< ಅರಣ್ಯಕಾಂಡ 21 >

1 ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.
अरादाचा कनानी राजा नेगेबमध्ये राहत होता. इस्राएल लोक अथारीम वरून जात आहेत हे त्याने ऐकले. म्हणून राजा त्यांच्यावर हल्ला करण्यासाठी बाहेर पडला आणि त्याने त्यांच्यातील काही लोकांस कैद केले.
2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.
नंतर इस्राएल लोकांनी परमेश्वरास खास वचन दिले, परमेश्वरा या लोकांचा पराभव करायला आम्हास मदत कर. जर तू हे केले तर आम्ही तुला त्यांची शहरे देऊ. आम्ही त्यांचा संपूर्ण नाश करु.
3 ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
परमेश्वराने इस्राएल लोकांचे म्हणणे ऐकले आणि त्याने इस्राएल लोकांस कनानी लोकांचा पराभव करायला मदत केली. इस्राएल लोकांनी कनानी लोकांचा व त्यांच्या शहरांचा संपूर्ण नाश केला. म्हणून त्या प्रदेशाला हर्मा असे नाव पडले.
4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.
इस्राएल लोकांनी होर पर्वत सोडला व ते तांबड्या समुद्राकडे जाणाऱ्या रस्त्याला लागले. अदोम देशाला वळसा घालून जाण्यासाठी त्यांनी असे केले. परंतु लोक अधीर झाले.
5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
त्यांनी मोशेविरूद्ध व देवाविरूद्ध तक्रार करायला सुरुवात केली. लोक म्हणाले, तू आम्हास या रानात मरण्यासाठी मिसर देशातून बाहेर का आणलेस? इथे भाकरी नाही, पाणी नाही आणि या हलक्या अन्नाला आम्ही कंटाळलो आहोत.
6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.
तेव्हा परमेश्वराने लोकांमध्ये विषारी साप सोडले. साप लोकांस चावले आणि बरेच इस्राएल लोक मरण पावले.
7 ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.
लोक मोशेकडे आले आणि म्हणाले, आम्ही तुझ्याविरूद्ध आणि परमेश्वराविरूद्ध बोललो तेव्हा आम्ही पाप केले हे आम्हास माहीत आहे. तू परमेश्वराची प्रार्थना कर. हे साप आमच्या मधून काढून टाक. तेव्हा मोशेने लोकांसाठी परमेश्वराची प्रार्थना केली.
8 ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.
परमेश्वर मोशेला म्हणाला, एक पितळेचा साप कर आणि तो खांबावर ठेव. साप चावल्यानंतर जर एखाद्याने खांबावरच्या पितळेच्या सापाकडे पाहिले तर तो मनुष्य मरणार नाही.
9 ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.
मोशेने परमेश्वराची आज्ञा पाळली त्याने पितळेचा साप बनवला व तो खांबावर ठेवला. नंतर जेव्हा जेव्हा एखाद्या साप चावलेल्या मनुष्याने त्या खांबावरच्या पितळेच्या सापाकडे पाहिले तेव्हा तो जिवंत राहिला.
10 ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.
१०इस्राएल लोक तो प्रदेश सोडून ओबोथ येथे आले.
11 ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
११नंतर ओबोथ सोडून त्यांनी ईये-अबारीमाला मवाबाच्या पूर्वेकडे रानात तळ दिला.
12 ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು.
१२तो सोडून ते जेरेद खोऱ्यात आले व तिथे तळ दिला.
13 ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.
१३ते तेथूनही निघाले आणि आर्णोन नदीत्या पैलतीरावरच्या वाळवंटात त्यांनी तळ दिला. या नदीचा उगम आमोऱ्याच्या सरहद्दीवर आहे. या नदीचे खोरे हीच मवाब आणि अमोरी यांची सरहद्द होती.
14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್
१४म्हणून परमेश्वराचे युद्ध या पुस्तकात पुढील शब्द लिहिले आहेत, सुफातला वाहेब व आर्णोनाची खोरी,
15 ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”
१५त्या खोऱ्याची उतरण आर शहराकडे वळते, आणि मवाबाच्या सरहद्दीपर्यंत खाली जाते.
16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.
१६तेथपासून ते बैर येथे प्रवास करीत गेले. ज्या विहिरीविषयी परमेश्वराने मोशेला सांगितले होते तीच ही विहिर आहे, “माझ्यासाठी लोकांस एकत्र जमव म्हणजे मी त्यांना पाणी देईन.”
17 ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.
१७नंतर इस्राएली हे गाणे गाइलेः विहिर, उसळून ये. त्या संबंधी गाणे गा.
18 ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.
१८आमच्या सरदारांनी विहीर खणली, सरदारांनी ही विहीर खणली. त्यांच्या राजदंडानी व आपल्या काठ्यांनी विहीर खणली, मग त्यांनी अरण्यापासून ते मत्तानापर्यंत प्रवास केला.
19 ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.
१९लोक मत्तानाहून नाहालीयेलला गेले. नंतर ते नाहीलयेलासहून बामोथाला गेले.
20 ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.
२०लोक बामोथाहून मवाबाच्या खोऱ्यात गेले. या जागी पिसगा पर्वताच्या उंच माथा वाळवंटाकडे जातो. पिसगा पर्वताच्या उंच माथ्यावरुन वाळवंट दिसते.
21 ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
२१इस्राएल लोकांनी काही माणसे अमोऱ्याचा राजा सीहोन याच्याकडे पाठवली. ते राजास म्हणाले,
22 “ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.
२२“आम्हास तुमच्या देशातून जाण्याची परवानगी द्या. आम्ही कोणत्याही शेतातून वा द्राक्षाच्या मळयातून जाणार नाही. आम्ही तुमच्या कोणत्याही विहिरीचे पाणी पिणार नाही. आम्ही केवळ राजामार्गवरुनच जाऊ.”
23 ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.
२३पण सीहोन राजाने इस्राएल लोकांस त्याच्या देशातून जाण्याची परवानगी दिली नाही. राजाने आपले सैन्य गोळा केले आणि तो रानाकडे कूच करीत निघाला. तो इस्राएल लोकांबरोबर युद्ध करण्यासाठी निघाला होता. याहसला राजाच्या सैन्याने इस्राएल लोकांशी युद्ध केले.
24 ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.
२४पण इस्राएलानी त्याच्यावर तलवार चालविली. नंतर त्यांनी आर्णोन आणि यब्बोक नद्यांच्या मधला प्रदेश घेतला. त्यांनी अम्मोनी लोकांच्या सरहद्दीपर्यंतचा प्रदेश घेतला, ते त्या सरहद्दीवर थांबले कारण अम्मोनी लोक तिचे रक्षण करीत होते.
25 ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
२५इस्राएल लोकांनी सगळी अमोऱ्यांची शहरे घेतली आणि तिथे रहायला सुरुवात केली. त्यांनी हेशबोन शहराचा व आजूबाजूच्या लहान शहरांचाही पराभव केला.
26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.
२६हेशबोनामध्ये अमोऱ्यांचा राजा सीहोन राहत होता. पूर्वी सीहोनाने मवाबाच्या राजाशी युद्ध केले होते. सीहोनाने आर्णोन नदीपर्यंतचा प्रदेश घेतला होता.
27 ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.
२७यावरुन ते म्हणीमध्ये बोलतात; ते म्हणतात, हेशबोनाला या. पुन्हा सीहोनाचे शहर बांधू द्या, त्याची स्थापना होऊ द्या.
28 “ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
२८हेशबोनामधून आग निघाली आहे, ज्वाला सीहोनाच्या शहरातून निघाली आहे. त्या आगीत मवाबामधले आर शहर बेचीराख झाले. आणि आर्णोनेच्या गढ्याचे स्वामी भस्म करून टाकले आहेत.
29 ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.
२९हे मवाबा! तू हायहाय करशील, कमोशाचे लोक नष्ट झाले. त्याची मुले पळून गेली. त्याच्या मुलींना अमोऱ्याचा राजा सीहोन याने कैद करून पकडून नेले.
30 “ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”
३०पण आम्ही सीहोन जिंकले आहे. दीबोनापर्यंत हेशबोन सर्व नष्ट झाले आहे. आम्ही नोफा जे मेदबाजवळ पोहचते तेथपर्यंत त्यांचा सर्व पराभव केला आहे.
31 ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.
३१याप्रमाणे इस्राएल लोक अमोऱ्यांच्या देशात राहू लागले.
32 ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.
३२मग मोशेने याजेर शहर बघण्यासाठी काही लोकांस पाठवले. त्यांनी त्यातली गावे हस्तगत करून घेतली आणि जे अमोरी लोक तेथे होते त्यांना घालवून दिले.
33 ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
३३नंतर इस्राएल लोक बाशानाच्या रस्त्याला लागले. बाशानाचा राजा ओग याने त्याचे सैन्य घेतले व तो इस्राएल लोकांशी लढावयास निघाला. तो त्यांच्याबरोबर एद्रई येथे लढला.
34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.
३४तेव्हा परमेश्वर मोशेला म्हणाला, “त्याला भिऊ नकोस. कारण मी तुला त्याच्यावर, त्याच्या सर्व सैन्यावर आणि त्याच्या देशावर विजय दिला आहे. तू हेशबोनमध्ये राहणाऱ्या अमोऱ्यांचा राजा सीहोन ह्याचे जे केलेस तेच याचेही कर.”
35 ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.
३५तेव्हा त्यांनी त्याला, त्याच्या मुलांना आणि त्याच्या सर्व सैन्याला, इतके मारले की, त्याच्या लोकांपैकी कोणी जिवंत उरला नाही. मग त्यांनी त्यांचा सर्व प्रदेश घेतला.

< ಅರಣ್ಯಕಾಂಡ 21 >