< मरकुस 2 >

1 कई दिन बाद जब 'ईसा कफ़रनहूम में फिर दाख़िल हुआ तो सुना गया कि वो घर में है।
ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
2 फिर इतने आदमी जमा हो गए, कि दरवाज़े के पास भी जगह न रही और वो उनको कलाम सुना रहा था।
ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
3 और लोग एक फ़ालिज के मारे हुए को चार आदमियों से उठवा कर उस के पास लाए।
ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
4 मगर जब वो भीड़ की वजह से उसके नज़दीक न आ सके तो उन्होंने उस छत को जहाँ वो था, खोल दिया और उसे उधेड़ कर उस चारपाई को जिस पर फ़ालिज का मारा हुआ लेटा था, लटका दिया।
ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
5 ईसा' ने उन लोगों का ईमान देख कर फ़ालिज के मारे हुए से कहा, “बेटा, तेरे गुनाह मुआफ़ हुए।”
ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
6 मगर वहाँ कुछ आलिम जो बैठे थे, वो अपने दिलों में सोचने लगे।
ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
7 “ये क्यूँ ऐसा कहता है? कुफ़्र बकता है, ख़ुदा के सिवा गुनाह कौन मु'आफ़ कर सकता है।”
“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
8 और फ़ौरन ईसा' ने अपनी रूह में मा'लूम करके कि वो अपने दिलों में यूँ सोचते हैं उनसे कहा, “तुम क्यूँ अपने दिलों में ये बातें सोचते हो?
ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
9 आसान क्या है’ फ़ालिज के मारे हुए से ये कहना कि तेरे गुनाह मु'आफ़ हुए, या ये कहना कि उठ और अपनी चारपाई उठा कर चल फिर।
ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
10 लेकिन इस लिए कि तुम जानों कि इब्न — ए आदम को ज़मीन पर गुनाह मु'आफ़ करने का इख़्तियार है” (उसने उस फ़ालिज के मारे हुए से कहा)।
೧೦ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
11 “मैं तुम से कहता हूँ उठ अपनी चारपाई उठाकर अपने घर चला जा।”
೧೧“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.
12 और वो उठा; फ़ौरन अपनी चारपाई उठाकर उन सब के सामने बाहर चला गया, चुनाँचे वो सब हैरान हो गए, और ख़ुदा की तम्जीद करके कहने लगे “हम ने ऐसा कभी नहीं देखा था!”
೧೨ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
13 वो फिर बाहर झील के किनारे गया, और सारी भीड़ उसके पास आई और वो उनको ता'लीम देने लगा।
೧೩ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
14 जब वो जा रहा था, तो उसने हलफ़ी के बेटे लावी को महसूल की चौकी पर बैठे देखा, और उस से कहा “मेरे पीछे हो ले।” पस वो उठ कर उस के पीछे हो लिया।
೧೪ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
15 और यूँ हुआ कि वो उस के घर में खाना खाने बैठा। बहुत से महसूल लेने वाले और गुनाहगार लोग ईसा और उसके शागिर्दों के साथ खाने बैठे, क्यूँकि वो बहुत थे, और उसके पीछे हो लिए थे।
೧೫ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
16 फ़रीसियों ने फ़क़ीहों ने उसे गुनाहगारों और महसूल लेने वालों के साथ खाते देखकर उसके शागिर्दों से कहा, “ये तो महसूल लेने वालों और गुनाहगारों के साथ खाता पीता है।”
೧೬ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
17 ईसा' ने ये सुनकर उनसे कहा, “तन्दरुस्तों को हकीम की ज़रुरत नहीं बल्कि बीमारों को; में रास्तबाज़ों को नहीं बल्कि गुनाहगारों को बुलाने आया हूँ।”
೧೭ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
18 और यूहन्ना के शागिर्द और फ़रीसी रोज़े से थे, उन्होंने आकर उस से कहा, “यूहन्ना के शागिर्द और फ़रीसियों के शागिर्द तो रोज़ा रखते हैं? लेकिन तेरे शागिर्द क्यूँ रोज़ा नहीं रखते।”
೧೮ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
19 ईसा' ने उनसे कहा “क्या बाराती जब तक दुल्हा उनके साथ है रोज़ा रख सकते हैं? जिस वक़्त तक दुल्हा उनके साथ है वो रोज़ा नहीं रख सकते।
೧೯ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
20 मगर वो दिन आएँगे कि दुल्हा उनसे जुदा किया जाएगा, उस वक़्त वो रोज़ा रखेंगे।
೨೦ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
21 कोरे कपड़े का पैवन्द पुरानी पोशाक पर कोई नहीं लगाता नहीं तो वो पैवन्द उस पोशाक में से कुछ खींच लेगा, या'नी नया पुरानी से और वो ज़ियादा फट जाएगी।
೨೧“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
22 और नई मय को पुरानी मश्कों में कोई नहीं भरता नहीं तो मश्कें मय से फट जाएँगी और मय और मश्कें दोनों बरबाद हो जाएँगी बल्कि नई मय को नई मश्कों में भरते हैं।”
೨೨ಮತ್ತು ಹಳೆಯಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
23 और यूँ हुआ कि वो सबत के दिन खेतों में से होकर जा रहा था, और उसके शागिर्द राह में चलते होए बालें तोड़ने लगे।
೨೩ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
24 और फ़रीसियों ने उस से कहा “देख ये सबत के दिन वो काम क्यूँ करते हैं जो जाएज़ नहीं।”
೨೪ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
25 उसने उनसे कहा, “क्या तुम ने कभी नहीं पढ़ा कि दाऊद ने क्या किया जब उस को और उस के साथियों को ज़रूरत हुई और वो भूखे हुए?
೨೫ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
26 वो क्यूँकर अबियातर सरदार काहिन के दिनों में ख़ुदा के घर में गया, और उस ने नज़्र की रोटियाँ खाईं जिनको खाना काहिनों के सिवा और किसी को जाएज़ नहीं था और अपने साथियों को भी दीं”?
೨೬ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
27 और उसने उनसे कहा “सबत आदमी के लिए बना है न आदमी सबत के लिए।
೨೭“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
28 इस लिए इब्न — ए — आदम सबत का भी मालिक है।”
೨೮ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.

< मरकुस 2 >