< आमाल 1 >

1 ऐ थियुफ़िलुस मैने पहली किताब उन सब बातों के बयान में लिखी जो ईसा शुरू; में करता और सिखाता रहा।
ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
2 उस दिन तक जिसमें वो उन रसूलों को जिन्हें उसने चुना था रूह — उल — क़ुद्दूस के वसीले से हुक्म देकर ऊपर उठाया गया।
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
3 ईसा ने तकलीफ़ सहने के बाद बहुत से सबूतों से अपने आपको उन पर ज़िन्दा ज़ाहिर भी किया, चुनाँचे वो चालीस दिन तक उनको नज़र आता और ख़ुदा की बादशाही की बातें कहता रहा।
ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
4 और उनसे मिलकर उन्हें हुक्म दिया, “येरूशलेम से बाहर न जाओ, बल्कि बाप के उस वा'दे के पूरा होने का इन्तिज़ार करो, जिसके बारे में तुम मुझ से सुन चुके हो,
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
5 क्यूँकि युहन्ना ने तो पानी से बपतिस्मा दिया मगर तुम थोड़े दिनों के बाद रूह — उल — क़ुद्दूस से बपतिस्मा पाओगे।”
ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
6 पस उन्होंने इकट्ठा होकर पूछा, “ऐ ख़ुदावन्द! क्या तू इसी वक़्त इस्राईल को बादशाही फिर' अता करेगा?”
ಕೂಡಿಬಂದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
7 उसने उनसे कहा, “उन वक़्तों और मी'आदों का जानना, जिन्हें बाप ने अपने ही इख़्तियार में रख्खा है, तुम्हारा काम नहीं।
ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
8 लेकिन जब रूह — उल — क़ुद्दूस तुम पर नाज़िल होगा तो तुम ताक़त पाओगे; और येरूशलेम और तमाम यहूदिया और सामरिया में, बल्कि ज़मीन के आख़ीर तक मेरे गवाह होगे।”
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
9 ये कहकर वो उनको देखते देखते ऊपर उठा लिया गया, और बादलों ने उसे उनकी नज़रों से छिपा लिया।
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
10 उसके जाते वक़्त वो आसमान की तरफ़ ग़ौर से देख रहे थे, तो देखो, दो मर्द सफ़ेद पोशाक पहने उनके पास आ खड़े हुए,
೧೦ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
11 और कहने लगे, “ऐ गलीली मर्दो। तुम क्यूँ खड़े आसमान की तरफ़ देखते हो? यही ईसा जो तुम्हारे पास से आसमान पर उठाया गया है, इसी तरह फिर आएगा जिस तरह तुम ने उसे आसमान पर जाते देखा है।”
೧೧“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
12 तब वो उस पहाड़ से जो ज़ैतून का कहलाता है और येरूशलेम के नज़दीक सबत की मन्ज़िल के फ़ासले पर है येरूशलेम को फिरे।
೧೨ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
13 और जब उसमें दाख़िल हुए तो उस बालाख़ाने पर चढ़े जिस में वो या'नी पतरस और यूहन्ना, और या'क़ूब और अन्द्रियास और फ़िलिप्पुस, तोमा, बरतुल्माई, मत्ती, हलफ़ी का बेटा या'क़ूब, शमौन ज़ेलोतेस और या'क़ूब का बेटा यहूदाह रहते थे।
೧೩ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
14 ये सब के सब चन्द 'औरतों और ईसा की माँ मरियम और उसके भाइयों के साथ एक दिल होकर दुआ में मशग़ूल रहे।
೧೪ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
15 उन्हीं दिनों पतरस भाइयों में जो तक़रीबन एक सौ बीस शख़्सों की जमा'अत थी खड़ा होकर कहने लगा,
೧೫ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
16 “ऐ भाइयों उस नबुव्वत का पूरा होना ज़रूरी था जो रूह — उल — क़ुद्दूस ने दाऊद के ज़बानी उस यहूदा के हक़ में पहले कहा था, जो ईसा के पकड़ने वालों का रहनुमा हुआ।
೧೬“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
17 क्यूँकि वो हम में शुमार किया गया और उस ने इस ख़िदमत का हिस्सा पाया।”
೧೭ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
18 उस ने बदकारी की कमाई से एक खेत ख़रीदा, और सिर के बल गिरा और उसका पेट फट गया और उसकी सब आँतड़ीयां निकल पड़ीं।
೧೮(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
19 और ये येरूशलेम के सब रहने वालों को मा'लूम हुआ, यहाँ तक कि उस खेत का नाम उनकी ज़बान में हैक़लेदमा पड़ गया या'नी [ख़ून का खेत]।
೧೯ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
20 क्यूँकि ज़बूर में लिखा है, 'उसका घर उजड़ जाए, और उसमें कोई बसने वाला न रहे और उसका मर्तबा दुसरा ले ले।
೨೦ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21 पस जितने 'अर्से तक ख़ुदावन्द ईसा हमारे साथ आता जाता रहा, यानी यूहन्ना के बपतिस्मे से लेकर ख़ुदावन्द के हमारे पास से उठाए जाने तक — जो बराबर हमारे साथ रहे,
೨೧ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
22 चाहिए कि उन में से एक आदमी हमारे साथ उसके जी उठने का गवाह बने।
೨೨
23 फिर उन्होंने दो को पेश किया। एक यूसुफ़ को जो बरसब्बा कहलाता है और जिसका लक़ब यूसतुस है। दूसरा मत्तय्याह को।
೨೩ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
24 और ये कह कर दुआ की, “ऐ ख़ुदावन्द! तू जो सब के दिलों को जानता है, ये ज़ाहिर कर कि इन दोनों में से तूने किस को चुना है
೨೪“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
25 ताकि वह इस ख़िदमत और रसूलों की जगह ले, जिसे यहूदाह छोड़ कर अपनी जगह गया।”
೨೫
26 फिर उन्होंने उनके बारे में पर्ची डाली, और पर्ची मत्तय्याह के नाम की निकली। पस वो उन ग्यारह रसूलों के साथ शुमार किया गया।
೨೬ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

< आमाल 1 >