< ಜ್ಞಾನೋಕ್ತಿಗಳು 21 >

1 ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
राजाचे मन पाण्याच्या प्रवाहासारखे परमेश्वराच्या हातात आहे; तो त्यास वाटेल तेथे वळवतो.
2 ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.
प्रत्येक मनुष्याचे मार्ग त्याच्या दृष्टीने योग्य असतात, परंतु परमेश्वर अंतःकरणे तोलून पाहतो.
3 ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.
योग्य व न्याय करणे हे यज्ञापेक्षा परमेश्वरास अधिक मान्य आहेत.
4 ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.
घमेंडखोर दृष्टी व गर्विष्ठ मन दुर्जनांच्या शेतातील उपज हे पाप उत्पन्न करतात.
5 ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; ಆತುರತೆಯು ಬಡತನಕ್ಕೆ ನಡೆಸುತ್ತದೆ.
परीश्रमपूर्वक केलेल्या योजनांमुळे भरभराट होते, परंतु जो घाईघाईने कृती करतो तो केवळ दरिद्री होतो.
6 ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.
लबाड जिव्हेने मिळवलेली संपत्ती ही वाफेसारखी क्षणभंगुर आहे ती मरण शोधते.
7 ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.
दुष्टांचा बलात्कार त्यांना झाडून टाकील, कारण ते न्याय करण्याचे नाकारतात.
8 ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.
अपराधी मनुष्याचा मार्ग वाकडा असतो, पण जो शुद्ध आहे तो योग्य करतो.
9 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
भांडखोर पत्नीबरोबर मोठ्या घरात राहाण्यापेक्षा, धाब्याच्या कोपऱ्यात राहणे अधिक चांगले.
10 ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.
१०दुष्टाचा जीव वाईटाची हाव धरतो; त्याच्या शेजाऱ्याला तो दया दाखवत नाही.
11 ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ.
११जेव्हा निंदकास शासन होते तेव्हा अज्ञानी शहाणे होतात; आणि जेव्हा सुज्ञास शिक्षण मिळते तेव्हा त्याच्या ज्ञानात वाढ होते.
12 ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.
१२नीतिमान दुष्टाच्या घराकडे लक्ष लावतो, तो दुष्टांचा नाश करण्यासाठी त्यांना उलथून टाकतो.
13 ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.
१३जो कोणी गरिबाची आरोळी ऐकत नाही, तोही आरोळी करील, पण कोणी ऐकणार नाही.
14 ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.
१४गुप्तपणे दिलेली देणगी राग शांत करते, आणि दडवलेली देणगी तीव्र कोप दूर करते.
15 ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ.
१५योग्य न्यायाने नीतिमानाला आनंद होतो. पण तोच दुष्कर्म करणाऱ्यांवर फार मोठी भीती आणतो.
16 ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.
१६जो कोणी ज्ञानाच्या मार्गापासून भटकतो, त्यास मरण पावलेल्यांच्या मंडळीत विसावा मिळेल.
17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು.
१७ज्याला ख्यालीखुशाली प्रिय आहे तो दरिद्री होतो; ज्याला द्राक्षरस आणि तेल प्रिय आहे तो श्रीमंत होणार नाही.
18 ದುಷ್ಟರು ನೀತಿವಂತರಿಗೂ, ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ.
१८जो कोणी चांगले करतो त्याची खंडणी दुर्जन आहे, आणि सरळांचा मोबदला विश्वासघातकी असतो.
19 ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.
१९भांडखोर आणि खूप तक्रार करून अशांती निर्माण करणाऱ्या पत्नीबरोबर राहाण्यापेक्षा वाळवंटात राहाणे अधिक चांगले.
20 ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.
२०सुज्ञाच्या घरात मोलवान खजिना आणि तेल आहेत, पण मूर्ख मनुष्य ते वाया घालवतो.
21 ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.
२१जो कोणी नीतिमत्ता आणि दया करतो, त्यास आयुष्य, उन्नती आणि मान मिळेल.
22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.
२२सुज्ञ मनुष्य बलवानांच्या नगराविरूद्ध चढतो, आणि तो त्यांच्या संरक्षणाचा आश्रयदुर्ग पाडून टाकतो.
23 ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
२३जो कोणी आपले तोंड व जीभ सांभाळतो, तो संकटापासून आपला जीव वाचवतो.
24 ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.
२४गर्विष्ठ व घमेंडखोर मनुष्यास उद्दाम असे नाव आहे. तो गर्वाने उद्धट कृती करतो.
25 ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.
२५आळशाची वासना त्यास मारून टाकते; त्याचे हात काम करण्यास नकार देतात.
26 ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
२६तो सर्व दिवस हाव आणि अधिक हाव धरतो, परंतु नीतिमान देतो आणि मागे धरून ठेवत नाही.
27 ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.
२७दुर्जनांचे यज्ञार्पण वीट आणणारे असते, तर मग तो यज्ञ दुष्ट हेतूने आणतो ते किती अधिक वीट असे आहे.
28 ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.
२८खोटा साक्षीदार नाश पावेल, पण जो कोणी ऐकतो त्याप्रमाणे सर्व वेळ तसे बोलतो.
29 ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.
२९दुष्ट मनुष्य आपले मुख धीट करतो, पण सरळ मनुष्य आपल्या मार्गाचा नीट विचार करतो.
30 ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.
३०परमेश्वराविरूद्ध शहाणपण, बुद्धि किंवा युक्ती ही मुळीच उभी राहू शकत नाहीत.
31 ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.
३१लढाईच्या दिवसासाठी घोडा तयार करतात, पण तारण परमेश्वराकडून आहे.

< ಜ್ಞಾನೋಕ್ತಿಗಳು 21 >