< ಲೂಕನು 6 >

1 ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.
नंतर असे झाले की, एका शब्बाथ दिवशी येशू शेतामधून जात होता आणि त्याचे शिष्य कणसे मोडून हातावर चोळून खात होते.
2 ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.
मग परूश्यांपैकी काही म्हणाले, “शब्बाथ दिवशी जे करण्यास योग्य नाही, ते तुम्ही का करता?”
3 ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
येशूने त्यांना म्हटले, “जेव्हा दावीद व त्याच्याबरोबरच्या मनुष्यांना भूक लागली तेव्हा त्यांनी काय केले हे तुम्ही कधी वाचले नाही काय?
4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.
तो देवाच्या घरात गेला आणि ज्या समर्पित भाकरी याजकांशिवाय कोणीच खाणे योग्य नाही त्या त्याने कशा घेऊन खाल्ल्या व आपल्याबरोबर जे होते त्यांनाही दिल्या.”
5 ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.
आणखी येशू त्यांना म्हणाला, “मनुष्याचा पुत्र शब्बाथाचा प्रभू आहे.”
6 ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
असे झाले की, दुसऱ्या एका शब्बाथ दिवशी येशू सभास्थानात गेला आणि शिकवू लागला. ज्याचा उजवा हात वाळलेला होता असा एक मनुष्य तेथे होता.
7 ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.
येशू शब्बाथ दिवशी कोणाला बरे करतो की काय हे पाहण्यासाठी नियमशास्त्राचे शिक्षक व परूशी त्याच्यावर लक्ष ठेवून होते. यासाठी की त्यांना आरोप ठेवण्यासाठी काहीतरी कारण मिळावे.
8 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.
परंतु तो त्यांचे विचार जाणून वाळलेल्या हाताच्या मनुष्यास म्हणाला, “ऊठ आणि सर्वांसमोर उभा राहा,” आणि तो मनुष्य उठून तेथे उभा राहिला.
9 ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.
येशू त्यांना म्हणाला, “मी तुम्हास विचारतो, शब्बाथ दिवशी कोणत्या गोष्टी करायला परवानगी आहे? चांगले करणे की वाईट करणे? कोणते कायदेशीर आहे, एखाद्याचा जीव वाचवणे का त्याचा नाश करणे?”
10 ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
१०मग त्याने सभोवती त्या सर्वांकडे पाहीले आणि म्हणाला, “तू आपला हात लांब कर.” तेव्हा त्याने तसे केले आणि त्याचा हात बरा झाला.
11 ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
११पण परूशी व नियमशास्त्राचे शिक्षक खूप रागावले व येशूविषयी काय करता येईल याविषयी आपसात चर्चा करू लागले.
12 ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.
१२त्या दिवसात असे झाले की, येशू प्रार्थना करण्यासाठी डोंगरावर गेला. त्याने ती रात्र देवाची प्रार्थना करण्यात घालवली.
13 ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.
१३जेव्हा दिवस उगवला, तेव्हा त्याने शिष्यांना आपणाकडे बोलावले. त्याने त्यांच्यातील बाराजणांना निवडले व त्यांना ‘प्रेषित’ असे नाव दिले.
14 ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
१४शिमोन ज्याला पेत्र हे सुद्धा नाव दिले तो अंद्रिया (पेत्राचा भाऊ), याकोब आणि योहान, फिलिप्प, बर्थलमय,
15 ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,
१५मत्तय, थोमा, अल्फीचा पुत्र याकोब, शिमोन ज्याला जिलोत म्हणत,
16 ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.
१६याकोबचा पुत्र यहूदा व यहूदा इस्कर्योत, जो पुढे विश्वासघात करणारा निघाला.
17 ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ
१७तो त्यांच्याबरोबर डोंगरावरून खाली उतरला व सपाट जागेवर उभा राहिला आणि त्याच्या अनुयायांचा मोठा समुदाय तेथे आला व यहूदीया प्रांत, यरूशलेम शहर, सोर आणि सिदोनच्या समुद्रकिनाऱ्याकडचे असे पुष्कळसे लोक तेथे आले होते.
18 ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು,
१८ते तेथे त्याचे ऐकण्यास व आपल्या रोगांपासून बरे होण्यास आले व ज्यांना अशुद्ध आत्म्यांची बाधा होती त्यांनाही त्यांच्या व्याधीपासून मुक्त करण्यात आले.
19 ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.
१९सगळा लोकसमुदाय त्यास स्पर्श करू पाहत होता, कारण त्याच्यामधून सामर्थ्य येत होते आणि सर्वांना ते बरे करत होते.
20 ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.
२०मग येशूने आपल्या शिष्यांकडे पाहिले व म्हणाला, “अहो दिनांनो, तुम्ही धन्य आहात कारण देवाचे राज्य तुमचे आहे.
21 ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.
२१अहो जे तुम्ही आता भूकेले आहात, ते तुम्ही धन्य आहात, कारण तुम्ही तृप्त व्हाल. अहो जे तुम्ही आता रडता, ते तुम्ही आशीर्वादित आहात कारण तुम्ही हसाल.
22 ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.
२२जेव्हा मनुष्याच्या पुत्रामुळे लोक तुमचा द्वेष करतील आणि जेव्हा ते आपल्या समाजातून तुम्हास दूर करतील व तुमची निंदा करतील व तुमचे नाव ते वाईट म्हणून टाकून देतील आणि मनुष्याच्या पुत्रामुळे तुम्हास नाकारतील, तेव्हा तुम्ही धन्य आहात.
23 “ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
२३त्यादिवशी आनंद करून उड्या मारा, कारण खरोखर स्वर्गात तुमचे प्रतिफळ मोठे आहे! कारण त्यांच्या पूर्वजांनी संदेष्ट्यांना सुद्धा तसेच केले.
24 “ಆದರೆ ಐಶ್ವರ್ಯವಂತರೇ, ನಿಮಗೆ ಕಷ್ಟ, ಏಕೆಂದರೆ ನೀವು ನಿಮ್ಮ ನೆಮ್ಮದಿಯನ್ನು ಹೊಂದಿದ್ದೀರಿ.
२४पण श्रीमंतानो, तुम्हास दुःख होवो कारण तुम्हास अगोदरच सर्व सुख मिळाले आहे.
25 ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.
२५जे तुम्ही तृप्त आहात त्या तुम्हास दुःख होवो, कारण तुम्ही भूकेले व्हाल. जे आता हसतात त्यांना दुःख होवो कारण तुम्ही शोक कराल आणि रडाल.
26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
२६जेव्हा सर्व तुमच्याविषयी चांगले बोलतील तेव्हा तुम्हास दुःख होवो कारण त्यांच्या वाडवडिलांनी खोट्या संदेष्ट्यांना असेच केले.”
27 “ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ,
२७“परंतु तुम्हा ऐकणाऱ्यांस मी सांगतो, तुमच्या शत्रूंवर प्रीती करा. जे तुमचा द्वेष करतात, त्यांचे चांगले करा.
28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
२८जे तुम्हास शाप देतात त्यांना आशीर्वाद द्या. जे तुमचा अपमान करतात त्यांच्यासाठी प्रार्थना करा.
29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.
२९जर कोणी तुमच्या एका गालावर मारतो तर त्याच्यासमोर दुसराही गाल करा. जर कोणी तुमचा अंगरखा घेतो तर त्यास तुमची बंडी ही घेऊन जाण्यास मना करू नका.
30 ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.
३०जे तुम्हास मागतात त्या प्रत्येकाला द्या आणि जो तुमची वस्तू हिरावून घेतो त्याच्यापाशी ते परत मागू नको.
31 ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.
३१आणि जसे मनुष्यांनी तुमच्याशी वागावे म्हणून तुमची इच्छा असेल तसेच तुम्हीही त्यांच्याशी वागा.
32 “ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ, ನಿಮಗೇನು ದೊಡ್ಡಸ್ತಿಕೆ ಬಂದೀತು? ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವರನ್ನೇ ಪ್ರೀತಿಸುತ್ತಾರೆ.
३२तुमच्यावर जे प्रीती करतात त्यांच्यावर तुम्ही प्रीती करा, तर त्यामध्ये तुमचा उपकार तो काय? कारण पापी लोकही आपणावर प्रीती करणाऱ्यांवर प्रीती करतात.
33 ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ.
३३तुमचे जे चांगले करतात, त्यांचे जर तुम्ही चांगले करता तर तुम्हास काय लाभ? पापीसुद्धा असेच करतात.
34 ಯಾರಿಂದ ತಿರುಗಿ ಪಡೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೀರೋ ಅಂಥವರಿಗೆ ಸಾಲಕೊಟ್ಟರೆ, ಅದರಿಂದ ನಿಮಗೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟದ್ದನ್ನು ತಿರುಗಿ ಪಡೆಯುವಂತೆ, ಪಾಪಿಗಳಿಗೆ ಸಾಲ ಕೊಡುತ್ತಾರೆ.
३४ज्यांच्याकडून तुम्हास परत मिळेल अशी आशा असते, त्यांना जर उसने देता तर तुम्हास काय लाभ? पापीसुद्धा परत मिळावे या उद्देशाने दुसऱ्या पाप्याला उसने देतात.
35 ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.
३५परंतु तुम्ही आपल्या शत्रूंवर प्रीती करा व त्यांचे बरे करा आणि निराश न होता उसने द्या म्हणजे तुमचे प्रतिफळ मोठे होईल व तुम्ही परात्पराचे पुत्र व्हाल कारण तो अनुपकारी व वाईट यांच्यावर तो दया करणारा आहे.
36 ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.
३६जसा तुमचा स्वर्गीय पिता दयाळू आहे तसे तुम्हीही दयाळू व्हा.”
37 “ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
३७“दुसऱ्यांचा न्याय करू नका, म्हणजे तुमचाही न्याय होणार नाही. दुसऱ्यांना दोषी ठरवू नका म्हणजे तुम्हास दोषी ठरवले जाणार नाही. दुसऱ्यांची क्षमा करा म्हणजे तुमचीही क्षमा केली जाईल.
38 ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.
३८द्या म्हणजे तुम्हास दिले जाईल. चांगले माप दाबून, हालवून व शीग भरून तुमच्या पदरी घालतील कारण ज्या मापाने तुम्ही मापून द्याल त्याच मापाने तुम्हास परत मापून देण्यात येईल.”
39 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ?
३९त्याने त्यांना एक दाखला सांगितला, “एक आंधळा दुसऱ्या आंधळ्याला मार्ग दाखवू शकेल काय? ते दोघेही खड्डयात पडणार नाहीत काय?
40 ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.
४०कोणताही शिष्य त्याच्या गुरुपेक्षा थोर नाही. पण प्रत्येक शिष्य जेव्हा पूर्ण शिकतो तेव्हा तो गुरुसारखाच होतो.
41 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
४१स्वतःच्या डोळ्यातील मुसळ ध्यानात न आणता तू आपल्या भावाच्या डोळ्यातील कुसळ का पाहतोस?
42 ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.
४२अथवा तू आपल्या डोळ्यातले मुसळ न पाहता आपल्या भावाला कसे म्हणशील की, भाऊ, तुझ्या डोळ्यातले कुसळ मला काढू दे? अरे ढोंग्या, प्रथम तुझ्या डोळ्यातील मुसळ काढ मगच तुला तुझ्या भावाच्या डोळ्यातील कुसळ काढताना चांगले दिसेल.”
43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
४३कोणतेही चांगले झाड नाही की जे वाईट फळ देते किंवा कोणतेही वाईट झाड नाही की जे चांगले फळ देते.
44 ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವುದು. ಏಕೆಂದರೆ ಮನುಷ್ಯರು ಮುಳ್ಳುಗಿಡಗಳಲ್ಲಿ ಅಂಜೂರಗಳನ್ನು ಕೀಳುವುದಿಲ್ಲ, ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿಗಳನ್ನು ಕೊಯ್ಯುವುದಿಲ್ಲ.
४४कारण प्रत्येक झाड हे त्याच्या फळावरुन ओळखले जाते. लोक काटेरी झुडुपातून अंजीरे गोळा करीत नाहीत तसेच काटेरी झुडुपातून ते द्राक्षे गोळा करीत नाहीत.
45 ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
४५चांगला मनुष्य त्याच्या अंतःकरणात ज्या चांगल्या गोष्टी साठवलेल्या असतात त्याच काढतो आणि दुष्ट मनुष्य त्याच्या अंतःकरणात जे वाईट आहे तेच बाहेर काढतो कारण अंतःकरणात जे भरले आहे तेच मुखावाटे निघणार.
46 “ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ?
४६“तुम्ही मला ‘प्रभू, प्रभू,’ म्हणता, पण जे मी सांगतो ते तुम्ही का करीत नाही?
47 ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.
४७प्रत्येकजण जो माझ्याकडे येतो व माझी वचने ऐकून त्या आज्ञा पाळतो तो कसा आहे हे मी तुम्हास दाखवितो.
48 ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.
४८तो एका घर बांधणाऱ्या मनुष्यासारखा आहे. त्याने खोल खोदले आणि खडकावर पाया बांधला. मग पूर आला आणि पाण्याचा लोंढा घरावर आदळला, पण पाण्याने ते हलले नाही, कारण ते चांगले बांधले होते.
49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”
४९पण जो कोणी माझी वचने ऐकतो पण ती पाळीत नाही तो ज्याने आपले घर पाया न घालता जमिनीवर बांधले त्या मनुष्यासारखा आहे, त्या घरावर पाण्याचा लोंढा आदळला आणि ते लागलेच पडले व त्या घराचा मोठा नाश झाला.”

< ಲೂಕನು 6 >