< ಕೀರ್ತನೆಗಳು 37 >

1 ದಾವೀದನ ಕೀರ್ತನೆ. ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.
दाविदाचे स्तोत्र. दुष्टकृत्ये करणाऱ्यांवर चिडू नकोस, जे अनीतीने वागतात त्यांचा हेवा करू नकोस.
2 ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
कारण ते लवकरच गवतासारखे वाळून जातील; व हिरव्या वनस्पतीसारखे सुकून जातील.
3 ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.
परमेश्वरावर विश्वास ठेव आणि जे चांगले आहे ते कर; देशात स्थिर हो आणि विश्वासूपणाने आपला व्यवसाय कर.
4 ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.
परमेश्वरामध्ये आनंद कर, आणि तो तुला तुझ्या हृदयाच्या इच्छेप्रमाणे देईल.
5 ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:
तू आपला मार्ग परमेश्वरावर सोपवून दे, त्याच्यावर विश्वास ठेव आणि तो तुझ्याकडून कृती करील.
6 ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.
तो तुझे न्यायीपण प्रकाशासारखे आणि तुझा निष्पापपणा मध्यान्हाप्रमाणे दाखवील.
7 ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.
परमेश्वरासमोर स्तब्ध राहा आणि धीराने त्याची वाट पाहा. जर मनुष्य दुष्ट योजना आखतो, कोणी आपले वाईट मार्ग सिद्धीस नेतो, तर काळजी करू नको.
8 ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.
रागावू नकोस, संताप करून घेऊ नकोस. त्याने फक्त त्रास होतो.
9 ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.
कारण दुष्टकृत्ये करणारे नाश पावतील, परंतु जे परमेश्वराची वाट पाहतात त्यांना देशाचे वतन मिळेल.
10 ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.
१०थोड्याच काळात दुष्ट नाहीसे होतील; तू त्यांच्या ठिकाणाकडे बघशील, परंतु ते सापडणार नाहीस.
11 ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.
११परंतु नम्र पृथ्वीचे वतन मिळवतील, आणि मोठ्या समृद्धित ते हर्ष करतील.
12 ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.
१२दुष्ट मनुष्य नितीमानाच्या विरोधात योजना आखतो, आणि त्याच्याविरुध्द आपले दातओठ खातो.
13 ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.
१३प्रभू त्यास हसत आहे, कारण त्याचा दिवस येत आहे, हे तो पाहत आहे.
14 ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.
१४जे पीडलेले आणि गरजवंत आणि जे सरळ आहेत, त्यांना ठार मारण्यास दुष्टांनी आपली तलवार उपसली आहे आणि आपले धनुष्य वाकविले आहेत.
15 ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.
१५परंतु त्यांचे धनुष्य मोडले जातील व त्यांच्या तलवारी त्यांच्याच हृदयास छेदतील.
16 ದುಷ್ಟರ ಐಶ್ವರ್ಯಕ್ಕಿಂತ ನೀತಿವಂತರ ಅಲ್ಪವೇ ಲೇಸು.
१६अनेक दुष्ट लोकांच्या विपुलतेपेक्षा, नितीमानाकडे जे थोडे ते उत्तम आहे.
17 ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.
१७कारण दुष्ट लोकांचे बाहू मोडले जातील परंतु परमेश्वर नितीमानांना आधार देईल.
18 ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.
१८परमेश्वर निर्दोषास दिवसेन दिवस बघतो, आणि त्यांचे वतन सदैव राहील.
19 ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.
१९वाईट समयी ते लज्जीत होणार नाहीत. जेव्हा दुष्काळ येईल तेव्हा त्यांच्याकडे खाण्यास पुरेसे असेल.
20 ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.
२०परंतु दुष्ट मनुष्य नाश पावतील, परमेश्वराचे शत्रू कुरणाच्या शोभेसारखे होतील; ते नाश होतील आणि धुरामध्ये नाहीसे होतील.
21 ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.
२१दुष्ट पैसे उसने घेतो परंतु त्याची परत फेड करत नाही. परंतु नितीमान मनुष्य उदारतेने देतो.
22 ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.
२२जे देवाकडून आशीर्वादित झालेले आहेत, ते भूमीचे वतन पावतील; आणि जे त्याच्याकडून शापित आहेत, ते छेदून टाकले जातील.
23 ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.
२३मनुष्याची पावले परमेश्वराकडून स्थिर केली जातात, असा मनुष्य ज्याचे मार्ग देवाच्या दृष्टीने प्रशंसनीय असतात.
24 ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.
२४जरी तो अडखळला, तरी तो खाली पडणार नाही. कारण परमेश्वर त्यास आपल्या हाताने सावरील.
25 ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.
२५मी तरुण होतो आणि आता म्हातारा झालो आहे; तरी नितीमान टाकलेला किंवा त्याच्या मुलांस भाकरी मागताना मी पाहिले नाही.
26 ಅವರು ಯಾವಾಗಲೂ ಧಾರಾಳವಾಗಿ ಸಾಲ ಕೊಡುತ್ತಾರೆ; ನೀತಿವಂತನ ಸಂತತಿಯವರು ಆಶೀರ್ವಾದ ಹೊಂದುವರು.
२६सारा दिवस तो दयाळूपणाने वागतो आणि उसने देतो, त्याची संतती आशीर्वादित असते.
27 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು, ಆಗ ಯುಗಯುಗಕ್ಕೂ ನಾಡಿನಲ್ಲಿ ವಾಸಮಾಡುವೆ.
२७वाईटापासून फिर आणि चांगले ते कर. तेव्हा तू सर्वकाळासाठी वाचवला जाशील.
28 ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.
२८कारण परमेश्वरास न्याय प्रिय आहे आणि तो विश्वासाने त्याच्यामागे चालणाऱ्यांस सोडत नाही. ते सर्वकाळासाठी राखून ठेवलेले आहेत. परंतु दुष्टाचे वंशज छेदले जातील.
29 ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
२९नितीमान तर पृथ्वीचे वतन पावतील आणि सर्वकाळ त्यामध्ये वस्ती करतील.
30 ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.
३०नितीमान मनुष्याचे मुख ज्ञान बोलते, आणि न्याय वाढवते.
31 ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.
३१त्याच्या हृदयात त्याच्या देवाचे नियमशास्त्र असते, त्याचे पाय कधी घसरणार नाहीत.
32 ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ.
३२परंतु दुष्ट मनुष्य हा नितीमान मनुष्यास बघतो, आणि त्यास मारण्याच्या शोधात असतो.
33 ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.
३३परंतु परमेश्वर त्यांना दुष्ट मनुष्याच्या हातात त्यागणार नाही. किंवा जेव्हा त्याचा न्याय होईल तेव्हा त्यास अपराधी ठरवणार नाही.
34 ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.
३४परमेश्वराची वाट पाहा आणि त्याचे मार्ग पाळ. आणि तो तुला वर उचलणार म्हणजे तुला भूमी मिळेल. जेव्हा दुष्ट छेदला जाणार तेव्हा तू पाहशील.
35 ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.
३५मी विस्तारलेल्या आणि सशक्त झाडासारखा एक दुष्ट मनुष्य पाहिला. जो आपले मूळ जमिनीत पसरवतो.
36 ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.
३६परंतु जेव्हा मी त्याच्यापासून पुन्हा गेलो, तर तो तेथे नव्हता. मी त्यास शोधले पण तो मला सापडला नाही.
37 ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.
३७प्रमाणिक माणसाकडे लक्ष लाव आणि सरळास निशाणी लाव. कारण शांततेत राहण्याऱ्या मनुष्याचे भविष्य चांगले असते.
38 ಆದರೆ ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರಿಗೆ ಒಳ್ಳೆಯ ಭವಿಷ್ಯವಿಲ್ಲ.
३८पापी तर पूर्णपणे नाश पावतील, परंतू दुष्टाचा भावीकाळ छेदून टाकला जाईल.
39 ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.
३९नितीमानाचे तारण हे परमेश्वराकडून येते, संकटसमयी तो त्यांचे रक्षण करीन.
40 ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.
४०परमेश्वर त्यांना मदत करील आणि त्यांना तारील, तो त्यांचा वाईट लोकांपासून बचाव करतो, कारण त्यांनी परमेश्वराच्याठायी आश्रय घेतला आहे.

< ಕೀರ್ತನೆಗಳು 37 >