< ಲೂಕನು 9 >

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,
फिर उसने उन बारह को बुलाकर उन्हें सब बदरूहों पर इख़्तियार बख़्शा और बीमारियों को दूर करने की क़ुदरत दी।
2 ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.
और उन्हें ख़ुदा की बादशाही का ऐलान करने और बीमारों को अच्छा करने के लिए भेजा,
3 ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
और उनसे कहा, “राह के लिए कुछ न लेना, न लाठी, न झोली, न रोटी, न रुपए, न दो दो कुरते रखना।
4 ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
और जिस घर में दाख़िल हो वहीं रहना और वहीं से रवाना होना;
5 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.
और जिस शहर के लोग तुम्हें क़ुबूल ना करें, उस शहर से निकलते वक़्त अपने पाँव की धूल झाड़ देना ताकि उन पर गवाही हो।”
6 ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.
पस वो रवाना होकर गाँव गाँव ख़ुशख़बरी सुनाते और हर जगह शिफ़ा देते फिरे।
7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.
चौथाई मुल्क का हाकिम हेरोदेस सब अहवाल सुन कर घबरा गया, इसलिए कि कुछ ये कहते थे कि युहन्ना मुर्दों में से जी उठा है,
8 ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.
और कुछ ये कि एलियाह ज़ाहिर हुआ, और कुछ ये कि क़दीम नबियों में से कोई जी उठा है।
9 ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.
मगर हेरोदेस ने कहा, “युहन्ना का तो मैं ने सिर कटवा दिया, अब ये कौन जिसके बारे में ऐसी बातें सुनता हूँ?” पस उसे देखने की कोशिश में रहा।
10 ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.
फिर रसूलों ने जो कुछ किया था लौटकर उससे बयान किया; और वो उनको अलग लेकर बैतसैदा नाम एक शहर को चला गया।
11 ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.
ये जानकर भीड़ उसके पीछे गई और वो ख़ुशी के साथ उनसे मिला और उनसे ख़ुदा की बादशाही की बातें करने लगा, और जो शिफ़ा पाने के मुहताज थे उन्हें शिफ़ा बख़्शी।
12 ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.
जब दिन ढलने लगा तो उन बारह ने आकर उससे कहा, “भीड़ को रुख़्सत कर के चारों तरफ़ के गाँव और बस्तियों में जा टिकें और खाने का इन्तिज़ाम करें।” क्यूँकि हम यहाँ वीरान जगह में हैं।
13 ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.
उसने उनसे कहा, “तुम ही उन्हें खाने को दो,” उन्होंने कहा, “हमारे पास सिर्फ़ पाँच रोटियाँ और दो मछलियाँ है, मगर हाँ हम जा जाकर इन सब लोगों के लिए खाना मोल ले आएँ।”
14 ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.
क्यूँकि वो पाँच हज़ार मर्द के क़रीब थे। उसने अपने शागिर्दों से कहा, “उनको तक़रीबन पचास — पचास की क़तारों में बिठाओ।”
15 ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.
उन्होंने उसी तरह किया और सब को बिठाया।
16 ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.
फिर उसने वो पाँच रोटियाँ और दो मछलियाँ लीं और आसमान की तरफ़ देख कर उन पर बर्क़त बख़्शी, और तोड़कर अपने शागिर्दों को देता गया कि लोगों के आगे रख्खें।
17 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
उन्होंने खाया और सब सेर हो गए, और उनके बचे हुए बे इस्तेमाल खाने की बारह टोकरियाँ उठाई गईं।
18 ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.
जब वो तन्हाई में दुआ कर रहा था और शागिर्द उसके पास थे, तो ऐसा हुआ कि उसने उनसे पूछा, “लोग मुझे क्या कहते हैं?”
19 ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.
उन्होंने जवाब में कहा, “युहन्ना बपतिस्मा देनेवाला और कुछ एलियाह कहते हैं, और कुछ ये कि पुराने नबियों में से कोई जी उठा है।”
20 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.
उसने उनसे कहा, “लेकिन तुम मुझे क्या कहते हो?” पतरस ने जवाब में कहा, “ख़ुदावन्द का मसीह।”
21 ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.
उसने उनको हिदायत करके हुक्म दिया कि ये किसी से न कहना,
22 ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.
और कहा, “ज़रूर है इब्न — ए — आदम बहुत दुःख उठाए और बुज़ुर्ग और सरदार काहिन और आलिम उसे रद्द करें और वो क़त्ल किया जाए और तीसरे दिन जी उठे।”
23 ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
और उसने सब से कहा, “अगर कोई मेरे पीछे आना चाहे तो अपने आप से इनकार करे और हर रोज़ अपनी सलीब उठाए और मेरे पीछे हो ले।
24 ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
क्यूँकि जो कोई अपनी जान बचाना चाहे, वो उसे खोएगा और जो कोई मेरी ख़ातिर अपनी जान खोए वही उसे बचाएगा।
25 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?
और आदमी अगर सारी दुनिया को हासिल करे और अपनी जान को खो दे या नुक़्सान उठाए तो उसे क्या फ़ाइदा होगा?
26 ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.
क्यूँकि जो कोई मुझ से और मेरी बातों से शरमाएगा, इब्न — ए — आदम भी जब अपने और अपने बाप के और पाक फ़रिश्तों के जलाल में आएगा तो उस से शरमाएगा।
27 “ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
लेकिन मैं तुम से सच कहता हूँ कि उनमें से जो यहाँ खड़े हैं कुछ ऐसे हैं कि जब तक ख़ुदा की बादशाही को देख न लें मौत का मज़ा हरगिज़ न चखेंगे।”
28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.
फिर इन बातों के कोई आठ रोज़ बाद ऐसा हुआ, कि वो पतरस और यूहन्ना और या'क़ूब को साथ लेकर पहाड़ पर दुआ करने गया।
29 ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.
जब वो दुआ कर रहा था, तो ऐसा हुआ कि उसके चेहरे की सूरत बदल गई, और उसकी पोशाक सफ़ेद बर्राक़ हो गई।
30 ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
और देखो, दो शख़्स या'नी मूसा और एलियाह उससे बातें कर रहे थे।
31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
ये जलाल में दिखाई दिए और उसके इन्तक़ाल का ज़िक्र करते थे, जो येरूशलेम में वाक़े' होने को था।
32 ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.
मगर पतरस और उसके साथी नींद में पड़े थे और जब अच्छी तरह जागे, तो उसके जलाल को और उन दो शख़्सों को देखा जो उसके साथ खड़े थे।
33 ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
जब वो उससे जुदा होने लगे तो ऐसा हुआ कि पतरस ने ईसा से कहा, “ऐ उस्ताद! हमारा यहाँ रहना अच्छा है: पस हम तीन डेरे बनाएँ, एक तेरे लिए एक मूसा के लिए और एक एलियाह के लिए।” लेकिन वो जानता न था कि क्या कहता है।
34 ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.
वो ये कहता ही था कि बादल ने आकर उन पर साया कर लिया, और जब वो बादल में घिरने लगे तो डर गए।
35 ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.
और बादल में से एक आवाज़ आई, “ये मेरा चुना हुआ बेटा है, इसकी सुनो।”
36 ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
ये आवाज़ आते ही ईसा अकेला दिखाई दिया; और वो चुप रहे, और जो बातें देखी थीं उन दिनों में किसी को उनकी कुछ ख़बर न दी।
37 ಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.
दूसरे दिन जब वो पहाड़ से उतरे थे, तो ऐसा हुआ कि एक बड़ी भीड़ उससे आ मिली।
38 ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.
और देखो एक आदमी ने भीड़ में से चिल्लाकर कहा, “ऐ उस्ताद! मैं तेरी मिन्नत करता हूँ कि मेरे बेटे पर नज़र कर; क्यूँकि वो मेरा इकलौता है।
39 ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.
और देखो, एक रूह उसे पकड़ लेती है, और वो यकायक चीख़ उठता है; और उसको ऐसा मरोड़ती है कि क़फ़ भर लाता है, और उसको कुचल कर मुश्किल से छोड़ती है।
40 ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.
मैंने तेरे शागिर्दों की मिन्नत की कि उसे निकाल दें, लेकिन वो न निकाल सके।”
41 ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.
ईसा ने जवाब में कहा, “ऐ कम ईमान वालों मैं कब तक तुम्हारे साथ रहूँगा और तुम्हारी बर्दाश्त करूँगा? अपने बेटे को ले आ।”
42 ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.
वो आता ही था कि बदरूह ने उसे पटक कर मरोड़ा और ईसा ने उस नापाक रूह को झिड़का और लड़के को अच्छा करके उसके बाप को दे दिया।
43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,
और सब लोग ख़ुदा की शान देखकर हैरान हुए। लेकिन जिस वक़्त सब लोग उन सब कामों पर जो वो करता था ता'ज्जुब कर रहे थे, उसने अपने शागिर्दों से कहा,
44 “ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.
“तुम्हारे कानों में ये बातें पड़ी रहें, क्यूँकि इब्न — ए — आदम आदमियों के हवाले किए जाने को है।”
45 ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.
लेकिन वो इस बात को समझते न थे, बल्कि ये उनसे छिपाई गई ताकि उसे मा'लूम न करें; और इस बात के बारे में उससे पूछते हुए डरते थे।
46 ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.
फिर उनमें ये बहस शुरू' हुई, कि हम में से बड़ा कौन है?
47 ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,
लेकिन ईसा ने उनके दिलों का ख़याल मा'लूम करके एक बच्चे को लिया, और अपने पास खड़ा करके उनसे कहा,
48 “ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.
“जो कोई इस बच्चे को मेरे नाम से क़ुबूल करता है, वो मुझे क़ुबूल करता है; और जो मुझे क़ुबूल करता है, वो मेरे भेजनेवाले को क़ुबूल करता है; क्यूँकि जो तुम में सब से छोटा है वही बड़ा है”
49 ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.
यूहन्ना ने जवाब में कहा, “ऐ उस्ताद! हम ने एक शख़्स को तेरे नाम से बदरूह निकालते देखा, और उसको मनह' करने लगे, क्यूँकि वो हमारे साथ तेरी पैरवी नहीं करता।”
50 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.
लेकिन ईसा ने उससे कहा, “उसे मनह' न करना, क्यूँकि जो तुम्हारे ख़िलाफ़ नहीं वो तुम्हारी तरफ़ है।”
51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು
जब वो दिन नज़दीक आए कि वो ऊपर उठाया जाए, तो ऐसा हुआ कि उसने येरूशलेम जाने को कमर बाँधी।
52 ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
और आगे क़ासिद भेजे, वो जाकर सामरियों के एक गाँव में दाख़िल हुए ताकि उसके लिए तैयारी करें
53 ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.
लेकिन उन्होंने उसको टिकने न दिया, क्यूँकि उसका रुख येरूशलेम की तरफ़ था।
54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.
ये देखकर उसके शागिर्द या'क़ूब और यूहन्ना ने कहा, “ऐ ख़ुदावन्द, क्या तू चाहता है कि हम हुक्म दें कि आसमान से आग नाज़िल होकर उन्हें भस्म कर दे [जैसा एलियाह ने किया]?”
55 ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
मगर उसने फिरकर उन्हें झिड़का [और कहा, तुम नहीं जानते कि तुम कैसी रूह के हो। क्यूँकि इब्न — ए — आदम लोगों की जान बरबाद करने नहीं बल्कि बचाने आया है]
56 ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.
फिर वो किसी और गाँव में चले गए।
57 ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.
जब वो राह में चले जाते थे तो किसी ने उससे कहा, “जहाँ कहीं तू जाए, मैं तेरे पीछे चलूँगा।”
58 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.
ईसा ने उससे कहा, “लोमड़ियों के भठ होते हैं और हवा के परिन्दों के घोंसले, मगर इब्न — ए — आदम के लिए सिर रखने की भी जगह नहीं।”
59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.
फिर उसने दूसरे से कहा, “मेरे पीछे हो ले।” उसने जवाब में कहा, “ऐ ख़ुदावन्द! मुझे इजाज़त दे कि पहले जाकर अपने बाप को दफ़्न करूँ।”
60 ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.
उसने उससे कहा, “मुर्दों को अपने मुर्दे दफ़्न करने दे, लेकिन तू जाकर ख़ुदा की बादशाही की ख़बर फैला।”
61 ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.
एक और ने भी कहा, “ऐ ख़ुदावन्द! मैं तेरे पीछे चलूँगा, लेकिन पहले मुझे इजाज़त दे कि अपने घर वालों से रुख़्सत हो आऊँ।”
62 ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.
ईसा ने उससे कहा, “जो कोई अपना हाथ हल पर रख कर पीछे देखता है वो ख़ुदा की बादशाही के लायक़ नहीं।”

< ಲೂಕನು 9 >