< लूकः 6 >

1 अचरञ्च पर्व्वणो द्वितीयदिनात् परं प्रथमविश्रामवारे शस्यक्षेत्रेण यीशोर्गमनकाले तस्य शिष्याः कणिशं छित्त्वा करेषु मर्द्दयित्वा खादितुमारेभिरे।
ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
2 तस्मात् कियन्तः फिरूशिनस्तानवदन् विश्रामवारे यत् कर्म्म न कर्त्तव्यं तत् कुतः कुरुथ?
ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
3 यीशुः प्रत्युवाच दायूद् तस्य सङ्गिनश्च क्षुधार्त्ताः किं चक्रुः स कथम् ईश्वरस्य मन्दिरं प्रविश्य
ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
4 ये दर्शनीयाः पूपा याजकान् विनान्यस्य कस्याप्यभोजनीयास्तानानीय स्वयं बुभजे सङ्गिभ्योपि ददौ तत् किं युष्माभिः कदापि नापाठि?
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
5 पश्चात् स तानवदत् मनुजसुतो विश्रामवारस्यापि प्रभु र्भवति।
“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
6 अनन्तरम् अन्यविश्रामवारे स भजनगेहं प्रविश्य समुपदिशति। तदा तत्स्थाने शुष्कदक्षिणकर एकः पुमान् उपतस्थिवान्।
ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
7 तस्माद् अध्यापकाः फिरूशिनश्च तस्मिन् दोषमारोपयितुं स विश्रामवारे तस्य स्वास्थ्यं करोति नवेति प्रतीक्षितुमारेभिरे।
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
8 तदा यीशुस्तेषां चिन्तां विदित्वा तं शुष्ककरं पुमांसं प्रोवाच, त्वमुत्थाय मध्यस्थाने तिष्ठ।
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
9 तस्मात् तस्मिन् उत्थितवति यीशुस्तान् व्याजहार, युष्मान् इमां कथां पृच्छामि, विश्रामवारे हितम् अहितं वा, प्राणरक्षणं प्राणनाशनं वा, एतेषां किं कर्म्मकरणीयम्?
ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
10 पश्चात् चतुर्दिक्षु सर्व्वान् विलोक्य तं मानवं बभाषे, निजकरं प्रसारय; ततस्तेन तथा कृत इतरकरवत् तस्य हस्तः स्वस्थोभवत्।
೧೦ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
11 तस्मात् ते प्रचण्डकोपान्विता यीशुं किं करिष्यन्तीति परस्परं प्रमन्त्रिताः।
೧೧ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
12 ततः परं स पर्व्वतमारुह्येश्वरमुद्दिश्य प्रार्थयमानः कृत्स्नां रात्रिं यापितवान्।
೧೨ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
13 अथ दिने सति स सर्व्वान् शिष्यान् आहूतवान् तेषां मध्ये
೧೩ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 पितरनाम्ना ख्यातः शिमोन् तस्य भ्राता आन्द्रियश्च याकूब् योहन् च फिलिप् बर्थलमयश्च
೧೪ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 मथिः थोमा आल्फीयस्य पुत्रो याकूब् ज्वलन्तनाम्ना ख्यातः शिमोन्
೧೫ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
16 च याकूबो भ्राता यिहूदाश्च तं यः परकरेषु समर्पयिष्यति स ईष्करीयोतीययिहूदाश्चैतान् द्वादश जनान् मनोनीतान् कृत्वा स जग्राह तथा प्रेरित इति तेषां नाम चकार।
೧೬ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
17 ततः परं स तैः सह पर्व्वतादवरुह्य उपत्यकायां तस्थौ ततस्तस्य शिष्यसङ्घो यिहूदादेशाद् यिरूशालमश्च सोरः सीदोनश्च जलधे रोधसो जननिहाश्च एत्य तस्य कथाश्रवणार्थं रोगमुक्त्यर्थञ्च तस्य समीपे तस्थुः।
೧೭ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
18 अमेध्यभूतग्रस्ताश्च तन्निकटमागत्य स्वास्थ्यं प्रापुः।
೧೮ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
19 सर्व्वेषां स्वास्थ्यकरणप्रभावस्य प्रकाशितत्वात् सर्व्वे लोका एत्य तं स्प्रष्टुं येतिरे।
೧೯ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
20 पश्चात् स शिष्यान् प्रति दृष्टिं कुत्वा जगाद, हे दरिद्रा यूयं धन्या यत ईश्वरीये राज्ये वोऽधिकारोस्ति।
೨೦ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
21 हे अधुना क्षुधितलोका यूयं धन्या यतो यूयं तर्प्स्यथ; हे इह रोदिनो जना यूयं धन्या यतो यूयं हसिष्यथ।
೨೧ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
22 यदा लोका मनुष्यसूनो र्नामहेतो र्युष्मान् ऋृतीयिष्यन्ते पृथक् कृत्वा निन्दिष्यन्ति, अधमानिव युष्मान् स्वसमीपाद् दूरीकरिष्यन्ति च तदा यूयं धन्याः।
೨೨“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
23 स्वर्गे युष्माकं यथेष्टं फलं भविष्यति, एतदर्थं तस्मिन् दिने प्रोल्लसत आनन्देन नृत्यत च, तेषां पूर्व्वपुरुषाश्च भविष्यद्वादिनः प्रति तथैव व्यवाहरन्।
೨೩ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
24 किन्तु हा हा धनवन्तो यूयं सुखं प्राप्नुत। हन्त परितृप्ता यूयं क्षुधिता भविष्यथ;
೨೪“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
25 इह हसन्तो यूयं वत युष्माभिः शोचितव्यं रोदितव्यञ्च।
೨೫ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
26 सर्व्वैलाकै र्युष्माकं सुख्यातौ कृतायां युष्माकं दुर्गति र्भविष्यति युष्माकं पूर्व्वपुरुषा मृषाभविष्यद्वादिनः प्रति तद्वत् कृतवन्तः।
೨೬“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.
27 हे श्रोतारो युष्मभ्यमहं कथयामि, यूयं शत्रुषु प्रीयध्वं ये च युष्मान् द्विषन्ति तेषामपि हितं कुरुत।
೨೭“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
28 ये च युष्मान् शपन्ति तेभ्य आशिषं दत्त ये च युष्मान् अवमन्यन्ते तेषां मङ्गलं प्रार्थयध्वं।
೨೮ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29 यदि कश्चित् तव कपोले चपेटाघातं करोति तर्हि तं प्रति कपोलम् अन्यं परावर्त्त्य सम्मुखीकुरु पुनश्च यदि कश्चित् तव गात्रीयवस्त्रं हरति तर्हि तं परिधेयवस्त्रम् अपि ग्रहीतुं मा वारय।
೨೯ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
30 यस्त्वां याचते तस्मै देहि, यश्च तव सम्पत्तिं हरति तं मा याचस्व।
೩೦ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
31 परेभ्यः स्वान् प्रति यथाचरणम् अपेक्षध्वे परान् प्रति यूयमपि तथाचरत।
೩೧ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32 ये जना युष्मासु प्रीयन्ते केवलं तेषु प्रीयमाणेषु युष्माकं किं फलं? पापिलोका अपि स्वेषु प्रीयमाणेषु प्रीयन्ते।
೩೨“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33 यदि हितकारिण एव हितं कुरुथ तर्हि युष्माकं किं फलं? पापिलोका अपि तथा कुर्व्वन्ति।
೩೩ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34 येभ्य ऋणपरिशोधस्य प्राप्तिप्रत्याशास्ते केवलं तेषु ऋणे समर्पिते युष्माकं किं फलं? पुनः प्राप्त्याशया पापीलोका अपि पापिजनेषु ऋणम् अर्पयन्ति।
೩೪ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
35 अतो यूयं रिपुष्वपि प्रीयध्वं, परहितं कुरुत च; पुनः प्राप्त्याशां त्यक्त्वा ऋणमर्पयत, तथा कृते युष्माकं महाफलं भविष्यति, यूयञ्च सर्व्वप्रधानस्य सन्ताना इति ख्यातिं प्राप्स्यथ, यतो युष्माकं पिता कृतघ्नानां दुर्व्टत्तानाञ्च हितमाचरति।
೩೫ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36 अत एव स यथा दयालु र्यूयमपि तादृशा दयालवो भवत।
೩೬ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
37 अपरञ्च परान् दोषिणो मा कुरुत तस्माद् यूयं दोषीकृता न भविष्यथ; अदण्ड्यान् मा दण्डयत तस्माद् यूयमपि दण्डं न प्राप्स्यथ; परेषां दोषान् क्षमध्वं तस्माद् युष्माकमपि दोषाः क्षमिष्यन्ते।
೩೭“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
38 दानानिदत्त तस्माद् यूयं दानानि प्राप्स्यथ, वरञ्च लोकाः परिमाणपात्रं प्रदलय्य सञ्चाल्य प्रोञ्चाल्य परिपूर्य्य युष्माकं क्रोडेषु समर्पयिष्यन्ति; यूयं येन परिमाणेन परिमाथ तेनैव परिमाणेन युष्मत्कृते परिमास्यते।
೩೮ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
39 अथ स तेभ्यो दृष्टान्तकथामकथयत्, अन्धो जनः किमन्धं पन्थानं दर्शयितुं शक्नोति? तस्माद् उभावपि किं गर्त्ते न पतिष्यतः?
೩೯ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
40 गुरोः शिष्यो न श्रेष्ठः किन्तु शिष्ये सिद्धे सति स गुरुतुल्यो भवितुं शक्नोति।
೪೦ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41 अपरञ्च त्वं स्वचक्षुुषि नासाम् अदृष्ट्वा तव भ्रातुश्चक्षुषि यत्तृणमस्ति तदेव कुतः पश्यमि?
೪೧“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
42 स्वचक्षुषि या नासा विद्यते ताम् अज्ञात्वा, भ्रातस्तव नेत्रात् तृणं बहिः करोमीति वाक्यं भ्रातरं कथं वक्तुं शक्नोषि? हे कपटिन् पूर्व्वं स्वनयनात् नासां बहिः कुरु ततो भ्रातुश्चक्षुषस्तृणं बहिः कर्त्तुं सुदृष्टिं प्राप्स्यसि।
೪೨ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
43 अन्यञ्च उत्तमस्तरुः कदापि फलमनुत्तमं न फलति, अनुत्तमतरुश्च फलमुत्तमं न फलति कारणादतः फलैस्तरवो ज्ञायन्ते।
೪೩ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
44 कण्टकिपादपात् कोपि उडुम्बरफलानि न पातयति तथा शृगालकोलिवृक्षादपि कोपि द्राक्षाफलं न पातयति।
೪೪ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
45 तद्वत् साधुलोकोऽन्तःकरणरूपात् सुभाण्डागाराद् उत्तमानि द्रव्याणि बहिः करोति, दुष्टो लोकश्चान्तःकरणरूपात् कुभाण्डागारात् कुत्सितानि द्रव्याणि निर्गमयति यतोऽन्तःकरणानां पूर्णभावानुरूपाणि वचांसि मुखान्निर्गच्छन्ति।
೪೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
46 अपरञ्च ममाज्ञानुरूपं नाचरित्वा कुतो मां प्रभो प्रभो इति वदथ?
೪೬“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
47 यः कश्चिन् मम निकटम् आगत्य मम कथा निशम्य तदनुरूपं कर्म्म करोति स कस्य सदृशो भवति तदहं युष्मान् ज्ञाापयामि।
೪೭ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
48 यो जनो गभीरं खनित्वा पाषाणस्थले भित्तिं निर्म्माय स्वगृहं रचयति तेन सह तस्योपमा भवति; यत आप्लाविजलमेत्य तस्य मूले वेगेन वहदपि तद्गेहं लाडयितुं न शक्नोति यतस्तस्य भित्तिः पाषाणोपरि तिष्ठति।
೪೮ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
49 किन्तु यः कश्चिन् मम कथाः श्रुत्वा तदनुरूपं नाचरति स भित्तिं विना मृृदुपरि गृहनिर्म्मात्रा समानो भवति; यत आप्लाविजलमागत्य वेगेन यदा वहति तदा तद्गृहं पतति तस्य महत् पतनं जायते।
೪೯ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

< लूकः 6 >