< प्रेरित 13 >

1 एन्टिओखियाको सभामा त्यहाँ केही अगमवक्‍ताहरू र शिक्षकहरू थिए । तिनीहरूमा बारनाबास, सिमियोन (जसलाई नाइजर भनिन्‍थ्यो), कुरेनीका लुसियस मनेन (जो पालनपोषण गरेर हेरोदसँगै हुर्किएका भाइ) र शाऊल थिए ।
ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.
2 जब तिनीहरू उपवाससहित आराधना गरिरहेका थिए, पवित्र आत्माले भन्‍नुभयो, “शाऊल र बारनाबासलाई मेरो निम्ति अलग गर जुन काम गर्नका निम्ति मैले तिनीहरूलाई बोलाएको छु ।”
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.
3 सभाले उपवास प्रार्थना गरिसकेपछि, र तिनीहरूले यी मानिसहरूमाथि हातहरू राखेर प्रार्थना गरे र उनीहरूलाई पठाइदिए ।
ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
4 त्यसकारण पवित्र आत्माको आज्ञा शाऊल र बारनाबासले माने र तल सिलुसियामा गए, अनि त्यहाँबाट जहाज चढी साइप्रसको टापुतिर गए ।
ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.
5 सलामिस सहरमा हुँदा, उनीहरूले यहूदीहरूको सभाघरमा वचन घोषणा गरे र सहायताका लागि यूहन्‍ना मर्कूस पनि उनीहरूसँगै थिए ।
ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.
6 उनीहरू पुरै टापु पार गरेर पाफोस पुगेपछि एक जना जादुगर यहूदी झुटा अगमवक्‍तालाई भेट्टाए, जसको नाउँ बार येशू थियो ।
ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.
7 यो जादुगर त्यहाँको प्रान्तीय शासक सर्गियस पौलससँग सम्बन्धित थियो, जो एक विद्वान मानिस थिए । उनले शाऊल र बारनाबासलाई बोलाए किनभने तिनी परमेश्‍वरको वचन सुन्‍न चाहन्थे ।
ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.
8 तर इलुमास, ‘‘जादुगर’’ ले तिनीहरूको विरोध गर्‍यो (यसरी नै उसको नाउँ अनुवाद गरिन्छ); उसले प्रान्तीय शासक सर्गियस पौलसलाई विश्‍वासबाट फर्काउन प्रयास गर्‍यो ।
ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.
9 तर शाऊल जसलाई पावल पनि भनिन्छ, पवित्र आत्माले भरिएर, उसलाई एकटक लाएर हेरे
ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,
10 र भने, तँ शैतानको छोरो, तँ छल र दुष्‍टताले भरिएको छस् । तँ हरेक प्रकारको धार्मिकताको शत्रु होस् । तैले प्रभुको सोझो बाटोलाई बड्ग्याउन कहिल्यै छोड्दैनस्, छोड्छस् र?
“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?
11 अब हेर्, प्रभुको हात तँमाथि परेको छ र तँ अन्धो हुनेछस् । केही समयका लागि तैँले घाम देख्‍ने छैनस् ।’’ तुरुन्तै त्यहाँ बाक्लो तुवाँलो र अन्धकारले एलुमासलाई ढाक्यो र हात समातेर डोर्‍याइदिऊन् भन्दै यताउति मानिसहरूलाई आग्रह गर्न थाल्यो ।
ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.
12 प्रान्तीय शासकले जे भएको थियो त्यो देखेपछि उनले विश्‍वास गरे, किनभने उनी प्रभुको शिक्षाबारे चकित भएका थिए ।
ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.
13 अब त्यसपछि पावल र उनका साथीहरू पाफोसबाट पानीजहाजमा चढी पाम्फिलियाको पर्गामा आए । तर यूहन्‍नाले उनीहरूलाई छोडेर यरूशलेमतिर फर्के ।
ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.
14 पावल र उनका साथीहरू पर्गाबाट यात्रा गर्दै पिसिदियाको एन्टीओखियामा आइपुगे। त्यहाँ उनीहरू विश्राम दिनमा सभा घरमा गए र बसे ।
ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15 अनि व्यवस्था र अगमवक्‍ताहरूका पुस्तक पढिसकेपछि सभाघरका अगुवाहरूले उनीहरूलाई यसो भनेर सन्देश पठाए, “भाइहरू हो, यदि तपाईंहरूसँग यहाँ भएका मानिसहरूको निम्ति कुनै उत्साहको सन्देश छ भने भन्‍नुहोस् ।”
ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.
16 त्यसकारण पावल उठे र हातले इसारा गर्दै उनले भने, “इस्राएलका मानिसहरू र जसले परमेश्‍वरलाई आदर गर्नुहुन्छ, सुन्‍नुहोस् ।
ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!
17 इस्राएलका यी मानिसहरूका परमेश्‍वरले हाम्रा पितापुर्खाहरूलाई चुनेर र मिश्रदेशमा रहँदा तिनीहरूलाई संख्यामा धेरै बढाउनुभयो र आफ्नो उचालिएको बाहुलीद्वारा तिनीहरूलाई त्यहाँबाट बाहिर निकाल्नुभयो ।”
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;
18 उहाँले झण्डै चालिस वर्षसम्म तिनीहरूलाई उजाड स्थानमा सहनुभयो।
ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.
19 कनानमा भएका सातवटा जातिहरूलाई उहाँले नास गरिसकेपछि हाम्रा मानिसहरूलाई तिनीहरूको भूमि आफ्नो उत्तराधिकारका लागि दिनुभयो ।
ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.
20 यी सबै घटनाहरू हुन चारसय पचास वर्षको अवधिमा भएका हुन् । यी सबै कुरापछि परमेश्‍वरले शमूएल अगमवक्‍ताको समयसम्म तिनीहरूलाई न्यायकर्ताहरू दिनुभयो ।
ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.
21 त्यसपछि, मानिसहरूले एउटा राजाको माग गरे, त्यसैले परमेश्‍वरले बेन्यामिन कुलको किशका छोरा शाऊललाई चालिस वर्षसम्मको निम्ति दिनुभयो ।
ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.
22 तब परमेश्‍वरले शाऊललाई राजाबाट हटाउनुभएपछि, उहाँले दाऊदलाई तिनीहरूको राजा हुनलाई खडा गर्नुभयो । परमेश्‍वरले यी नै दाऊदको बारेमा भन्‍नुभएको थियो, ‘यिशैका छोरा दाऊद मेरो हृदयअनुसारका मानिस भएको पाएँ र मैले चाहेको हरेक काम उनले गर्नेछन् ।’
ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.
23 यिनै मानिसका सन्तानहरूबाट उहाँले गर्नेछु भनी प्रतिज्ञा गर्नुभएअनुसार परमेश्‍वरले इस्राएलमा मुक्तिदाता येशू ल्याउनुभएको छ ।
“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.
24 येशू आउनुभन्दा अगाडि नै यो हुन थाल्यो, जब यूहन्‍नाले पहिला इस्राएलका सबै मानिसहरूलाई पश्‍चात्तापको बप्‍तिस्माको बारेमा घोषणा गरे ।
ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು.
25 जसरी यूहन्‍नाले आफ्नो काम पुरा गर्दै गर्दा उनले भने, ‘तिमीहरू म को हुँ भनी विचार गर्दछौ? म त्यो होइनँ । तर सुन, मपछि एकजना आउँदैहुनुहुन्छ, जसको खुट्टाको जुत्ताको तुना फुकाल्न म योग्यको छैनँ ।’
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.
26 भाइहरू, अब्राहामका वंशका सन्तानहरू, र तपाईंहरूमध्ये जसले परमेश्‍वरलाई आराधना गर्नुहुन्छ, यो मुक्तिबारेको सन्देश हामीहरूलाई नै पठाइएको छ ।
“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.
27 यरूशलेममा बस्‍नेहरू र तिनीहरूका शासकहरूले उहाँलाई वास्तमै चिनेनन्, न त हरेक शबाथमा पढिने अगमवक्‍ताहरूको आवजलाई नै बुझे । त्यसकारण तिनीहरूले यसरी येशूलाई मृत्यु दण्डको आज्ञा दिएर अगमवक्‍ताको भविष्यवाणीलाई पुरा गरे ।
ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.
28 उहाँलाई मृत्यु दण्डका निम्ति कुनै पनि दोष नभेट्टाए तापनि तिनीहरूले पिलातससँग उहाँलाई मार्न माग गरे ।
ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 जब तिनीहरूले उहाँको बारेमा लेखिएका यी सबै कुराहरू पुरा गरे, तिनीहरूले उहाँलाई रुखबाट ओराले र चिहानमा राखे ।
ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
30 तर परमेश्‍वरले उहाँलाई मृत्युबाट जीवित पार्नुभयो ।
ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.
31 गालीलदेखि यरूशलेमसम्म उहाँसँगै आएका मानिसहरूकहाँ उहाँ धेरै दिनसम्म देखापर्नु भयो । अहिले यिनीहरू नै मानिसहरूका लागि उहाँका साक्षी भएका छन् ।
ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.
32 यसकारण हाम्रा पितापुर्खाहरूलाई प्रतिज्ञा गरिएको असल समाचार हामीले तपाईंहरूकहाँ ल्याएकाछौँ ।
“ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.
33 परमेश्‍वरले येशूलाई मृत्युबाट जीवित पार्नुहुँदा, हामी तिनीहरूका सन्तानहरूका निम्ति उहाँले यी प्रतिज्ञाहरू पुरागरिदिनुभयो । जसरी यो दोस्रो भजनमा पनि लेखिएको छः ‘तिमी मेरा पुत्र हौ, आज म तिम्रो पिता भएको छु ।’
ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’
34 उहाँको शरीर नकुहोस् भनी उहाँले येशूलाई मृत्युबाट जीवित पार्नुभयो भन्‍ने तथ्यबारे उहाँले यसरी बोल्नुभएको छ, ‘म तिमीलाई दाऊदको पवित्र र निश्‍चित आशिष् दिनेछु ।’
ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’
35 यसैकारणले गर्दा उहाँले अर्को भजन पनि यसरी भन्‍नुभएको छ, ‘तपाईंले आफ्नो पवित्र जनलाई कुहिन दिनुहुनेछैन ।’
ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’
36 किनभने दाऊदले उनको पुस्तामा परमेश्‍वरको इच्छाअनुसार सेवा गरेपछि, उनको मृत्य भयो र उनलाई उनका पितापुर्खाहरूसँगै राखियो र उनको शरीर कुहियो ।
“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.
37 तर जसलाई परमेश्‍वरले जीवित पार्नुभयो उहाँलको शरीर कुहिएन ।
ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.
38 त्यसैले भाइहरू हो, यो कुरा तपाईंहरूलाई थाहा होस् कि यिनै मानिसद्वारा तपाईंहरूलाई पाप क्षमाको घोषणा गरिन्छ ।
“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.
39 विश्‍वास गर्ने हरेक उहाँद्वारा सबै थोकहरूबाट धर्मी ठहरिइन्छ, जसबाट मोशाको व्यवस्थाले तपाईंहरूलाई धर्मी ठहराउन सकेको थिएन ।
ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.
40 यसैकारण होसियार हुनुहोस्, अगमवक्‍ताले बोलेको यो कुरा तपाईंहरूमाथि आइनपरोस्:
ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ:
41 ‘घृणा गर्नेहरू हो, हेर र छक्‍क पर, र नष्‍ट भइजाओ, तिमीहरूको समयमा मैले काम गरिरहेको छु, यदि कसैले तिमीहरूलाईं यसबारे घोषणा गरे पनि तिमीहरू कहिल्यै विश्‍वास गर्ने छैनौ ।’”
“‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು.
42 पावल र बारनाबास त्यहाँबाट जान लाग्दा मानिसहरूले यी नै वचनहरू अर्को विश्राममा आएर बोलिदिनुहोस् भनी तिनीहरूलाई बिन्ती गरे ।
ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.
43 जब सभाघरको सभा अन्त्य भयो, तब धेरै यहूदीहरू र यहूदी मत मान्‍ने भक्तहरू पावल र बारनाबासको पछि लागे । तिनीहरूले परमेश्‍वरको अनुग्रहमा निरन्तर रहिरहन उनीहरूलाई उत्साह दिए ।
ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.
44 अर्को विश्राममा, लगभग पुरै सहर नै प्रभुको वचन सुन्‍नलाई सँगसँगै भेलाभएको थियो ।
ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.
45 जब यहूदीहरूले भिडलाई देखे, तिनीहरू डाहले भरिए, र पावलले भनेका कुराहरूको बिरुद्धमा बोल्न थाले र उनको अपमान गरे।
ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.
46 तर पावल र बारनाबासले साहससित बोल्दै भने, “परमेश्‍वरको वचन पहिले तपाईंहरूकहाँ नै बोल्नु नै आवश्यक थियो । तपाईंहरूबाट धकेलिएको देखेर आफूले आफैँलाई अनन्त जीवन प्राप्‍त गर्नदेखि अयोग्य तुल्याउनुभएको हुनाले, हेर्नुहोस्, हामी गैरयहूदी तर्फ फर्केनेछौँ । (aiōnios g166)
ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ. (aiōnios g166)
47 किनभने परमेश्‍वरले हामीलाई यस्तो आज्ञा गर्नुभएको छ, ‘मैले तिमीलाई गैरयहूदीहरूका निम्ति ज्योतिको रूपमा राखेकोछु, र पृथ्वीको अन्तिम छेउसम्म तिमीहरूले मुक्ति ल्याउनु पर्छ ।”
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’”
48 जब गैरयहूदीहरूले यो सुने, तिनीहरू खुसी भए र परमेश्‍वरको वचनको महिमा गरे । अनन्त जीवनका लागि नियुक्त गरिएका जतिले विश्‍वास गरे । (aiōnios g166)
ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು. (aiōnios g166)
49 त्यस सम्पूर्ण क्षेत्रभरि नै प्रभुको वचन फैलियो ।
ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು.
50 तर यहूदीहरूले भक्त र महत्त्वपूर्ण स्‍त्रीहरू र साथ-साथै सहरका मुख्य मानिसहरूसँग पावल र बारनाबासको विरुद्धमा अनुरोध गरे । तिनीहरूले पावल र बारनाबासलाई दण्डित गरे उनीहरूलाई तिनीहरूको सहरको सिमाना कटाए ।
ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.
51 तर पावल र बारनाबासले आफ्नो खुट्टामा लागेको धुलो तिनीहरूका विरुद्धमा टकटक्याए । त्यसपछि तिनीहरू आइकोनियम सहरमा गए ।
ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.
52 अनि चेलाहरू आनन्द र पवित्र आत्माले भरपुर भए ।
ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.

< प्रेरित 13 >