< ಲೂಕನು 6 >

1 ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.
अब विश्रामको दिनमा यस्तो भयो कि येशू चेलाहरूसँग अन्‍नको खेतको बाटो भएर जाँदै गर्नुहुँदा तिनीहरूले हातले अन्‍नका बाला टिप्दै र तिनीहरूका हातमा माडिरहेका र अन्‍न खाइरहेका थिए ।
2 ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.
तर केही फरिसीहरूले भने, “किन तिमीहरूले विश्रामको दिनमा व्यवस्थाअनुसार गर्न नहुने काम गरिरहेका छौ?”
3 ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
येशूले तिनीहरूलाई जवाफ दिँदै भन्‍नुभयो, “दाऊद र तिनीसँग भएका मानिसहरू भोकाएका बेला दाऊदले के गरे भनी तिमीहरूले पढेका छैनौ?
4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.
तिनी परमेश्‍वरको भवनभित्र पसेर पूजारीहरूले बाहेक अरूले खान निषेध गरिएको परमेश्‍वरको उपस्थितिको रोटीबाट आफूले केही खाए र केही आफूसँग भएका मानिसहरूलाई पनि दिए ।”
5 ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.
तब उहाँले तिनीहरूलाई भन्‍नुभयो, “मानिसका पुत्र विश्राम दिनको पनि प्रभु हो ।”
6 ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
अर्को विश्राममा यसो भयो कि उहाँ सभाघरमा जानुभयो र त्यहाँ भएका मानिसहरूलाई सिकाउनुभयो । त्यहाँ दाहिने हात सुकेको एक जना मानिस थियो ।
7 ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.
उहाँले विश्रामको दिनमा कसैलाई निको पार्नुहुन्छ कि हुन्‍न भनेर शास्‍त्रीहरू र फरिसीहरूले नजिकबाट उहाँलाई नियाली राखेका थिए ताकि तिनीहरूले उहाँलाई केही गल्ती गरेको कारण दोष भेट्टाउन सकियोस् ।
8 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.
तर तिनीहरूले के सोचिरहेका थिए भनी उहाँलाई थाहा थियो, र हात सुकेको मानिसलाई भन्‍नुभयो, “उठ र सबैका बिचमा खडा होऊ ।” त्यसकारण, त्यो मानिस उठ्यो र त्यहाँ सबैका बिचमा उभियो ।
9 ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.
येशूले तिनीहरूलाई भन्‍नुभयो, “म तिमीहरूलाई सोध्छु, विश्रामको दिनमा कसैको असल गर्नु वा हानि गर्नु, जीवन बचाउनु वा नाश गर्नु कुन ठिक हो?”
10 ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
तब उहाँले तिनीहरूका वरिपरि हेर्नुभयो र त्यस मानिसलाई भन्‍नुभयो, “तेरो हात पसार् ।” उसले त्यसै गर्‍यो र उसको हात पहिलाको जस्तै भयो ।
11 ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
तर तिनीहरू रिसले चूर भए र येशूको बारेमा के गर्न सकिन्छ भनी एक अर्कामा कुराकानी गरे ।
12 ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.
उहाँ डाँडामा प्रार्थना गर्न जानुभएको बेला ती दिनहरूमा यसो भएको हो । उहाँले परमेश्‍वरसँग रातभर निरन्तर प्रार्थनामा बिताउनुभयो ।
13 ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.
जब उज्यालो भइसकेको थियो । उहाँले चेलाहरूलाई आफूकहाँ बोलाउनुभयो र तिनीहरूमध्येबाट बाह्र जनालाई चुन्‍नुभयो जसलाई “प्रेरित” नाउँ दिनुभयो ।
14 ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
पप्रेरितहरूका नाउँहरू थिएः सिमोन (जसलाई उहाँले पत्रुस भनी नाउँ दिनुभयो) र उनका भाइ अन्द्रियास, याकूब, यूहन्‍ना, फिलिप, बारथोलोमाइ,
15 ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,
मत्ती, थोमा, अल्फयासका छोरा याकूब, सिमोन जसलाई विद्रोही भनिन्थ्यो,
16 ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.
याकूबका छोरा यहूदा, र यहूदा इस्करियोत, जो एक धोकेबाज हुन पुग्यो ।
17 ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ
त्यसपछि येशू तिनीहरूसँगै डाँडाबाट तल ओर्लनुभयो र समथर ठाउँमा उभिनुभयो । त्यहाँ उहाँका चेलाहरूको ठुलो भिड थियो र त्यसै गरी ठुलो सङ्ख्यामा यहूदिया, र यरूशलेम, र सिदोन, टुरोसको समुद्री तटका बासिन्दाहरू पनि थिए ।
18 ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು,
तिनीहरू उहाँका वचन सुन्‍न र आ-आफ्ना रोगहरूबाट निको हुनलाई आएका थिए । अशुद्ध आत्माले सताइएका मानिसहरू पनि निको भए ।
19 ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.
भभिडमा भएका सबैले उहाँलाई छुन खोजे, किनभने निको पार्ने शक्‍ति उहाँबाट गइहेको थियो र उहाँले सबैलाई निको पार्नुभयो ।
20 ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.
उहाँले चेलाहरूतर्फ हेर्नुभयो र भन्‍नुभयो, “धन्य तिमीहरू जो दीन छौ, परमेश्‍वरको राज्य तिमीहरूकै हो ।
21 ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.
धन्य तिमीहरू जो अहिले भोकाउँदछौ, तिमीहरू तृप्‍त हुनेछौ । धन्य तिमीहरू जो अहिले रुन्छौ, तिमीहरू हाँस्‍नेछौ ।
22 ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.
जब मानिसका पुत्रका खातिर बहिष्कार गरी साथीहरूबाट अलग गरेर तिमीहरूलाई निकाल्दछन् र दुष्‍ट ठानी तिमीहरूका नाउँलाई अपमान गर्दछन् । धन्य हौ तिमीहरू जब मानिसहरूले तिमीहरूलाई घृणा गर्दछन् ।
23 “ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
त्यसदिन तिमीहरू रमाओ र आनन्दले उफ्र, किनकि निश्‍चय नै स्वर्गमा तिमीहरूका लागि ठुलो इनाम हुनेछ । किनकि तिनीहरूका पुर्खाहरूले पनि अगमवक्‍ताहरूलाई त्यसै गरेका थिए ।
24 “ಆದರೆ ಐಶ್ವರ್ಯವಂತರೇ, ನಿಮಗೆ ಕಷ್ಟ, ಏಕೆಂದರೆ ನೀವು ನಿಮ್ಮ ನೆಮ್ಮದಿಯನ್ನು ಹೊಂದಿದ್ದೀರಿ.
तर धिक्‍कार तिमीहरू जो धनी छौ! तिमीहरूले आफ्ना सान्त्वना पाइसकेका छौ ।
25 ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.
धिक्‍कार तिमीहरूलाई जो आहिले तृप्‍त छौ! तिमीहरू पछि भोकाउनेछौ । धिक्‍कार तिमीहरू जो अहिले हाँस्‍छौ! तिमीहरू पछि रुनेछौ र विलाप गर्नेछौ ।
26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
धिक्‍कार तिमीहरू मानिसहरूबाट प्रशंसा पाउनेहरू! तिम्रा पुर्खाहरूले झुटा अगमवक्‍ताहरूलाई पनि त्यसै गरेका थिए ।
27 “ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ,
तर म तिमीहरूलाई भन्दछु जसले सुनिरहेका छौ, तिम्रा शत्रुहरूलाई प्रेम गर र तिमीहरूलाई घृणा गर्नेहरूको भलाइ गर ।
28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
तिमीहरूलाई सराप्‍नेहरूलाई आशिष्‌‌ देऊ र तिमीहरूलाई दुर्व्यवहार गर्नेहरूका निम्ति प्रार्थना गर ।
29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.
तिम्रो एउटा गालामा हिर्काउनेलाई अर्को पनि थापिदेऊ । यदि कसैले तिम्रो कोट खोस्‍छ भने उसलाई दौरा पनि दिइहाल ।
30 ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.
तिमीसँग माग्‍ने सबैलाई देऊ । यदि कसैले तिम्रो केही कुरा लगेमा त्यससँग फिर्ता नमाग ।
31 ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.
मानिसहरूले तिमीलाई जसो गरेको चाहन्छौ, तिमीले पनि तिनीहरूलाई त्यस्तै गर्नुपर्छ ।
32 “ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ, ನಿಮಗೇನು ದೊಡ್ಡಸ್ತಿಕೆ ಬಂದೀತು? ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವರನ್ನೇ ಪ್ರೀತಿಸುತ್ತಾರೆ.
तिमीलाई प्रेम गर्नेहरूलाई मात्र प्रेम गर्छौ भने के लाभ भयो र? किनकि पापीहरूले पनि तिनीहरूलाई प्रेम गर्नेहरूलाई मात्र प्रेम गर्छन् ।
33 ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ.
यदि तिमीहरूलाई असल गर्नेलाई मात्र असल गर्छौ भने के लाभ भयो र? पापीहरूले पनि त त्यसै गर्छन् ।
34 ಯಾರಿಂದ ತಿರುಗಿ ಪಡೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೀರೋ ಅಂಥವರಿಗೆ ಸಾಲಕೊಟ್ಟರೆ, ಅದರಿಂದ ನಿಮಗೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟದ್ದನ್ನು ತಿರುಗಿ ಪಡೆಯುವಂತೆ, ಪಾಪಿಗಳಿಗೆ ಸಾಲ ಕೊಡುತ್ತಾರೆ.
यदि तिमीले तिनीहरूले फिर्ता गर्न सक्छन् भन्‍ने आशामा मात्र ऋण दिन्छौ भने तिमीलाई के लाभ भयो र? पापीहरूले पनि पापीहरूलाई ऋण दिन्छन् र उत्तिकै मात्रामा फिर्ता पाउने आशा राख्दछन् ।
35 ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.
तर तिम्रा शत्रुहरूलाई प्रेम गर र तिनीहरूको भलाइ गर । पैँचो माग्‍नेहरूलाई केही पनि फिर्ता पाउने आशा नगरीकन देऊ ताकि तिम्रो इनाम ठुलो हुनेछ । तिमी सर्वोच्‍चका छोराहरू हुनेछौ, किनकि उहाँ आफैँ अधन्यवादी र खराब मानिसहरूप्रति कृपालु हुनुहुन्छ ।
36 ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.
तिम्रा पिता कृपालु हुनुभएझैँ तिमी पनि कृपालु होऊ ।
37 “ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
कसैको न्याय नगर र तिम्रो न्याय गरिनेछैन । दोष नलगाऊ र तिमी दोषी ठहरिनेछैनौ; अरूलाई क्षमा देऊ र तिमीलाई पनि क्षमा गरिनेछ ।
38 ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.
अरूहरूलाई देऊ र तिमीहरूलाई पनि दिइनेछ । प्रशस्त परिमाणमा खाँदी-खाँदी, हल्लाई-हल्लाई पोखिने गरी, तिनीहरूले तिमीहरूका पोल्टामा खन्याउनेछन् । जुन नापले तिमीहरू नाप्‍तछौ, त्यहीँ नापले तिमीहरू पनि नापिनेछौ ।”
39 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ?
त्यसपछि उहाँले तिनीहरूलाई एउटा दृष्‍टान्त पनि भन्‍नुभयो, “के एक जना अन्धा मानिसले अर्को अन्धा मानिसलाई डोर्‍याउन सक्छ? त्यसो गरे दुवै जना खाल्डोमा पर्दैनन् र?
40 ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.
एउटा चेला आफ्नो गुरुभन्दा महान् हुन सक्दैन । तर हेरक जसले तालिम प्राप्‍त गर्छ, तब ऊ आफ्नो गुरुजस्तै हुनेछ ।
41 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
तिमीले तिम्रो भाइको आँखामा मात्र किन सानो कसिङ्गर देख्‍तछौ तर आफ्नै आँखामा भएको मुढाचाहिँ किन देख्दैनौ?
42 ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.
कसरी तिमीले आफ्नो भाइलाई भन्‍न सक्छौ, भाइ मलाई तिम्रा आँखामा भएको कसिङ्गर निकाल्न देऊ जब कि तिमीले आफ्नै आँखामा भएको मुढा देख्दैनौ? हे पाखण्डी हो! पहिले तिम्रा आँखाबाट मुढा निकाल तब तिमीले तिम्रो भाइको आँखामा भएको कसिङ्गर निकाल्न स्पष्‍टसँग देख्‍नेछौ ।
43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
किनकि कुनै असल रुखले कुहिएको फल फलाउँदैन, न त कुहिएको रुखले असल फल फलाउन सक्छ ।
44 ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವುದು. ಏಕೆಂದರೆ ಮನುಷ್ಯರು ಮುಳ್ಳುಗಿಡಗಳಲ್ಲಿ ಅಂಜೂರಗಳನ್ನು ಕೀಳುವುದಿಲ್ಲ, ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿಗಳನ್ನು ಕೊಯ್ಯುವುದಿಲ್ಲ.
किनभने प्रत्येक रुख त्यसको फलले नै चिनिन्छ । किनकि काँडाको रुखबाट कसैले अञ्‍जीर बटुल्न सक्दैन, न त काँडे झाडीबाट अङ्गुर बटुल्न सक्छ ।
45 ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
असल मान्छेले आफ्नो हृदयको भण्डारबाट असल कुरा निकाल्छ र खराब मान्छेले आफ्नो हृदयको भण्डारबाट खराब कुरा नै निकाल्दछ । किनकि उसले आफ्नो हृदयको प्रशस्तबाट त्यही बोल्दछ र जे भण्डार गरी राखेको छ, त्यहीँ निकाल्छ ।
46 “ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ?
तिमीहरू मलाई किन “प्रभु, प्रभु” भन्दछौ, जब कि मैले भनेका कुराहरूचाहिँ तिमीहरूले पालना गर्दैनौ?
47 ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.
हरेक व्यक्‍ति जो मकहाँ आउँछ र मेरा वचन सुन्छ र पालन गर्छ, म तिमीहरूलाई भन्दछु, ऊ कस्तो मानिस हो ।
48 ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.
ऊ एक जना घर बनाउने मानिसजस्तो हो, जसले जमिन गहिरो गरी खन्यो र घरको जग बलियो चट्टानमाथि बसाल्यो । जब जलप्रवाह भयो, तब बाढी उर्ली आएर त्यस घरलाई प्रहार गर्‍यो, तर त्यसलाई हल्लाउन सकेन, किनभने त्यो राम्ररी बनाइएको थियो ।
49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”
तर एक जना मानिस जसले मेरा वचनहरू सुन्छ र पालन गर्दैन्, त्यो मानिस जमिनमाथि विनाजग घर बनाउने मानिसजस्तो हो । जब जलप्रवाह उर्ली आयो र त्यस घरलाई प्रहार गर्‍यो तब त्यो घर तुरुन्तै ढली हाल्यो र त्यस घरको पुरै विनाश भयो ।

< ಲೂಕನು 6 >