< ಜ್ಞಾನೋಕ್ತಿಗಳು 14 >

1 ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
सुज्ञ स्त्री आपले घर बांधते, पण मूर्ख स्त्री आपल्या स्वतःच्या हाताने ते खाली पाडते.
2 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.
जो सरळपणे चालतो तो परमेश्वराचे भय धरतो, पण जो कोणी आपल्या मार्गात अप्रामाणिक आहे तो त्यास तुच्छ मानतो.
3 ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.
मूर्खाच्या मुखातून त्याच्या गर्वाची काठी निघते, पण सुज्ञाची वाणी त्याची जोपासना करते.
4 ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ.
गुरेढोरे नसले तर गोठा स्वच्छ राहतो, पण बैलाच्या बलाने विपुल पिक येऊ शकते.
5 ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
विश्वासू साक्षीदार खोटे बोलत नाही, पण खोटा साक्षीदार मुखाने लबाड्या करतो.
6 ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.
निंदक ज्ञानाचा शोध करतो आणि काहीच मिळत नाही, पण जो कोणी बुद्धिमान आहे त्यास ज्ञान मिळवणे सोपे आहे.
7 ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ, ಅವನ ಬಳಿಯಿಂದ ಹೊರಟು ಹೋಗು.
मूर्ख मनुष्यापासून दूर जा, कारण त्याच्या वाणीत तुला काही ज्ञान सापडणार नाही.
8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.
शहाण्याने आपले मार्ग समजणे यामध्ये त्याची सुज्ञता आहे, परंतु मूर्खाचे मूर्खपण कपट आहे.
9 ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ.
मूर्खाला पापार्पणाचे अर्पण थट्टा वाटते, पण सरळांमध्ये परस्पर कृपा असते.
10 ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.
१०हृदयाला आपल्या स्वतःच्या खेदाची जाणीव असते, आणि त्याच्या आनंदात परक्याला भाग नाही.
11 ದುಷ್ಟರ ಮನೆಯು ನಾಶವಾಗುವುದು, ಆದರೆ ಯಥಾರ್ಥವಂತರ ಗುಡಾರವು ಏಳಿಗೆಯಾಗುವುದು.
११दुष्टाच्या घराचा नाश होईल, पण सरळांच्या तंबूची भरभराट होईल.
12 ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.
१२मनुष्यास एक मार्ग बरोबर आहे असे वाटते, पण त्याचा शेवट फक्त मरणाकडे नेतो.
13 ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು, ಅದರ ಉಲ್ಲಾಸದ ಅಂತ್ಯವು ಸಂತಾಪವೇ.
१३हृदय हसू शकते पण तरी त्यामध्ये वेदना असतात, आणि आनंदाचा शेवट शोकात होतो.
14 ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
१४जो कोणी अविश्वासू आहे त्यास त्याच्या वागणुकीचे फळ मिळेल, पण चांगल्या मनुष्यास जे काही त्याचे आहे तेच मिळेल.
15 ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
१५भोळा प्रत्येक गोष्टीवर विश्वास ठेवतो, पण शहाणा मनुष्य आपल्या पावलांविषयी विचार करतो.
16 ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.
१६शहाणा मनुष्य भय धरतो आणि वाईटापासून दूर राहतो, पण मूर्ख धिटाईने इशारा विचारात घेत नाही.
17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.
१७शीघ्रकोपी मूर्खासारख्या गोष्टी करतो, आणि जो वाईट योजना करतो त्या मनुष्याचा द्वेष होतो.
18 ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.
१८भोळ्यांना मूर्खपणाचे वतन मिळते, पण शहाणे ज्ञानाने वेढलेले असतात.
19 ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.
१९दुर्जन सज्जनापुढे नमतात, आणि नीतिमानाच्या दारापुढे दुष्ट नमतील.
20 ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು.
२०गरीब मनुष्याचे स्वतःचे सोबतीसुद्धा द्वेष करतात, पण श्रीमंताला खूप मित्र असतात.
21 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.
२१जो कोणी आपल्या शेजाऱ्याचा तिरस्कार करतो तो पापी आहे, परंतु जो कोणी गरीबावर दया दाखवतो तो आनंदी आहे.
22 ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.
२२जो दुष्ट योजना आखतो तो चुकीच्या मार्गाने जात नाही का? पण जो कोणी चांगले करण्याची योजना करतो, तो कराराचा विश्वास आणि विश्वसनियता स्वीकारतो.
23 ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.
२३सर्व कष्टात फायदा आहे, पण जेव्हा तेथे फक्त बोलतच राहिलात, ते दारिद्र्याकडे घेऊन जाईल.
24 ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.
२४शहाण्याची संपत्ती त्याचा मुकुट आहे, पण मूर्खांची मूर्खता केवळ मूर्खताच आणते.
25 ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ, ಸುಳ್ಳುಸಾಕ್ಷಿಯು ಮೋಸಗಾರನು.
२५खरा साक्षी जीव वाचवतो, पण खोटा साक्षीदार लबाड्या करतो तो दगलबाज आहे.
26 ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.
२६परमेश्वराच्या भयात दृढ विश्वास आहे, आणि त्याच्या मुलांसाठी ती आश्रयस्थान आहेत.
27 ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.
२७परमेश्वराचे भय जीवनाचा झरा आहे, याकरिता त्यांनी मरणाच्या जाळ्यापासून दूर रहावे.
28 ಜನಸಮೂಹದಲ್ಲಿ ಅರಸನ ಘನತೆ ಇದೆ. ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
२८प्रजावृद्धित राजाचे गौरव सापडते, पण प्रजेशिवाय राजपुत्राचा नाश आहे.
29 ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.
२९सहनशील मनुष्य खूप समजदार असतो, पण शीघ्रकोपी मूर्खता उंचावतो.
30 ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.
३०शांत अंतःकरण देहाचे जीवन आहे, पण मत्सराने हाडे कुजतात.
31 ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.
३१जो मनुष्य गरीबांवर जुलूम करतो तो त्याच्या निर्माणकर्त्याला शाप देतो, परंतु जो गरजवंतावर दया करतो तो त्याचा सन्मान करतो.
32 ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.
३२दुष्ट आपल्या वाईट कृतीने खाली आणला जातो, पण नीतिमानाला मरणाच्या वेळेसही आश्रय मिळतो.
33 ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.
३३बुद्धिमानाच्या अंतःकरणात ज्ञान स्थिर असते, पण मूर्खाच्या अंतर्यामात जे असते ते कळून येते.
34 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.
३४योग्य ते केल्याने राष्ट्राची उन्नती होते, पण पाप लोकांस कलंक आहे.
35 ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.
३५शहाणपणाने वागणाऱ्या सेवकावर राजाची मर्जी असते, पण जो लज्जास्पद कृत्य करतो त्याच्यासाठी त्याचा राग आहे.

< ಜ್ಞಾನೋಕ್ತಿಗಳು 14 >