< ಲೂಕನು 5 >

1 ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.
တရံရောအခါ ဂင်္နေသရက်အိုင်နားမှာ ရပ်တော်မူ၍၊ လူများတို့သည် ဘုရားသခင်၏ နှုတ်ကပတ် တရားကို နားထောင်ခြင်းငှါ ကိုယ်တော်အနီးသို့ တိုးဝင်ကြစဉ်တွင်၊ ကမ်းနားမှာဆိုက်သော လှေနှစ်စင်းမြင် တော်မူ၏။
2 ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
တံငါတို့သည် လှေထဲကထွက်၍ပိုက်ကွန်တို့ကို ဆေးလျှော်လျက်နေကြ၏။
3 ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.
ထိုလှေတို့တွင် ရှိမုန်၏ လှေထဲသို့ ဝင်တော်မူပြီးလျှင်၊ လှေကိုကမ်းနားမှာ အနည်းငယ်ခွာဖွင့်စေခြင်းငှါ ရှိမုန်ကို အခွင့်တောင်းတော်မူ၏။ ထိုလှေပေါ်မှာ ထိုင်လျက် လူများတို့ကို ဆုံးမဩဝါဒပေးတော်မူ၏။
4 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.
စကားတော်ပြတ်သောအခါ၊ ရေနက်ရာအရပ်သို့ ရွှေ့ဦးလော့။ ပိုက်ကွန်ကိုချ၍ ငါးကိုအုပ်စမ်းလော့ ဟု ရှိမုန်အားမိန့်တော်မူ၏။
5 ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.
ရှိမုန်ကလည်း၊ သခင်၊ အကျွန်ုပ်တို့သည် တညဉ့်လုံးကြိုးစားသော်လည်း တကောင်ကိုမျှမရပါ။ သို့ရာ တွင် အမိန့်တော်ရှိလျှင် ပိုက်ကွန်ကို ချပါမည်ဟု လျှောက်လေ၏။
6 ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.
ထိုသို့ချကြပြီးလျှင်၊ အလွန်များစွာသော ငါးတို့ကို အုပ်မိသဖြင့် ပိုက်ကွန်သည် စုတ်ပျတ်စရှိ၏။
7 ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.
အခြားသော လှေတစင်း၌ရှိသော အပေါင်းအဘော်တို့သည်လာ၍ကူညီစေခြင်းငှါ သူတို့ကို အမှတ် ပေးသဖြင့်၊ သူတို့သည်လာ၍ လှေနှစ်စင်း နစ်လုမတတ် ငါးနှင့်ပြည့်စေကြ၏။
8 ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.
ရှိမုန် ပေတရုသ်မြင်လျှင်၊ ယေရှု၏ ပုဆစ်တော်ကိုဦးတိုက်၍၊ သခင်၊ အကျွန်ုပ်သည် အပြစ်များသော သူ ဖြစ်ပါ၏။ အကျွန်ုပ်ဆီမှကြွသွားတော်မူပါဟု လျှောက်လေ၏။
9 ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
အဘယ်ကြောင့် ဤသို့ လျှောက်သနည်း ဟူမူကား၊ အုပ်မိသောငါးများကိုထောက်သဖြင့်၊ ရှိမုန်နှင့် သူ၏အပေါင်းအဘော် ဇေဗေဒဲ၏သားယာကုပ်နှင့် ယောဟန်မှစ၍ ရှိမုန်နှင့်ပါသမျှသောသူတို့သည် မိန်းမော တွေဝေခြင်းရှိကြ၏။
10 ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.
၁၀ယေရှုကလည်း၊ ကြောက်ရွံ့ခြင်းမရှိနှင့်။ သင်သည်ယခုမှစ၍ လူတို့ကိုဘမ်းမိသောသူ ဖြစ်လိမ့်မည်ဟု မိန့်တော်မူ၏။
11 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.
၁၁ကမ်းနားမှာလှေကိုဆိုက်ပြီးလျှင်၊ ထိုသူတို့သည် ရှိသမျှတို့ကို စွန့်ပစ်၍ နောက်တော်သို့လိုက်ကြ၏။
12 ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
၁၂ကိုယ်တော်သည် မြို့တမြို့၌ရှိတော်မူစဉ်၊ တကိုယ်လုံးနူနာစွဲသော သူတယောက်သည် ကိုယ်တော်ကို မြင်လျှင် ပြစ်ဝပ်၍၊ သခင်၊ အလိုတော်ရှိလျှင် ကျွန်တော်ကို သန့်ရှင်းစေနိုင်တော်မူသည်ဟု တောင်းပန်လေ၏။
13 ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.
၁၃ယေရှုကလည်း၊ ငါအလိုရှိ၏။ သန့်ရှင်းခြင်းသို့ ရောက်စေဟုမိန့်တော်မူလျက်၊ လက်ထောက်ကိုဆန့်၍ ထိုသူကိုတို့တော်မူ၏။ ထိုခဏခြင်းတွင် နူနာပျောက်လေ ၏။
14 ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.
၁၄ယေရှုကလည်း၊ ဤအကြောင်းကို အဘယ်သူအားမျှမပြောနှင့် ယဇ်ပရောဖိတ်ထံသို့သွား၍ ကိုယ်ကို ပြလော့။ သူတပါး၌ သက်သေဖြစ်စေခြင်းငှါ သန့်ရှင်းခြင်းသို့ ရောက်သည့်အတွက် မောရှေစီရင်မှာထားသော ပူဇော်သက္ကာကို ဆက်လော့ဟုမိန့်တော်မူ၏။
15 ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.
၁၅သို့သော်လည်း သိတင်းတော်သည်သာ၍ ကျော်စောသဖြင့်၊ များစွာသောလူအပေါင်းတို့သည် တရား နာလိုသောငါ၎င်း၊ အနာငြိမ်းစေခြင်း ကျေးဇူးတော်ကို ခံလိုသော၎င်း၊ စုဝေးလျက်ရှိကြ၏။
16 ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.
၁၆ကိုယ်တော်သည် တောအရပ်သို့ကြွ၍ ဆုတောင်းလေ့ရှိတော်မူ၏။
17 ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.
၁၇တနေ့သ၌ ကိုယ်တော်သည် ဆုံးမဩဝါဒပေးတော်မူစဉ် ယေရုရှလင်မြို့မှစသော ယုဒပြည်၊ ဂါလိလဲ ပြည်မြို့ရွာများတို့က ရောက်လာသော ဖာရိရှဲတို့နှင့် နိဿရည်ဆရာတို့သည် ထိုင်လျက်ရှိကြ၏၊ အနာရောဂါ ငြိမ်းစေခြင်းငှါ သခင်ဘုရား၏ တန်ခိုးတော်သည် ထင်ရှား၏။
18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.
၁၈ထိုအခါ လက်ခြေသေသောသူတယောက်ကို အိမ်ယာနှင့်တကွ အထံသို့ဆောင်ခဲ့၍၊ ရှေ့တော်၌ သွင်း ထားခြင်းငှါ ရှာကြံကြ၏။
19 ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.
၁၉လူစုဝေးလျက်ရှိသောကြောင့် ဝင်စရာလမ်းကိုမတွေ့သဖြင့်၊ အိမ်မိုးပေါ်သို့တက်၍ အုတ်မိုးကို ဖောက်ပြီးမှ လူနာကို အိမ်ယာနှင့်တကွ လူများ အလည်ယေရှု၏ ရှေ့တော်သို့ လျှော့ချကြ၏။
20 ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.
၂၀ကိုယ်တော်သည် ထိုသူတို့၏ ယုံကြည်ခြင်းကိုမြင်လျှင်၊ လူနာအား၊ အချင်းလူ၊ သင်၏အပြစ်ကို လွတ် စေပြီဟု မိန့်တော်မူ၏။
21 ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.
၂၁ကျမ်းပြုဆရာနှင့် ဖာရိရှဲတို့က၊ ဘုရားကိုလွန်ကျူး၍ ပြောသောဤသူကား အဘယ်သူနည်း။ ဘုရား သခင်မှတပါး အဘယ်သူသည် အပြစ်ကို လွှတ်နိုင်သနည်းဟု ထင်မှတ်ကြ၏။
22 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?
၂၂ယေရှုသည် ထိုသူတို့၏ ထင်မှတ်ခြင်းကိုသိတော်မူလျှင်၊ သင်တို့စိတ်ထဲမှာအဘယ်ကြောင့် ထင်မှတ် ကြသနည်း။
23 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
၂၃အဘယ်စကားကိုသာ၍ ပြောလွယ်သနည်း။ သင်၏အပြစ်ကိုလွတ်စေပြီဟု ပြောလွယ်သလော။ သင် ထ၍ လှမ်းသွားလော့ ပြောလွယ်သလော။
24 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
၂၄လူသားသည်မြေကြီးပေါ်မှာ အပြစ်လွှတ်ပိုင်သည်ကို သင်တို့သိစေခြင်းငှါထလော့။ ကိုယ်အိမ်ယာကို ဆောင်၍ ကိုယ်အိမ်သို့သွားလော။ သင်အား ငါဆိုသည်ဟု လက်ခြေသေသောသူအား မိန့်တော်မူ၏။
25 ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.
၂၅ထိုသူသည်လည်း လူအများရှေ့မှာ ချက်ချင်းထ၍ အိမ်ယာကိုဆောင်လျက်၊ ဘုရားသခင်၏ ဂုဏ် တော်ကို ချီးမွမ်းလျက် မိမိအိမ်သို့သွားလေ၏။
26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.
၂၆ထိုသူအပေါင်းတို့သည် မိန်းမောတွေဝေ၍ ကြောက်ရွံ့အားကြီးသည်နှင့်၊ ငါတို့သည် အံ့ဘွယ်သော အမှုအရာကို ယနေ့မြင်ခဲ့ပြီဟုပြောဆို၍ ဘုရားသခင်၏ ဂုဏ်တော်ကိုချီးမွမ်းကြ၏။
27 ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
၂၇ထိုနောက်ကိုယ်တော်သည် ထကြွ၍ လေဝိအမည်ရှိသော အခွန်ခံသူသည် အခွန်ခံရာတဲ၌ ထိုင်နေ သည်ကိုမြင်သော ငါနောက်သို့လိုက်လော့ မိန့်တော်မူ၏။
28 ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.
၂၈ထိုသူသည်လည်း ရှိသမျှတို့ကို စွန့်ပြစ်လေရဲ့ ထ၍နောက်တော်သို့လိုက်လေ၏။
29 ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.
၂၉ထိုနောက်မှလေဝိသည် ကိုယ်တော်အဘို့အလို့ငှါ မိမိအိမ်၌ကြီးစွာသောပွဲကိုခံ၍၊ အခွန်ခံသောသူများ နှင့် အခြားသောသူအပေါင်းတို့သည် ကိုယ်တော်မှစသော တပည့်တော်တို့နှင့်တကွ စားပွဲ၌ လျောင်းကြ၏။
30 ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.
၃၀ကျမ်းပြုဆရာနှင့်ဖာရိရှဲတို့က သင်တို့သည် အခွန်ခံသောသူ ဆိုးသောသူတို့နှင့်အတူ အဘယ်ကြောင့် စားသောက်ကြသနည်းဟု တပည့်တော် တို့ကိုကဲ့ရဲ့အပြစ်တင်ကြ၏။
31 ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
၃၁ယေရှုကလည်း၊ ကျန်းမာသောသူတို့သည် ဆေးသမားကိုအလိုမရှိကြ။ နာသောသူတို့သာလျှင် အလိုရှိ ကြ၏။
32 ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.
၃၂ဖြောင့်မတ်သောသူတို့သည် နောင်တသို့ ခေါ်ခြင်းငှါလာသည်မဟုတ် ဆိုးသောသူတို့ကိုခေါ်ခြင်းငှါ ငါလာသတည်းဟု မိန့်တော်မူ၏။
33 ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.
၃၃လူအချို့တို့က၊ ယောဟန်၏ တပည့်တို့နှင့် ဖာရိရှဲတို့သည် အစာရှောင်ခြင်းနှင့် ဆုတောင်းခြင်းတို့ကို အဖန်တလဲလဲပြုကြသည်ဖြစ်၍၊ အဘယ်ကြောင့် ကိုယ်တော်၏တပည့်တို့သည် စားသောက်လျက်နေကြ ပါသနည်းဟု လျှောက်ကြ၏။
34 ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?
၃၄ကိုယ်တော်ကလည်း၊ မင်္ဂလာဆောင်လုလင်သည် မိမိအပေါင်းအဘော်တို့နှင့်အတူရှိစဉ်အခါ သူတို့ကို အစာရှောင်စေနိုင်သလော။
35 ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.
၃၅မင်္ဂလာဆောင်လုလင်ကို သူ၏အပေါင်းအဘော်တို့နှင့်ခွါ၍ ယူသွားသောအချိန်ကာလ ရောက်လိမ့် မည်။ ထိုကာလ အခါသူတို့သည် အစာရှောင်ကြလိမ့်မည်။
36 ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.
၃၆ဥပမာကား၊ အဝတ်ဟောင်းကို အထည်သစ်နှင့် ဖာလေ့မရှိ။ ထိုသို့ဖာလျှင် အထည်သစ်သည် ဆွဲဆုတ် တတ်၏။ ဖာသောအထည်သစ်သည် အဝတ်ဟောင်းနှင့် မသင့်မတင့်တတ်။
37 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.
၃၇၎င်းနည်း၊ ဟောင်းသောသားရေဘူး၌ အသစ်သောစပျစ်ရည်ကို ထည့်လေ့မရှိ။ ထိုသို့ထည့်လျှင် အသစ်သောစပျစ်ရည်သည် သားရေဘူးကို ဆုတ်ခွဲသဖြင့်၊ စပျစ်ရည်သည် သားရေဘူးကို ဆုတ်ခွဲသဖြင့်၊ စပျစ်ရည်သည်ယို၍ သားရေဘူးလည်း ပျက်စီးတတ်၏။
38 ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.
၃၈အသစ်သောစပျစ်ရည်ကို အသစ်သောသားရေဘူး၌ ထည့်ရသည်၊ ထိုသို့ထည့်လျှင် နှစ်ပါးစလုံး မပျက် စီး။
39 ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.
၃၉ဟောင်းသောစပျစ်ရည်ကိုသောက်ပြီးသော သူသည်လည်း အသစ်သောစပျစ်ရည်ကို ချက်ခြင်းအလို မရှိတတ်။ ဟောင်းသော စပျစ်ရည်သာ၍ ကောင်းသည်ကိုသိ၏ဟုမိန့်တော်မူ၏။

< ಲೂಕನು 5 >