< गलातियों 3 >

1 ऐ नादान ग़लतियो, किसने तुम पर जादू कर दिया? तुम्हारी तो गोया आँखों के सामने ईसा मसीह सलीब पर दिखाया गया।
ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
2 मैं तुम से सिर्फ़ ये गुज़ारिश करना चाहता हूँ: कि तुम ने शरी'अत के आ'माल से पाक रूह को पाया या ईमान की ख़ुशख़बरी के पैग़ाम से?
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
3 क्या तुम ऐसे नादान हो कि पाक रूह के तौर पर शुरू करके अब जिस्म के तौर पर काम पूरा करना चाहते हो?
ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?
4 क्या तुमने इतनी तकलीफ़ें बे फ़ाइदा उठाईं? मगर शायद बे फ़ाइदा नहीं।
ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?
5 पर जो तुम्हें पाक रूह बख़्शता और तुम में मोजिज़े ज़ाहिर करता है, क्या वो शरी'अत के आ'माल से ऐसा करता है या ईमान के ख़ुशख़बरी के पैग़ाम से?
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
6 चुनाँचे “अब्रहाम ख़ुदा पर ईमान लाया और ये उसके लिए रास्तबाज़ी गिना गया।”
ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
7 पस जान लो कि जो ईमानवाले हैं, वही अब्रहाम के फ़रज़न्द हैं।
ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
8 और किताब — ए — मुक़द्दस ने पहले से ये जान कर कि ख़ुदा ग़ैर क़ौमों को ईमान से रास्तबाज़ ठहराएगा, पहले से ही अब्रहाम को ये ख़ुशख़बरी सुना दी, “तेरे ज़रिए सब क़ौमें बर्क़त पाएँगी।”
ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
9 इस पर जो ईमान वाले है, वो ईमानदार अब्रहाम के साथ बर्क़त पाते है।
ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
10 क्यूँकि जितने शरी'अत के आ'माल पर तकिया करते है, वो सब ला'नत के मातहत हैं; चुनाँचे लिखा है, “जो कोई उन सब बातों को जो किताब में से लिखी है; क़ाईम न रहे वो ला'नती है।”
೧೦ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
11 और ये बात साफ़ है कि शरी'अत के वसीले से कोई इंसान ख़ुदा के नज़दीक रास्तबाज़ नहीं ठहरता, क्यूँकि कलाम में लिखा है, रास्तबाज़ ईमान से जीता रहेगा।
೧೧ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
12 और शरी'अत को ईमान से कुछ वास्ता नहीं, बल्कि लिखा है, “जिसने इन पर 'अमल किया, वो इनकी वजह से जीता रहेगा।”
೧೨ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
13 मसीह जो हमारे लिए ला'नती बना, उसने हमे मोल लेकर शरी'अत की ला'नत से छुड़ाया, क्यूँकि कलाम में लिखा है, “जो कोई लकड़ी पर लटकाया गया वो ला'नती है।”
೧೩ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
14 ताकि मसीह ईसा में अब्रहाम की बर्क़त ग़ैर क़ौमों तक भी पहूँचे, और हम ईमान के वसीले से उस रूह को हासिल करें जिसका वा'दा हुआ है।
೧೪ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
15 ऐ भाइयों! मैं इंसान ियत के तौर पर कहता हूँ कि अगर आदमी ही का 'अहद हो, जब उसकी तस्दीक़ हो गई हो तो कोई उसको बातिल नहीं करता और ना उस पर कुछ बढ़ाता है।
೧೫ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
16 पस अब्रहाम और उसकी नस्ल से वा'दे किए गए। वो ये नहीं कहता, नस्लों से, जैसा बहुतों के वास्ते कहा जाता है: बल्कि जैसा एक के वास्ते, तेरी नस्ल को और वो मसीह है।
೧೬ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
17 मेरा ये मतलब है: जिस 'अहद की ख़ुदा ने पहले से तस्दीक़ की थी, उसको शरी'अत चार सौ तीस बरस के बाद आकर बातिल नहीं कर सकती कि वो वा'दा लअहासिल हो।
೧೭ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
18 क्यूँकि अगर मीरास शरी'अत की वजह से मिली है तो वा'दे की वजह से ना हुई, मगर अब्रहाम को ख़ुदा ने वा'दे ही की राह से बख़्शी।
೧೮ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
19 पस शरी'अत क्या रही? वो नाफ़रमानी की वजह से बाद में दी गई कि उस नस्ल के आने तक रहे, जिससे वा'दा किया गया था; और वो फ़रिश्तों के वसीले से एक दरमियानी की मा'रिफ़त मुक़र्रर की गई।
೧೯ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
20 अब दर्मियानी एक का नहीं होता, मगर ख़ुदा एक ही है।
೨೦ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.
21 पस क्या शरी'अत ख़ुदा के वा'दों के ख़िलाफ़ है? हरगिज़ नहीं! क्यूँकि अगर कोई एसी शरी'अत दी जाती जो ज़िन्दगी बख़्श सकती तो, अलबत्ता रास्तबाज़ी शरी'अत की वजह से होती।
೨೧ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
22 मगर किताब — ए — मुक़द्दस ने सबको गुनाह के मातहत कर दिया, ताकि वो वा'दा जो ईसा मसीह पर ईमान लाने पर मौक़ूफ़ है, ईमानदारों के हक़ में पूरा किया जाए।
೨೨ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
23 ईमान के आने से पहले शरी'अत की मातहती में हमारी निगहबानी होती थी, और उस ईमान के आने तक जो ज़ाहिर होनेवाला था, हम उसी के पाबन्द रहे।
೨೩ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
24 पस शरी'अत मसीह तक पहूँचाने को हमारा उस्ताद बनी, ताकि हम ईमान की वजह से रास्तबाज़ ठहरें।
೨೪ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
25 मगर जब ईमान आ चुका, तो हम उस्ताद के मातहत ना रहे।
೨೫ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
26 क्यूँकि तुम उस ईमान के वसीले से जो मसीह ईसा में है, ख़ुदा के फ़र्ज़न्द हो।
೨೬ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
27 और तुम सब, जितनों ने मसीह मैं शामिल होने का बपतिस्मा लिया मसीह को पहन लिया
೨೭ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
28 न कोई यहूदी रहा, न कोई यूनानी, न कोई ग़ुलाम, ना आज़ाद, न कोई मर्द, न औरत, क्यूँकि तुम सब मसीह 'ईसा में एक ही हो।
೨೮ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
29 और अगर तुम मसीह के हो तो अब्रहाम की नस्ल और वा'दे के मुताबिक़ वारिस हो।
೨೯ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

< गलातियों 3 >