< यशैया 40 >

1 तिमीहरूका परमेश्‍वर भन्‍नुहुन्छ, “सान्त्वना, मेरा मानिसहरू सान्त्वना ।
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.
2 यरूशलेमसँग कोमलत भएर बोल । अनि त्यसलाई घोषणा गर, त्यसका युद्ध समाप्‍त भएको छ, त्यसका अधर्म क्षमा गरिएको छ, आफ्‍ना सबै पापहरूका निम्‍ति त्यसले परमप्रभुबाट दोब्बर पाएको छ ।”
ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.
3 एउटा आवाजले कराउँछ, “उजाड-स्‍थानमा परमप्रभुको बाटो तयार पार । अरबमा हाम्रा परमेश्‍वरको निम्ति मुल बाटो सोझो बनाओ ।”
“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.
4 हरेक मैदानलाई माथि उठाइनेछ, र हरेक पर्वत र डाँडालाई समतल पारिनेछ । खाल्टाखुल्टी जमिनलाई समतल बनाइनेछ र नमिलेको ठाउँहरूलाई मैदान बनाइनेछ ।
ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.
5 र परमप्रभुको महिमा प्रकट गरिनेछ र सबै मानिसहरूले एकसाथ यो देख्‍नेछन् । किनकि परमप्रभुको मुखले यो बोलेको छ ।
ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”
6 एउटा आवाजले भन्छ, “करा ।” अर्कोले जवाफ दिन्छ, “मैले के भनेर कराउने?” सबै प्राणी घाँस हो र तिनीहरूका विश्‍वस्‍तताका करार सबै खेतबारीका फुलजस्तै हो ।
ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,
7 यसमाथि परमप्रभुको सास पर्दा घाँस ओइलाउँछ र फुल सुक्छ । निश्‍चय नै मानवहरू घाँसै हुन् ।
ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.
8 घाँस ओइलाउँछ, फुल सुक्छ, तर हाम्रा परमेश्‍वरको वचन सदासर्वदा रहन्छ ।”
ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು. ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು,” ಎಂದು ಉತ್ತರವಾಯಿತು.
9 ए सुसमाचार ल्याउनेहरू हो, उच्‍च पहाड सियोनमाथि जाओ । हे यरूशलेम ठुलो सोरमा कराओ । ए सुसमाचार ल्याउनेहरू हो, आफ्ना सोर उचाल, नडराओ । यहूदाका सहरहरूलाई भन, “तिमीहरूका परमेश्‍वर यहाँ हुनुहुन्छ!”
ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.
10 हेर, परमप्रभु परमेश्‍वर विजयी योद्धाझैं आउनुहुन्छ र उहाँका शक्तिशाली बाहुलीले उहाँको निम्ति शासन गर्छ । हेर, उहाको इनाम उहाँसँगै छ र उहाँले उद्धार गर्नुभएकाहरू उहाँको अगि-अगि जान्छन् ।
ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.
11 एक जना गोठालोले झैं उहाँले आफ्ना बगाललाई खुवाउनुहुनेछ, उहाँले थुमाहरूलाई आफ्नो बाहुलीमा जम्‍मा गर्नुहुन्‍छ र तिनीहरूलाई आफ्‍ना हृदयको छेउमा बोक्‍नुहुन्‍छ, अनि पाठाहरूलाई दूध खुवाउने भेडाहरूलाई कोमल भएर डोर्‍याउनुहुन्‍छ ।
ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.
12 पानीलाई कसले आफ्नो हातमा नापेको छ, आकाशलाई कसले आफ्‍नो हातले नापेको छ, पृथ्वीको धूलोलाई कसले डालोमा राखेको छ, पहाडहरू वा पर्वतहरूलाई कसले तराजुमा जोखेको छ?
ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು?
13 परमप्रभुको मनलाई कसले बुझेको छ, वा उहाँको सल्लाहकार भएर उहाँलाई कसले सिकाएको छ?
ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು? ಸಲಹೆಗಾರನಾಗಿ ಅವರಿಗೆ ಬೋಧಿಸಿದವನು ಯಾರು?
14 कसबाट उहाँले कुन बेला सुझाव पाउनुभयो? उहाँलाई कुराहरू गर्ने ठिक तरिका कसले सिकाएको छ, अनि उहालाई कसले ज्ञान सिकाएको वा उहाँलाई कसले समझको बाटो देखाएको छ?
ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು. ಆತನಿಗೆ ಸರಿಯಾದ ಮಾರ್ಗವನ್ನು ಕಲಿಸಿದವನು ಯಾರು? ಆತನಿಗೆ ಜ್ಞಾನವನ್ನು ಕಲಿಸಿದವನಾರು ಇಲ್ಲವೆ ತಿಳುವಳಿಕೆಯ ಮಾರ್ಗವನ್ನು ಆತನಿಗೆ ತೋರಿಸಿದವನಾರು?
15 हेर, जातिहरू बाल्टीमा एक थोपा पानीजस्तै हुन् र तराजुहरूमा धूलोजस्तै ठानिन्छ । हेर, उहाँलले टापुहरूलाई छेस्कोझैं जोख्‍नुहुन्छ ।
ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
16 लेबनान दउराको निम्ति पर्याप्‍त छैन न त यसका जङ्गली जनावरहरू होम बलिको निम्ति पर्याप्‍त छन् ।
ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು.
17 उहाँको सामु सबै जातिहरू अपर्याप्‍त छन् । उहाँले तिनीहरूलाई केही जस्‍तो पनि ठान्‍नुहुन्‍न ।
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ. ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ, ವ್ಯರ್ಥವಾಗಿಯೂ ಇವೆ.
18 तब तिमीहरूले परमेश्‍वरलाई केसँग तुलना गर्नेछौ? तिमीहरूले उहाँलाई कुन मूर्तीसँग तुलना गर्नेछौ?
ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
19 एउटा मूर्ती! एक जना कारीगरले यसलाई बनाउँछः सुनारले यसमा सुनको जलप लगाउँछ र यसको निम्ति चाँदीको सिक्री बनाउँछ ।
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
20 बलि चढाउनलाई कसैले अग्राखकै दाउरा ल्‍याउँछ । नढल्ने मूर्ती बनाउन उसले एक जना निपुण कारीगर खोज्छ ।
ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
21 के तिमीहरूले जानेका छैनौ? के तिमीहरूले सुनेका छैनौ? के सुरुदेखि नै यो कुरा तिमीहरूलाई भनिएको छैन? पृथ्वीको जगहरू बसालेदेखि नै तिमिहरूले बुझेका छैनौ?
ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ತಿಳಿದಿಲ್ಲವೋ? ಭೂಮಿಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗಲಿಲ್ಲವೋ?
22 पृथ्वीको क्षितिजभन्‍दा माथि विराजमान हुनुहुने उहाँ नै हुनुहुन्छ । अनि यसका बासिन्दाहरू उहाँको सामु फट्याङ्ग्राहरू जस्तै छन् । आकाशहरूलाई उहाँले पर्दाझैं तन्काउनुहुन्छ र तिनीहरूलाई बस्‍ने पालझैं फिंजाउनुहुन्छ ।
ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
23 उहाँले शासकहरूलाई बकामको बनाउनुहुन्छ र पृथ्वीका शासकहरूलाई नगन्‍य बनाउनुहुन्छ ।
ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.
24 ती रोपिनेबित्तिकै, छरिनेबित्तिकै, तिनका जरा जमिन पर्नेबित्तिकै, जब उहाँले तिमाथि फुक्‍नुहुन्‍छ, तब तिनीहरू ओइलाउँन्, र हावाले तिनलाई परालझैं लैजान्छ ।
ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.
25 परमपवित्र भन्‍नुहुन्छ, “तब तिमीहरूले मलाई कोसँग तुलना गर्छौ, म कोजस्तो छु?”
ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಪರಿಶುದ್ಧ ದೇವರು ಕೇಳುತ್ತಾರೆ.
26 माथि आकाशमा हेर! यी सबै ताराहरूलाई कसले सृजेका हुन्? उहाँले ती बनाउनलाई उहाँले नै नेतृत्व गर्नुहुन्छ र ती सबैको नाउँ काढेर बोलाउनुहुन्छ । उहाँको शक्तिको माहन्‌ता र उहाँको सामर्थ्यको शक्तिद्वारा एउटा पनि हराएका छैनन् ।
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.
27 ए याकूब, तँ किन यसो भन्‍छस्, ए इस्राएल, तँ किन घोषणा गर्छस्, “मेरो बाटो परमप्रभुबाट लुकाइएको छ र मेरो परमेश्‍वरले मेरो बदलाको वास्ता गर्नुहुन्‍न”?
ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?
28 के तैंले जानेका छैनस्? के तैंले सुनेका छैनस्? परमप्रभु अनन्तका परमेश्‍वर, पृथ्वीको अन्तसम्मका सृष्‍टिकर्ता थकित वा हैरान बन्‍नुहुन्‍न । उहाँको समझको कुनै सिमा छैन ।
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಯೆಹೋವ ದೇವರು ನಿರಂತರವಾದ ದೇವರೂ, ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ, ಬಳಲುವುದಿಲ್ಲ, ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
29 उहाँले थकितहरूलाई बल दिनुहुन्छ । अनि कमजोरहरूलाई उहाँले नयाँ ऊर्जा दिनुहुन्छ ।
ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
30 जवान मानिसहरू पनि थकित र हैरान हुन्‍छन्, अनि जवानहरूले ठेस खान्‍छन् र ढल्‍छन्:
ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.
31 तर परमप्रभुमा आशा गर्नेहरूले आफ्‍नो बललाई नयाँ बनाउनेछन् । तिनीहरू चिलहरू झैं पखेटाहरूले माथि-माथि उड्नेछन् । तिनीहरू दौडनेछन् र हैरान हुनेछैनन् । तिनीहरू हिंड्नेछन् र मूर्छा पर्नेछैनन् ।
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.

< यशैया 40 >