< ಜೆಕರ್ಯನು 1 >

1 ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
पारसाचा राजा दारयावेश याच्या कारकिर्दीच्या दुसऱ्या वर्षाच्या आठव्या महिन्यात, जखऱ्या, जो बरेख्याचा मुलगा, जो इद्दोचा मुलगा, त्यास परमेश्वराकडून वचन प्राप्त झाले ते असे,
2 “ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ.
परमेश्वर तुमच्या पूर्वजांवर फार रागावला होता.
3 ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
तर त्यांना असे सांग, सैन्यांचा परमेश्वर असे म्हणतो: “तुम्ही माझ्याकडे फिरा!” हे सैन्यांच्या परमेश्वराचे वचन आहे; “म्हणजे मी तुमच्याकडे फिरेन.” असे सेनाधीश परमेश्वर म्हणतो.
4 ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.
संदेष्टे तुमच्या पूर्वजांना पूर्वी संदेश देत म्हणाले, “सैन्याचा देव असे म्हणतो: आपल्या दुष्ट मार्गांपासून आणि वाईट चालीरितींपासून वळा!” परंतु त्यांनी ऐकले नाही आणि माझ्याकडे लक्ष दिले नाही. त्या पूर्वजांसारखे होऊ नका. ही परमेश्वराची वाणी होय.
5 ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
“तुमचे पूर्वज, कोठे आहेत? आणि संदेष्टे देखील सर्वकाळाकरता येथे राहतील काय?
6 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”
परंतु मी माझ्या ज्या वचनांनी आणि माझ्या ज्या नियमांनी माझे दास, जे माझे संदेष्टे त्यांना आज्ञापिले, ती तुमच्या पूर्वजांवर आली नाहीत काय?” तेव्हा त्यांनी पश्चाताप केला व म्हणाले, “सेनाधीश परमेश्वराच्या योजना या त्याचे वचन आणि त्याची कामे यांच्यानुसार आहेत, त्या त्याने पूर्णतेस नेल्या आहेत.”
7 ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
दारयावेश ह्याच्या कारकिर्दीच्या दुसऱ्या वर्षाच्या अकराव्या म्हणजे शबाट महिन्याच्या चोविसाव्या दिवशी जखऱ्या, जो बरेख्याचा मुलगा, जो इद्दोचा मुलगा याला, परमेश्वराचा संदेश प्राप्त झाला तो असा:
8 ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.
“रात्र असतांना मला दृष्टांतात दिसले ते असे: तांबड्या घोड्यावर आरुढ झालेला एक मनुष्य मी पाहिला आणि तो दरीतल्या मेंदीच्या झुडुपांमध्ये उभा होता. त्याच्यामागे तांबड्या, तपकिरी आणि पांढऱ्या रंगाचे घोडे होते.”
9 ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.
मी विचारले, “प्रभू, हे कोण आहेत?” तेव्हा माझ्याशी बोलत असलेला देवदूत मला म्हणाला, “हे कोण आहेत ते मी तुला दाखवतो.”
10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು.
१०मग मेंदीच्या झुडुपांमध्ये उभा असलेल्या मनुष्याने उत्तर दिले व म्हणाला, “पृथ्वीवर इकडे तिकडे संचार करायला परमेश्वराने हे पाठवले आहेत.”
11 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, “ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ,” ಎಂದನು.
११नंतर त्यांनी मेंदीच्या झुडुपांत उभ्या असलेल्या परमेश्वराच्या दिव्यदूताला उत्तर दिले व ते म्हणाले, “आम्ही पृथ्वीवर इकडे तिकडे फिरलो आणि पाहा संपूर्ण पृथ्वी शांत व विसावली आहे.”
12 ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.
१२मग परमेश्वराच्या दिव्यदूताने उत्तर देऊन म्हटले, “हे सेनाधीश परमेश्वरा, या सत्तर वर्षांपासून यरूशलेमेचे आणि यहूदातील नगरांनी जो क्रोध सहन केला आहे त्याविषयी आणखी किती काळ तू करूणा करणार नाहीस?”
13 ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.
१३माझ्याशी बोलत असलेल्या परमेश्वराच्या देवदूताला परमेश्वर चांगल्या शब्दांत व सांत्वन देणाऱ्या शब्दांत बोलला.
14 ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.
१४मग माझ्याशी बोलणाऱ्या परमेश्वराचा दूत मला म्हणाला, “घोषणा करून सांग की, ‘सेनाधीश परमेश्वर असे म्हणतो: “मी यरूशलेम व सियोन यांच्यासाठी अती ईर्षावान असा झालो आहे!
15 ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.
१५आणि स्वस्थ बसलेल्या राष्ट्रांवर माझा राग पेटला आहे; कारण मी तर थोडासाच रागावलो होतो, पण या राष्ट्रांनी त्यांच्या दुःखात आणखी भर घालण्याची मदत केली.”
16 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
१६म्हणून परमेश्वर असे म्हणतो, “मी यरूशलेमेकडे करुणामय होऊन परत फिरलो आहे. माझे निवासस्थान तिच्यात पुन्हा बांधले जाईल.” सेनाधीश परमेश्वर म्हणतो, “मापनसूत्र यरूशलेमेवर लावण्यात येईल.”
17 “ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”
१७पुन्हा पुकार आणि असे सांग, “सेनाधीश परमेश्वर म्हणतो: ‘माझी नगरे पुन्हा एकदा चांगूलपणाने भरभरून वाहतील, परमेश्वर पुन्हा सियोनचे सांत्वन करील, आणि तो पुन्हा एकदा यरूशलेमची निवड करील.”
18 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು.
१८मग मी माझे डोळे वर करून पाहिले आणि मला चार शिंगे दिसली!
19 ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.
१९माझ्याशी बोलत असलेल्या देवदूताला मी म्हणालो, “ही काय आहेत?” त्याने मला उत्तर दिले, “इस्राएल, यहूदा व यरूशलेम यांना ज्या शिंगांनी विखरले ती ही आहेत.”
20 ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು.
२०मग परमेश्वराने मला चार लोहार दाखवले.
21 ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.
२१मी विचारले, “हे लोक येथे काय करण्यासाठी आहेत?” त्याने उत्तर दिले आणि म्हणाला, “ज्या शिंगांनी यहूदाच्या लोकांस विखरले आणि कोणाही मनुष्यांस डोके वर करू दिले नाही. परंतू त्या शिगांना घालवून देण्यासाठी ते आले आहेत, ती शिंगे म्हणजे यहूदाच्या लोकांवर हल्ला करून त्यांना परागंदा करणाऱ्या राष्ट्रांची शिंगे होत.”

< ಜೆಕರ್ಯನು 1 >