< 누가복음 9 >

1 예수께서 열 두 제자를 불러 모으사 모든 귀신을 제어하며 병을 고치는 능력과 권세를 주시고
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,
2 하나님의 나라를 전파하며 앓는 자를 고치게 하려고 내어 보내시며
ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.
3 이르시되 `여행을 위하여 아무것도 가지지 말라 지팡이나 주머니나 양식이나 돈이나 두벌 옷을 가지지 말며
ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
4 어느 집에 들어가든지 거기서 유하다가 거기서 떠나라
ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
5 누구든지 너희를 영접지 아니하거든 그 성에서 떠날 때에 너희 발에서 먼지를 떨어 버려 저희에게 증거를 삼으라' 하시니
ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.
6 제자들이 나가 각 촌에 두루 행하여 처처에 복음을 전하며 병을 고치더라
ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.
7 분봉왕 헤롯이 이 모든 일을 듣고 심히 당황하여 하니 이는 혹은 요한이 죽은 자 가운데서 살아났다고도 하며
ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.
8 혹은 엘리야가 나타났다고도 하며 혹은 옛 선지자 하나가 다시 살아났다고도 함이라
ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.
9 헤롯이 가로되 `요한은 내가 목을 베었거늘 이제 이런 일이 들리니 이 사람이 누군고' 하며 저를 보고자 하더라
ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.
10 사도들이 돌아와 자기들의 모든 행한 것을 예수께 고한대 데리시고 따로 벳새다라는 고을로 떠나 가셨으나
ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.
11 무리가 알고 따라왔거늘 예수께서 저희를 영접하사 하나님 나라의 일을 이야기하시며 병 고칠 자들은 고치시더라
ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.
12 날이 저물어 가매 열 두 사도가 나아와 여짜오되 `무리를 보내어 두루 마을과 촌으로 가서 유하며 먹을 것을 얻게 하소서 우리 있는 여기가 빈 들이니이다'
ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.
13 예수께서 이르시되 너희가 먹을 것을 주어라 하시니 여짜오되 우리에게 떡 다섯 개와 물고기 두 마리 밖에 없으니 이 모든 사람을 위하여 먹을 것을 사지 아니하고는 할 수 없삽나이다 하였으니
ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.
14 이는 남자가 한 오천 명 됨이러라 제자들에게 이르시되 떼를 지어 한 오십 명씩 앉히라 하시니
ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.
15 제자들이 이렇게 하여 다 앉힌 후
ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.
16 예수께서 떡 다섯 개와 물고기 두 마리를 가지사 하늘을 우러러 축사 하시고 떼어 제자들에게 주어 무리 앞에 놓게 하시니
ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.
17 먹고 다 배불렀더라 그 남은 조각 열 두 바구니를 거두니라
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
18 예수께서 따로 기도하실 때에 제자들이 주와 함께 있더니 물어 가라사대 `무리가 나를 누구라고 하느냐?'
ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.
19 대답하여 가로되 `세례 요한이라 하고 더러는 엘리야라 더러는 옛 선지자 중의 하나가 살아났다 하나이다'
ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.
20 예수께서 이르시되 `너희는 나를 누구라 하느냐?' 베드로가 대답하여 가로되 `하나님의 그리스도시니이다' 하니
ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.
21 경계하사 `이 말을 아무에게도 이르지 말라' 명하시고
ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.
22 가라사대 `인자가 많은 고난을 받고 장로들과 대제사장들과 서기관들에게 버린 바 되어 죽임을 당하고 제 삼일에 살아나야 하리라 하시고
ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.
23 또 무리에게 이르시되 아무든지 나를 따라 오려거든 자기를 부인하고 날마다 제 십자가를 지고 나를 좇을 것이니라
ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24 누구든지 제 목숨을 구원코자 하면 잃을 것이요 누구든지 나를 위하여 제 목숨을 잃으면 구원하리라
ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
25 사람이 만일 온 천하를 얻고도 자기를 잃든지 빼앗기든지 하면 무엇이 유익하리요
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?
26 누구든지 나와 내 말을 부끄러워하면 인자도 자기와 아버지와 거룩한 천사들의 영광으로 올 때에 그 사람을 부끄러워하리라
ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.
27 내가 참으로 너희에게 이르노니 여기 섰는 사람 중에 죽기 전에 하나님의 나라를 볼 자들도 있느니라'
“ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
28 이 말씀을 하신 후 팔 일쯤되어 예수께서 베드로와 요한과 야고보를 데리시고 기도하시러 산에 올라가사
ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.
29 기도하실 때에 용모가 변화되고 그 옷이 희어져 광채가 나더라
ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.
30 문득 두 사람이 예수와 함께 말하니 이는 모세와 엘리야라
ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
31 영광 중에 나타나서 장차 예수께서 예루살렘에서 별세하실 것을 말씀할새
ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 베드로와 및 함께 있는 자들이 곤하여 졸다가 아주 깨어 예수의 영광과 및 함께 선 두 사람을 보더니
ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.
33 두 사람이 떠날 때에 베드로가 예수께 여짜오되 `주여, 우리가 여기 있는 것이 좋사오니 우리가 초막 셋을 짓되 하나는 주를 위하여, 하나는 모세를 위하여, 하나는 엘리야를 위하여 하사이다' 하되 자기의 하는 말을 자기도 알지 못하더라
ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
34 이 말 할 즈음에 구름이 와서 저희를 덮는지라 구름 속으로 들어갈 때에 저희가 무서워하더니
ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.
35 구름 속에서 소리가 나서 가로되 `이는 나의 아들 곧 택함을 받은 자니 너희는 저의 말을 들으라' 하고
ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.
36 소리가 그치매 오직 예수만 보이시더라 제자들이 잠잠하여 그 본 것을 무엇이든지 그 때에는 아무에게도 이르지 아니하니라
ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
37 이튿날 산에서 내려 오시니 큰 무리가 맞을새
ಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.
38 무리 중에 한 사람이 소리질러 가로되 `선생님 청컨대 내 아들을 돌아 보아 주옵소서 이는 내 외아들이니이다
ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.
39 귀신이 저를 잡아 졸지에 부르짖게 하고 경련을 일으켜 거품을 흘리게 하며 심히 상하게 하고야 겨우 떠나가나이다
ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.
40 당신의 제자들에게 내어 쫓아 주기를 구하였으나 저희가 능히 못하더이다'
ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.
41 예수께서 대답하여 가라사대 `믿음이 없고 패역한 세대여! 내가 얼마나 너희와 함께 있으며 너희를 참으리요 네 아들을 이리로 데리고 오라' 하시니
ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.
42 올 때에 귀신이 거꾸러뜨리고 심한 경련을 일으키게 하는지라 예수께서 더러운 귀신을 꾸짖으시고 아이를 낫게 하사 그 아비에게 도로 주시니
ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.
43 사람들이 다 하나님의 위엄을 놀라니라 저희가 다 그 행하시는 모든 일을 기이히 여길새 예수께서 제자들에게 이르시되
ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,
44 `이 말을 너희 귀에 담아두라 인자가 장차 사람들의 손에 넘기우리라' 하시되
“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.
45 저희가 이 말씀을 알지 못하였나니 이는 저희로 깨닫지 못하게 숨김이 되었음이라 또 저희는 이 말씀을 묻기도 두려워하더라
ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.
46 제자 중에서 누가 크냐 하는 변론이 일어나니
ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.
47 예수께서 그 마음에 변론하는 것을 아시고 어린 아이 하나를 데려다가 자기 곁에 세우시고
ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,
48 저희에게 이르시되 `누구든지 내 이름으로 이 어린 아이를 영접하면 곧 나를 영접함이요 또 누구든지 나를 영접하면 곧 나 보내신 이를 영접함이라 너희 모든 사람 중에 가장 작은 그이가 큰 자니라'
“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.
49 요한이 여짜오되 `주여, 어떤 사람이 주의 이름으로 귀신을 내어 쫓는 것을 우리가 보고 우리와 함께 따르지 아니하므로 금하였나이다'
ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.
50 예수께서 가라사대 `금하지 말라 너희를 반대하지 않는 자는 너희를 위하는 자니라' 하시니라
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.
51 예수께서 승천하실 기약이 차 가매 예루살렘을 향하여 올라가기로 굳게 결심하시고
ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು
52 사자들을 앞서 보내시매 저희가 가서 예수를 위하여 예비하려고 사마리아인의 한 촌에 들어갔더니
ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
53 예수께서 예루살렘을 향하여 가시는 고로 저희가 받아 들이지 아니하는지라
ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.
54 제자 야고보와 요한이 이를 보고 가로되 `주여, 우리가 불을 명하여 하늘로 좇아 내려 저희를 멸하라 하기를 원하시나이까?'
ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.
55 예수께서 돌아보시며 꾸짖으시고
ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
56 함께 다른 촌으로 가시니라
ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.
57 길 가실 때에 혹이 여짜오되 `어디로 가시든지 저는 좇으리이다'
ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.
58 예수께서 가라사대 `여우도 굴이 있고 공중의 새도 집이 있으되 인자는 머리 둘 곳이 없도다' 하시고
ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.
59 또 다른 사람에게 `나를 좇으라!' 하시니 그가 가로되 `나로 먼저 가서 내 부친을 장사하게 허락하옵소서'
ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.
60 가라사대 `죽은 자들로 자기의 죽은 자들을 장사하게 하고 너는 가서 하나님의 나라를 전파하라' 하시고
ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.
61 또 다른 사람이 가로되 `주여, 내가 주를 좇겠나이다마는 나로 먼저 내 가족을 작별케 허락하소서'
ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.
62 예수께서 이르시되 `손에 쟁기를 잡고 뒤를 돌아보는 자는 하나님의 나라에 합당치 아니하니라' 하시니라
ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.

< 누가복음 9 >