< लुका 12 >

1 त्यसै बेला, जब हजारौँ मानिस एकै ठाउँमा जम्मा भएका थिए । उनीहरूको सङ्ख्या अत्यधिक भएको कारण एउटाले अर्कोलाई कुल्चिरहेका थियो । उहाँले आफ्ना चेलाहरूलाई यसो भन्‍न सुरु गर्नुभयो, “फरिसीहरूको खमिरबाट सावधान रहो, जुनचाहिँ पाखण्डीपना हो ।
ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
2 तर कुनै पनि कुराहरू यसरी गुप्‍त छैनन् जुन प्रकट हुनै सक्दैनन् र कुनै पनि कुराहरू लुकेका छैनन् जुन कुरा थाहा नहोस् ।
ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.
3 यसकारण, तिमीले जे कुराहरू अन्धकारमा भनेका छौ, त्यो ज्योतिमा सुनिनेछ र जे कुरा तिमीले भित्री कोठामा कानमा भनेका छौ, त्यो घरको धुरीबाट घोषणा गरिनेछ ।
ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
4 मेरा मित्रहरू, म तिमीलाई भन्दछु कि शरीरलाई मार्नेहरूसँग नडराओ किनकि त्यसपछि तिनीहरूले केही गर्न सक्दैनन् ।
“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
5 तर म तिमीहरूलाई कोसँग डराउने भनी चेताउनी दिन्छु । त्यो व्यक्‍तिसँग डराओ जससित मारेपछि नरकमा फालिदिने अधिकार छ । हो, म तिमीलाई भन्दछु, उहाँसँग डराओ । (Geenna g1067)
ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. (Geenna g1067)
6 के पाँचवटा भङ्गेरा दुई सिक्‍कामा बेचिँदैनन् र? परमेश्‍वरको दृष्‍टिबाट एउटा पनि बिर्सेको हुँदैन ।
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.
7 तर उहाँले तिम्रा कपालका सबै रौँको पनि गणना गर्नुभएको छ । उहाँसित नडराओ, किनकि तिमीहरू धेरै भङ्गेराहरूभन्दा पनि मूल्यवान् छौ ।
ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
8 म तिमीलाई भन्दछु, कि हरेक जसले मानिसहरूका अगि मलाई स्वीकार गर्दछ, परमप्रभुका दूतहरूका अगि मानिसका पुत्रले पनि उसलाई स्वीकार गर्नेछन् ।
“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
9 तर जसले मलाई मानिसहरूका सामु इन्कार गर्दछ, परमप्रभु परमेश्‍वरका दूतहरूले उसलाई पनि इन्कार गर्नेछन् ।
ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.
10 हरेक जसले परमेश्‍वरका पुत्रको विरुद्धमा बोल्दछ, उसलाई क्षमा गरिनेछ, तर जसले पवित्र आत्माको विरुद्धमा निन्दा गर्दछ, उसलाई क्षमा गरिनेछैन ।
೧೦ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
11 जब तिनीहरूले तिमीहरूलाई सभाघरको शासक र अधिकारीहरूको अगि ल्याउनेछन, कसरी प्रतिकार गर्ने र के बोल्ने भन्‍ने विषयमा चिन्तित नहोओ ।
೧೧ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
12 पवित्र आत्माले तिमीहरूलाई त्यही घडी के भन्‍नुपर्ने हो भनी सिकाउनुहुनेछ ।
೧೨ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.
13 त्यसपछि भिडबाट एक जनाले उहाँलाई यसो भन्यो, “गुरुज्यू, मेरो भाइलाई सम्पत्तिको भागबन्डा गरिदिनुहोस् भनी बताइदिनुहोस् ।”
೧೩ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
14 येशूले त्यसलाई भन्‍नुभयो, “हे मानिस, कसले मलाई तिमीहरूमाथि न्यायधीश र मध्यस्तकर्ता बनायो?”
೧೪ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
15 र उहाँले तिनीहरूलाई भन्‍नुभयो, “हेर आफैँलाई लोभी इच्छाहरूबाट अलग राख, किनभने कसैको पनि जीवन उसको प्रशस्त धन सम्पत्तिको कारणले गर्दा जीवन प्रशस्ततामा रहन सक्दैन ।”
೧೫ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
16 तब येशूले तिनीहरूलाई एउटा दृष्‍टान्‍त भन्‍नुभयो, “धनी मानिसको भूमिले प्रशस्त उब्जनी दियो,
೧೬ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.
17 र उसले मनमनै भन्‍न लाग्यो, ‘म के गरूँ, किनकि मसँग अन्‍नको भण्डारण गर्ने प्रशस्त ठाउँ छैन?‘
೧೭ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
18 उसले भन्यो, ‘म भकारीहरूलाई भत्काउनेछु र ठुलो बनाउनेछु । त्यहीँ नै सबै अन्‍नहरू र अन्य सामग्री भण्डारण गर्नेछु ।’
೧೮‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,
19 म मेरो प्राणलाई भन्‍नेछु, ‘हे प्राण, तेरो लागि प्रशस्तै असल चिजहरू धेरै वर्षको लागि भण्डारण गरिएको छ । आराम गर, खा, पी र आनन्दित हो ।’
೧೯ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.
20 तर परमेश्‍वरले त्यसलाई भन्‍नुभयो, ‘मूर्ख मानिस, आजको रात नै तेरो प्राण फिर्ता लिइयो भने, तैँले तयार गरेको ती सब चिजहरू कसको हुनेछ?’
೨೦“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
21 यसरी नै कसैले आफ्नो धन सम्पत्तिको संचय गरेर आफ्नै लागि राख्दछन् र यो परमेश्‍वरकहाँ पुग्दैन ।”
೨೧ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
22 येशूले आफ्ना चेलाहरूलाई भन्‍नुभयो, “यसकारण म तिमीहरूलाई भन्दछु, आफ्नो जीवनको विषयमा के खाऔँला वा के पहिरौँला भनी चिन्ता नगर ।
೨೨ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.
23 जीवन खानेकुरा भन्दा र शरीर लगाउने कुराभन्दा अझ बढी उत्तम छ ।
೨೩ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.
24 कागहरूलाई विचार गर, तिनीहरूले न त छर्छन् न त बटुल्दछन् । उनीहरूका भण्डारणहरू छैनन् अथवा भकारी पनि छैन, तर परमेश्‍वरले उनीहरूलाई खुवाउनुहुन्छ । तिमी चराहरूभन्दा धेरै मूल्यवान् छौ ।
೨೪ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
25 र के तिमीहरूमध्ये कसैले चिन्ता गरेर आफ्नो जीवनको आयुमा एकपल पनि थप्‍न सक्छौ र?
೨೫ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲುನಿಮ್ಮಲ್ಲಿ ಯಾರಿಂದಾದೀತು?
26 तिमीहरू सबैभन्दा सानो काम गर्न योग्यका छैनौ भने बाँकी कुराहरूको लागि किन चिन्तित हुन्छौ?
೨೬ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?
27 मैदानका लिली फुलहरूलाई विचार गर, तिनीहरू कसरी बढ्छन्? न त तिनीहरूले परिश्रम गर्छन्, न त मेहनत नै गर्छन, म तिमीहरूलाई भन्दछु, सोलोमन पनि आफ्ना सबै महिमामा यिनीहरूझैँ आभूषित थिएनन् ।
೨೭ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
28 यदि परमेश्‍वरले जमिनका घाँसलाई सुशोभित पार्नुहुन्छ जुन आज अस्तित्वमा छ, तर भोली आगोमा फालिनेछ भने, हे अल्प विश्‍वासी हो, त्यो भन्दाबढी तिमीहरूलाई कति धेरै सशोभित गर्नुहुनेछ ।
೨೮ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
29 के खाऔँला र के पिऔँला भनी नभौतारिओ र चिन्ता नगर ।
೨೯ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.
30 संसार भरका सबै राष्‍ट्रहरूले यही कुराको खोजी गर्दछन् र तिम्रा पिताले तिम्रा सबै आवश्‍यकताहरू जान्‍नुहुन्छ ।
೩೦ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
31 तर उहाँको राज्यको खोजी गर, र यी सबै थोकहरू तिमीलाई थपिनेछन् ।
೩೧ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
32 सानो बगाल हो, नडराओ, किनकि तिम्रा पिताले तिमीलाई राज्य दिन अति खुसी हुनुहुन्छ ।
೩೨ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
33 आफ्ना धन सम्पत्ति बेच र गरिबहरूलाई देओ । तिनलाई नखिइने थैलीभित्री राख; स्वर्गमा धन संचय गर, जहाँ चोरले चोर्न सक्दैन, र किराले हानि पुर्‍याउँदैन, न त खिया नै लाग्दछ ।
೩೩ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
34 जहाँ तिम्रो धन छ, त्यहीँ नै तिम्रो मन पनि हुनेछ ।
೩೪ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
35 तिम्रो लामो पोसाक कम्मरको पेटीसम्म होस् र तिम्रा बत्तीहरू बलिरहून् ।
೩೫“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
36 आफ्नो मालिक विवाहको भोजबाट फर्केर आउने प्रतीक्षामा रहेका मानिसहरूझैँ होओ । जब मालिक आउँछ र ढोका ढकढकाउँदछ, तिनीहरूले तुरुन्तै ढोका खोल्नेछन् ।
೩೬ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
37 धन्य हुन् ती सेवकहरू, जो आफ्नो मालिक फर्केर आउँदा उसले जागा रहेको भेट्टाउनेछ । म तिमीहरूलाई साँचो भन्दछु, कि उसले आफ्नो लामो वस्‍त्रलाई पेटीले कसेर भित्री भागमा सुरक्षित राखी खानामा बसाल्दछ र आएर उनीहरूको सेवा गर्नेछ ।
೩೭ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
38 यदि मालिक दोस्रो पटक रातको समय आयो भने पनि वा तेस्रो चोटि हेर्न आयो भने पनि तिनीहरू जागा भेट्टाइए भने, तिनीहरू धन्यका हुन् ।
೩೮ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
39 तर पनि यो जानी राख, कि यदि घरको मालिकलाई चोर कुन बेला आउँछ भन्‍ने थाहा भएको भए उसले आफ्नो घर फोर्नबाट बचाउने थियो ।
೩೯ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
40 जागा रहो, किनभने तिमीहरूलाई मानिसका पुत्र कुन घडीमा आउँछ भन्‍ने कुरा थाहा छैन ।”
೪೦ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
41 पत्रुसले भने, “प्रभु, के तपाईंले यो दृष्‍टान्‍त हामीलाई मात्रै भन्‍नुभएको हो, कि सबैलाई?”
೪೧ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,
42 प्रभुले भन्‍नुभयो, “विश्‍वासयोग्य र बुद्धिमान् व्यवस्थापकलाई मालिकले आफूमुनिका सेवकहरूलाई उनीहरूको भागको खाना ठिक समयमा खाना दिन्छन् ।
೪೨ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
43 धन्य हो त्यो सेवक, जसले आफ्नो मालिक फर्कंदा यी कार्यहरू गरिरहेको भेट्टाउनेछ ।
೪೩ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು.
44 म साँचो भन्दछु, कि उसले सबै सम्पत्तिको हक उसलाई दिनेछ ।
೪೪ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
45 तर यदि सेवकले आफ्नो हृदयमा यसो भन्दछ भने, मेरो मालिक फर्की आउन ढिलो गर्नुहुनेछ भनी स्‍त्री तथा पुरुष सेवकहरूलाई दुर्व्यवहार गरी कुटपिट गर्दछ अनि खाँदै, पिउँदै दाखमद्यले मातिन्छ ।
೪೫ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
46 त्यस सेवकले नचिताएको बेलामा मालिक फर्की आउनेछ, जुन घडी उसलाई थाहै हुनेछैन । आफ्नो मालिकले उसलाई भेटेर टुक्रा-टुक्रा गरी काट्नेछ र अविश्‍वासीहरूका लागि तयार पारेको ठाउँमा उसको नियुक्‍ति हुनेछ ।
೪೬ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
47 त्यस सेवकलाई आफ्नो मालिकले यस्तै गर्नेछन भन्‍ने थाहा हुँदाहुँदै पनि आफैँलाई तयार नगरी वा आफ्नो इच्छाअनुसार गरेको कारण उसलाई धेरै मुक्‍का हानिनेछ ।
೪೭ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
48 तर जसले थाहै नभईकन मुक्‍का पाउने योग्यको काम गर्दछ, उसलाई थोरै मात्र मुक्‍काहरू दिइनेछ । हरेक जसलाई धेरै दिइएको छ, उसबाट पनि चाहिए जति असुलिने छ, जसलाई तिनीहरूले धेरै जिम्मा दिइएको छ उसबाट धेरै नै फिर्ता मागिनेछ ।
೪೮ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
49 म पृथ्वीमा आगो वर्षाउन आएको हुँ र म जे चाहन्छु त्यो भइसकेको छ ।
೪೯“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
50 तर मैले एउटा बप्‍तिस्‍मा लिनुपर्नेछ, यो पुरा नहुन्जेलसम्म मैले कष्‍ट भोग्‍नुपर्छ ।
೫೦ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.
51 के म पृथ्वीमा शान्ति ल्याउन आएको हुँ भनी सोच्द्छौ? होइन, म तिमीहरूलाई भन्दछु, कि म बरु विभाजन ल्याउन आएँ ।
೫೧ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
52 अब परिवारमा भएका पाँच जना मानिसमध्ये तिन जना दुई जनाको विरुद्धमा वा दुई जना तिन जनाको विरुद्धमा हुनेछन् ।
೫೨ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
53 त्यहाँ विभाजन हुनेछ । बाबुको विरुद्धमा छोरा र छोराको विरुद्धमा बाबु हुनेछ; आमा छोरीको विरुद्धमा र छोरी आमाको विरुद्धमा, सासू बुहारीको विरुद्धमा र बुहारी सासूको विरुद्धमा हुनेछिन् ।
೫೩ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.
54 येशूले भिडलाई पनि यसो भनिरहनुभएको थियो, “जब तिमीहरूले पश्‍चिम दिशामा बादल उठेको देख्दछौ र तुरुन्तै भन्दछौ, ‘वृष्‍टि हुनेछ र त्यस्तै हुनेछ ।’
೫೪ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
55 जब दक्षिणबाट बतास बहन्छ, तिमीहरू भन्दछौ, ‘त्यो एकदमै प्रचण्ड तातो हुनेछ र त्यस्तै हुनेछ ।’
೫೫ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
56 पाखण्डीहरू हो, तिमीहरू जान्दछौ कि पृथ्वी र स्वर्गमा भएका चिह्नहरूलाई हेरेर, के हुँदै छ त्यो भन्‍न सक्दछौ, तर अहिलेको वर्तमान समयको विषयमा केही भन्‍न सक्दैनौँ?
೫೬ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
57 तिम्रो आफ्नै लागि जे कुरा ठिक छ, त्यसमा किन न्याय गर्दैनौ?
೫೭“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?
58 तिमी आफ्नो विरोधीसँग प्रशासककहाँ जाँदा, बाटोमा नै आफ्नो मुद्दा मिलाऊ ताकि उसले तिमीलाई न्यायमा नडोर्‍याओस् र हाकिमकहाँ नसुम्पोस्, नत्रता हाकिमले तिमीलाई झ्यालखानामा हाल्नेछ ।
೫೮ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
59 म तिमीलाई भन्दछु, “तिमी कहिल्यै पनि त्यहाँबाट मुक्‍त भएर आउन सक्दैनौ जबसम्म तिमीले त्यसको पैसा चुक्‍ता गर्दैनौँ ।”
೫೯ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.

< लुका 12 >