ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.
४०तेव्हा त्या रात्री देवाने तसे केले म्हणजे ती लोकर मात्र कोरडी राहिली आणि संपूर्ण भूमीवर दहिवर पडले.

< ನ್ಯಾಯಸ್ಥಾಪಕರು 6 >