< ಲೂಕನು 20 >

1 ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು
Καὶ ἐγένετο ἐν μιᾷ τῶν ἡμερῶν ἐκείνων, διδάσκοντος αὐτοῦ τὸν λαὸν ἐν τῷ ἱερῷ καὶ εὐαγγελιζομένου, ἐπέστησαν οἱ ἀρχιερεῖς καὶ οἱ γραμματεῖς σὺν τοῖς πρεσβυτέροις,
2 ಯೇಸುವಿಗೆ, “ನೀವು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀರಿ? ನಿಮಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ಹೇಳಿ,” ಎಂದರು.
καὶ εἶπον πρὸς αὐτόν, λέγοντες, Εἰπὲ ἡμῖν, ἐν ποίᾳ ἐξουσίᾳ ταῦτα ποιεῖς, ἢ τίς ἐστιν ὁ δούς σοι τὴν ἐξουσίαν ταύτην;
3 ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ.
Ἀποκριθεὶς δὲ εἶπε πρὸς αὐτούς, Ἐρωτήσω ὑμᾶς κἀγὼ ἕνα λόγον, καὶ εἴπατέ μοι·
4 ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ?” ಎಂದು ಕೇಳಿದರು.
Τὸ βάπτισμα Ἰωάννου ἐξ οὐρανοῦ ἦν, ἢ ἐξ ἀνθρώπων;
5 ಆಗ ಅವರು ತಮ್ಮೊಳಗೆ, “‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.
Οἱ δὲ συνελογίσαντο πρὸς ἑαυτούς, λέγοντες ὅτι Ἐὰν εἴπωμεν, Ἐξ οὐρανοῦ, ἐρεῖ, Διὰ τί οὖν οὐκ ἐπιστεύσατε αὐτῷ;
6 ‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,
Ἐὰν δὲ εἴπωμεν, Ἐξ ἀνθρώπων, πᾶς ὁ λαὸς καταλιθάσει ἡμᾶς· πεπεισμένος γάρ ἐστιν Ἰωάννην προφήτην εἶναι.
7 “ಅದು ಎಲ್ಲಿಂದಲೋ ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.
Καὶ ἀπεκρίθησαν μὴ εἰδέναι πόθεν.
8 ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
Καὶ ὁ Ἰησοῦς εἶπεν αὐτοῖς, Οὐδὲ ἐγὼ λέγω ὑμῖν ἐν ποίᾳ ἐξουσίᾳ ταῦτα ποιῶ.
9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.
Ἤρξατο δὲ πρὸς τὸν λαὸν λέγειν τὴν παραβολὴν ταύτην· Ἄνθρωπός τις ἐφύτευσεν ἀμπελῶνα, καὶ ἐξέδοτο αὐτὸν γεωργοῖς, καὶ ἀπεδήμησε χρόνους ἱκανούς·
10 ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.
καὶ ἐν καιρῷ ἀπέστειλε πρὸς τοὺς γεωργοὺς δοῦλον, ἵνα ἀπὸ τοῦ καρποῦ τοῦ ἀμπελῶνος δῶσιν αὐτῷ. Οἱ δὲ γεωργοὶ δείραντες αὐτὸν ἐξαπέστειλαν κενόν.
11 ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Καὶ προσέθετο πέμψαι ἕτερον δοῦλον· οἱ δὲ κἀκεῖνον δείραντες καὶ ἀτιμάσαντες ἐξαπέστειλαν κενόν.
12 ಆ ಯಜಮಾನನು ಮೂರನೆಯವನನ್ನು ಕಳುಹಿಸಿದನು. ಆಗ ಅವರು ಅವನನ್ನೂ ಗಾಯಪಡಿಸಿ ಹೊರಗೆ ಹಾಕಿದರು.
Καὶ προσέθετο πέμψαι τρίτον· οἱ δὲ καὶ τοῦτον τραυματίσαντες ἐξέβαλον.
13 “ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.
Εἶπε δὲ ὁ κύριος τοῦ ἀμπελῶνος, Τί ποιήσω; Πέμψω τὸν υἱόν μου τὸν ἀγαπητόν· ἴσως τοῦτον ἰδόντες ἐντραπήσονται.
14 “ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.
Ἰδόντες δὲ αὐτὸν οἱ γεωργοὶ διελογίζοντο πρὸς ἑαυτούς, λέγοντες, Οὗτός ἐστιν ὁ κληρονόμος· δεῦτε, ἀποκτείνωμεν αὐτόν, ἵνα ἡμῶν γένηται ἡ κληρονομία.
15 ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು?
Καὶ ἐκβαλόντες αὐτὸν ἔξω τοῦ ἀμπελῶνος, ἀπέκτειναν. Τί οὖν ποιήσει αὐτοῖς ὁ κύριος τοῦ ἀμπελῶνος;
16 ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.
Ἐλεύσεται καὶ ἀπολέσει τοὺς γεωργοὺς τούτους, καὶ δώσει τὸν ἀμπελῶνα ἄλλοις. Ἀκούσαντες δὲ εἶπον, Μὴ γένοιτο.
17 ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?
Ὁ δὲ ἐμβλέψας αὐτοῖς εἶπε, Τί οὖν ἐστι τὸ γεγραμμένον τοῦτο, Λίθον ὃν ἀπεδοκίμασαν οἱ οἰκοδομοῦντες, οὗτος ἐγενήθη εἰς κεφαλὴν γωνίας;
18 ಆ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.
Πᾶς ὁ πεσὼν ἐπ᾿ ἐκεῖνον τὸν λίθον συνθλασθήσεται· ἐφ᾿ ὃν δ᾿ ἂν πέσῃ, λικμήσει αὐτόν.
19 ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.
Καὶ ἐζήτησαν οἱ ἀρχιερεῖς καὶ οἱ γραμματεῖς ἐπιβαλεῖν ἐπ᾿ αὐτὸν τὰς χεῖρας ἐν αὐτῇ τῇ ὥρᾳ, καὶ ἐφοβήθησαν τὸν λαόν· ἔγνωσαν γὰρ ὅτι πρὸς αὐτοὺς τὴν παραβολὴν ταύτην εἶπε.
20 ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.
Καὶ παρατηρήσαντες ἀπέστειλαν ἐγκαθέτους, ὑποκρινομένους ἑαυτοὺς δικαίους εἶναι, ἵνα ἐπιλάβωνται αὐτοῦ λόγου, εἰς τὸ παραδοῦναι αὐτὸν τῇ ἀρχῇ καὶ τῇ ἐξουσίᾳ τοῦ ἡγεμόνος.
21 ಅವರು ಯೇಸುವಿಗೆ, “ಗುರುವೇ, ನೀವು ಮುಖ ದಾಕ್ಷಿಣ್ಯವಿಲ್ಲದೆ ಸರಿಯಾಗಿ ಬೋಧಿಸುತ್ತೀರಿ ಮತ್ತು ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವರಾಗಿದ್ದೀರೆಂದು ನಾವು ಬಲ್ಲೆವು.
Καὶ ἐπηρώτησαν αὐτόν, λέγοντες, Διδάσκαλε, οἴδαμεν ὅτι ὀρθῶς λέγεις καὶ διδάσκεις· καὶ οὐ λαμβάνεις πρόσωπον, ἀλλ᾿ ἐπ᾿ ἀληθείας τὴν ὁδὸν τοῦ Θεοῦ διδάσκεις.
22 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ನಮಗೆ ಮೋಶೆಯ ನಿಯಮಕ್ಕೆ ಅನುಸಾರವಾದದ್ದೋ?” ಎಂದು ಕೇಳಿದರು.
Ἔξεστιν ἡμῖν Καίσαρι φόρον δοῦναι, ἢ οὔ;
23 ಆದರೆ ಯೇಸು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ,
Κατανοήσας δὲ αὐτῶν τὴν πανουργίαν, εἶπε πρὸς αὐτούς, Τί με πειράζετε;
24 “ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.
Ἐπιδείξατέ μοι δηνάριον· τίνος ἔχει εἰκόνα καὶ ἐπιγραφήν; Ἀποκριθέντες δὲ εἶπον, Καίσαρος.
25 ಆಗ ಯೇಸು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೂ ದೇವರದ್ದನ್ನು ದೇವರಿಗೂ ಕೊಡಿರಿ,” ಎಂದರು.
Ὁ δὲ εἶπεν αὐτοῖς, Ἀπόδοτε τοίνυν τὰ Καίσαρος Καίσαρι, καὶ τὰ τοῦ Θεοῦ τῷ Θεῷ.
26 ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.
Καὶ οὐκ ἴσχυσαν ἐπιλαβέσθαι αὐτοῦ ῥήματος ἐναντίον τοῦ λαοῦ· καὶ θαυμάσαντες ἐπὶ τῇ ἀποκρίσει αὐτοῦ, ἐσίγησαν.
27 ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ,
Προσελθόντες δέ τινες τῶν Σαδδουκαίων, οἱ ἀντιλέγοντες ἀνάστασιν μὴ εἶναι, ἐπηρώτησαν αὐτόν,
28 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ.
λέγοντες, Διδάσκαλε, Μωσῆς ἔγραψεν ἡμῖν, Ἐάν τινος ἀδελφὸς ἀποθάνῃ ἔχων γυναῖκα, καὶ οὗτος ἄτεκνος ἀποθάνῃ, ἵνα λάβῃ ὁ ἀδελφὸς αὐτοῦ τὴν γυναῖκα, καὶ ἐξαναστήσῃ σπέρμα τῷ ἀδελφῷ αὐτοῦ.
29 ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.
Ἑπτὰ οὖν ἀδελφοὶ ἦσαν· καὶ ὁ πρῶτος λαβὼν γυναῖκα, ἀπέθανεν ἄτεκνος·
30 ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು.
καὶ ἔλαβεν ὁ δεύτερος τὴν γυναῖκα, καὶ οὗτος ἀπέθανεν ἄτεκνος.
31 ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು.
Καὶ ὁ τρίτος ἔλαβεν αὐτήν. Ὡσαύτως δὲ καὶ οἱ ἑπτά· καὶ οὐ κατέλιπον τέκνα, καὶ ἀπέθανον.
32 ಕೊನೆಗೆ, ಆ ಸ್ತ್ರೀಯು ಸಹ ಮರಣಹೊಂದಿದಳು.
Ὕστερον δὲ πάντων ἀπέθανε καὶ ἡ γυνή.
33 ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು.
Ἐν τῇ οὖν ἀναστάσει, τίνος αὐτῶν γίνεται γυνή; Οἱ γὰρ ἑπτὰ ἔσχον αὐτὴν γυναῖκα.
34 ಅದಕ್ಕೆ ಯೇಸು ಉತ್ತರವಾಗಿ, “ಈ ಲೋಕದ ಜನರು ಮದುವೆ ಮಾಡಿಕೊಳ್ಳುತ್ತಾರೆ. ಮದುವೆ ಮಾಡಿಕೊಡುತ್ತಾರೆ. (aiōn g165)
Καὶ ἀποκριθεὶς εἶπεν αὐτοῖς ὁ Ἰησοῦς, Οἱ υἱοὶ τοῦ αἰῶνος τούτου γαμοῦσι καὶ ἐκγαμίσκονται· (aiōn g165)
35 ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. (aiōn g165)
οἱ δὲ καταξιωθέντες τοῦ αἰῶνος ἐκείνου τυχεῖν καὶ τῆς ἀναστάσεως τῆς ἐκ νεκρῶν οὔτε γαμοῦσιν οὔτε ἐκγαμίσκονται· (aiōn g165)
36 ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.
οὔτε γὰρ ἀποθανεῖν ἔτι δύνανται· ἰσάγγελοι γάρ εἰσι, καὶ υἱοί εἰσι τοῦ Θεοῦ, τῆς ἀναστάσεως υἱοὶ ὄντες.
37 ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.
Ὅτι δὲ ἐγείρονται οἱ νεκροί, καὶ Μωσῆς ἐμήνυσεν ἐπὶ τῆς βάτου, ὡς λέγει, Κύριον τὸν Θεὸν Ἀβραὰμ καὶ τὸν Θεὸν Ἰσαὰκ καὶ τὸν Θεὸν Ἰακώβ.
38 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು.
Θεὸς δὲ οὐκ ἔστι νεκρῶν, ἀλλὰ ζώντων· πάντες γὰρ αὐτῷ ζῶσιν.
39 ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.
Ἀποκριθέντες δέ τινες τῶν γραμματέων εἶπον, Διδάσκαλε, καλῶς εἶπας.
40 ಯಾರೂ ಯೇಸುವಿಗೆ ಯಾವ ಪ್ರಶ್ನೆಯನ್ನು ಕೇಳುವುದಕ್ಕೂ ಧೈರ್ಯಗೊಳ್ಳಲಿಲ್ಲ.
Οὐκέτι δὲ ἐτόλμων ἐπερωτᾷν αὐτὸν οὐδέν.
41 ಯೇಸು ಅವರಿಗೆ, “ಕ್ರಿಸ್ತನು ದಾವೀದನ ಪುತ್ರನೆಂದು ಜನರು ಹೇಳುವುದು ಹೇಗೆ?
Εἶπε δὲ πρὸς αὐτούς, Πῶς λέγουσι τὸν Χριστὸν υἱὸν Δαβὶδ εἶναι;
42 ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು
Καὶ αὐτὸς Δαβὶδ λέγει ἐν βίβλῳ ψαλμῶν, Εἶπεν ὁ Κύριος τῷ Κυρίῳ μου, Κάθου ἐκ δεξιῶν μου,
43 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.”’
ἕως ἂν θῶ τοὺς ἐχθρούς σου ὑποπόδιον τῶν ποδῶν σου.
44 ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.
Δαβὶδ οὖν Κύριον αὐτὸν καλεῖ, καὶ πῶς υἱὸς αὐτοῦ ἐστιν;
45 ಜನರೆಲ್ಲರೂ ಕೇಳುತ್ತಿದ್ದಾಗ ಯೇಸು ತಮ್ಮ ಶಿಷ್ಯರಿಗೆ,
Ἀκούοντος δὲ παντὸς τοῦ λαοῦ, εἶπε τοῖς μαθηταῖς αὐτοῦ,
46 “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ;
Προσέχετε ἀπὸ τῶν γραμματέων τῶν θελόντων περιπατεῖν ἐν στολαῖς, καὶ φιλούντων ἀσπασμοὺς ἐν ταῖς ἀγοραῖς, καὶ πρωτοκαθεδρίας ἐν ταῖς συναγωγαῖς, καὶ πρωτοκλισίας ἐν τοῖς δείπνοις·
47 ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.
οἳ κατεσθίουσι τὰς οἰκίας τῶν χηρῶν, καὶ προφάσει μακρὰ προσεύχονται. Οὗτοι λήψονται περισσότερον κρίμα.

< ಲೂಕನು 20 >