< रोमियों 11 >

1 येकोलायी मय कहू हय, का परमेश्वर न अपनी प्रजा ख छोड़ दियो? कभीच नहीं! मय भी त इस्राएली आय; अब्राहम को वंश अऊर बिन्यामीन को गोत्र म सी आय।
ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
2 परमेश्वर न अपनी ऊ प्रजा ख नहीं छोड़्यो, जेक ओन पहिले सीच जान्यो। का तुम नहीं जानय कि पवित्र शास्त्र एलिय्याह को बारे म का कह्य हय, जब ऊ इस्राएल को विरोध म परमेश्वर सी बिनती करय हय?
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
3 “हे प्रभु, उन्न तोरो भविष्यवक्तावों ख मार डाल्यो, अऊर तोरी अर्पन की वेदियों ख गिराय दियो हय; अऊर मयच अकेलो बच्यो हय, अऊर हि मोख मारन लायी ढूंढ रह्यो हंय।”
ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
4 पर परमेश्वर सी ओख का उत्तर मिल्यो? “मय न अपनो लायी सात हजार आदमियों ख रख्यो हय, जिन्न झुटो बाल भगवान को आगु घुटना नहीं टेक्यो हंय।”
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
5 ठीक योच रीति सी यो समय भी, अनुग्रह सी चुन्यो हुयो कुछ लोग बाकी हंय।
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
6 यदि यो अनुग्रह सी भयो हय, त फिर कर्मों सी नहीं; नहीं त अनुग्रह फिर अनुग्रह नहीं रह्यो।
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
7 येकोलायी परिनाम का भयो? यो की इस्राएली जेकी खोज म होतो, ऊ उन्ख नहीं मिल्यो; पर चुन्यो हुयो ख मिल्यो, अऊर बच्यो लोग कठोर करयो गयो।
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
8 जसो शास्त्र म लिख्यो हय, “परमेश्वर न उन्ख मन अऊर दिल ख भारी नींद म कर दियो हय, अऊर असी आंखी दियो जो नहीं देखय अऊर असो कान जो नहीं सुन्यो।”
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
9 अऊर दाऊद कह्य हय, “उन्को भोजनों म फस क बन्दी बन जाये, अऊर ऊ गिरेंन अऊर उन्को पतन होय अऊर सजा मिले।
ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
10 उन्की आंखी पर अन्धारो छाय जाये ताकि नहीं देखे, अऊर तय हमेशा उन्की कमर ख झुकायो रख।”
೧೦ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.
11 अब भी मय कहू हय का उन्न येकोलायी ठोकर खायी कि गिर जायेंन? कभीच नहीं! पर उन्को गिरन को वजह गैरयहूदियों ख उद्धार मिल्यो, कि उन्ख जलन हो।
೧೧ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
12 येकोलायी यदि उन्को गिरनों जगत को लायी धन अऊर उन्की कमी गैरयहूदियों को लायी अच्छो हय, त उन्की भरपूरी सी बहुत बड़ो आशीर्वाद मिलेंन।
೧೨ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
13 यो अब मय तुम गैरयहूदियों सी कह्य हय। जब तक मय विशेष रूप सी गैरयहूदियों को लायी प्रेरित हय, त मय अपनी सेवा की बड़ायी करू हय,
೧೩ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
14 जलन पैदा करवाय क उन्म सी कुछ एक को उद्धार कराऊं।
೧೪ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
15 कहालीकि परमेश्वर को द्वारा उन्को अस्वीकार करयो जानो यो परमेश्वर को संग मिल क फिर उन्को अपनायो जानो सी का मरयो हुयो को जीन्दो जानो नहीं होयेंन?
೧೫ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
16 जब भेंट को पहिलो पेड़ा पवित्र ठहरयो, त पूरो गूंथ्यो हुयो आटा भी पवित्र हय; अऊर जब झाड़ कि जड़ी पवित्र ठहरी, त ओकी डगाली भी पवित्र ठहरी हंय।
೧೬ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
17 पर यदि कुछ डगाली तोड़ दियो गयो, अऊर तय जंगली जैतून होय क ओको म कलम करयो गयो, अऊर जैतून की जड़ी की शक्ति को सहभागी भयो,
೧೭ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
18 त डगालियों पर घमण्ड मत करजो; अऊर यदि तय घमण्ड करेंन त याद रख कि तय जड़ी ख नहीं पर जड़ी तोख सम्भाल रही हय।
೧೮ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
19 फिर तय कहजो, “डगालियां येकोलायी तोड़ी कि मोरी ओको म कलम करी जाये।”
೧೯ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
20 ठीक हय, हि त अविश्वास को वजह तोड़ी गयी, पर तय विश्वास को बन्यो रह्य हय येकोलायी अभिमानी नहीं हो, पर डर मान,
೨೦ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
21 कहालीकि जब परमेश्वर न स्वाभाविक डगालियों ख नहीं छोड़्यो त मोख भी नहीं छोड़ेंन।
೨೧ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
22 कहालीकि परमेश्वर की कृपा अऊर कठोरता ख देख! जो गिर गयो उन पर कठोरता, पर तोरो पर कृपा, यदि तय ओको म बन्यो रह्यो त ठीक हय, नहीं त तय भी काट डाल्यो जायेंन।
೨೨ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
23 यहूदी भी यदि अविश्वास म नहीं रह्य, त झाड़ कलम करयो जायेंन; कहालीकि परमेश्वर सामर्थ हय उन्ख फिर कलम कर सकय हय।
೨೩ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
24 कहालीकि यदि गैरयहूदी ओको जैतून सी, जो स्वभाव सी जंगली हय, काट्यो गयो अऊर स्वभाव को विरुद्ध अच्छो जैतून म कलम करयो गयो, त यो जो यहूदी डगाली हंय, अपनोच जैतून म कहाली नहीं कलम करयो जायेंन।
೨೪ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
25 हे भाऊवों अऊर बहिनों, कहीं असो नहीं होय कि तुम अपनो आप ख बुद्धिमान समझ लेवो; येकोलायी मय नहीं चाहऊं कि तुम यो भेद सी अनजान रहो कि जब गैरयहूदियों पूरी रीति सी प्रवेश कर नहीं ले, तब तक हि इस्राएल को एक भाग असोच कठोर रहेंन।
೨೫ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
26 अऊर यो रीति सी पूरो इस्राएल उद्धार पायेंन। जसो शास्त्र म लिख्यो हय, “छुटकारा देनो वालो सिय्योन सी आयेंन, अऊर अभक्ति ख याकूब को वंशज सी दूर करेंन;
೨೬ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27 अऊर उन्को संग मोरी योच वाचा बन्धी रहेंन, जब कि मय उन्को पापों ख दूर कर देऊ।”
೨೭ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
28 कहालीकि उन्न सुसमाचार अस्वीकार करयो अऊर गैरयहूदियों को वजह यहूदी परमेश्वर को दुश्मन हंय, पर नियुक्त करयो जान को अऊर उन्को बापदादों को वजह परमेश्वर को प्रिय हंय।
೨೮ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29 कहालीकि परमेश्वर कभी नहीं बदलय अऊर ओको चुनाव अऊर आशीषें अटल हय।
೨೯ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
30 कहालीकि जसो तुम न पहिले परमेश्वर की आज्ञा नहीं मानी, पर अभी यहूदियों की आज्ञा नहीं मानन सी तुम पर दया भयी;
೩೦ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
31 तुम पर जो दया भयी ओको वजह यहूदी अब परमेश्वर की आज्ञा नहीं मान रह्यो हय, येकोलायी अब तुम्हरो जसो उन पर भी दया हो।
೩೧ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
32 कहालीकि परमेश्वर न सब ख आज्ञा न मानन को वजह बन्दी बनाय क रख्यो, ताकि ऊ सब पर दया करेंन। (eleēsē g1653)
೩೨ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē g1653)
33 आहा! परमेश्वर को धन अऊर बुद्धी अऊर ज्ञान कितनो महान हय! ओको बिचार ख कौन स्पष्ट कर सकय हय, अऊर ओको रस्ता ख कौन समझ सकय हंय!
೩೩ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
34 “शास्त्र कह्य हय की प्रभु को मन कौन जान सकय हय? अऊर ओको सल्ला देन सकय हय?
೩೪“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
35 का कोयी न परमेश्वर ख कुछ दियो हय जेको बदले म ऊ ओको फिर सी वापस दे? जेको बदला म ओख दियो जाये?”
೩೫ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
36 कहालीकि ओको की तरफ सी, अऊर ओकोच द्वारा, अऊर ओकोच द्वारा अऊर ओकोच लायी सब कुछ हय। परमेश्वर की महिमा हमेशा हमेशा होवय रहे! आमीन। (aiōn g165)
೩೬ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn g165)

< रोमियों 11 >