< प्रेरित 5 >

1 अब एक जना हननिया नाउँ गरेका मानिसले आफ्नी पत्‍नी सफिरासँग मिलेर एक टुक्रा जमिन बेचे ।
ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
2 र उनले त्यो पैसाको केही अंश आफूसँगै राखे (यो कुरा उनकी पत्‍नीलाई पनि थाहा थियो) र यसको बाँकी अंश ल्याएर प्रेरितहरूको पाउमा राखिदिए ।
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
3 तर पत्रुसले भने, “हननिया, पवित्र आत्मालाई झुट बोल्न र त्यस जमिनको मूल्यको केही अंश राख्‍नलाई तिम्रो हृदयलाई शैतानले किन भर्‍यो?
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
4 यसलाई बिक्री नगर्दा पनि के यो तिम्रो आफ्नो थिएन र? अनि यसलाई बेचिसकेपछि पनि यो तिम्रो आफ्नै नियन्‍त्रणमा नै थिएन र? तिमीले तिम्रो हृदयमा यस्तो कुरा कसरी सोच्यौ? तिमीले मानिसहरूलाई होइन तर परमेश्‍वरलाई झुट बोलेका छौ ।
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
5 यी कुराहरू सुनेर हननिया भुइँमा लडे र उनको मृत्यु भयो र यो कुरा सुन्‍नेहरू सबैमा ठुलो डर छायो ।
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
6 जवान मानिसहरू अगाडि आए र उनलाई कपडाले बेह्रे र तिनीहरूले उनलाई बोकेर बाहिर लगे र गाडे ।
ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
7 त्यसको झण्डै तिन घण्टापछि उनकी पत्‍नी त्यहाँ के भएको थियो भन्‍ने थाहै नपाई भित्र आइन् ।
ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
8 पत्रुसले उनलाई भने, “तिमीहरूले सो जमिनलाई त्यत्ति नै मूल्यमा बेचेका हौ या होइनौ, मलाई बताऊ ।” उनले भनिन्, “हो, त्यत्तिमा नै हो ।”
ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
9 तब पत्रुसले उनलाई भने, “तिमीहरू परमप्रभुको आत्मालाई जाँच गर्न कसरी सँगै सहमत भयौ? हेर, तिम्रो पतिलाई गाड्नेहरूका पाउ ढोकामा नै छन् र तिनीहरूले तिमीलाई पनि बोकेर बाहिर लानेछन् ।
ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
10 तिनी तुरुन्तै उनको पाउमा लडिन् र तिनको मृत्यु भयो र ती जवान मानिसहरू भित्र आए र तिनलाई मृत भेट्टाए; तिनीहरूले तिनलाई बोकेर बाहिर लगे र तिनलाई तिनको पतिको नजिकै गाडिदिए ।
೧೦ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
11 पुरै मण्डलीमा र यी कुराहरू सुन्‍ने सबैमा ठुलो डर छायो ।
೧೧ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.
12 प्रेरितहरूको हातद्वारा मानिसहरूका बिचमा धेरै चिह्न र आश्‍चर्यकर्महरू भइरहेका थिए । तिनीहरू सबै सोलोमनको दलानमा सँगै थिए ।
೧೨ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
13 तिनीहरूलाई मानिसहरूद्वारा उच्‍च सम्मान मिलेको भए तापनि कसैले पनि तिनीहरूसँगै सामेल हुन साहस गरेनन् ।
೧೩ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
14 अझ धेरै विश्‍वासीहरू अर्थात् असंख्य स्‍त्रीहरू र पुरुषहरू प्रभुमा थपिँदै थिए ।
೧೪ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
15 पत्रुस त्यहाँबाट भएर आउँदा तिनको छाया तिनीहरूमध्ये कोहीमाथि परोस् भनेर तिनीहरूले बिरामीहरूलाई गल्लीहरूमा बोकेर ल्याए र तिनीहरूलाई खाट र पलङहरूमा राखे ।
೧೫ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
16 त्यहाँ यरूशलेम वरिपरिका सहरहरूबाट पनि बिरामी र अशुद्ध आत्माले सताइएका मानिसहरू ठुलो संख्यामा आए र तिनीहरू सबैले निको भए ।
೧೬ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
17 तर प्रधान पूजाहारी र उनीसँग रहनेहरू सबै जना (जुन सदूकीहरूको सम्प्रदाय हो) उठे र तिनीहरू ईर्ष्याले भरिए ।
೧೭ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
18 तिनीहरूले प्रेरितहरूमाथि हात हाले र तिनीहरूलाई सार्वजनिक झ्यालखानामा थुनिदिए ।
೧೮ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
19 तर रातको समयमा परमप्रभुका एउटा दूतले झ्यालखानाका ढोकाहरू खोलिदिए र तिनीहरूलाई बाहिर लगे र भने,
೧೯ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
20 “जाओ र त्यस मन्दिरमा खडा होओ र यस जीवनका सबै वचनहरू मानिसहरूलाई बताओ ।”
೨೦“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
21 जब तिनीहरूले यो कुरा सुने तब तिनीहरू सबेरै मन्दिरभित्र प्रवेश गरे र शिक्षा दिए । तर प्रधान पूजाहारी र तिनीहरूसँग भएकाहरू आए र परिषद्लाई इस्राएलका मानिसहरूका एल्डरहरूसँगै बोलाए र प्रेरितहरूलाई ल्याउन लगाउनलाई झ्यालखानामा पठाए ।
೨೧ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
22 तर ती गएका अधिकारीहरूले तिनीहरूलाई झ्यालखानामा भेट्टाएनन् र तिनीहरू फर्केर आए र प्रतिवेदन दिए ।
೨೨ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
23 “हामीले झ्यालखानालाई राम्ररी बन्द गरिएको पायौँ र पहरेदारहरू ढोकामा उभिरहेका थिए, तर त्यसलाई खोल्दा हामीले भित्र कोही पनि भेट्टाएनौँ ।”
೨೩“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
24 जब मन्दिरका कप्‍तान र मुख्य पूजाहारीहरूले यी कुराहरू सुने, के हुने होला भनी तिनीहरू अन्योलमा परे ।
೨೪ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
25 तब कोही तिनीहरूकहाँ आए र तिनीहरूलाई भने, “तपाईंहरूले झ्यालखानामा राख्‍नुभएका ती मानिसहरू, मन्दिरमा खडा भएर मानिसहरूलाई सिकाइरहेका छन् ।”
೨೫ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
26 त्यसैले, कप्‍तान हाकिमहरूसँगै गए र तिनीहरूलाई हिंसाविना नै फर्काएर ल्याए । किनकि तिनीहरू मानिसहरूले ढुङ्गाले हान्लान् भनी डराए ।
೨೬ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
27 तिनीहरूले उनीहरूलाई ल्याएपछि, तिनीहरूले उनीहरूलाई सभाको अगि राखे । प्रधान पूजाहारीले उनीहरूलाई यसो भनेर सोधपुछ गरे,
೨೭ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
28 “हामीले तिमीहरूलाई यस नाउँमा नसिकाउनलाई कडा आज्ञा दियौँ तर पनि तिमीहरूले आफ्नो शिक्षाले यरूशलेम भरिसकेका छौ र त्यस मानिसको रगत हामीमाथि ल्याउने इच्छा गर्छौ ।”
೨೮“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
29 तर पत्रुस र प्रेरितहरूले जवाफ दिए, “हामीले मानिसहरूको भन्दा परमेश्‍वरको आज्ञा पालन गर्नु पर्छ ।
೨೯ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
30 हाम्रा पितापुर्खाका परमेश्‍वरले येशूलाई मृत्युबाट उठाउनु भयो, जसलाई तपाईंहरूले रुखमा झुण्ड्याएर मार्नुभयो ।
೩೦ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
31 परमेश्‍वरले इस्राएललाई पश्‍चात्ताप गर्न र पापको क्षमा प्रदान गर्न उहाँलाई राजकुमार र मुक्तिदाता हुनलाई आफ्नो दाहिने हाततर्फ उचाल्नु भयो ।
೩೧ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
32 हामीहरू यी कुराहरूका साक्षी छौँ र पवित्र आत्मा पनि यसको साक्षी हुनुहुन्छ जसलाई परमेश्‍वरले उहाँको आज्ञा पालन गर्नेहरूलाई दिनुभएको छ ।”
೩೨ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.
33 जब परिषद्का सदस्यहरूले यो सुने तब तिनीहरू क्रुद्ध भए र प्रेरितहरूलाई मार्ने चाहना गरे ।
೩೩ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
34 तर गमलिएल नाउँ गरेका फरिसी र व्यवस्थाका एक जना शिक्षक थिए जो सबै मानिसहरूद्वारा सम्मानित थिए । उनी उभिए र केही समयको लागि प्रेरितहरूलाई बाहिर रहनलाई आज्ञा गरे ।
೩೪ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
35 तब उनले तिनीहरूलाई भने, “इस्राएलका मानिसहरू हो, तपाईंहरूले यी मानिसहरूलाई जे गर्नलाई प्रस्ताव गर्नुभएको छ, त्यसमा राम्ररी ध्यान दिनुहोस् ।
೩೫ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
36 केही समयअगि, थूदास केही हुँ भन्‍ने दाबी गर्दै खडा भयो, र झण्डै चार सय जना मानिस त्योसँगै लागे । त्यो मारियो र त्यसका आज्ञा पालन गर्नेहरू सबै तितरवितर भए र त्यो सब छरपस्ट भयो ।
೩೬ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
37 त्यो मानिसपछि जनगणनाको समयमा गालीलको यहूदा खडा भयो र कतिपय मानिसहरूलाई आफ्नो पछि खिँच्यो । त्यो पनि नष्‍ट भयो र उसका आज्ञा पालन गर्दै आइरहेकाहरू सबै छरपस्ट भए ।
೩೭ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
38 अब म तपाईंहरूलाई भन्छु कि यी मानिसहरूबाट टाढै रहनुहोस् र यिनीहरूलाई छोडिदिनुहोस् किनकि यदि यो योजना वा काम मानिसहरूको हो भने, यो पतन हुनेछ ।
೩೮ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
39 तर यदि यो परमेश्‍वरको हो भने, तपाईंहरूले तिनीहरूलाई पतन गराउन सक्‍नुहुन्‍न र तपाईंहरूले आफैँलाई परमेश्‍वरको विरुद्धमा लडिरहेको पाउनु हुनेछ ।” यसरी तिनीहरूले तिनको कुरा माने ।
೩೯ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
40 तब तिनीहरूले प्रेरितहरूलाई भित्र बोलाए र उनीहरूलाई कुटे र येशूको नाउँमा नबोल्नलाई आज्ञा गरे र तिनीहरूलाई जान दिए ।
೪೦ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
41 तिनीहरू त्यस नाउँको निम्ति अपमान भोग्‍न योग्यका गनिएकामा तिनीहरूले अनान्दित हुँदै त्यो परिषद् छाडे ।
೪೧ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
42 त्यसपछि हरेक दिन मन्दिर र घर-घरमा, तिनीहरूले निरन्तर येशूलाई नै ख्रीष्‍टको रूपमा सिकाइरहेका र प्रचार गरिरहेका थिए ।
೪೨ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

< प्रेरित 5 >