< ಜ್ಞಾನೋಕ್ತಿಗಳು 13 >

1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.
सुज्ञ मुलगा आपल्या पित्याचे शिक्षण ऐकतो, परंतु निंदक निषेध ऐकत नाही.
2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.
आपल्या तोंडच्या फळांनी मनुष्य चांगल्या गोष्टींचा आनंद घेतो, पण अविश्वासणाऱ्याची भूक जुलूम आहे.
3 ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.
जो आपले तोंड सांभाळतो तो आपल्या जीवाचे रक्षण करतो, परंतु जो आपले तोंड उघडतो तो स्वतःचा नाश करून घेतो.
4 ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.
आळशाची भूक हाव धरते पण त्यास काही मिळत नाही, पण उद्योग्याची भूक पूर्णपणे तृप्त होते.
5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.
नीतिमान लबाडीचा तिरस्कार करतो, पण दुर्जन जे लाजिरवाणे आहे ते करतो, आणि स्वतःला किळसवाणे करतो.
6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.
नीतिमत्ता सात्विक मार्गाने चालणाऱ्यांचे रक्षण करते, पण पाप्याला त्याचे पाप उलथून टाकते.
7 ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.
जो कोणी आपणाला संपन्न करतो, पण त्यांच्याजवळ मात्र काहीच नसते, आणि जो कोणी सर्वकाही देऊन टाकतो, खरोखर तो अजून श्रीमंत आहे.
8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.
श्रीमंत मनुष्यास जिवाची खंडणी त्याची संपत्ती आहे, पण गरीब मनुष्यास अशा प्रकारच्या धमक्या कधीच मिळत नाहीत.
9 ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.
नीतिमानाचा प्रकाश आनंदाने प्रकाशतो, पण दुष्टाचा दीप मालवला जाईल.
10 ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.
१०गर्वामुळे भांडण मात्र उत्पन्न होतात, पण जो चांगला सल्ला ऐकतो त्याच्याजवळ ज्ञान असते.
11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
११वाईट मार्गाने मिळवलेले धन कमी होत जाते, पण जो आपल्या हाताने काम करून पैसा कमावतो, त्याचा पैसा वाढत जातो.
12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.
१२जेव्हा आशा लांबणीवर पडते तेव्हा अंतःकरण तुटते, परंतु इच्छा पूर्ण होते तेव्हा ते जीवनाचे झाड आहे.
13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
१३जो कोणी शिक्षणाचा तिरस्कार करतो तो स्वतःवर अनर्थ आणतो, पण जो कोणी आज्ञेचा आदर करतो त्यास प्रतिफळ मिळेल.
14 ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.
१४सुज्ञाची शिकवण जीवनाचा झरा आहे, ते तुम्हास मृत्युपाशापासून दूर वळविल.
15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.
१५सुबोध अनुग्रह मिळवून देतो, पण विश्वासघातक्याचा मार्ग कधी न संपणारा आहे.
16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.
१६शहाणा मनुष्य कृती करण्याआधी विचार करतो. परंतु मूर्ख मनुष्य त्याच्या कृतीने तो मूर्ख आहे हे दर्शवितो.
17 ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.
१७दुष्ट निरोप्या संकटात पडतो, पण विश्वासू वकील समेट घडवून आणतो.
18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.
१८जर एखाद्याने शिकायला नकार दिला तर त्यास गरीबी आणि लाज प्राप्त होईल, पण जर एखादा त्याच्या शासनातून शिकला तर त्याचा सन्मान होईल.
19 ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.
१९इच्छातृप्ती जिवाला गोड लागते, पण वाईटापासून दूर होणे याचा मूर्खांना द्वेष वाटतो.
20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.
२०शहाण्या लोकांबरोबर चाला म्हणजे तुम्ही शहाणे व्हाल, पण जर तुम्ही मूर्खांशी संगत केली तर तुम्ही संकटात पडाल.
21 ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.
२१आपत्ती पाप्याच्या पाठीस लागते, पण जे कोणी चांगले करतो त्यास प्रतिफळ मिळते.
22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.
२२चांगला मनुष्य आपल्या नातवंडांना वतन देऊन ठेवतो, पण पाप्यांची संपत्ती नीतिमानासाठी साठवलेली असते.
23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.
२३गरीबांचे नांगरलेले शेत विपुल अन्न देते, पण अन्यायामुळे अनेकांचा नाश होतो.
24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
२४जर कोणी आपल्या मुलांना शिक्षा करत नाही तो त्यांचा द्वेष करतो, पण जो कोणी आपल्या मुलांवर प्रेम करतो तो काळजीपूर्वक त्यांना शिस्त लावतो.
25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.
२५जो चांगले करतो तो त्याची भूक तृप्त होईपर्यंत जेवतो, पण दुष्टांचे पोट रिकामेच राहते.

< ಜ್ಞಾನೋಕ್ತಿಗಳು 13 >