< ಜ್ಞಾನೋಕ್ತಿಗಳು 18 >

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.
जो कोणी आपणास वेगळा करतो तो स्वतःची इच्छा पूर्ण करायला पाहतो; आणि तो सर्व स्वस्थ सुज्ञतेविरूद्ध लढतो.
2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.
मूर्खाला समंजसपणात आनंद मिळत नाही, पण केवळ आपल्या मनात काय आहे हे प्रगट करण्यात त्यास आनंद आहे.
3 ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
जेव्हा वाईट मनुष्य येतो, त्याच्याबरोबर तिरस्कार येतो, निर्भत्सना आणि लाज त्यासह येतात.
4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
मनुष्याच्या मुखाचे शब्द खोल पाण्यासारखे आहेत; ज्ञानाचा झरा वाहणाऱ्या प्रवाहासारखे आहेत.
5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.
जे कोणी चांगले करतात त्यांचा न्याय विपरित करण्यासाठी, दुष्टाचा पक्ष धरणे चांगले नाही.
6 ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
मूर्खाचे ओठ त्यास भांडणात पाडतात, आणि त्याचे मुख मारास आमंत्रण देते.
7 ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.
मूर्खाचा नाश त्याच्या तोंडामुळे होतो, आणि त्याचे ओठ त्यास स्वतःला पाश होतात.
8 ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.
गप्पागोष्टी करणाऱ्याचे शब्द स्वादिष्ट पक्वान्नासारखे आहेत, आणि ते अगदी खोल पोटात शिरतात.
9 ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.
जो कोणी आपल्या कामात निष्काळजी आहे तो नाश करणाऱ्याचा भाऊ आहे.
10 ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.
१०परमेश्वराचे नाव बळकट बुरुजाप्रमाणे आहे; नीतिमान त्यामध्ये धावत जातो आणि सुरक्षित राहतो.
11 ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
११श्रीमंताची संपत्ती त्याचे बळकट नगर आहे; आणि त्याच्या कल्पनेने तो उंच भींतीसारखा आहे.
12 ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
१२मनुष्याच्या नाशापूर्वी त्याचे अंतःकरण गर्विष्ठ असते, पण गौरवापूर्वी विनम्रता येते.
13 ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.
१३जो कोणी ऐकण्यापूर्वी उत्तर देतो, त्याचे ते करणे मूर्खपणाचे आणि लज्जास्पद असते.
14 ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
१४आजारपणात मनुष्याचा आत्मा जिवंत राहतो, पण तुटलेला आत्मा कोणाच्याने सोसवेल?
15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.
१५सुज्ञाचे मन ज्ञान प्राप्त करून घेते, आणि शहाणा ऐकून ते शोधून काढतो.
16 ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.
१६मनुष्याचे दान त्याच्यासाठी मार्ग उघडते, आणि महत्वाच्या मनुष्यांसमोर त्यास आणते.
17 ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.
१७जो सुरुवातीला आपली बाजू मांडतो तो बरोबर आहे असे वाटते, पण त्याचा प्रतिस्पर्धी येऊन त्यास प्रश्र विचारतो.
18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.
१८चिठ्ठ्या टाकल्याने भांडणे मिटतात, आणि बलवान प्रतिस्पर्धी वेगळे होतात.
19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.
१९दुखवलेल्या भावाची समजूत घालणे हे बळकट तटबंदी असलेले शहर जिंकण्यापेक्षा कठीण आहे. आणि भांडणे राजवाड्याच्या अडसरासारखे आहेत.
20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.
२०मनुष्याचे पोट त्याच्या मुखाच्या फळाने भरेल, तो आपल्या ओठांच्या पीकाने तृप्त होईल.
21 ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
२१जीवन किंवा मरण ही जीभेच्या अधिकारात आहेत; आणि ज्या कोणाला ती प्रिय आहे तो तिचे फळ खातो.
22 ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
२२ज्या कोणाला पत्नी मिळते त्यास चांगली वस्तू मिळते, आणि त्यास परमेश्वराचा अनुग्रह प्राप्त होतो.
23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.
२३गरीब मनुष्य दयेची विनवणी करतो, पण श्रीमंत मनुष्य कठोरपणाने उत्तर देतो.
24 ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
२४जो कोणी पुष्कळ मित्र करतो तो आपल्याच नाशासाठी ते करतो, परंतु एखादा असा मित्र असतो की तो आपल्या भावापेक्षाही आपणांस धरून राहतो.

< ಜ್ಞಾನೋಕ್ತಿಗಳು 18 >