Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Daniel Chapter 5 https://www.AionianBible.org/Bibles/Kannada---Kannada-Bible/Daniel/5 1 ೧) ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. 2 ೨) ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. 3 ೩) ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. 4 ೪) ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು. 5 ೫) ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು. 6 ೬) ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. 7 ೭) ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. 8 ೮) ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ. 9 ೯) ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು. 10 ೧೦) ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ! 11 ೧೧) “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು. 12 ೧೨) ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು. 13 ೧೩) ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ? 14 ೧೪) ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. 15 ೧೫) “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು. 16 ೧೬) ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. 17 ೧೭) ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. 18 ೧೮) ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು. 19 ೧೯) ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು. 20 ೨೦) “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು. 21 ೨೧) ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು. 22 ೨೨) “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ. 23 ೨೩) ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ. 24 ೨೪) ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. 25 ೨೫) “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’ 26 ೨೬) ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. 27 ೨೭) ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ. 28 ೨೮) ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು. 29 ೨೯) ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು. 30 ೩೦) ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು. 31 ೩೧) ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು. Additional comments?
Refresh Captcha
The world's first Holy Bible un-translation!