< लुका 12 >

1 त्यसै बेला, जब हजारौँ मानिस एकै ठाउँमा जम्मा भएका थिए । उनीहरूको सङ्ख्या अत्यधिक भएको कारण एउटाले अर्कोलाई कुल्चिरहेका थियो । उहाँले आफ्ना चेलाहरूलाई यसो भन्‍न सुरु गर्नुभयो, “फरिसीहरूको खमिरबाट सावधान रहो, जुनचाहिँ पाखण्डीपना हो ।
ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.
2 तर कुनै पनि कुराहरू यसरी गुप्‍त छैनन् जुन प्रकट हुनै सक्दैनन् र कुनै पनि कुराहरू लुकेका छैनन् जुन कुरा थाहा नहोस् ।
ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.
3 यसकारण, तिमीले जे कुराहरू अन्धकारमा भनेका छौ, त्यो ज्योतिमा सुनिनेछ र जे कुरा तिमीले भित्री कोठामा कानमा भनेका छौ, त्यो घरको धुरीबाट घोषणा गरिनेछ ।
ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
4 मेरा मित्रहरू, म तिमीलाई भन्दछु कि शरीरलाई मार्नेहरूसँग नडराओ किनकि त्यसपछि तिनीहरूले केही गर्न सक्दैनन् ।
“ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.
5 तर म तिमीहरूलाई कोसँग डराउने भनी चेताउनी दिन्छु । त्यो व्यक्‍तिसँग डराओ जससित मारेपछि नरकमा फालिदिने अधिकार छ । हो, म तिमीलाई भन्दछु, उहाँसँग डराओ । (Geenna g1067)
ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ. (Geenna g1067)
6 के पाँचवटा भङ्गेरा दुई सिक्‍कामा बेचिँदैनन् र? परमेश्‍वरको दृष्‍टिबाट एउटा पनि बिर्सेको हुँदैन ।
ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.
7 तर उहाँले तिम्रा कपालका सबै रौँको पनि गणना गर्नुभएको छ । उहाँसित नडराओ, किनकि तिमीहरू धेरै भङ्गेराहरूभन्दा पनि मूल्यवान् छौ ।
ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
8 म तिमीलाई भन्दछु, कि हरेक जसले मानिसहरूका अगि मलाई स्वीकार गर्दछ, परमप्रभुका दूतहरूका अगि मानिसका पुत्रले पनि उसलाई स्वीकार गर्नेछन् ।
“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.
9 तर जसले मलाई मानिसहरूका सामु इन्कार गर्दछ, परमप्रभु परमेश्‍वरका दूतहरूले उसलाई पनि इन्कार गर्नेछन् ।
ಆದರೆ ಯಾರು ಜನರ ಮುಂದೆ ನನ್ನನ್ನು ಅಲ್ಲಗಳೆಯುವರೋ ಅವರನ್ನು ದೇವದೂತರ ಮುಂದೆ ನಾನು ಅಲ್ಲಗಳೆಯುವೆನು.
10 हरेक जसले परमेश्‍वरका पुत्रको विरुद्धमा बोल्दछ, उसलाई क्षमा गरिनेछ, तर जसले पवित्र आत्माको विरुद्धमा निन्दा गर्दछ, उसलाई क्षमा गरिनेछैन ।
ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
11 जब तिनीहरूले तिमीहरूलाई सभाघरको शासक र अधिकारीहरूको अगि ल्याउनेछन, कसरी प्रतिकार गर्ने र के बोल्ने भन्‍ने विषयमा चिन्तित नहोओ ।
“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,
12 पवित्र आत्माले तिमीहरूलाई त्यही घडी के भन्‍नुपर्ने हो भनी सिकाउनुहुनेछ ।
ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು.”
13 त्यसपछि भिडबाट एक जनाले उहाँलाई यसो भन्यो, “गुरुज्यू, मेरो भाइलाई सम्पत्तिको भागबन्डा गरिदिनुहोस् भनी बताइदिनुहोस् ।”
ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ,” ಎಂದನು.
14 येशूले त्यसलाई भन्‍नुभयो, “हे मानिस, कसले मलाई तिमीहरूमाथि न्यायधीश र मध्यस्तकर्ता बनायो?”
ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.
15 र उहाँले तिनीहरूलाई भन्‍नुभयो, “हेर आफैँलाई लोभी इच्छाहरूबाट अलग राख, किनभने कसैको पनि जीवन उसको प्रशस्त धन सम्पत्तिको कारणले गर्दा जीवन प्रशस्ततामा रहन सक्दैन ।”
ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.
16 तब येशूले तिनीहरूलाई एउटा दृष्‍टान्‍त भन्‍नुभयो, “धनी मानिसको भूमिले प्रशस्त उब्जनी दियो,
ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.
17 र उसले मनमनै भन्‍न लाग्यो, ‘म के गरूँ, किनकि मसँग अन्‍नको भण्डारण गर्ने प्रशस्त ठाउँ छैन?‘
ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,
18 उसले भन्यो, ‘म भकारीहरूलाई भत्काउनेछु र ठुलो बनाउनेछु । त्यहीँ नै सबै अन्‍नहरू र अन्य सामग्री भण्डारण गर्नेछु ।’
“ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ.
19 म मेरो प्राणलाई भन्‍नेछु, ‘हे प्राण, तेरो लागि प्रशस्तै असल चिजहरू धेरै वर्षको लागि भण्डारण गरिएको छ । आराम गर, खा, पी र आनन्दित हो ।’
ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,”’ ಎಂದುಕೊಂಡನು.
20 तर परमेश्‍वरले त्यसलाई भन्‍नुभयो, ‘मूर्ख मानिस, आजको रात नै तेरो प्राण फिर्ता लिइयो भने, तैँले तयार गरेको ती सब चिजहरू कसको हुनेछ?’
“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.
21 यसरी नै कसैले आफ्नो धन सम्पत्तिको संचय गरेर आफ्नै लागि राख्दछन् र यो परमेश्‍वरकहाँ पुग्दैन ।”
“ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು.
22 येशूले आफ्ना चेलाहरूलाई भन्‍नुभयो, “यसकारण म तिमीहरूलाई भन्दछु, आफ्नो जीवनको विषयमा के खाऔँला वा के पहिरौँला भनी चिन्ता नगर ।
ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
23 जीवन खानेकुरा भन्दा र शरीर लगाउने कुराभन्दा अझ बढी उत्तम छ ।
ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
24 कागहरूलाई विचार गर, तिनीहरूले न त छर्छन् न त बटुल्दछन् । उनीहरूका भण्डारणहरू छैनन् अथवा भकारी पनि छैन, तर परमेश्‍वरले उनीहरूलाई खुवाउनुहुन्छ । तिमी चराहरूभन्दा धेरै मूल्यवान् छौ ।
ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ!
25 र के तिमीहरूमध्ये कसैले चिन्ता गरेर आफ्नो जीवनको आयुमा एकपल पनि थप्‍न सक्छौ र?
ನಿಮ್ಮಲ್ಲಿ ಯಾರಾದರೂ ಚಿಂತೆ ಮಾಡುವುದರಿಂದ ತಮ್ಮ ಜೀವನಾವಧಿಗೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?
26 तिमीहरू सबैभन्दा सानो काम गर्न योग्यका छैनौ भने बाँकी कुराहरूको लागि किन चिन्तित हुन्छौ?
ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?
27 मैदानका लिली फुलहरूलाई विचार गर, तिनीहरू कसरी बढ्छन्? न त तिनीहरूले परिश्रम गर्छन्, न त मेहनत नै गर्छन, म तिमीहरूलाई भन्दछु, सोलोमन पनि आफ्ना सबै महिमामा यिनीहरूझैँ आभूषित थिएनन् ।
“ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.
28 यदि परमेश्‍वरले जमिनका घाँसलाई सुशोभित पार्नुहुन्छ जुन आज अस्तित्वमा छ, तर भोली आगोमा फालिनेछ भने, हे अल्प विश्‍वासी हो, त्यो भन्दाबढी तिमीहरूलाई कति धेरै सशोभित गर्नुहुनेछ ।
ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?
29 के खाऔँला र के पिऔँला भनी नभौतारिओ र चिन्ता नगर ।
ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.
30 संसार भरका सबै राष्‍ट्रहरूले यही कुराको खोजी गर्दछन् र तिम्रा पिताले तिम्रा सबै आवश्‍यकताहरू जान्‍नुहुन्छ ।
ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.
31 तर उहाँको राज्यको खोजी गर, र यी सबै थोकहरू तिमीलाई थपिनेछन् ।
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.
32 सानो बगाल हो, नडराओ, किनकि तिम्रा पिताले तिमीलाई राज्य दिन अति खुसी हुनुहुन्छ ।
“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.
33 आफ्ना धन सम्पत्ति बेच र गरिबहरूलाई देओ । तिनलाई नखिइने थैलीभित्री राख; स्वर्गमा धन संचय गर, जहाँ चोरले चोर्न सक्दैन, र किराले हानि पुर्‍याउँदैन, न त खिया नै लाग्दछ ।
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.
34 जहाँ तिम्रो धन छ, त्यहीँ नै तिम्रो मन पनि हुनेछ ।
ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು,” ಎಂದು ಹೇಳಿದರು.
35 तिम्रो लामो पोसाक कम्मरको पेटीसम्म होस् र तिम्रा बत्तीहरू बलिरहून् ।
“ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ,
36 आफ्नो मालिक विवाहको भोजबाट फर्केर आउने प्रतीक्षामा रहेका मानिसहरूझैँ होओ । जब मालिक आउँछ र ढोका ढकढकाउँदछ, तिनीहरूले तुरुन्तै ढोका खोल्नेछन् ।
ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ.
37 धन्य हुन् ती सेवकहरू, जो आफ्नो मालिक फर्केर आउँदा उसले जागा रहेको भेट्टाउनेछ । म तिमीहरूलाई साँचो भन्दछु, कि उसले आफ्नो लामो वस्‍त्रलाई पेटीले कसेर भित्री भागमा सुरक्षित राखी खानामा बसाल्दछ र आएर उनीहरूको सेवा गर्नेछ ।
ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.
38 यदि मालिक दोस्रो पटक रातको समय आयो भने पनि वा तेस्रो चोटि हेर्न आयो भने पनि तिनीहरू जागा भेट्टाइए भने, तिनीहरू धन्यका हुन् ।
ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು.
39 तर पनि यो जानी राख, कि यदि घरको मालिकलाई चोर कुन बेला आउँछ भन्‍ने थाहा भएको भए उसले आफ्नो घर फोर्नबाट बचाउने थियो ।
ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ.
40 जागा रहो, किनभने तिमीहरूलाई मानिसका पुत्र कुन घडीमा आउँछ भन्‍ने कुरा थाहा छैन ।”
ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು.
41 पत्रुसले भने, “प्रभु, के तपाईंले यो दृष्‍टान्‍त हामीलाई मात्रै भन्‍नुभएको हो, कि सबैलाई?”
ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.
42 प्रभुले भन्‍नुभयो, “विश्‍वासयोग्य र बुद्धिमान् व्यवस्थापकलाई मालिकले आफूमुनिका सेवकहरूलाई उनीहरूको भागको खाना ठिक समयमा खाना दिन्छन् ।
ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?
43 धन्य हो त्यो सेवक, जसले आफ्नो मालिक फर्कंदा यी कार्यहरू गरिरहेको भेट्टाउनेछ ।
ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.
44 म साँचो भन्दछु, कि उसले सबै सम्पत्तिको हक उसलाई दिनेछ ।
ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
45 तर यदि सेवकले आफ्नो हृदयमा यसो भन्दछ भने, मेरो मालिक फर्की आउन ढिलो गर्नुहुनेछ भनी स्‍त्री तथा पुरुष सेवकहरूलाई दुर्व्यवहार गरी कुटपिट गर्दछ अनि खाँदै, पिउँदै दाखमद्यले मातिन्छ ।
ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,
46 त्यस सेवकले नचिताएको बेलामा मालिक फर्की आउनेछ, जुन घडी उसलाई थाहै हुनेछैन । आफ्नो मालिकले उसलाई भेटेर टुक्रा-टुक्रा गरी काट्नेछ र अविश्‍वासीहरूका लागि तयार पारेको ठाउँमा उसको नियुक्‍ति हुनेछ ।
ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.
47 त्यस सेवकलाई आफ्नो मालिकले यस्तै गर्नेछन भन्‍ने थाहा हुँदाहुँदै पनि आफैँलाई तयार नगरी वा आफ्नो इच्छाअनुसार गरेको कारण उसलाई धेरै मुक्‍का हानिनेछ ।
“ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.
48 तर जसले थाहै नभईकन मुक्‍का पाउने योग्यको काम गर्दछ, उसलाई थोरै मात्र मुक्‍काहरू दिइनेछ । हरेक जसलाई धेरै दिइएको छ, उसबाट पनि चाहिए जति असुलिने छ, जसलाई तिनीहरूले धेरै जिम्मा दिइएको छ उसबाट धेरै नै फिर्ता मागिनेछ ।
ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”
49 म पृथ्वीमा आगो वर्षाउन आएको हुँ र म जे चाहन्छु त्यो भइसकेको छ ।
“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ!
50 तर मैले एउटा बप्‍तिस्‍मा लिनुपर्नेछ, यो पुरा नहुन्जेलसम्म मैले कष्‍ट भोग्‍नुपर्छ ।
ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
51 के म पृथ्वीमा शान्ति ल्याउन आएको हुँ भनी सोच्द्छौ? होइन, म तिमीहरूलाई भन्दछु, कि म बरु विभाजन ल्याउन आएँ ।
ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ.
52 अब परिवारमा भएका पाँच जना मानिसमध्ये तिन जना दुई जनाको विरुद्धमा वा दुई जना तिन जनाको विरुद्धमा हुनेछन् ।
ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು.
53 त्यहाँ विभाजन हुनेछ । बाबुको विरुद्धमा छोरा र छोराको विरुद्धमा बाबु हुनेछ; आमा छोरीको विरुद्धमा र छोरी आमाको विरुद्धमा, सासू बुहारीको विरुद्धमा र बुहारी सासूको विरुद्धमा हुनेछिन् ।
ತಂದೆಗೆ ವಿರೋಧವಾಗಿ ಮಗನು, ಮಗನಿಗೆ ವಿರೋಧವಾಗಿ ತಂದೆಯು, ತಾಯಿಗೆ ವಿರೋಧವಾಗಿ ಮಗಳು, ಮಗಳಿಗೆ ವಿರೋಧವಾಗಿ ತಾಯಿಯು, ಅತ್ತೆಗೆ ವಿರೋಧವಾಗಿ ಸೊಸೆಯು, ಸೊಸೆಗೆ ವಿರೋಧವಾಗಿ ಅತ್ತೆಯು ವಿಭಾಗವಾಗುವರು.”
54 येशूले भिडलाई पनि यसो भनिरहनुभएको थियो, “जब तिमीहरूले पश्‍चिम दिशामा बादल उठेको देख्दछौ र तुरुन्तै भन्दछौ, ‘वृष्‍टि हुनेछ र त्यस्तै हुनेछ ।’
ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ: “ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡಿ, ‘ಮಳೆ ಬರುತ್ತದೆ ಎನ್ನುತ್ತೀರಿ,’ ಹಾಗೆಯೇ ಆಗುವುದು.
55 जब दक्षिणबाट बतास बहन्छ, तिमीहरू भन्दछौ, ‘त्यो एकदमै प्रचण्ड तातो हुनेछ र त्यस्तै हुनेछ ।’
ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.
56 पाखण्डीहरू हो, तिमीहरू जान्दछौ कि पृथ्वी र स्वर्गमा भएका चिह्नहरूलाई हेरेर, के हुँदै छ त्यो भन्‍न सक्दछौ, तर अहिलेको वर्तमान समयको विषयमा केही भन्‍न सक्दैनौँ?
ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?
57 तिम्रो आफ्नै लागि जे कुरा ठिक छ, त्यसमा किन न्याय गर्दैनौ?
“ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?
58 तिमी आफ्नो विरोधीसँग प्रशासककहाँ जाँदा, बाटोमा नै आफ्नो मुद्दा मिलाऊ ताकि उसले तिमीलाई न्यायमा नडोर्‍याओस् र हाकिमकहाँ नसुम्पोस्, नत्रता हाकिमले तिमीलाई झ्यालखानामा हाल्नेछ ।
ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.
59 म तिमीलाई भन्दछु, “तिमी कहिल्यै पनि त्यहाँबाट मुक्‍त भएर आउन सक्दैनौ जबसम्म तिमीले त्यसको पैसा चुक्‍ता गर्दैनौँ ।”
ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.

< लुका 12 >