< लूक 6 >

1 नंतर असे झाले की, एका शब्बाथ दिवशी येशू शेतामधून जात होता आणि त्याचे शिष्य कणसे मोडून हातावर चोळून खात होते.
ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
2 मग परूश्यांपैकी काही म्हणाले, “शब्बाथ दिवशी जे करण्यास योग्य नाही, ते तुम्ही का करता?”
ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
3 येशूने त्यांना म्हटले, “जेव्हा दावीद व त्याच्याबरोबरच्या मनुष्यांना भूक लागली तेव्हा त्यांनी काय केले हे तुम्ही कधी वाचले नाही काय?
ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
4 तो देवाच्या घरात गेला आणि ज्या समर्पित भाकरी याजकांशिवाय कोणीच खाणे योग्य नाही त्या त्याने कशा घेऊन खाल्ल्या व आपल्याबरोबर जे होते त्यांनाही दिल्या.”
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
5 आणखी येशू त्यांना म्हणाला, “मनुष्याचा पुत्र शब्बाथाचा प्रभू आहे.”
“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
6 असे झाले की, दुसऱ्या एका शब्बाथ दिवशी येशू सभास्थानात गेला आणि शिकवू लागला. ज्याचा उजवा हात वाळलेला होता असा एक मनुष्य तेथे होता.
ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
7 येशू शब्बाथ दिवशी कोणाला बरे करतो की काय हे पाहण्यासाठी नियमशास्त्राचे शिक्षक व परूशी त्याच्यावर लक्ष ठेवून होते. यासाठी की त्यांना आरोप ठेवण्यासाठी काहीतरी कारण मिळावे.
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
8 परंतु तो त्यांचे विचार जाणून वाळलेल्या हाताच्या मनुष्यास म्हणाला, “ऊठ आणि सर्वांसमोर उभा राहा,” आणि तो मनुष्य उठून तेथे उभा राहिला.
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
9 येशू त्यांना म्हणाला, “मी तुम्हास विचारतो, शब्बाथ दिवशी कोणत्या गोष्टी करायला परवानगी आहे? चांगले करणे की वाईट करणे? कोणते कायदेशीर आहे, एखाद्याचा जीव वाचवणे का त्याचा नाश करणे?”
ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
10 १० मग त्याने सभोवती त्या सर्वांकडे पाहीले आणि म्हणाला, “तू आपला हात लांब कर.” तेव्हा त्याने तसे केले आणि त्याचा हात बरा झाला.
೧೦ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
11 ११ पण परूशी व नियमशास्त्राचे शिक्षक खूप रागावले व येशूविषयी काय करता येईल याविषयी आपसात चर्चा करू लागले.
೧೧ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
12 १२ त्या दिवसात असे झाले की, येशू प्रार्थना करण्यासाठी डोंगरावर गेला. त्याने ती रात्र देवाची प्रार्थना करण्यात घालवली.
೧೨ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
13 १३ जेव्हा दिवस उगवला, तेव्हा त्याने शिष्यांना आपणाकडे बोलावले. त्याने त्यांच्यातील बाराजणांना निवडले व त्यांना ‘प्रेषित’ असे नाव दिले.
೧೩ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 १४ शिमोन ज्याला पेत्र हे सुद्धा नाव दिले तो अंद्रिया (पेत्राचा भाऊ), याकोब आणि योहान, फिलिप्प, बर्थलमय,
೧೪ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 १५ मत्तय, थोमा, अल्फीचा पुत्र याकोब, शिमोन ज्याला जिलोत म्हणत,
೧೫ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
16 १६ याकोबचा पुत्र यहूदा व यहूदा इस्कर्योत, जो पुढे विश्वासघात करणारा निघाला.
೧೬ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
17 १७ तो त्यांच्याबरोबर डोंगरावरून खाली उतरला व सपाट जागेवर उभा राहिला आणि त्याच्या अनुयायांचा मोठा समुदाय तेथे आला व यहूदीया प्रांत, यरूशलेम शहर, सोर आणि सिदोनच्या समुद्रकिनाऱ्याकडचे असे पुष्कळसे लोक तेथे आले होते.
೧೭ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
18 १८ ते तेथे त्याचे ऐकण्यास व आपल्या रोगांपासून बरे होण्यास आले व ज्यांना अशुद्ध आत्म्यांची बाधा होती त्यांनाही त्यांच्या व्याधीपासून मुक्त करण्यात आले.
೧೮ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
19 १९ सगळा लोकसमुदाय त्यास स्पर्श करू पाहत होता, कारण त्याच्यामधून सामर्थ्य येत होते आणि सर्वांना ते बरे करत होते.
೧೯ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
20 २० मग येशूने आपल्या शिष्यांकडे पाहिले व म्हणाला, “अहो दिनांनो, तुम्ही धन्य आहात कारण देवाचे राज्य तुमचे आहे.
೨೦ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
21 २१ अहो जे तुम्ही आता भूकेले आहात, ते तुम्ही धन्य आहात, कारण तुम्ही तृप्त व्हाल. अहो जे तुम्ही आता रडता, ते तुम्ही आशीर्वादित आहात कारण तुम्ही हसाल.
೨೧ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
22 २२ जेव्हा मनुष्याच्या पुत्रामुळे लोक तुमचा द्वेष करतील आणि जेव्हा ते आपल्या समाजातून तुम्हास दूर करतील व तुमची निंदा करतील व तुमचे नाव ते वाईट म्हणून टाकून देतील आणि मनुष्याच्या पुत्रामुळे तुम्हास नाकारतील, तेव्हा तुम्ही धन्य आहात.
೨೨“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
23 २३ त्यादिवशी आनंद करून उड्या मारा, कारण खरोखर स्वर्गात तुमचे प्रतिफळ मोठे आहे! कारण त्यांच्या पूर्वजांनी संदेष्ट्यांना सुद्धा तसेच केले.
೨೩ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
24 २४ पण श्रीमंतानो, तुम्हास दुःख होवो कारण तुम्हास अगोदरच सर्व सुख मिळाले आहे.
೨೪“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
25 २५ जे तुम्ही तृप्त आहात त्या तुम्हास दुःख होवो, कारण तुम्ही भूकेले व्हाल. जे आता हसतात त्यांना दुःख होवो कारण तुम्ही शोक कराल आणि रडाल.
೨೫ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
26 २६ जेव्हा सर्व तुमच्याविषयी चांगले बोलतील तेव्हा तुम्हास दुःख होवो कारण त्यांच्या वाडवडिलांनी खोट्या संदेष्ट्यांना असेच केले.”
೨೬“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.
27 २७ “परंतु तुम्हा ऐकणाऱ्यांस मी सांगतो, तुमच्या शत्रूंवर प्रीती करा. जे तुमचा द्वेष करतात, त्यांचे चांगले करा.
೨೭“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
28 २८ जे तुम्हास शाप देतात त्यांना आशीर्वाद द्या. जे तुमचा अपमान करतात त्यांच्यासाठी प्रार्थना करा.
೨೮ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29 २९ जर कोणी तुमच्या एका गालावर मारतो तर त्याच्यासमोर दुसराही गाल करा. जर कोणी तुमचा अंगरखा घेतो तर त्यास तुमची बंडी ही घेऊन जाण्यास मना करू नका.
೨೯ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
30 ३० जे तुम्हास मागतात त्या प्रत्येकाला द्या आणि जो तुमची वस्तू हिरावून घेतो त्याच्यापाशी ते परत मागू नको.
೩೦ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
31 ३१ आणि जसे मनुष्यांनी तुमच्याशी वागावे म्हणून तुमची इच्छा असेल तसेच तुम्हीही त्यांच्याशी वागा.
೩೧ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32 ३२ तुमच्यावर जे प्रीती करतात त्यांच्यावर तुम्ही प्रीती करा, तर त्यामध्ये तुमचा उपकार तो काय? कारण पापी लोकही आपणावर प्रीती करणाऱ्यांवर प्रीती करतात.
೩೨“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33 ३३ तुमचे जे चांगले करतात, त्यांचे जर तुम्ही चांगले करता तर तुम्हास काय लाभ? पापीसुद्धा असेच करतात.
೩೩ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34 ३४ ज्यांच्याकडून तुम्हास परत मिळेल अशी आशा असते, त्यांना जर उसने देता तर तुम्हास काय लाभ? पापीसुद्धा परत मिळावे या उद्देशाने दुसऱ्या पाप्याला उसने देतात.
೩೪ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
35 ३५ परंतु तुम्ही आपल्या शत्रूंवर प्रीती करा व त्यांचे बरे करा आणि निराश न होता उसने द्या म्हणजे तुमचे प्रतिफळ मोठे होईल व तुम्ही परात्पराचे पुत्र व्हाल कारण तो अनुपकारी व वाईट यांच्यावर तो दया करणारा आहे.
೩೫ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36 ३६ जसा तुमचा स्वर्गीय पिता दयाळू आहे तसे तुम्हीही दयाळू व्हा.”
೩೬ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
37 ३७ “दुसऱ्यांचा न्याय करू नका, म्हणजे तुमचाही न्याय होणार नाही. दुसऱ्यांना दोषी ठरवू नका म्हणजे तुम्हास दोषी ठरवले जाणार नाही. दुसऱ्यांची क्षमा करा म्हणजे तुमचीही क्षमा केली जाईल.
೩೭“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
38 ३८ द्या म्हणजे तुम्हास दिले जाईल. चांगले माप दाबून, हालवून व शीग भरून तुमच्या पदरी घालतील कारण ज्या मापाने तुम्ही मापून द्याल त्याच मापाने तुम्हास परत मापून देण्यात येईल.”
೩೮ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
39 ३९ त्याने त्यांना एक दाखला सांगितला, “एक आंधळा दुसऱ्या आंधळ्याला मार्ग दाखवू शकेल काय? ते दोघेही खड्डयात पडणार नाहीत काय?
೩೯ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
40 ४० कोणताही शिष्य त्याच्या गुरुपेक्षा थोर नाही. पण प्रत्येक शिष्य जेव्हा पूर्ण शिकतो तेव्हा तो गुरुसारखाच होतो.
೪೦ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41 ४१ स्वतःच्या डोळ्यातील मुसळ ध्यानात न आणता तू आपल्या भावाच्या डोळ्यातील कुसळ का पाहतोस?
೪೧“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
42 ४२ अथवा तू आपल्या डोळ्यातले मुसळ न पाहता आपल्या भावाला कसे म्हणशील की, भाऊ, तुझ्या डोळ्यातले कुसळ मला काढू दे? अरे ढोंग्या, प्रथम तुझ्या डोळ्यातील मुसळ काढ मगच तुला तुझ्या भावाच्या डोळ्यातील कुसळ काढताना चांगले दिसेल.”
೪೨ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
43 ४३ कोणतेही चांगले झाड नाही की जे वाईट फळ देते किंवा कोणतेही वाईट झाड नाही की जे चांगले फळ देते.
೪೩ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
44 ४४ कारण प्रत्येक झाड हे त्याच्या फळावरुन ओळखले जाते. लोक काटेरी झुडुपातून अंजीरे गोळा करीत नाहीत तसेच काटेरी झुडुपातून ते द्राक्षे गोळा करीत नाहीत.
೪೪ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
45 ४५ चांगला मनुष्य त्याच्या अंतःकरणात ज्या चांगल्या गोष्टी साठवलेल्या असतात त्याच काढतो आणि दुष्ट मनुष्य त्याच्या अंतःकरणात जे वाईट आहे तेच बाहेर काढतो कारण अंतःकरणात जे भरले आहे तेच मुखावाटे निघणार.
೪೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
46 ४६ “तुम्ही मला ‘प्रभू, प्रभू,’ म्हणता, पण जे मी सांगतो ते तुम्ही का करीत नाही?
೪೬“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
47 ४७ प्रत्येकजण जो माझ्याकडे येतो व माझी वचने ऐकून त्या आज्ञा पाळतो तो कसा आहे हे मी तुम्हास दाखवितो.
೪೭ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
48 ४८ तो एका घर बांधणाऱ्या मनुष्यासारखा आहे. त्याने खोल खोदले आणि खडकावर पाया बांधला. मग पूर आला आणि पाण्याचा लोंढा घरावर आदळला, पण पाण्याने ते हलले नाही, कारण ते चांगले बांधले होते.
೪೮ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
49 ४९ पण जो कोणी माझी वचने ऐकतो पण ती पाळीत नाही तो ज्याने आपले घर पाया न घालता जमिनीवर बांधले त्या मनुष्यासारखा आहे, त्या घरावर पाण्याचा लोंढा आदळला आणि ते लागलेच पडले व त्या घराचा मोठा नाश झाला.”
೪೯ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

< लूक 6 >