< ద్వితీయోపదేశకాండమ 18 >

1 “యాజకులుగా నియమితులైన లేవీయులకు, అంటే లేవీగోత్రం వారికి ఇశ్రాయేలు ప్రజలతో భాగం గానీ, వారసత్వపు హక్కు గానీ ఉండవు. వారు యెహోవాకు దహనబలిగా అర్పించే వాటినే తింటారు.
ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.
2 వారి సోదరులతో వారికి వారసత్వం ఉండదు. యెహోవా వారితో చెప్పినట్టు ఆయనే వారి వారసత్వం.
ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.
3 ఎవరైనా ఎద్దును గానీ, గొర్రెను గానీ, మేకను గానీ బలిగా అర్పించినప్పుడు అర్పించిన వాటి కుడి జబ్బ, రెండు దవడలు, పొట్ట భాగం యాజకులకు ఇవ్వాలి.
ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
4 ధాన్యంలో, ద్రాక్షారసంలో, నూనెలో ప్రథమ ఫలం యాజకునికి ఇవ్వాలి. గొర్రెల బొచ్చు కత్తిరింపులో మొదటి భాగం యాజకునికి ఇవ్వాలి.
ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
5 యెహోవా పేరున నిలబడి ఎప్పుడూ సేవ చేయడానికి మీ గోత్రాలన్నిటిలో అతణ్ణి, అతని సంతానాన్నీ మీ యెహోవా దేవుడు ఎన్నుకున్నాడు.
ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.
6 ఒక లేవీయుడు ఇశ్రాయేలు దేశంలో తాను నివసిస్తున్న ఒక ఊరిలో నుంచి యెహోవా ఏర్పరచుకునే చోటుకు వచ్చేందుకు ఆసక్తి కనపరిస్తే
ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,
7 అక్కడ యెహోవా ఎదుట నిలబడే లేవీయుల్లాగే అతడు తన యెహోవా దేవుని పేరున సేవ చేయవచ్చు.
ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
8 తన పిత్రార్జితాన్ని అమ్మగా వచ్చినది కాక, ఇతరుల్లాగే అతడు వంతు పొందాలి.
ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.
9 మీ యెహోవా దేవుడు మీకిస్తున్న దేశంలో మీరు ప్రవేశించిన తరువాత ఆ ప్రజల నీచమైన పనులను మీరు చేయడానికి నేర్చుకోకూడదు.
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
10 ౧౦ తన కొడుకుని గానీ కూతుర్ని గానీ మంటల్లోనుంచి దాటించేవాణ్ణి, శకునం చెప్పే సోదెగాణ్ణి, మేఘ శకునాలూ సర్ప శకునాలూ చెప్పేవాణ్ణి, చేతబడి చేసేవాణ్ణి, మాంత్రికుణ్ణి, ఇంద్రజాలకుణ్ణి,
೧೦ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
11 ౧౧ ఆత్మలను సంప్రదించేవాణ్ణి, దయ్యాలను సంప్రదించే వాణ్ణి మీమధ్య ఉండనివ్వకూడదు.
೧೧ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
12 ౧౨ వీటిని చేసే ప్రతివాడూ యెహోవాకు అసహ్యం. ఇలాంటి అసహ్యమైన వాటిని బట్టే మీ యెహోవా దేవుడు మీ ఎదుట నుంచి ఆ ప్రజలను వెళ్లగొట్టేస్తున్నాడు.
೧೨ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
13 ౧౩ మీరు మీ యెహోవా దేవుని దృష్టిలో యథార్థంగా ఉండాలి.
೧೩ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.
14 ౧౪ మీరు స్వాధీనం చేసుకోబోయే ప్రజలు మేఘ శకునాలు చెప్పేవారి మాట, సోదె చెప్పేవారి మాట వింటారు. మీ యెహోవా దేవుడు అలా చేయడానికి మిమ్మల్ని అనుమతించలేదు.
೧೪ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.
15 ౧౫ మీ యెహోవా దేవుడు మీ మధ్య నా వంటి ప్రవక్తను మీ సోదరుల్లోనుంచి మీ కోసం పుట్టిస్తాడు. ఆయన మాట మీరు వినాలి.
೧೫ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
16 ౧౬ హోరేబులో సమావేశమైన రోజున మీరు ‘మా యెహోవా దేవుని స్వరం మళ్ళీ మనం వినొద్దు, ఈ గొప్ప అగ్నిని ఇకనుంచి మనం చూడొద్దు. లేకపోతే మేమంతా చస్తాం’ అన్నారు.
೧೬ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
17 ౧౭ అప్పుడు యెహోవా నాతో ఇలా అన్నాడు. ‘వాళ్ళు చెప్పిన మాట బాగానే ఉంది.
೧೭ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;
18 ౧౮ వాళ్ళ సోదరుల్లోనుంచి నీలాంటి ప్రవక్తను వారికోసం పుట్టిస్తాను. అతని నోట్లో నా మాటలు ఉంచుతాను. నేను అతనికి ఆజ్ఞాపించేదంతా అతడు వారితో చెబుతాడు.
೧೮ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
19 ౧౯ అతడు నా పేరుతో చెప్పే నా మాటలను విననివాణ్ణి నేను శిక్షిస్తాను.
೧೯ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.
20 ౨౦ అయితే, ఏ ప్రవక్త అయినా అహంకారంతో, నేను చెప్పమని తనకాజ్ఞాపించని మాటను నా పేరున చెబితే, లేదా ఇతర దేవుళ్ళ పేరున చెబితే ఆ ప్రవక్త కూడా చావాలి.’
೨೦ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
21 ౨౧ ‘ఏదైనా ఒక సందేశం యెహోవా చెప్పింది కాదని మేమెలా తెలుసుకోగలం?’ అని మీరనుకుంటే,
೨೧‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?
22 ౨౨ ప్రవక్త యెహోవా పేరుతో చెప్పినప్పుడు ఆ మాట జరగకపోతే, ఎన్నటికీ నెరవేరకపోతే అది యెహోవా చెప్పిన మాట కాదు. ఆ ప్రవక్త అహంకారంతోనే దాన్ని చెప్పాడు కాబట్టి దానికి భయపడవద్దు.”
೨೨ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

< ద్వితీయోపదేశకాండమ 18 >