< प्रेरित 5 >

1 अब एक जना हननिया नाउँ गरेका मानिसले आफ्नी पत्‍नी सफिरासँग मिलेर एक टुक्रा जमिन बेचे ।
ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು.
2 र उनले त्यो पैसाको केही अंश आफूसँगै राखे (यो कुरा उनकी पत्‍नीलाई पनि थाहा थियो) र यसको बाँकी अंश ल्याएर प्रेरितहरूको पाउमा राखिदिए ।
ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.
3 तर पत्रुसले भने, “हननिया, पवित्र आत्मालाई झुट बोल्न र त्यस जमिनको मूल्यको केही अंश राख्‍नलाई तिम्रो हृदयलाई शैतानले किन भर्‍यो?
ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?
4 यसलाई बिक्री नगर्दा पनि के यो तिम्रो आफ्नो थिएन र? अनि यसलाई बेचिसकेपछि पनि यो तिम्रो आफ्नै नियन्‍त्रणमा नै थिएन र? तिमीले तिम्रो हृदयमा यस्तो कुरा कसरी सोच्यौ? तिमीले मानिसहरूलाई होइन तर परमेश्‍वरलाई झुट बोलेका छौ ।
ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.
5 यी कुराहरू सुनेर हननिया भुइँमा लडे र उनको मृत्यु भयो र यो कुरा सुन्‍नेहरू सबैमा ठुलो डर छायो ।
ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.
6 जवान मानिसहरू अगाडि आए र उनलाई कपडाले बेह्रे र तिनीहरूले उनलाई बोकेर बाहिर लगे र गाडे ।
ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.
7 त्यसको झण्डै तिन घण्टापछि उनकी पत्‍नी त्यहाँ के भएको थियो भन्‍ने थाहै नपाई भित्र आइन् ।
ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು.
8 पत्रुसले उनलाई भने, “तिमीहरूले सो जमिनलाई त्यत्ति नै मूल्यमा बेचेका हौ या होइनौ, मलाई बताऊ ।” उनले भनिन्, “हो, त्यत्तिमा नै हो ।”
ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು.
9 तब पत्रुसले उनलाई भने, “तिमीहरू परमप्रभुको आत्मालाई जाँच गर्न कसरी सँगै सहमत भयौ? हेर, तिम्रो पतिलाई गाड्नेहरूका पाउ ढोकामा नै छन् र तिनीहरूले तिमीलाई पनि बोकेर बाहिर लानेछन् ।
“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.
10 तिनी तुरुन्तै उनको पाउमा लडिन् र तिनको मृत्यु भयो र ती जवान मानिसहरू भित्र आए र तिनलाई मृत भेट्टाए; तिनीहरूले तिनलाई बोकेर बाहिर लगे र तिनलाई तिनको पतिको नजिकै गाडिदिए ।
ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.
11 पुरै मण्डलीमा र यी कुराहरू सुन्‍ने सबैमा ठुलो डर छायो ।
ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.
12 प्रेरितहरूको हातद्वारा मानिसहरूका बिचमा धेरै चिह्न र आश्‍चर्यकर्महरू भइरहेका थिए । तिनीहरू सबै सोलोमनको दलानमा सँगै थिए ।
ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.
13 तिनीहरूलाई मानिसहरूद्वारा उच्‍च सम्मान मिलेको भए तापनि कसैले पनि तिनीहरूसँगै सामेल हुन साहस गरेनन् ।
ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.
14 अझ धेरै विश्‍वासीहरू अर्थात् असंख्य स्‍त्रीहरू र पुरुषहरू प्रभुमा थपिँदै थिए ।
ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.
15 पत्रुस त्यहाँबाट भएर आउँदा तिनको छाया तिनीहरूमध्ये कोहीमाथि परोस् भनेर तिनीहरूले बिरामीहरूलाई गल्लीहरूमा बोकेर ल्याए र तिनीहरूलाई खाट र पलङहरूमा राखे ।
ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.
16 त्यहाँ यरूशलेम वरिपरिका सहरहरूबाट पनि बिरामी र अशुद्ध आत्माले सताइएका मानिसहरू ठुलो संख्यामा आए र तिनीहरू सबैले निको भए ।
ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು.
17 तर प्रधान पूजाहारी र उनीसँग रहनेहरू सबै जना (जुन सदूकीहरूको सम्प्रदाय हो) उठे र तिनीहरू ईर्ष्याले भरिए ।
ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.
18 तिनीहरूले प्रेरितहरूमाथि हात हाले र तिनीहरूलाई सार्वजनिक झ्यालखानामा थुनिदिए ।
ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.
19 तर रातको समयमा परमप्रभुका एउटा दूतले झ्यालखानाका ढोकाहरू खोलिदिए र तिनीहरूलाई बाहिर लगे र भने,
ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,
20 “जाओ र त्यस मन्दिरमा खडा होओ र यस जीवनका सबै वचनहरू मानिसहरूलाई बताओ ।”
“ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.
21 जब तिनीहरूले यो कुरा सुने तब तिनीहरू सबेरै मन्दिरभित्र प्रवेश गरे र शिक्षा दिए । तर प्रधान पूजाहारी र तिनीहरूसँग भएकाहरू आए र परिषद्लाई इस्राएलका मानिसहरूका एल्डरहरूसँगै बोलाए र प्रेरितहरूलाई ल्याउन लगाउनलाई झ्यालखानामा पठाए ।
ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.
22 तर ती गएका अधिकारीहरूले तिनीहरूलाई झ्यालखानामा भेट्टाएनन् र तिनीहरू फर्केर आए र प्रतिवेदन दिए ।
ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,
23 “हामीले झ्यालखानालाई राम्ररी बन्द गरिएको पायौँ र पहरेदारहरू ढोकामा उभिरहेका थिए, तर त्यसलाई खोल्दा हामीले भित्र कोही पनि भेट्टाएनौँ ।”
“ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.
24 जब मन्दिरका कप्‍तान र मुख्य पूजाहारीहरूले यी कुराहरू सुने, के हुने होला भनी तिनीहरू अन्योलमा परे ।
ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.
25 तब कोही तिनीहरूकहाँ आए र तिनीहरूलाई भने, “तपाईंहरूले झ्यालखानामा राख्‍नुभएका ती मानिसहरू, मन्दिरमा खडा भएर मानिसहरूलाई सिकाइरहेका छन् ।”
ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.
26 त्यसैले, कप्‍तान हाकिमहरूसँगै गए र तिनीहरूलाई हिंसाविना नै फर्काएर ल्याए । किनकि तिनीहरू मानिसहरूले ढुङ्गाले हान्लान् भनी डराए ।
ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.
27 तिनीहरूले उनीहरूलाई ल्याएपछि, तिनीहरूले उनीहरूलाई सभाको अगि राखे । प्रधान पूजाहारीले उनीहरूलाई यसो भनेर सोधपुछ गरे,
ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.
28 “हामीले तिमीहरूलाई यस नाउँमा नसिकाउनलाई कडा आज्ञा दियौँ तर पनि तिमीहरूले आफ्नो शिक्षाले यरूशलेम भरिसकेका छौ र त्यस मानिसको रगत हामीमाथि ल्याउने इच्छा गर्छौ ।”
ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.
29 तर पत्रुस र प्रेरितहरूले जवाफ दिए, “हामीले मानिसहरूको भन्दा परमेश्‍वरको आज्ञा पालन गर्नु पर्छ ।
ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!
30 हाम्रा पितापुर्खाका परमेश्‍वरले येशूलाई मृत्युबाट उठाउनु भयो, जसलाई तपाईंहरूले रुखमा झुण्ड्याएर मार्नुभयो ।
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.
31 परमेश्‍वरले इस्राएललाई पश्‍चात्ताप गर्न र पापको क्षमा प्रदान गर्न उहाँलाई राजकुमार र मुक्तिदाता हुनलाई आफ्नो दाहिने हाततर्फ उचाल्नु भयो ।
ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.
32 हामीहरू यी कुराहरूका साक्षी छौँ र पवित्र आत्मा पनि यसको साक्षी हुनुहुन्छ जसलाई परमेश्‍वरले उहाँको आज्ञा पालन गर्नेहरूलाई दिनुभएको छ ।”
ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.
33 जब परिषद्का सदस्यहरूले यो सुने तब तिनीहरू क्रुद्ध भए र प्रेरितहरूलाई मार्ने चाहना गरे ।
ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.
34 तर गमलिएल नाउँ गरेका फरिसी र व्यवस्थाका एक जना शिक्षक थिए जो सबै मानिसहरूद्वारा सम्मानित थिए । उनी उभिए र केही समयको लागि प्रेरितहरूलाई बाहिर रहनलाई आज्ञा गरे ।
ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.
35 तब उनले तिनीहरूलाई भने, “इस्राएलका मानिसहरू हो, तपाईंहरूले यी मानिसहरूलाई जे गर्नलाई प्रस्ताव गर्नुभएको छ, त्यसमा राम्ररी ध्यान दिनुहोस् ।
ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.
36 केही समयअगि, थूदास केही हुँ भन्‍ने दाबी गर्दै खडा भयो, र झण्डै चार सय जना मानिस त्योसँगै लागे । त्यो मारियो र त्यसका आज्ञा पालन गर्नेहरू सबै तितरवितर भए र त्यो सब छरपस्ट भयो ।
ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.
37 त्यो मानिसपछि जनगणनाको समयमा गालीलको यहूदा खडा भयो र कतिपय मानिसहरूलाई आफ्नो पछि खिँच्यो । त्यो पनि नष्‍ट भयो र उसका आज्ञा पालन गर्दै आइरहेकाहरू सबै छरपस्ट भए ।
ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.
38 अब म तपाईंहरूलाई भन्छु कि यी मानिसहरूबाट टाढै रहनुहोस् र यिनीहरूलाई छोडिदिनुहोस् किनकि यदि यो योजना वा काम मानिसहरूको हो भने, यो पतन हुनेछ ।
ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.
39 तर यदि यो परमेश्‍वरको हो भने, तपाईंहरूले तिनीहरूलाई पतन गराउन सक्‍नुहुन्‍न र तपाईंहरूले आफैँलाई परमेश्‍वरको विरुद्धमा लडिरहेको पाउनु हुनेछ ।” यसरी तिनीहरूले तिनको कुरा माने ।
ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.
40 तब तिनीहरूले प्रेरितहरूलाई भित्र बोलाए र उनीहरूलाई कुटे र येशूको नाउँमा नबोल्नलाई आज्ञा गरे र तिनीहरूलाई जान दिए ।
ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.
41 तिनीहरू त्यस नाउँको निम्ति अपमान भोग्‍न योग्यका गनिएकामा तिनीहरूले अनान्दित हुँदै त्यो परिषद् छाडे ।
ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.
42 त्यसपछि हरेक दिन मन्दिर र घर-घरमा, तिनीहरूले निरन्तर येशूलाई नै ख्रीष्‍टको रूपमा सिकाइरहेका र प्रचार गरिरहेका थिए ।
ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.

< प्रेरित 5 >