< ယောဟန် 2 >

1 သုံးရက်မြောက်သောနေ့၌ ဂါလိလဲပြည် ကာနမြို့တွင် မဂ်လာဆောင်ပွဲကိုခံကြစဉ်၊ ထိုပွဲ၌ယေရှု၏ မယ်တော်ရှိ၏။
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2 ယေရှုနှင့်တပည့်တော်တို့ကိုလည်း ထိုပွဲသို့ ခေါ်ပင့်ကြ၏။
ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
3 စပျစ်ရည်ကုန်သောအခါ၊ ယေရှု၏မယ်တော်က၊ စပျစ်ရည်မရှိဟုကြားပြော၏။
ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
4 ယေရှုကလည်း၊ အချင်းမိန်းမ၊ သင်သည် ငါနှင့်အဘယ်သို့ဆိုင်သနည်း။ ငါ့အချိန် မရောက်သေးဟု မိန့်တော်မူ၏။
ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
5 မယ်တော်ကလည်း၊ သူစေခိုင်းသမျှတို့ကို ပြုကြလော့ဟု အစေခံတို့အားဆိုလေ၏။
ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
6 ယုဒဘာသာအလျောက် စင်ကြယ်ခြင်းအဘို့အလိုငှါ၊ ထိုအရပ်၌ နှစ်တင်းသုံးတင်းခန့်ဝင်သော ကျောက်အိုးစရည်းခြောက်လုံး ထားလျက်ရှိ၏။
ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7 ယေရှုကလည်း၊ ဤရေအိုးတို့ကိုရေဖြည့်ကြဟု အစေခံတို့အားမိန့်တော်မူလျှင်၊ ထိုသူတို့သည် လျှံ မတတ်ဖြည့်ကြ၏။
ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 ယခုခပ်၍ပွဲအုပ်ထံသို့သွင်းကြလော့ဟု မိန့်တော်မူသည်အတိုင်း သွင်းကြ၏။
ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
9 ပွဲအုပ်သည် စပျစ်ရည်ဖြစ်စေသောရေကို မြည်းစမ်း၍၊ ထိုရေကို ခပ်သောအစေခံတို့သည် စပျစ်ရည် ကို အဘယ်မှာရသည်ကိုသိသော်လည်း၊ ပွဲအုပ်သည် မသိသောကြောင့်၊ မင်္ဂလာဆောင်လုလင်အား အသံကို လွှင့်၍၊
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10 ၁၀ အခြားသောသူမည်သည်ကား၊ ရှေးဦးစွာ ကောင်းသောစပျစ်ရည်ကို ထည့်၍ ဝစွာသောက်ကြပြီးမှ ညံ့သောစပျစ်ရည်ကိုထည့်လေ့ရှိ၏။ သင်မူကား၊ ကောင်းသောစပျစ်ရည်ကို ယခုတိုင်အောင် သိုထားပြီဟုဆို၏။
೧೦“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
11 ၁၁ ထိုသို့ယေရှုသည် ရှေးဦးစွာသော ဤနိမိတ်လက္ခဏာကိုဂါလိလဲပြည်၊ ကာနမြို့၌ပြ၍ မိမိဘုန်းတော် ကိုထင်ရှားစေတော်မူ၏။ တပည့်တော်တို့သည်လည်း ယုံကြည်ကြ၏။
೧೧ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
12 ၁၂ ထိုနောက် မယ်တော်မှစ၍ညီတော်၊ တပည့်တော်တို့နှင့်တကွ၊ ကပေရနောင်မြို့သို့ ကြွတော်မူ၏။ ထိုမြို့မှာ ကြာမြင့်စွာမနေဘဲ၊
೧೨ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13 ၁၃ ယုဒပသခါပွဲခံချိန် နီးသည်ရှိသော်၊ ယေရုရှလင်မြို့သို့ ကြွတော်မူ၏။
೧೩ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
14 ၁၄ ဗိမာန်တော်၌ သိုး၊ နွား၊ ချိုးငှက် ရောင်းသောသူတို့ကို၎င်း၊ ပွဲစားများထိုင်လျက်ရှိသည်ကို၎င်း တွေ့ တော်မူလျှင်၊
೧೪ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
15 ၁၅ ရိုက်စရာဘို့ ကြိုးသေးများကို ပြုပြင်ပြီးမှ၊ ထိုသူအပေါင်းတို့ကို၎င်း၊ သိုး၊ နွားများကို၎င်း၊ ဗိမာန် တော်မှနှင်ထုတ်တော်မူ၍၊ ပွဲစားတို့၏ ငွေတင်ခုံများကို တွန်းပစ်မျောထားတော်မူ၏၊
೧೫ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16 ၁၆ ချိုးငှက်ရောင်းသောသူတို့အားလည်း၊ ဤဥစ္စာကို ယူသွားကြ။ ငါ့အဘ၏အိမ်တော်ကို ပွဲတဲမလုပ်ကြ နှင့်ဟု မိန့်တော်မူ၏။
೧೬ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17 ၁၇ ကိုယ်တော်၏အိမ်တော်၌ စွဲလမ်းပူပန်ခြင်းစိတ်သည် အကျွန်ုပ်ကိုးစားပါ၏ဟူ၍ ကျမ်းစာလာသည်ကို၊ ထိုအခါတပည့်တော်တို့သည် မှတ်မိကြ၏။
೧೭ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
18 ၁၈ ယုဒလူတို့ကလည်း၊ သင်သည် ဤသို့ပြုလျှင် အဘယ်နိမိတ်လက္ခဏာကို ငါတို့အား ပြမည်နည်းဟု ဆိုကြ၏။
೧೮ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 ၁၉ ယေရှုကလည်း၊ ဤဗိမာန်တော်ကို ဖြိုဖျက်ကြလော့။ သုံးရက်အတွင်းတွင် ငါတည်ဆောက်မည်ဟု မိန့်တော်မူ၏။
೧೯ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
20 ၂၀ ယုဒလူတို့က၊ အနှစ်လေးဆယ်ခြောက်နှစ်ပတ်လုံး ဤဗိမာန်တော်ကို တည်ဆောက်ကြ၏။ သင်မူ ကား၊ သုံးရက်တည်းနှင့် တည်ဆောက်မည်လောဟု ဆိုကြ၏။
೨೦ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21 ၂၁ ထိုသို့မိန့်တော်မူရာ၌ မိမိကိုယ်တည်းဟူသော ဗိမာန်ကိုအမှတ်ပြု၍မိန့်တော်မူ၏။
೨೧ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
22 ၂၂ ထိုကြောင့် သေခြင်းမှ ထမြောက်တော်မူသည်နောက်။ ထိုစကားတော်ကို တပည့်တော်တို့သည် မှတ်မိ ကြသဖြင့်၊ ကျမ်းစာကို၎င်း၊ ယေရှု၏ နှုတ်ကပတ်တော်ကို၎င်း ယုံကြ၏။
೨೨ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
23 ၂၃ ပသခါပွဲအတွင်းတွင် ယေရှုသည် ယေရုရှလင်မြို့၌ရှိ၍၊ ပြတော်မူသော နိမိတ်လက္ခဏာတို့ကို များစွာ သောသူတို့သည် မြင်ရသဖြင့် ကိုယ်တော်ကို ယုံကြည်ခြင်းသို့ ရောက်ကြ၏။
೨೩ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24 ၂၄ သို့သော်လည်းယေရှုသည် ထိုသူတို့၌ ကိုယ်ကိုအပ်တော်မမူ။ အကြောင်းမူကား၊ ခပ်သိမ်းသောသူတို့ကို သိတော်မူ၏။
೨೪ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
25 ၂၅ လူ၏အထဲ၌ရှိသမျှကို သိတော်မူသောကြောင့်၊ လူ၏အကြောင်းကို သက်သေခံစေခြင်းငှါ အဘယ်သူ ကိုမျှအလိုတော်မရှိ။
೨೫ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

< ယောဟန် 2 >