< ಜ್ಞಾನೋಕ್ತಿಗಳು 11 >

1 ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.
यथार्थ नसलेल्या तराजूचा परमेश्वरास वीट आहे, पण तंतोतंत वजनात त्यास आनंद आहे.
2 ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.
जेव्हा गर्व येतो नंतर अप्रतिष्ठा येते, पण विनम्रते बरोबर ज्ञान येते.
3 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.
सरळांचा सात्विकपणा त्यांना मार्गदर्शन करतो, पण विश्वासघातक्यांचा वाकडा मार्ग त्यांचा नाश करतो.
4 ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.
क्रोधाच्या दिवशी संपत्ती निरुपयोगी आहे, परंतु नीतिमत्ता तुम्हास मरणापासून वाचवते.
5 ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.
निर्दोष व्यक्तीची सात्विक वागणूक त्याचे मार्ग सरळ करते, परंतु दुर्जन आपल्या दुष्टतेने पतन पावतो.
6 ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.
जे देवाला प्रसन्न करतात त्यांचा सात्विकपणा त्यांना सुरक्षित ठेविल, पण फसवणारा आपल्या दुष्कृतीनेच सापळ्यात अडकतो.
7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.
जेव्हा दुष्ट मनुष्य मरतो, त्याची आशा नष्ट होते; आणि त्याचा भरवसा त्याच्या शक्तीत होता तो निष्फळ होतो.
8 ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.
नीतिमान संकटापासून दूर राहतो; आणि त्याच्याऐवजी ती दुष्टांवर येतात.
9 ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.
अधर्मी आपल्या तोंडाने शेजाऱ्याचा नाश करतो, पण नीतिमान आपल्या ज्ञानाने सुरक्षित राहतो.
10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.
१०जेव्हा नीतिमानाची उन्नती होते तेव्हा नगर आनंदित होते; जेव्हा दुष्टांचा नाश होतो तेव्हा तेथे आनंदाचा जयघोष होतो.
11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.
११जो कोणी आपल्या चांगल्या दानांनी देवाला संतोषवितो, तेव्हा नगर मोठे होते; दुष्टांच्या तोंडामुळे नगर उद्ध्वस्त होते.
12 ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.
१२जो मनुष्य आपल्या मित्राला तुच्छ लेखतो तो बुद्धिहीन आहे, परंतु समजदार मनुष्य शांत राहतो.
13 ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.
१३जो कोणी निंदा करीत फिरतो तो गुप्त गोष्टी उघड करतो, परंतु जो विश्वासू व्यक्ती असतो तो त्यावर झाकण घालतो.
14 ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
१४जेथे कोठे शहाण्याचे मार्गदर्शन नसते, राष्ट्र पडते, पण पुष्कळ सल्लागार असल्याने विजय मिळतो.
15 ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.
१५जो कोणी अपरिचिताला जामीन राहील, त्याची खात्रीने हानी होईल, परंतु जो कोणी त्याप्रकारची शपथ देण्याचे वचन देतो, तो त्याचा द्वेष करतो, तो सुरक्षित राहतो.
16 ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.
१६कृपाळू स्त्रीस आदर मिळतो, परंतु निर्दयी लोक संपत्ती घट्ट पकडतात.
17 ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
१७दयाळू मनुष्य आपले हित करतो, पण जो क्रूर असतो तो स्वत: ला इजा करून घेतो.
18 ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.
१८दुष्ट मनुष्य त्याचे वेतन मिळविण्यासाठी लबाड बोलतो, परंतु जो नीतीने पेरतो त्याचे वेतन सत्याची कापणी असते.
19 ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.
१९जो प्रामाणिक व्यक्ती नीतीने राहतो त्यास जीवन मिळेल, पण जो दुष्कर्मामागे लागतो तो आपणावर मृत्त्यू आणतो.
20 ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.
२०जे मनाचे कुटिल असतात त्यांचा परमेश्वरास वीट आहे, पण ज्यांचे मार्ग निर्दोष आहेत त्यांच्याविषयी त्यास आनंद वाटतो.
21 ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.
२१दुष्टांना शासन झाल्यावाचून राहणार नाही याची खात्री बाळगा, परंतु नीतिमानांच्या वंशजांना सुरक्षित ठेवले जाईल.
22 ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.
२२डुकराच्या नाकात जशी सोन्याची नथ, तशी तारतम्य नसलेली सुंदर स्त्री समजावी.
23 ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.
२३जे चांगले करतात त्यांच्या इच्छेचे परिणाम चांगलेच असतात; पण दुष्टांची आशा फक्त क्रोधच असते.
24 ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.
२४तेथे कोणी एकजन बी पेरतो तो अधिक गोळा करतो; दुसरा पेरीत नाही तो दरिद्री होईल.
25 ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.
२५उदार मनाचा इसम समृद्ध होतो, आणि जो दुसऱ्याला पाणी पाजतो त्यास स्वतःला ते पाजण्यात येईल.
26 ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.
२६जो मनुष्य त्याचे धान्य विकायला नकार देतो त्यास लोक शाप देतात, पण जो ते विकतो त्याच्या मस्तकी चांगल्या दानाचा मुकुट प्राप्त होईल.
27 ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.
२७जो कोणी परिश्रमाने चांगल्याचा शोध घेतो तो अनुग्रहाचा शोध करतो, पण जो कोणी वाईटाचा शोध घेतो त्यास तेच प्राप्त होईल.
28 ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.
२८जो कोणी आपल्या श्रीमंतीवर विश्वास ठेवतो तो पडेल, परंतु नीतिमान पानाप्रमाणे झपाट्याने वाढेल.
29 ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.
२९जो कोणी आपल्या स्वतःच्या घरावर संकटे आणतो त्याचे वतन वारा होईल, आणि मूर्ख मनुष्य शहाण्याच्या हृदयाचा सेवक होईल.
30 ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.
३०नीतिमानाचे जीवन वृक्षासारखे आहे, पण हिंसाचार जीवन दूर नेतो.
31 ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.
३१जर नीतिमानाला त्याच्या लायकीप्रमाणे फळ मिळते; तर दुर्जनाला व पाप्याला किती अधिक मिळेल!

< ಜ್ಞಾನೋಕ್ತಿಗಳು 11 >