Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Proverbs Chapter 18 https://www.AionianBible.org/Bibles/Kannada---Kannada-Bible/Proverbs/18 1 ೧) ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. 2 ೨) ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ. 3 ೩) ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ. 4 ೪) ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ. 5 ೫) ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ. 6 ೬) ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ. 7 ೭) ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ. 8 ೮) ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು. 9 ೯) ಕೆಲಸಗಳ್ಳನು ಕೆಡುಕನಿಗೆ ತಮ್ಮ. 10 ೧೦) ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು. 11 ೧೧) ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ. 12 ೧೨) ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ. 13 ೧೩) ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು. 14 ೧೪) ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು? 15 ೧೫) ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು. 16 ೧೬) ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ. 17 ೧೭) ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು. 18 ೧೮) ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು. 19 ೧೯) ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ. 20 ೨೦) ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು. 21 ೨೧) ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು, 22 ೨೨) ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ. 23 ೨೩) ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು. 24 ೨೪) ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು. Additional comments?
Refresh Captcha
The world's first Holy Bible un-translation!