< တမန်တော်ဝတ္ထု 1 >

1 အိုသော်ဖိလု၊ ယေရှုသည် ရွေးကောက်တော်မူသော တမန်တော်တို့ကို ဝိညာဉ်တော်အားဖြင့် မှာထား ပြီးမှ၊
ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
2 အထက်သို့ဆောင်ယူခြင်းကို ခံတော်မူသမျှတို့ကိုထုတ်ဘော်၍၊ အထက်ကျမ်းစာကို ငါစီရင်ရေး ထားပါပြီ။
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
3 အသေခံတော်မူပြီးလျှင်၊ တမန်တော်တို့အား အရက်လေးဆယ်ပတ်လုံးကိုယ်ကိုပြ၍ ဘုရားသခင်၏ နိုင်ငံတော်နှင့်စပ်ဆိုင်သောအရာတို့ကို မိန့်မြွက်တော်မူလျက်၊ မိမိအသက်ရှင်သည်အကြောင်းကို ခိုင်ခံ့သော သက်သေအများအားဖြင့် ပြတော်မူ၏။
ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
4 ထိုတမန်တော်တို့ကို စုဝေးစေတော်မူပြီးလျှင်၊ ယေရုရှလင်မြို့မှမထွက်မသွားဘဲ ခမည်းတော်၏ ဂတိ ကိုငံ့နေမည်အကြောင်း မှာတော်မူ၍၊ ထိုဂတိတော်ကို ငါဟောပြောသဖြင့် သင်တို့သည်ကြားသိရကြပြီ။
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
5 ဂတိတော်အချက်ဟူမူကား၊ ယောဟန်သည်ရေ၌ဗတ္တိဇံကိုပေး၏။ သင်တို့သည် မကြာမမြင့်မှီ သန့်ရှင်း သောဝိညာဉ်တော်၌ ဗတ္တိဇံကိုခံရကြလိမ့်မည်ဟုမိန့်တော်မူ၏။
ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
6 ထိုတမန်တော်တို့သည်လည်းစုဝေး၍၊ သခင်ဘုရား၊ ယခုအခါကိုယ်တော်သည် ဣသရေလ အမျိုးသား တို့အား နိုင်ငံကိုပြန်ပေးတော်မူမည်လောဟု မေးလျှောက်ကြလျှင်၊
ಕೂಡಿಬಂದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
7 သခင်ဘုရားက၊ ခမည်းတော်၏ တန်ခိုးအားဖြင့်စီရင်တော်မူသောအချိန်ကာလကို သိရသောအခွင့် သည် သင်တို့၌မရှိ။
ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
8 ထိုသို့မရှိသော်လည်း၊ သင်တို့အပေါ်သို့ သန့်ရှင်းသောဝိညာဉ်တော်ဆင်းသက်သောအခါ သင်တို့သည် တန်ခိုးကိုခံရ၍ ယေရုရှလင်မြို့မှစသော ယုဒပြည်၊ ရှမာရ်ပြည်၊ မြေကြီးစွန်းတိုင်အောင် ငါ၏သက်သေဖြစ်ကြ လိမ့်မည်ဟု မိန့်တော်မူ၏။
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
9 တမန်တော်တို့သည် ကြည့်ရှုလျက်နေကြစဉ်၊ သခင်ဘုရားသည် အထက်သို့ဆောင်ယူခြင်းကို ခံတော် မူ၍၊ မိုဃ်းတိမ်သည် ကိုယ်တော်ကိုမျက်ကွယ်အောင် ခံယူလေ၏။
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
10 ၁၀ ထိုသို့ကြွတော်မူသည်ကို တမန်တော်တို့သည် ကောင်းကင်သို့ စေ့စေ့ကြည့်မျှော်လျက် နေကြစဉ်တွင်၊ လူနှစ်ယောက်တို့သည် ဖြူစင်သောအဝတ်ကို ဝတ်ဆင်လျက် တမန်တော်တို့အနားမှာပေါ်လာ၍၊
೧೦ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
11 ၁၁ အိုဂါလိလဲလူတို့၊ အဘယ်ကြောင့်ကောင်းကင်သို့ ကြည့်မျှော်လျက်နေကြသနည်း။ သင်တို့နှင့်ခွါ၍ ကောင်းကင်သို့ဆောင်ယူခြင်းကို ခံတော်မူသောထိုယေရှုသည် သင်တို့မျက်မှောက်၌ ကောင်းကင်သို့ ကြွသွား တော်မူသည်နည်းတူ တဖန်ကြွလာတော်မူလတံ့ ဟုပြောဆို၏။
೧೧“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
12 ၁၂ ထိုအခါ ယေရုရှလင်မြို့နှင့်ဥပုသ်နေ့တနေ့ခရီးသာကွာ၍ သံလွင်အမည်ရှိသောတောင်မှ ယေရုရှလင် မြို့သို့ တမန်တော်တို့သည် ပြန်ကြ၏။
೧೨ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
13 ၁၃ ရောက်ကြလျှင်၊ ပေတရု၊ ယာကုပ်၊ ယောဟန်၊ အန္ဒြေ၊ ဖိလိပ္ပု၊ သောမ၊ ဗာသောလမဲ၊ မဿဲ၊ အာလဖဲ၏သားယာကုပ်၊ ရှိမုန်ဇေလုတ်၊ ယာကုပ်ညီ ယုဒတို့သည် တည်းနေရာအိမ်အထက်ခန်းသို့တက်ကြ၏။
೧೩ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
14 ၁၄ ထိုသူအပေါင်းတို့သည် ယေရှု၏မယ်တော်မာရိမှစ၍ မိန်းမတို့နှင့်၎င်း၊ ညီတော်တို့နှင့်၎င်း၊ တညီ တညွတ်တည်းကြိုးစား၍ ဆုတောင်းပဌနာပြုလျက် နေကြ၏။
೧೪ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
15 ၁၅ ထိုအခါအရေအတွက်အားဖြင့် တရာနှစ်ဆယ်သောတပည့်တော်တို့၏အလယ်၌ ပေတရုသည်ထ၍၊
೧೫ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
16 ၁၆ ညီအစ်ကိုတို့၊ ယေရှုကိုဘမ်းဆီးသောသူတို့အား လမ်းပြသောယုဒရှကာရုတ်ကို ရည်မှတ်၍ သန့်ရှင်း သောဝိညာဉ်တော်သည်ဒါဝိဒ်မင်း၏နှုတ်ဖြင့် ဗျာဒိတ်ထားတော်မူနှင့်သော ကျမ်းစာချက်အတိုင်း မပြည့်စုံဘဲ မနေရ။
೧೬“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
17 ၁၇ ထိုသူသည် ငါတို့နှင့် ရေတွက်ဝင်ခြင်းသို့ရောက်၍ ဓမ္မဆရာ၏အရာကိုခံရပြီ။
೧೭ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
18 ၁၈ ထိုသူသည် မတရားသောအမှုအတွက်ဖြင့်ရသောအခနှင့် မြေတကွက်ကိုဝယ်ပြီးမှ၊ မှောက်လျက်ကျ လဲ၍ ဝမ်းကွဲသဖြင့် အအူများပေါက်လေပြီ။
೧೮(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
19 ၁၉ ထိုအကြောင်းအရာကို ယေရုရှလင်မြို့၌နေသော သူအပေါင်းတို့သည်သိ၍ မိမိတို့ဘာသာအားဖြင့် ထို မြေကို အကေလဒဟုခေါ်တွင်ကြ၏။ အနက်ကားသွေးမြေဟု ဆိုလိုသတည်း။
೧೯ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
20 ၂၀ ဆာလံကျမ်းစာ၌လာသည်ကား၊ သူ၏နေရာအရပ်သည် လူဆိတ်ညံရာအရပ်ဖြစ်ပါစေ။ နေသောသူ မရှိပါစေနှင့်။ သူ၏အရာကိုလည်းအခြားသူရပါစေဟု ရေးမှတ်သတည်း။
೨೦ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21 ၂၁ ထိုကြောင့် ဟောဟန်သည် ဗတ္တိဇံကို ပေးသည်ကာလမှစ၍၊
೨೧ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
22 ၂၂ သခင်ယေရှုသည် ငါတို့နှင့်ခွါ၍အထက်သို့ဆောင်ယူခြင်းကို ခံတော်မူသည့်နေ့ရက်တိုင်အောင်၊ တပည့် တော်တို့နှင့်အတူ ထွက်ဝင်သွားလာတော်မူသောကာလပတ်လုံး ငါတို့နှင့်ပေါင်းဘော်၍နေသောသူတစုံတ ယောက်သည်၊ ထိုသခင်ထမြောက်တော်မူသည် အကြောင်းကိုဟောပြော၍ ငါတို့နှင့်အတူသက်သေခံဖြစ် ရမည် ဟု ပေတရုပြောဆို၏။
೨೨
23 ၂၃ ဗာရှဗဟု ခေါ်ဝေါ်၍ ယုတ္တုအမည်သစ်ကိုရသော ယောသပ်နှင့်မဿိကိုခန့်ထား၍၊
೨೩ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
24 ၂၄ ဤသို့ဆုတောင်းကြ၏။
೨೪“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
25 ၂၅ လူအပေါင်းတို့၏ စိတ်နှလုံးကိုသိတော်မူသောသခင်ဘုရား၊ ယုဒရှကာရုတ်သည် မိမိနေရာအရပ်သို့ သွားအံ့သောငှါ ဓမ္မဆရာ၏အရာ၊ တမန်တော်၏အရာမှရွေ့လျော့ဖောက်ပြန်သည်ဖြစ်၍၊ ထိုအရာကိုခံစေ ခြင်းငှါ ဤသူနှစ်ယောက်တို့တွင် ရွေးကောက်တော်မူသောသူကို ပြညွှန်တော်မူပါဟု ဆုတောင်းပြီးမှ၊
೨೫
26 ၂၆ စာရေးတံချကြသဖြင့် မဿိသည်စာရေးတံကိုရ၍၊ တကျိပ်တပါးသောတမန်တော်တို့နှင့် ရေတွက်ဝင် ခြင်းသို့ရောက်လေ၏။
೨೬ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

< တမန်တော်ဝတ္ထု 1 >