< నిర్గమకాండము 33 >

1 యెహోవా మోషేతో ఇలా చెప్పాడు. “నీవూ ఐగుప్తు దేశం నుండి బయటకు తీసుకు వచ్చిన ప్రజలూ బయలుదేరి, నేను అబ్రాహాము, ఇస్సాకు, యాకోబుల సంతానానికి ఇస్తానని చెప్పిన పాలు తేనెలు ప్రవహించే దేశానికి వెళ్ళండి.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
2 నేను నీకు ముందుగా దూతను పంపుతాను. ఆ దూత కనానీయులను, అమోరీయులను, హిత్తీయులను, పెరిజ్జీయులను, హివ్వీయులను, యెబూసీయులను అక్కడినుండి వెళ్ళగొడతాడు.
ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.
3 మీరు నాకు అవిధేయులయ్యారు కనుక నేను మీతో కలసి రాను. ఒకవేళ మార్గమధ్యంలో మిమ్మల్ని చంపేస్తానేమో.”
ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.
4 ఆ దుర్వార్త విని ప్రజలు దుఃఖించారు. ధరించిన ఆభరణాలన్నీ పక్కనబెట్టారు.
ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
5 అప్పుడు యెహోవా మోషేతో “నీవు ఇశ్రాయేలు ప్రజలతో ‘మీరు అవిధేయులైన ప్రజలు. ఒక్క క్షణం నేను మీ మధ్యకు వచ్చినా మిమ్మల్ని హతం చేస్తాను. మీరు ధరించుకొన్న ఆభరణాలన్నీ తీసివెయ్యండి. అప్పుడు మిమ్మల్ని ఏం చెయ్యాలో చూస్తాను’ అని చెప్పు” అన్నాడు.
ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.
6 ఇశ్రాయేలు ప్రజలు హోరేబు కొండ దగ్గర తమ నగలు తీసివేశారు.
ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
7 అప్పుడు మోషే శిబిరం బయటకు వెళ్లి అక్కడ ఒక గుడారం వేశాడు. దానికి సన్నిధి గుడారం అని పేరు పెట్టాడు. యెహోవాను కనుగొనాలనుకున్న ప్రతివాడూ శిబిరం బయట ఉన్న సన్నిధి గుడారానికి వచ్చాడు.
ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
8 మోషే ఆ గుడారానికి వెళ్తూ ఉన్నప్పుడల్లా తమ గుడారాల్లో ఉన్న ప్రజలు లేచి నిలబడి అతడు గుడారం లోకి వెళ్ళేదాకా అతని వైపు నిదానంగా చూస్తూ ఉండేవాళ్ళు.
ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
9 మోషే ఆ గుడారంలోకి వెళ్ళినప్పుడు స్తంభం లాంటి మేఘం దిగి వచ్చి ఆ గుడారం ద్వారం దగ్గర నిలిచేది. అప్పుడు యెహోవా మోషేతో మాట్లాడుతూ ఉండేవాడు.
ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.
10 ౧౦ ఆ మేఘస్తంభం ఆ గుడారం ద్వారాన నిలవడం చూసిన ప్రజలందరూ తమ తమ గుడారాల ద్వారాల్లో లేచి నిలబడి నమస్కారం చేసేవారు.
೧೦ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
11 ౧౧ ఒక వ్యక్తి తన స్నేహితునితో మాట్లాడుతున్నట్టు యెహోవా మోషేతో ముఖాముఖీగా మాట్లాడేవాడు. తరువాత అతడు శిబిరంలోకి తిరిగి వచ్చేవాడు. అయితే మోషే సేవకుడు, నూను కొడుకు అయిన యెహోషువ అనే యువకుడు గుడారం నుండి బయటకు వచ్చేవాడు కాదు.
೧೧ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.
12 ౧౨ మోషే యెహోవాతో ఇలా చెప్పాడు. “ఈ ప్రజలను వెంటబెట్టుకుని వెళ్ళమని నాకు చెబుతున్నావు గానీ నాతో ఎవరిని పంపుతున్నావో అది నాకు చెప్పలేదు. అదీగాక ‘నిన్ను నీ పేరుతో ఎరుగుదును. నిన్ను నేను కరుణించాను’ అని నాతో చెప్పావు కదా.
೧೨ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
13 ౧౩ అందువల్ల నాపై నీ దయ ఉంటే నీ విధానాలు నేను గ్రహించగలిగేలా దయచేసి నీ మార్గాలు నాకు చూపించు. అప్పుడు నేను నీ గురించి తెలుసుకుంటాను. అయ్యా, చూడు, ఈ జనమంతా నీ ప్రజలే గదా.”
೧೩ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.
14 ౧౪ అందుకు ఆయన “నా సన్నిధి నీకు తోడుగా వస్తుంది. నేను నీకు నెమ్మది కలుగజేస్తాను” అన్నాడు.
೧೪ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.
15 ౧౫ మోషే “నీ సన్నిధి మాతో రాని పక్షంలో ఇక్కడ నుండి మమ్మల్ని తీసుకు వెళ్ళకు.
೧೫ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.
16 ౧౬ నా పట్ల, నీ ప్రజల పట్ల నువ్వు దయ చూపిస్తున్నావని మాకు దేని వల్ల తెలుస్తుంది? నువ్వు మాతో కలసి రావడం వల్లనే కదా. ఆ విధంగా మేము, అంటే నేను, నీ ప్రజలు భూమి మీద ఉన్న ప్రజల్లో నుండి ప్రత్యేకంగా గుర్తింపు పొందుతాం” అని ఆయనతో అన్నాడు.
೧೬ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
17 ౧౭ అప్పుడు యెహోవా “నీవు చెప్పినట్టు చేస్తాను. నీ మీద నాకు దయ కలిగింది. నీ పేరును బట్టి నిన్ను తెలుసుకున్నాను” అని మోషేతో చెప్పాడు.
೧೭ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
18 ౧౮ మోషే “దయచేసి నీ మహిమను నాకు చూపించు” అన్నాడు.
೧೮ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.
19 ౧౯ ఆయన “నా మంచితనమంతా నీ ఎదుట నుండి దాటిపోయేలా చేస్తాను. యెహోవా అనే నా పేరును నీ ఎదుట ప్రకటిస్తాను. నాకు ఎవరిమీద కరుణ చూపాలని ఉందో వాళ్ళను కరుణిస్తాను, ఎవరి మీద జాలిపడాలో వారిపట్ల జాలి చూపిస్తాను” అన్నాడు.
೧೯ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.
20 ౨౦ ఆయన ఇంకా “నువ్వు నా ముఖాన్ని చూడలేవు. నన్ను చూసిన ఏ మనిషీ బతకడు” అన్నాడు.
೨೦ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.
21 ౨౧ యెహోవా “ఇదిగో నాకు దగ్గరలో ఒక చోటు ఉంది. నువ్వు ఆ బండ మీద నిలబడు.
೨೧ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
22 ౨౨ నా మహిమ నిన్ను దాటి వెళ్ళే సమయంలో ఆ బండ సందులో నిన్ను దాచి ఉంచి, నిన్ను దాటి వెళ్ళే వరకూ నా చేత్తో నిన్ను కప్పుతాను.
೨೨ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.
23 ౨౩ నేను నా చెయ్యి తీసివేసిన తరువాత నా వీపును మాత్రం నువ్వు చూడగలవు గానీ నా ముఖ దర్శనం నీకు కలగదు” అని మోషేతో చెప్పాడు.
೨೩ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.

< నిర్గమకాండము 33 >